Homeಮುಖಪುಟಚರ್ಚೆಗೆ ಬರುತ್ತೇನೆ, ವಿಷಯ ಅಭಿವೃದ್ದಿಯಾಗಿರಲಿ: ಅಮಿತ್‌ ಶಾ ಸವಾಲು ಸ್ವೀಕರಿಸಿದ ಅಖಿಲೇಶ್‌ ಯಾದವ್‌

ಚರ್ಚೆಗೆ ಬರುತ್ತೇನೆ, ವಿಷಯ ಅಭಿವೃದ್ದಿಯಾಗಿರಲಿ: ಅಮಿತ್‌ ಶಾ ಸವಾಲು ಸ್ವೀಕರಿಸಿದ ಅಖಿಲೇಶ್‌ ಯಾದವ್‌

ಬಿಜೆಪಿಯು ತನ್ನ ವಿವೇಚನಾರಹಿತ ಬಹುಮತದ ಮೂಲಕ ಜನರ ಧ್ವನಿಯನ್ನು ದಮನಿಸಲು ಸಾಧ್ಯವಿಲ್ಲ ಎನ್ನುತ್ತಾರೆ ಅಖಿಲೇಶ್‌ ಯಾದವ್‌

- Advertisement -
- Advertisement -

ಲಖನೌದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಪರ ರ್‍ಯಾಲಿಯಲ್ಲಿ ಸಿಎಎ ಕುರಿತು ಧೈರ್‍ಯವಿದ್ದರೆ ಚರ್ಚೆಗೆ ಬನ್ನಿ ಎಂದು ಗೃಹ ಸಚಿವ ಅಮಿತ್ ಸವಾಲು ಹಾಕಿದ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿಯೊಂದಿಗೆ ಚರ್ಚಿಗೆ ಸಿದ್ಧ ಎಂದು  ಸವಾಲು ಸ್ವೀಕರಿಸಿದ್ದಾರೆ. ಆದರೆ ಚರ್ಚಾ ವಿಷಯ ಮಾತ್ರ ಅಭಿವೃದ್ಧಿಯಾಗಿರಲಿ ಎಂದು ಅವರು ಹೇಳಿದರು.

ಸಮಾಜವಾದಿ ಪಕ್ಷದ ಅಗಲಿದ ನಾಯಕ ಜಾನೇಶ್ವರ್ ಮಿಶ್ರಾ ಅವರ 10 ನೇ ನಿಧನ ವಾರ್ಷಿಕೋತ್ಸವದಂದು ಗೌರವ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚರ್ಚೆಯ ಸ್ಥಳ ಮತ್ತು ಸಮಯವನ್ನು ಬಿಜೆಪಿ ನಿರ್ಧರಿಸಲಿ ಮತ್ತು ನಾನು ಅಲ್ಲಿಗೆ ತಲುಪುತ್ತೇನೆ. ಆದರೆ ಚರ್ಚೆಯ ವಿಷಯವೆಂದರೆ ಅಭಿವೃದ್ಧಿ, ಉದ್ಯೋಗ, ಯುವಜನರು, ರೈತರು ಇತ್ಯಾದಿಗಳಾಗಿರಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ.

ಅಲ್ಲದೇ ನೈಜ ಸಮಸ್ಯೆಗಳಿಂದ ದೇಶದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ವಿಭಜಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಅಖಿಲೇಶ್ ಯಾದವ್‌ ಆರೋಪಿಸಿದ್ದಾರೆ.

ಸಿಎಎ ಕುರಿತು ಚರ್ಚೆ ನಡೆಸುವಂತೆ ಅಖಿಲೇಶ್ ಯಾದವ್, ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ ಮತ್ತು ಇತರ ವಿರೋಧ ಪಕ್ಷಗಳ ಮುಖಂಡರಿಗೆ ಅಮಿತ್‌ ಶಾ ಮಂಗಳವಾರ ಸವಾಲು ಹಾಕಿದ್ದರು.

ಷಾ ಅವರ ಟೀಕೆಗಳನ್ನು ಉಲ್ಲೇಖಿಸಿ ಮಾತನಾಡಿದ ಅಖಿಲೇಶ್ ಬಿಜೆಪಿ ಮುಖಂಡರರು ಬಳಸುವ ಭಾಷೆಯನ್ನು ನೋಡಿದರೆ ಅವರು ರಾಜಕಾರಣಿಗಳು ಎನಿಸುವುದಿಲ್ಲ. ಸಿಎಎಯನ್ನು ಸಮಾಜವಾದಿ ಪಕ್ಷ ಮಾತ್ರ ವಿರೋಧಿಸುತ್ತಿಲ್ಲ. ಬದಲಿಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾಮಾನ್ಯ ನಾಗರಿಕರು ಸಹ ಈ ‘ತಾರತಮ್ಯ’ ಕಾನೂನನ್ನು ವಿರೋಧಿಸಿ ರಸ್ತೆಗಳಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

“ಧರ್ಮದ ಆಧಾರದ ಮೇಲೆ ಬಿಜೆಪಿ ನಾಗರಿಕರ ವಿರುದ್ಧ ಎಷ್ಟು ಸಮಯದವರೆಗೆ ತಾರತಮ್ಯವನ್ನು ಮುಂದುವರಿಸುತ್ತದೆ?” ಎಂದು ಯಾದವ್ ಪ್ರಶ್ನಿಸಿದ ಅವರು “ಬಿಜೆಪಿಯು ತನ್ನ ವಿವೇಚನಾರಹಿತ ಬಹುಮತದ ಮೂಲಕ ಜನರ ಧ್ವನಿಯನ್ನು ದಮನಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನು ಅಮಿತ್‌ ಶಾರವರ ಸವಾಲಿಗೆ ಬಹಳಷ್ಟು ಜನ ಟ್ರೋಲ್‌ ಮಾಡಿದ್ದಾರೆ. ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್‌ ಖಾಲಿದ್‌ “ಶಾಹೀನ್‌ಬಾಗ್‌ನ ದಬಾಂಗ್ ದಾದಿಗಳೊಂದಿಗೆ ಸಿಎಎ ಕುರಿತು ಸಾರ್ವಜನಿಕ ಚರ್ಚೆಯನ್ನು ನಡೆಸಲು, ಶಾಹೀನ್ ಬಾಗ್‌ನಲ್ಲಿ ಕೆಲವು ದಿನಗಳನ್ನು ಕಳೆಯಲು ಧೈರ್ಯವಿದೆಯೇ ಅಮಿತ್‌ ಶಾ” ಎಂದು ಟ್ವೀಟ್‌ ಮಾಡಿದ್ದಾರೆ.

ಐಎಎಸ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಧಿಕಾರಿ ಕಣ್ಣನ್‌ ಗೋಪಿನಾಥ್‌ “ಪ್ರೀತಿಯ ಅಮಿತ್‌ಶಾ, ನೀವು ಸಿಎಎ ಕುರಿತು ಚರ್ಚೆ ಮಾಡಲು ಬಯಸಿದ್ದೀರಿ ಎಂದು ಕೇಳಿದೆ. “ನಿಮ್ಮ ಕೈಲಾದ ಮಟ್ಟದಲ್ಲಿ ನೀವು ಚರ್ಚಿಸಲು ಪ್ರಯತ್ನಿಸಿದರೆ ಆ ತಾಜಿಂದರ್‌ ಬಗ್ಗ ಎಂಬ ಹುಡುನೊಂದಿಗೆ ಚರ್ಚೆ ಮಾಡಿ ಎಂದು ನಾನು ಸಲಹೆ ನೀಡುತ್ತೇನೆ. ಯಾರು ಗೆದ್ದರೂ, ನನ್ನ ಕಡೆಯಿಂದ ಬಣ್ಣ ಪುಸ್ತಕ ಕೊಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪೋಲ್‌ ಒಂದನ್ನು ಕ್ರಿಯೇಟ್‌ ಮಾಡಿ, “ಸಿಎಎ, ಎನ್‌ಆರ್‌ಸಿ ಕುರಿತು ಕನ್ನಯ್ಯ ಕುಮಾರ್‌ರವರೊಂದಿಗೆ ಚರ್ಚೆ ನಡೆಸಲು ಅಮಿತ್‌ ಶಾಗೆ ಧೈರ್ಯವಿದೆಯೇ” ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಹೌದು ಎಂದು ಶೇ.12% ಜನ ಹೇಳಿದರೆ, ಇಲ್ಲ ಅವರಿಗೆ ಭಯವಿದೆ ಎಂದು 88% ಜನ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...