Homeಮುಖಪುಟಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

ಭೀಮಾ ಕೋರೆಗಾಂವ್ ಪ್ರಕರಣದ ಪರಿಶೀಲನೆ ನಡೆಸುತ್ತೇವೆ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರವು 2018ರ ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸಲು ಬಯಸಿದೆ. ಇದಕ್ಕಾಗಿ ರಾಜ್ಯದಲ್ಲಿ ಹಿಂದಿನ ಬಿಜೆಪಿ ನೇತೃತ್ವದ ಅವಧಿಯಲ್ಲಿ 10 ಕಾರ್ಯಕರ್ತರನ್ನು ಜೈಲಿಗೆ ಹಾಕಲಾಗಿತ್ತು.

ಗೃಹ ಸಚಿವ ಅನಿಲ್ ದೇಶ್‌ಮುಖ್, ಹಿರಿಯ ಎನ್‌ಸಿಪಿ ಮುಖಂಡ, ಪುಣೆಯ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಮುಂಬೈನ ಸಭೆಗೆ ಕರೆದಿದ್ದಾರೆ. ಜೈಲಿನಲ್ಲಿದ್ದ ಕಾರ್ಯಕರ್ತರ ವಿರುದ್ಧದ ಸಾಕ್ಷ್ಯಗಳ ಕುರಿತು ಪೊಲೀಸರಿಂದ ಎಲ್ಲ ಮಾಹಿತಿ ಪಡೆದ ನಂತರ ಪ್ರಕರಣದ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ಕಾರಣಕ್ಕಾಗಿ ಈ ಪ್ರಕರಣ ದಾಖಲಾಗಿದೆ ಎಂದು ಆರೋಪಿಸಲಾಗಿದ್ದು, ಬಿಜೆಪಿ ತನ್ನ ಸಿದ್ಧಾಂತವನ್ನು ವಿರೋಧಿಸಿದ ಕಾರ್ಯಕರ್ತರನ್ನು “ನಗರ ನಕ್ಸಲ್” ಎಂದು ಬ್ರಾಂಡ್ ಮಾಡಿ ಜೈಲಿಗೆ ತಳ್ಳಿರುವ ಆರೋಪ ಎದುರಿಸುತ್ತಿದೆ.

ಮರಾಠಿ ದಿನಪತ್ರಿಕೆ ‘ಲೋಕಸತ್ತ’ ಜೊತೆ ಮಾತನಾಡಿದ ದೇಶ್‌ಮುಖ್, ಹಿಂದಿನ ಸರ್ಕಾರವು ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವವರನ್ನು “ನಗರ ನಕ್ಸಲ್” ಎಂದು ಕರೆದಿದೆ. ಆದರೆ ಪ್ರಸ್ತುತ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಆಡಳಿತವು ಆ ರೀತಿ ನಡೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸರ್ಕಾರವು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕಿದೆ ಎಂಬುದನ್ನು ನಂಬುತ್ತದೆ ಎಂದು ಹೇಳಿದ್ದಾರೆ.

“ಭೀಮಾ ಕೋರೆಗಾಂವ್ ಪ್ರಸಂಗಕ್ಕೆ ಸಂಬಂಧಿಸಿದಂತೆ ನಾವು ಈ ಬಗ್ಗೆ ಯೋಚಿಸುತ್ತೇವೆ. ಈ ಬಗ್ಗೆ ತನಿಖೆ ನಡೆಸಲು ಎಸ್ಐಟಿ (ವಿಶೇಷ ತನಿಖಾ ತಂಡ) ರಚಿಸುವ ಬಗ್ಗೆ ಬೇಡಿಕೆಗಳು ಬರುತ್ತಿವೆ. ನಾವು ಇದನ್ನು ನಮ್ಮ ಅಧಿಕಾರಿಗಳ ಮೂಲಕ ಪರಿಶೀಲಿಸುತ್ತೇವೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ” ಎಂದು ದೇಶ್‌ಮುಖ್ ಹೇಳಿದ್ದಾರೆ.

ಈ ಪ್ರಕರಣವು 2018ರ ಜನವರಿ 01ರಂದು ಪುಣೆ ಜಿಲ್ಲೆಯ ಭೀಮಾ ಕೋರೆಗಾಂವ್ ಬಳಿ ದಲಿತ ಗುಂಪುಗಳು 200ನೇ ವರ್ಷದ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಿಸುತ್ತಿದ್ದಾಗ ಹಿಂಸಾಚಾರವನ್ನು ಕಂಡುಬಂದಿತ್ತು. ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್‌ನಲ್ಲಿ ಭಾಷಣ ಮಾಡಿದ ಕಾರ್ಯಕರ್ತರು ಮತ್ತು ಬುದ್ಧಿಜೀವಿಗಳ ವಿರುದ್ಧ ಪುಣೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು. ಕಾರ್ಯಕರ್ತರ ಮೇಲೆ ಹಿಂಸಾಚಾರವನ್ನು ಪ್ರಚೋದಿಸಲಾಯಿತು ಮತ್ತು ದೇಶಾದ್ಯಂತ ದಾಳಿಗಳಿಗೆ ಕಾರಣರಾಗಿದ್ದರು ಎಂದು ಆರೋಪಿಸಿದ್ದರು. ಅಲ್ಲದೇ ಸಭೆಯ ಸಂಘಟಕರಿಗೆ ನಕ್ಸಲ್ ಸಂಪರ್ಕವಿದೆ ಎಂದು ಪೊಲೀಸರು ಹೇಳಿಕೊಂಡಿದ್ದರು.

1818ರ ಸಮಯದಲ್ಲಿ ಅಸ್ಪೃಶ್ಯರೆಂದು ಪರಿಗಣಿಸಲ್ಪಟ್ಟ ಮಹರ್ ಸಮುದಾಯದ ಸೈನಿಕರು ಜಾತಿ ತಾರತಮ್ಯ, ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದು ಮೇಲ್ಜಾತಿ ಪೇಶ್ವೆಗಳ ವಿರುದ್ಧದ ಮೂರನೇ ಆಂಗ್ಲೋ-ಮರಾಠಾ ಯುದ್ದದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ಸೈನ್ಯವನ್ನು ಬೆಂಬಲಿಸಿದರು. ಕೇವಲ 500 ಜನ ದಲಿತ ಸೈನಿಕರು ದಿಟ್ಟ ಹೋರಾಟದ ಮೂಲಕ ಪೇಶ್ವೆ ಸೈನ್ಯವನ್ನು ಮಣಿಸಿದ ನೆನಪಿಗಾಗಿ ಇಲ್ಲಿ ಪ್ರತಿವರ್ಷ ವಿಜಯೋತ್ಸವ ಆಚರಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...