Homeಮುಖಪುಟವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ‌‌ ಸೂಚಿಸಿ ನಡೆಸಲಾದ‌‌ ಪ್ರತಿಭಟನೆಯಲ್ಲಿ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ‘ಫ್ರಿ ಕಾಶ್ಮಿರ’ ಎಂಬ ಭಿತ್ತಿ ಫಲಕ ಪ್ರದರ್ಶಿಸಿದರು ಎಂಬುವ ವಿಚಾರ ಈಗ ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾಗಿದೆ.

ನಳಿನಿ ಬಾಲಕುಮಾರ್ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ರಾಜದ್ರೋಹದ ಪ್ರಕರಣ ದಾಖಲಾದ‌ ಕೂಡಲೇ ಪ್ರೀ ಕಾಶ್ಮಿರ ಫಲಕದ ಅರ್ಥ ಕಾಶ್ಮೀರವನ್ನು ಸ್ವತಂತ್ರಗೊಳಿಸುವುದು ಎಂದು ಅರ್ಥೈಸಿಕೊಂಡ ಬಲಪಂಥೀಯ, ಬಿಜೆಪಿ ಒಲವಿನ ವಕೀಲರು ಮೈಸೂರು ವಕೀಲರ ಸಂಘದ ಮೇಲೆ ಒತ್ತಡ ತಂದು ನಳಿನಿ ಬಾಲಕುಮಾರ್ ಅವರಿಗೆ ಪ್ರಕರಣದಲ್ಲಿ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡಿತು. ಈ ನಡೆಯನ್ನು ರಾಜ್ಯದ ಹಲವರು ಪ್ರಜಾಪ್ರಭುತ್ವವಾದಿಗಳು ಟೀಕಿಸಿದ್ದರು.

ಈ ನಡುವೆ ಕಾಶ್ಮಿರದಲ್ಲಿ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಟ್ಟಿದ್ದು, ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ ಇಂತಹ ಪರಿಸ್ಥಿತಿಯಲ್ಲಿ‌ ಕಾಶ್ಮೀರದ ಸಾಮಾನ್ಯ ಜನರಿಗೆ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಅರ್ಥದಲ್ಲಿ ತಾನು ಫ್ರಿ ಕಾಶ್ಮೀರ ಫಲಕ ಹಿಡಿದುದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ.

ಜನರ ಪರವಾಗಿ ಧ್ವನಿ ಎತ್ತಿ ಸರ್ಕಾರವನ್ನು ಟೀಕಿಸುವುದು ಪ್ರಜೆಗಳಿಗೆ ಇರುವ ಸಂವಿಧಾನಿಕ ಸ್ವತಂತ್ರ ಅದನ್ನು ಯಾರು ರಾಜದ್ರೋಹದಂತಹ ಗಂಭೀರ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವುದು ಸರಿಯಲ್ಲ ಎಂದು ವಾದಿಸಿರುವ ಹಲವಾರು ಜನಪರ ನಿಲುವಿರುವ, ಪ್ರಜಾಸತ್ತಾತ್ಮಕ ಅಲೋಚನೆಯ, ಜಾತ್ಯಾತೀತ ವಕೀಲರುಗಳು ನಳಿನಿ‌ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಿದ್ದರು. ರಾಜ್ಯದ ಹಲವು ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಕೀಲರು ಮೈಸೂರಿಗೆ ಆಗಮಿಸಿ ವಿದ್ಯಾರ್ಥಿನಿಗೆ ಧೈರ್‍ಯ ತುಂಬಿದ್ದರು. ಅವರಲ್ಲಿ ರವಿವರ್ಮ ಕುಮಾರ್, ಸಿ.ಎಸ್.ದ್ವಾರಕನಾಥ್, ಎಸ್.ಶಂಕರಪ್ಪ,‌ ಬಿ.ಟಿ.ವೆಂಕಟೇಶ್‌ ಪ್ರಮುಖರಾಗಿದ್ದಾರೆ.

ಆದರೆ ಮೈಸೂರು ವಕೀಲರ ಸಂಘ ಮತ್ತು ಬಲಪಂಥೀಯ ಅಲೋಚನೆಯ ವಕೀಲರು ಯಾವುದೇ ಬೆಲೆ ತೆತ್ತದಾರೂ ಸರಿ‌ ನಳಿನಿ‌ ಬಾಲಕುಮಾರ್ ಪರ ವಾದಿಸಲು ಸಿದ್ದವಿರುವ ವಕೀಲರನ್ನು ವಕಾಲತ್ತಿನಿಂದ ವಾಪಸ್ಸು ‌ತೆಗೆಸಲು‌ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ನಳಿನಿ ಪರವಾಗಿ ವಾದ ಮಾಡಲು ಮುಂದಾದ ಪಿ.ಪಿ.ಬಾಬುರಾಜ್ ಎಂಬ‌‌ ಪ್ರಗತಿಪರ ವಕೀಲರನ್ನು ಮೈಸೂರು ವಕೀಲರ ಸಂಘದಿಂದ ಉಚ್ಚಾಟನೆ ಮಾಡಿದ್ದಾರೆ.

ಪಿ.ಪಿ.ಬಾಬುರಾಜ್

ಈಗಾಗಲೇ ಒಂದು ಸುತ್ತಿನ ನೀರಿಕ್ಷಿಣಾ ಜಾಮೀನು ಸಂಭವಿಸಿದ ವಾದ ಮಂಡನೆಯಾಗಿದ್ದು ದಿನಾಂಕ‌ 24/01/2020 ಕ್ಕೆ ಮತ್ತೊಂದು‌ ಸುತ್ತಿನ‌ ವಾದ ಮಂಡನೆ‌ ಮೈಸೂರಿನ‌ ನ್ಯಾಯಾಲಯದಲ್ಲಿ‌‌ ಮಂಡನೆ ಆಗಲಿದ್ದು ಇದಕ್ಕೆ ಎರಡು ಬಣಗಳು ಭಾರಿ‌ ಸಿದ್ದತೆ ನಡೆಸಿವೆ. ಶುಕ್ರವಾರದಂದು ಮೈಸೂರು ನ್ಯಾಯಾಲಯದ ಅವರಣ ಕೇವಲ ವಾದ, ವಿವಾದಕ್ಕಷ್ಟೆ ಅಲ್ಲದೆ ಘೋಷಣೆ, ಧಿಕ್ಕಾರ,‌ ಪ್ರತಿಧಿಕ್ಕಾರ,‌ ಹಲ್ಲೆ, ಪ್ರತಿ‌ಹಲ್ಲೆ, ಜಗಳಗಳಿಗೆ ಕಾರಣವಾದರು ಆಶ್ಚರ್ಯ‌ಪಡಬೇಕಿಲ್ಲ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...