Homeಮುಖಪುಟವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾದ ಮೈಸೂರಿನ ಫ್ರಿ ಕಾಶ್ಮಿರ ಫಲಕ ವಿವಾದ..

- Advertisement -
- Advertisement -

ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ‌‌ ಸೂಚಿಸಿ ನಡೆಸಲಾದ‌‌ ಪ್ರತಿಭಟನೆಯಲ್ಲಿ ನಳಿನಿ ಬಾಲಕುಮಾರ್ ಎಂಬ ವಿದ್ಯಾರ್ಥಿನಿ ‘ಫ್ರಿ ಕಾಶ್ಮಿರ’ ಎಂಬ ಭಿತ್ತಿ ಫಲಕ ಪ್ರದರ್ಶಿಸಿದರು ಎಂಬುವ ವಿಚಾರ ಈಗ ವಕೀಲರ ನಡುವಿನ ಹೋರಾಟದ ಕಣವಾಗಿ ಬದಲಾಗಿದೆ.

ನಳಿನಿ ಬಾಲಕುಮಾರ್ ವಿರುದ್ದ ಮೈಸೂರಿನ ಜಯಲಕ್ಷ್ಮಿಪುರಂ ಠಾಣೆಯಲ್ಲಿ ರಾಜದ್ರೋಹದ ಪ್ರಕರಣ ದಾಖಲಾದ‌ ಕೂಡಲೇ ಪ್ರೀ ಕಾಶ್ಮಿರ ಫಲಕದ ಅರ್ಥ ಕಾಶ್ಮೀರವನ್ನು ಸ್ವತಂತ್ರಗೊಳಿಸುವುದು ಎಂದು ಅರ್ಥೈಸಿಕೊಂಡ ಬಲಪಂಥೀಯ, ಬಿಜೆಪಿ ಒಲವಿನ ವಕೀಲರು ಮೈಸೂರು ವಕೀಲರ ಸಂಘದ ಮೇಲೆ ಒತ್ತಡ ತಂದು ನಳಿನಿ ಬಾಲಕುಮಾರ್ ಅವರಿಗೆ ಪ್ರಕರಣದಲ್ಲಿ ವಕಾಲತ್ತು ವಹಿಸದಂತೆ ನಿರ್ಣಯ ಕೈಗೊಂಡಿತು. ಈ ನಡೆಯನ್ನು ರಾಜ್ಯದ ಹಲವರು ಪ್ರಜಾಪ್ರಭುತ್ವವಾದಿಗಳು ಟೀಕಿಸಿದ್ದರು.

ಈ ನಡುವೆ ಕಾಶ್ಮಿರದಲ್ಲಿ ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇಟ್ಟಿದ್ದು, ಇಂಟರ್ನೆಟ್ ಸ್ಥಗಿತ ಮಾಡಲಾಗಿದೆ ಇಂತಹ ಪರಿಸ್ಥಿತಿಯಲ್ಲಿ‌ ಕಾಶ್ಮೀರದ ಸಾಮಾನ್ಯ ಜನರಿಗೆ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಅರ್ಥದಲ್ಲಿ ತಾನು ಫ್ರಿ ಕಾಶ್ಮೀರ ಫಲಕ ಹಿಡಿದುದ್ದಾಗಿ ವಿದ್ಯಾರ್ಥಿನಿ ಸ್ಪಷ್ಟಪಡಿಸಿದ್ದಾರೆ.

ಜನರ ಪರವಾಗಿ ಧ್ವನಿ ಎತ್ತಿ ಸರ್ಕಾರವನ್ನು ಟೀಕಿಸುವುದು ಪ್ರಜೆಗಳಿಗೆ ಇರುವ ಸಂವಿಧಾನಿಕ ಸ್ವತಂತ್ರ ಅದನ್ನು ಯಾರು ರಾಜದ್ರೋಹದಂತಹ ಗಂಭೀರ ಪ್ರಕರಣವನ್ನು ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವುದು ಸರಿಯಲ್ಲ ಎಂದು ವಾದಿಸಿರುವ ಹಲವಾರು ಜನಪರ ನಿಲುವಿರುವ, ಪ್ರಜಾಸತ್ತಾತ್ಮಕ ಅಲೋಚನೆಯ, ಜಾತ್ಯಾತೀತ ವಕೀಲರುಗಳು ನಳಿನಿ‌ ಬಾಲಕುಮಾರ್ ಪರವಾಗಿ ವಕಾಲತ್ತು ವಹಿಸಿದ್ದರು. ರಾಜ್ಯದ ಹಲವು ಭಾಗಗಳಿಂದ ಸುಮಾರು 50ಕ್ಕೂ ಹೆಚ್ಚು ವಕೀಲರು ಮೈಸೂರಿಗೆ ಆಗಮಿಸಿ ವಿದ್ಯಾರ್ಥಿನಿಗೆ ಧೈರ್‍ಯ ತುಂಬಿದ್ದರು. ಅವರಲ್ಲಿ ರವಿವರ್ಮ ಕುಮಾರ್, ಸಿ.ಎಸ್.ದ್ವಾರಕನಾಥ್, ಎಸ್.ಶಂಕರಪ್ಪ,‌ ಬಿ.ಟಿ.ವೆಂಕಟೇಶ್‌ ಪ್ರಮುಖರಾಗಿದ್ದಾರೆ.

ಆದರೆ ಮೈಸೂರು ವಕೀಲರ ಸಂಘ ಮತ್ತು ಬಲಪಂಥೀಯ ಅಲೋಚನೆಯ ವಕೀಲರು ಯಾವುದೇ ಬೆಲೆ ತೆತ್ತದಾರೂ ಸರಿ‌ ನಳಿನಿ‌ ಬಾಲಕುಮಾರ್ ಪರ ವಾದಿಸಲು ಸಿದ್ದವಿರುವ ವಕೀಲರನ್ನು ವಕಾಲತ್ತಿನಿಂದ ವಾಪಸ್ಸು ‌ತೆಗೆಸಲು‌ ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿ ನಳಿನಿ ಪರವಾಗಿ ವಾದ ಮಾಡಲು ಮುಂದಾದ ಪಿ.ಪಿ.ಬಾಬುರಾಜ್ ಎಂಬ‌‌ ಪ್ರಗತಿಪರ ವಕೀಲರನ್ನು ಮೈಸೂರು ವಕೀಲರ ಸಂಘದಿಂದ ಉಚ್ಚಾಟನೆ ಮಾಡಿದ್ದಾರೆ.

ಪಿ.ಪಿ.ಬಾಬುರಾಜ್

ಈಗಾಗಲೇ ಒಂದು ಸುತ್ತಿನ ನೀರಿಕ್ಷಿಣಾ ಜಾಮೀನು ಸಂಭವಿಸಿದ ವಾದ ಮಂಡನೆಯಾಗಿದ್ದು ದಿನಾಂಕ‌ 24/01/2020 ಕ್ಕೆ ಮತ್ತೊಂದು‌ ಸುತ್ತಿನ‌ ವಾದ ಮಂಡನೆ‌ ಮೈಸೂರಿನ‌ ನ್ಯಾಯಾಲಯದಲ್ಲಿ‌‌ ಮಂಡನೆ ಆಗಲಿದ್ದು ಇದಕ್ಕೆ ಎರಡು ಬಣಗಳು ಭಾರಿ‌ ಸಿದ್ದತೆ ನಡೆಸಿವೆ. ಶುಕ್ರವಾರದಂದು ಮೈಸೂರು ನ್ಯಾಯಾಲಯದ ಅವರಣ ಕೇವಲ ವಾದ, ವಿವಾದಕ್ಕಷ್ಟೆ ಅಲ್ಲದೆ ಘೋಷಣೆ, ಧಿಕ್ಕಾರ,‌ ಪ್ರತಿಧಿಕ್ಕಾರ,‌ ಹಲ್ಲೆ, ಪ್ರತಿ‌ಹಲ್ಲೆ, ಜಗಳಗಳಿಗೆ ಕಾರಣವಾದರು ಆಶ್ಚರ್ಯ‌ಪಡಬೇಕಿಲ್ಲ ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...