Homeಮುಖಪುಟಏನಾಗಿದೆ ಈ ಮಠಾಧಿಪತಿಗಳಿಗೆ!?

ಏನಾಗಿದೆ ಈ ಮಠಾಧಿಪತಿಗಳಿಗೆ!?

- Advertisement -
- Advertisement -

ತಮ್ಮ ಜಾತಿ ಮೀಸಲಾತಿಗಾಗಿ, ಸಚಿವ ಸ್ಥಾನಕ್ಕಾಗಿ, ಮಠದ ಅನುದಾನಕ್ಕಾಗಿ ಬಾಯಿಬಾಯಿ ಬಿಡುವ ಮಠಾಧಿಪತಿಗಳು ದೇಶದಲ್ಲಿ ಭುಗಿಲೆದ್ದಿರುವ ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ಜನಪರವಾಗಿ ದನಿ ಎತ್ತದಿರುವುದು ಸಾಮಾಜಿಕ ದುರಂತವಲ್ಲವೇ?

ಧರ್ಮ ಮಾನವನನ್ನು ಸೃಷ್ಟಿಸಲಿಲ್ಲ. ಮಾನವ ಧರ್ಮವನ್ನು ಸೃಷ್ಟಿಸಿದ. ಧರ್ಮಗಳು ಬೆಳೆದಂತೆ ಧರ್ಮಗುರುಗಳು, ಮೌಲ್ವಿಗಳು, ಪಾದ್ರಿಗಳು, ಮೌಢ್ಯ ಕಂದಾಚಾರದ ಕಟ್ಟುಪಾಡುಗಳನ್ನು ಹೇರುತ್ತಾ ಬಂದರಲ್ಲದೆ ಯಾವಾಗ ಧರ್ಮ ರಾಜಕಾರಣದಲ್ಲಿ ಬೆರೆಯಿತೋ ಕೋಮುವಾದದ ರೂಪ ಪಡೆಯಿತು. ಏನಾಗಿದೆ ಕೆಲವು ಮಠಾಧೀಶರಿಗೆ? ತಮ್ಮ ಸ್ಥಾನಮಾನ ಪೀಠದ ಗೌರವವನ್ನು ಒತ್ತೆಯಿಟ್ಟು ತಮ್ಮ ತಮ್ಮ ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಲು ಬಹಿರಂಗವಾಗಿಯೇ ಪ್ರಭಾವ ಬೀರುತ್ತಾ ಧಮಕಿಹಾಕುವ ಮಟ್ಟಕ್ಕೆ ಇಳಿದಿದ್ದಾರೆ. ತಮ್ಮ ಜಾತಿಗೆ ಇಷ್ಟೇ ಮೀಸಲಾತಿ ಕೊಡಬೇಕೆಂಬ ಹಕ್ಕೊತ್ತಾಯಕ್ಕಿಳಿಯುವುದು ಇಲ್ಲವಾದರೆ ನಮ್ಮ ಜಾತಿಯ ಮಂತ್ರಿಗಳು ಶಾಸಕರೆಲ್ಲರಿಂದ ರಾಜೀನಾಮೆ ಕೊಡಿಸಿದರೆ ಸರ್ಕಾರ ಉರುಳುತ್ತದೆಯೇ ಎಂಬ ಬಗ್ಗೆ ಅರಿವಿರಲಿ, ಎಂದೆಲ್ಲಾ ಪ್ರಶ್ನಿಸುವ ಅಧೋಗತಿಗೆ ಇಳಿಯುತ್ತಿದ್ದಾರೆ. ಯಾವುದೇ ಒಂದು ಜಾತಿಯಿಂದ ಯಾವ ರಾಜಕಾರಣಿಯೂ ಗೆಲ್ಲಲು ಸಾಧ್ಯವಿಲ್ಲವೆಂಬ ಪರಿವೇ ಇಲ್ಲದೆ ಗುಟುರುಹಾಕುವ ಇಂಥವರು ಮತದಾರರನ್ನು ಅಪಮಾನಿಸುತ್ತಿದ್ದಾರೆ. ಇದೆಲ್ಲಾ ಏಕೆ ಹೇಳಬೇಕಾಯಿತು ಎಂದರೆ ಇತ್ತೀಚೆಗೆ ಪಂಚಮಸಾಲಿ ಮಠಾಧೀಶರೊಬ್ಬರು ಬಹಿರಂಗವಾಗಿಯೇ ವೇದಿಕೆಯಲ್ಲಿ ನಮ್ಮವರು ಹದಿಮೂರು ಜನ ಶಾಸಕರಲ್ಲಿ ಮೂವರಿಗಾದರೂ ಸಚಿವ ಸ್ಥಾನ ಕೊಡಿ, ಇಲ್ಲವಾದರೆ ಕೆಳಗಿಳಿಯಬೇಕಾಗುತ್ತದೆಂದು ಮುಖ್ಯಮಂತ್ರಿಗೆ ಉರಿಗಣ್ಣು ಬಿಡುತ್ತಾ ಕೆಂಡಕಾರಿದ್ದನ್ನು ಮಾಧ್ಯಮಗಳು ತೋರಿಸಿವೆ. ಮರುದಿನದ ಸಭೆಯಲ್ಲಿ ವಾಲ್ಮೀಕಿ ಮಠದ ಸ್ವಾಮೀಜಿಯೊಬ್ಬರು ನಾವೂ ನಿಮ್ಮ ಬೆಂಬಲಕ್ಕಿದ್ದೇವೆಯೆಂದು ಬೆಂಬಲ ವ್ಯಕ್ತಪಡಿಸಿದರೆ, ಉಳಿದ ಮಠಾಧಿಪತಿಗಳು ಕಾವಿ ತೊಟ್ಟಿದ್ದೇವೆಂದು ಮರೆತು ಪರ ವಿರೋಧದ ಡಿಬೇಟ್‍ಗೆ ಇಳಿದಿರುವುದು ಧಾರ್ಮಿಕ ದುರಂತವಲ್ಲವೆ?

ಕುಂಚಿಟಿಗರ ಸ್ವಾಮಿಯ ನೇತೃತ್ವದಲ್ಲಿ ಕೆಲವು ಓಬಿಸಿಗಳ ಜೊತೆ ಮಾದಾರಪೀಠದ ಸ್ವಾಮಿಗಳು ಮುಖ್ಯಮಂತ್ರಿಗಳ ಧವಳಗಿರಿ ನಿವಾಸಕ್ಕೆ ತೆರಳಿ ಅವರ ಕಣ್ಣೊರೆಸಿ ಬೆಂಬಲಿಸಿ, ಸೆಡ್ಡು ಹೊಡೆದು ಹೊರ ಬಂದಿದ್ದಾರೆ. ಈ ಮಠಾಧಿಪತಿಗಳಿಗೇನಾಗಿದೆ? ಬಿಜೆಪಿ ಸರ್ಕಾರ ಬರುತ್ತಲೇ ಗುಂಪು ಕಟ್ಟಿಕೊಂಡು ಹೋಗಿ ನಮ್ಮ ಮಠಕ್ಕೆ ಇಷ್ಟೇ ಕೋಟಿ ಅನುದಾನ ಕೊಡಿರೆಂದು ವಸೂಲಿಗೆ ಇಳಿದು ಬಿಡುತ್ತಾರೆ. ಇದಕ್ಕೂ ಕಾರಣವಿಲ್ಲದಿಲ್ಲ ರಾಜಕಾರಣಿಗಳೂ ಅಷ್ಟೇ. ತಮ್ಮ ಗೆಲುವಿಗಾಗಿ ಜಾತಿ ಸ್ವಾಮಿಗಳ ಬೆನ್ನು ಬಿದ್ದು ಕೋಟಿಗಟ್ಟಲೆ ಕಾಣಿಕೆ ನೀಡಿ, ಮತಗಳನ್ನು ರಿಸರ್ವ್ ಮಾಡಿಸಿಕೊಳ್ಳಲು ಆರಂಭಿಸಿದ್ದರ ಫಲವೇ ಇದು. ನೀನನಗಿದ್ದರೆ ನಾನಿನಗೆ ಎಂಬಂತಹ ಒಡಂಬಡಿಕೆಯ ವ್ಯಾಪಾರ ನಡೆಯುತ್ತಿದೆ.

ಸಮ್ಮಿಶ್ರ ಸರ್ಕಾರವಿದ್ದಾಗಲೂ ಅಷ್ಟೇ. ನಮ್ಮ ಮುಖ್ಯಮಂತ್ರಿಯ ತಂಟೆಗೆ ಬಂದರೆ ಪರಿಣಾಮ ನೆಟ್ಟಗಿರಲ್ಲವೆಂದು ಆದಿಚುಂಚನಗಿರಿಯೇ ಗುಡುಗಿದ್ದುಂಟು. ಸಿದ್ಧರಾಮಯ್ಯನವರು ಸಿ.ಎಂ. ಆದಾಗ ಕಾಗಿನೆಲೆಯ ಮಠಾಧಿಪತಿಗಳು ರಕ್ಷಣೆಗೆ ಇಳಿದಿದ್ದುಂಟು. ರಾಜಕಾರಣದಲ್ಲಿ ಧರ್ಮಕಾರಣ ಬೆರೆತರೆ ಕೇಡಿಲ್ಲ. ಆದರೆ ಧರ್ಮದಲ್ಲಿ ರಾಜಕಾರಣ ಬೆರೆತರೆ ಒಳಿತಿಲ್ಲವೆಂಬುದು ಬಸವಣ್ಣನವರ ಕಾಲದಲ್ಲಿ ಸಾಬೀತಾಗಿದೆಯಾದರೂ ಅದರ ಬಗ್ಗೆ ರಾಜಕಾರಣಿಗಳು ಮಠಾಧೀಶರು ಮರೆತಂತೆ ಕಾಣುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮಠಾಧಿಪತಿಗಳ ಕೊಲೆಸ್ಟ್ರಾಲ್ ಹೆಚ್ಚುತ್ತದೆ. ಸ್ವಾಮಿಗಳಾದರೂ ಘನತೆ ಹೆಚ್ಚಿಸಿಕೊಂಡಿದ್ದಾರೆಯೇ ಎಂದಾಲೋಚಿಸಿದರೆ ಕೆಲವರು ಜೈಲಿಗೆ ಹೋಗಿದ್ದಾರೆ. ಕೆಲವರ ಮೇಲಿನ ಅತ್ಯಾಚಾರದ ಕೇಸುಗಳು ಕೋರ್ಟಿನಲ್ಲಿ ಕೊಳೆಯುತ್ತಿವೆ. ಕೆಲವರು ನೆಲವನ್ನೇ ನುಂಗಿದ್ದಾರೆ. ಸ್ವಾಮೀಜಿಯೊಬ್ಬ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಗೋದ್ರಾ ಪ್ರಕರಣವನ್ನು ಮರುಕಳಿಸುತ್ತಿದ್ದಾನೆ. ಉತ್ತರದಲ್ಲಿ ಯೋಗಪಟು ಬಾಬಾ ರಾಮ್‍ದೇವ್, ರವಿಶಂಕರ್ ಗುರೂಜಿ, ಜಗ್ಗಿ ವಾಸುದೇವ್ (ಇಲ್ಲಿನ ದಿವಂಗತ ಪೇಜಾವರಶ್ರೀಗಳಂತವರು) ಬಹಿರಂಗವಾಗಿಯೇ ಬಿಜೆಪಿಯ ಹಾಗೂ ಮೋದಿಯವರ ಬೆಂಬಲಕ್ಕೆ ನಿಂತವರು. ನೀವೆಲ್ಲಾ ರಾಜಕೀಯದಲ್ಲೇಕೆ ಮೂಗು ತೂರಿಸುವಿರಿ ಎಂದರೆ, ನನಗೊಬ್ಬರು ಸಮಜಾಯಿಷಿ ನೀಡಿದ್ದುಂಟು. ನಮ್ಮ ಸನಾತನ ಧರ್ಮ, ಪುರಾಣಗಳಲ್ಲೇ ಇದೆಲ್ಲಾ ನಡೆದು ಬಂದಿದೆ ಎನ್ನುತ್ತಾರೆ. ದೇವತೆಗಳಿಗೆ ವಸಿಷ್ಠ ಗುರುಗಳಾಗಿದ್ದರು, ರಾಕ್ಷಸರಿಗೆ ಶುಕ್ಲಾಚಾರ್ಯರು ಸಲಹೆ ನೀಡಿದ್ದುಂಟು. ಸಾಮಾನ್ಯ ಬಾಲಕ ಚಂದ್ರಗುಪ್ತನಿಗೆ ಚಾಣಕ್ಯ, ಸಳನನ್ನು ಹೋಯ್ಸಳನನ್ನಾಗಿಸಿದ್ದ ಸುದತ್ತ, ಹಕ್ಕಬುಕ್ಕರನ್ನು ಬೆಂಬಲಿಸಿದ ವಿದ್ಯಾರಣ್ಯ, ಗ್ರಾಮವಾಸಿ ಯುವಕ ಭರಮಣ್ಣನಾಯಕನಿಗೆ ಮಾರ್ಗದರ್ಶನವಿತ್ತು. ದೊರೆಪದವಿಗೇರಿಸಿದ ಮುರುಗೇಸ್ವಾಮಿಗಳನ್ನು ಉದಾಹರಿಸುತ್ತಾರೆ. ಇರಬಹುದು ಆದರೆ ಇವರೆಲ್ಲಾ ಗುರುಗಳಾಗಿ ಧರ್ಮಕಾರಣ ಮಾಡಿ ಪ್ರಜಾಹಿತ ಬಯಸಿದರೆ ವಿನಃ ರಾಜಕಾರಣ ಮಾಡಲಿಲ್ಲ. ಬಹುಮುಖ್ಯವಾಗಿ ಇವರಾರು ದೊರೆಯಾದವನ “ಜಾತಿಗೆ” ಸೇರಿದವರಲ್ಲವಾಗಿದ್ದರಿಂದಲೇ ಜಗದ್ಗುರುಗಳು ಎನಿಸಿಕೊಂಡರು. ಈಗಿರುವ ಎಲ್ಲರೂ ಜಾತಿ ಗುರುಗಳು, ಇರುವುವೆಲ್ಲಾ ಜಾತಿಮಠಗಳು ಎಂಬುದನ್ನು ಅವರುಗಳೇ ಸಾಬೀತು ಪಡಿಸುತ್ತಿದ್ದಾರೆ. ಹಿಂದಿನವರೆಲ್ಲಾ ಭಕ್ತಾಧಿಗಳ ನೆರವಿನಿಂದ ಮಠ ಕಟ್ಟಿ ಬೆಳೆಸಿದ್ದವರಾದ್ದರಿಂದ ಅವರಿಗೆ ಯಾರ ಹಂಗೂ ಇರಲಿಲ್ಲ. ಐಷಾರಾಮಿ ಮಠಗಳಲ್ಲಿದ್ದು, ಯಾವಾಗ ಸರ್ವ ಸಂಗ ಪರಿತ್ಯಾಗವನ್ನೇ ಮರೆತರೋ, ಕೋಟಿಗಟ್ಟಲೆ ಹಣಕ್ಕಾಗಿ ರಾಜಕಾರಣಿಗಳ ಎದುರು ಸಲಾಮ್ ಹೊಡೆದರೋ ಆಗಲೇ ಕಾವಿ ತನ್ನ ಕಿಮ್ಮತ್ತು ಕಳೆದುಕೊಂಡಿದೆ. ಖಾದಿಗಳ ಹಿಂದೆ ನಿಂತು ದರ್ಬಾರ್ ನಡೆಸುವ ಬದಲು, ತಮಗೆ ಬೇಕಾದವರನ್ನು ವಿವಿಧ ಪಕ್ಷಗಳಿಂದ ನಿಲ್ಲಿಸಿ, ಗೆಲ್ಲಿಸುವ ಪಡಿಪಾಟಲು ಬಿಟ್ಟು ಕಾವಿ ಕಿತ್ತೆಸೆದು ನೇರಾ ನೇರ ತಾವೇ ರಾಜಕೀಯಕ್ಕಿಳಿಯುವುದು ಇಬ್ಬಂದಿತನಕ್ಕಿಂತ ಮೇಲಲ್ಲವೇ? ತಮ್ಮ ಜಾತಿ ಮೀಸಲಾತಿಗಾಗಿ, ಸಚಿವಸ್ಥಾನಕ್ಕಾಗಿ, ಮಠದ ಅನುದಾನಕ್ಕಾಗಿ ಬಾಯಿ ಬಾಯಿ ಬಿಡುವ ಇವರುಗಳು ದೇಶದಲ್ಲಿ ಭುಗಿಲೆದ್ದಿರುವ ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ಜನಪರವಾಗಿ ದನಿ ಎತ್ತದಿರುವುದು ಸಾಮಾಜಿಕ ದುರಂತವಲ್ಲವೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...