Homeಕರ್ನಾಟಕತ್ರೀ ಸ್ಟಾರ್ಸ್ ಬರ್ತಡೇ : ಯಡವಟ್ಟು ಮತ್ತು ಶ್ರೇಯಸ್ಸು

ತ್ರೀ ಸ್ಟಾರ್ಸ್ ಬರ್ತಡೇ : ಯಡವಟ್ಟು ಮತ್ತು ಶ್ರೇಯಸ್ಸು

- Advertisement -
- Advertisement -

ಕನ್ನಡ ಚಿತ್ರರಂಗದ ಇಬ್ಬರು ಸ್ಟಾರ್ ನಟರ ಬರ್ತಡೇ ಸೆಲಬ್ರೇಷನ್ ಇದೇ ತಿಂಗಳಿನಲ್ಲಾಯಿತು. ಮತ್ತೊಬ್ಬ ಸ್ಟಾರ್ ನಟನ ಹುಟ್ಟಿದ ದಿನದ ಆಚರಣೆ ಫೆಬ್ರವರಿಯಲ್ಲಾಗಲಿದೆ. ಆದರೆ ಈ ಮೂರು ಬರ್ತಡೇ ಸೆಲಬ್ರೇಷನ್‍ಗಳು ಒಂದೊಂದು ರೀತಿಯ ವಿಶೇಷ ಮತ್ತು ವಿಚಿತ್ರವಾಗಿವೆ. ಜನವರಿ 08ರಂದು ಹುಟ್ಟಿದ ಹಬ್ಬ ಆಚರಿಸಿಕೊಂಡ ಯಶ್‍ಗೆ ತಮ್ಮ ಬರ್ತಡೆಯನ್ನೂ ಹೆಚ್ಚು ಸೆಲೆಬ್ರೇಟ್ ಮಾಡದ ಅಭಿಮಾನಿಗಳು 5,700 ಕೆ.ಜಿ ಕೇಕ್ ರೆಡಿ ಮಾಡಿಸಿ ಸಂಭ್ರಮ ಆಚರಿಸಿದ್ದರು.

ಯಶ್ ಬರ್ತಡೇಗಿಂತ ವಿಚಿತ್ರವಾಗಿ ಬರ್ತಡೇ ಆಚರಿಸಿಕೊಂಡಿದ್ದು ದುನಿಯಾ ವಿಜಯ್, ಇತ್ತೀಚೆಗೆ ಹೊಡೆದಾಟ, ಬಡಿದಾಟ, ಬೀದಿ-ಮನೆ ಜಗಳಗಳಿಂದಲೇ ಹೆಚ್ಚು ಸುದ್ದಿಯಲ್ಲಿರುವ ವಿಜಯ್ ತನ್ನ ಬರ್ತಡೇ ಆಚರಣೆಯಲ್ಲೂ ಪೇಚಿಗೆ ಸಿಕ್ಕಿಕೊಂಡಿದ್ದಾರೆ. ಎಲ್ಲರೂ ಬರ್ತಡೇ ಕೇಕನ್ನು ಚಾಕುವಿನಿಂದ ಕತ್ತರಿಸಿದರೆ, ಮೊನ್ನೆ (ಜ.20) ಅಭಿಮಾನಿಗಳ ಜೊತೆ ಹುಟ್ಟು ಹಬ್ಬ ಆಚರಿಸಿಕೊಂಡ ವಿಜಯ್ ತಲ್ವಾರ್‍ನಲ್ಲಿ ಕೇಕ್ ಕಟ್ ಮಾಡಿ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ಇತ್ತೀಚೆಗೆ ವಿಜಯ್‍ರ ಹೊಡಿ-ಬಡಿ ನಡವಳಿಕೆಗಳನ್ನು ನೋಡಿದ್ದ ಯಾರೋ ಒಬ್ಬ ಅಭಿಮಾನಿ ತಲ್ವಾರ್ ತಂದು ಬರ್ತಡೇ ಕೇಕ್ ಕಟ್ ಮಾಡೋಕೆ ಕೊಟ್ಟಿದ್ದಾನೆ. ಅದನ್ನೇ ಹಿಡಿದು ಕೇಕ್ ಕಟ್ ಮಾಡಿರುವ ವಿಜಯ್‍ರನ್ನು ಜನ ಹಿಗ್ಗಾಮುಗ್ಗಾ ಟ್ರೋಲ್ ಮಾಡ್ತಿದ್ದಾರೆ. ಅಯ್ಯೋ ಗೊತ್ತಿಲ್ದೆ ತಪ್ಪಾಗೋಗಿದೆ ಬಿಟ್ಬುಡ್ರಿ ಅಂತ ವಿಜಯ್ ಬಾಯಿ ಬಡ್ಕೊತಾ ಕುಂತಿದ್ದಾರೆ ಪಾಪ. ಆ ಅಭಿಮಾನಿಗೆ ವಿಜಯ್ ಮೇಲೆ ಲವ್ ಜಾಸ್ತಿ ಆಗಿತ್ತೋ, ಕೋಪ ಜಾಸ್ತಿ ಆಗಿತ್ತೋ ಗೊತ್ತಿಲ್ಲ, ವಿಜಯ್‍ರನ್ನು ಎಡವಟ್ಟಿನಲ್ಲಿ ಸಿಕ್ಕಿಸಿಹೋಗಿದ್ದಾನೆ.

ಇದೆಲ್ಲದ ನಡುವೆ ವಿಶೇಷ ಅನ್ನಿಸೋದು ದರ್ಶನ್ ಬರ್ತಡೇ, ಇತ್ತೀಚೆಗೆ ತುಂಬಾ ಸಿಂಪಲ್ ಅಗಿ ಕಾಣಿಸಿಕೊಳ್ತಿರೋ ದರ್ಶನ್, ಅಭಿಮಾನಿಗಳ ಕಷ್ಟಕ್ಕೆ, ಸಹ ನಟರ ಸಮಸ್ಯೆಗಳಿಗೆ ನೆರವು ನೀಡೋದ್ರಲ್ಲೇ ಹೆಚ್ಚು ಸುದ್ದಿ ಆಗ್ತಿದ್ದಾರೆ. ಮುಂದಿನ ತಿಂಗಳು 16ರಂದು ದರ್ಶನ್ ಹುಟ್ಟಿದ ದಿನ. ತನ್ನ ಬರ್ತಡೇ ಇನ್ನು ತಿಂಗಳಿರುವಾಗಲೇ ದರ್ಶನ್ ತಮ್ಮ ಮನೆ ಮುಂದೆ ಬೋರ್ಡ್ ಹಾಕಿಕೊಂಡಿದ್ದು, ಅದರಲ್ಲಿ “ನನ್ನ ಬರ್ತಡೆಗೆ ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ, ಅದೇ ಹಣದಲ್ಲಿ ನಿಮ್ಮ ಕೈಲಾದಷ್ಟು ಅಕ್ಕಿ, ಬೇಳೆ, ಸಕ್ಕರೆ ಹಾಗೂ ಇತರ ದವಸ ಧಾನ್ಯಗಳನ್ನು ದಾನ ನೀಡಿ. ಅದನೆಲ್ಲಾ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ತಲುಪಿಸುವ ಹೊಣೆ ನನ್ನದು” ಎಂದು ಘೋಷಿಸಿದ್ದಾರೆ.

ಈ ಸುದ್ದಿ ಅಭಿಮಾನಿಗಳನ್ನು ಮುಟ್ಟುತಿದ್ದಂತೆಯೇ ಸಾಲು ಸರದಿಯಲ್ಲಿ ತಮ್ಮಿಂದಾಗುವಷ್ಟು ಧಾನ್ಯಗಳನ್ನು ದರ್ಶನ್ ಮನೆಗೆ ಕೊಂಡೊಯ್ಯುತ್ತಿದ್ದಾರೆ. ಕೆಲವೇ ವರ್ಷಗಳ ಹಿಂದೆ ತನ್ನ ದಾಂಪತ್ಯ ಜೀವನದಲ್ಲಿ ತಾನೇ ಮಾಡಿಕೊಂಡಿದ್ದ ಕಲಹಗಳಿಂದ ವಿಲನ್ ಆಗಿದ್ದ ದರ್ಶನ್, ಅದಾದ ಮೇಲೆ ಇಂತಹ ಒಂದಷ್ಟು ಮಾದರಿಯಾಗುವಂತಹ ಕೆಲಸಗಳಿಂದ ಮತ್ತೆ ಹೀರೋ ಆಗ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...