Homeಮುಖಪುಟನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ನೇತಾಜಿಯ ಜಾತ್ಯತೀತತೆಯನ್ನು ಅನುಸರಿಸಿ, ಇಲ್ಲದಿದ್ದರೆ ದೇಶವು ವಿಭಜನೆಯಾಗುತ್ತದೆ: ಬೋಸ್ ರಕ್ತಸಂಬಂಧಿ

ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

- Advertisement -
- Advertisement -

ಭಾರತವನ್ನು ಒಗ್ಗೂಡಿಸಲು ನೇತಾಜಿಯ ಜಾತ್ಯತೀತ ಸಿದ್ಧಾಂತವನ್ನು ಬಿಜೆಪಿ ಪಕ್ಷವು ಅನುಸರಿಸದಿದ್ದರೆ, ದೇಶವು ವಿಭಜನೆಯಾಗುತ್ತದೆ ಎಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರಳಿಯ, ಬಿಜೆಪಿ ನಾಯಕ ಚಂದ್ರ ಕುಮಾರ್ ಬೋಸ್ ಹೇಳಿದ್ದಾರೆ.

“ಧರ್ಮಕ್ಕೆ ಸ್ಥಾನವಿಲ್ಲದ ಭಾರತವನ್ನು ಏಕೀಕರಿಸಲು ಪಕ್ಷವು ನೇತಾಜಿಯ ಸಿದ್ಧಾಂತವನ್ನು ಅನುಸರಿಸಬೇಕು. ಇಲ್ಲದಿದ್ದರೆ, ಇಡೀ ದೇಶವು ತುಂಡುಗಳಾಗಿ ಒಡೆಯುತ್ತದೆ. ಇಂದು ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನ. ಅವರು ಹಿಂದೂಗಳು, ಮುಸ್ಲಿಮರು, ಸಿಖ್ಖರು ಮತ್ತು ಕ್ರಿಶ್ಚಿಯನ್ನರನ್ನು ತಮ್ಮ ಆಜಾದ್ ಹಿಂದ್ ಫೌಜ್ (ಐಎನ್‌ಎ) ಯಲ್ಲಿ ಒಂದುಗೂಡಿಸಿದರು ಎಂದು ಹೇಳಿದ್ದಾರೆ.

ನಾನು ಕೂಡ ಬಿಜೆಪಿಯಲ್ಲಿದ್ದೇನೆ, ಆದರೂ ನಾನು ಧರ್ಮವು ವೈಯಕ್ತಿಕ ವಿಷಯ ಎಂದು ನಂಬಿದ್ದೇನೆ. ಇದನ್ನು ಅರ್ಥಮಾಡಿಕೊಳ್ಳದವರು ವಿಭಜಕ ಶಕ್ತಿಗಳು ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಕೋಲ್ಕತಾ ದಕ್ಷಿಣ ಲೋಕಸಭಾ ಸ್ಥಾನಕ್ಕೆ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅವರು ಸೋಲುಂಡಿದ್ದರು.

ಈ ಹಿಂದೆ ಚಂದ್ರಕುಮಾರ್‌ ಬೋಷ್‌ ರವರು ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವೂ ತಮ್ಮ ಭಿನ್ನಾಭಿಪ್ರಾಯವನ್ನು ದಾಖಲಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ಗೆ ಸಮರ್ಪಕ ಗೌರವ ಸಲ್ಲಿಸಲು ದೆಹಲಿಯಲ್ಲಿ ನೇತಾಜಿಯ ಪ್ರತಿಮೆ ಮತ್ತು ಸ್ಮಾರಕವನ್ನು ನಿರ್ಮಿಸುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದಾರೆ.

“ಭಾರತ ಸರ್ಕಾರವು, ಭಾರತದ ವಿಮೋಚಕ ಮತ್ತು ಆಜಾದ್ ಹಿಂದ್ ಫೌಜ್ ಸ್ಥಾಪಕ ಸುಭಾಷ್‌ ಚಂದ್ರ ಬೋಸ್‌ರವರಿಗೆ ಸರಿಯಾದ ಮತ್ತು ಸೂಕ್ತವಾದ ಗೌರವವನ್ನು ನೀಡುವ ಸಮಯ ಇದಾಗಿದೆ. ದೆಹಲಿಯ ರಾಜ್‌ಪಾತ್‌ನಲ್ಲಿರುವ ಇಂಡಿಯಾ ಗೇಟ್, ಐಎನ್‌ಎ ಸ್ಮಾರಕದಲ್ಲಿ ನೇತಾಜಿಯ ಪ್ರತಿಮೆಯನ್ನು ನಿರ್ಮಿಸಿ ಮತ್ತು ಎಲ್ಲಾ ಭಾರತೀಯರನ್ನು ಸಂಯೋಜಿಸಲು ನೇತಾಜಿಯ ಸಿದ್ಧಾಂತವನ್ನು ಜಾರಿಗೊಳಿಸಿ. ನೇತಾಜಿಯವರ ಸಾವಿನ ರಹಸ್ಯವನ್ನು ಅದರ ತಾರ್ಕಿಕ ತೀರ್ಮಾನಕ್ಕೆ ಕೊಂಡೊಯ್ಯಿರಿ” ಎಂದು ಚಂದ್ರ ಕುಮಾರ್ ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ಯಾಗ್ ಮಾಡಿದ್ದಾರೆ.

ಇದೇ ವಿಷಯದ ಬಗ್ಗೆ ಪಿಎಂಒಗೆ ಪತ್ರ ಬರೆಯುವುದಾಗಿ ಹೇಳಿದ ಅವರು “ನಾವು (ಬಿಜೆಪಿ) ಗಾಂಧಿ ಸಂಕಲ್ಪ ಯಾತ್ರೆ ಮಾಡಿದ್ದೇವೆ. ನಾನು ಆರು ದಿನಗಳ ಕಾಲ ನಡೆದಿದ್ದೇನೆ, ಆದರೆ ಉತ್ತಮ ಪ್ರತಿಕ್ರಿಯೆ ಸಿಗಲಿಲ್ಲ. ನಾನು ಗಾಂಧಿಯನ್ನು ಕೀಳಾಗಿ ಕಾಣಲು ಬಯಸುವುದಿಲ್ಲ, ಆದರೆ ಇಡೀ ಜನವರಿ ತಿಂಗಳಲ್ಲಿ ನಾವು ದೇಶಾದ್ಯಂತ ನೇತಾಜಿ ಸಂಕಲ್ಪ ಯಾತ್ರೆಯನ್ನು ಕೈಗೊಳ್ಳಬೇಕೆಂದು ಪ್ರಧಾನಮಂತ್ರಿಗೆ ನನ್ನ ಸಲಹೆ ಇದೆ” ಎಂದು ಅವರು ಹೇಳಿದರು.

ನೇತಾಜಿ ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ನಂತರ, ಅವರು ಮೇ 3, 1939 ರಂದು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ ರಚನೆಯನ್ನು ಘೋಷಿಸಿದರು ಮತ್ತು ನಂತರ ಬ್ರಿಟಿಷರನ್ನು ಎದುರಿಸಲು ಐಎನ್ಎ ಅನ್ನು ಪರಿಷ್ಕರಿಸಿದರು.

ನೇತಾಜಿಯ ಸಾವು ಅಥವಾ ಕಣ್ಮರೆ ಇನ್ನೂ ರಹಸ್ಯವಾಗಿ ಉಳಿದಿದೆ. ಅವರು ತೈವಾನ್‌ನಲ್ಲಿ ವಿಮಾನ ಹತ್ತಿದ್ದರು ಮತ್ತು ಅದು ಅವರ ಸಾವಿಗೆ ಕಾರಣವಾಯಿತು ಎಂದು ಹಲವಾರು ವರದಿಗಳು ಹೇಳಿಕೊಂಡಿವೆ. ಆದಾಗ್ಯೂ, ಅವರ ಕಣ್ಮರೆಯ ಬಗ್ಗೆ ತಜ್ಞರು ವಿಭಿನ್ನ ಸಿದ್ಧಾಂತಗಳನ್ನು ಮಂಡಿಸಿದ್ದರಿಂದ ಅವರ ಸಾವಿನ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಈ ರಹಸ್ಯದ ಬಗ್ಗೆ ಬೆಳಕು ಚೆಲ್ಲುವ ಸಲುವಾಗಿ ಕೇಂದ್ರವು ಕಾಲಕಾಲಕ್ಕೆ ಆಯೋಗಗಳನ್ನು ರಚಿಸಿತ್ತು – 1956 ರಲ್ಲಿ ಷಾ ನವಾಜ್ ಸಮಿತಿ, 1970 ರಲ್ಲಿ ಖೋಸ್ಲಾ ಆಯೋಗ ಮತ್ತು 2005 ರಲ್ಲಿ ಮುಖರ್ಜಿ ಕಮಿಷನ್ – ಆದರೆ ಯಾರೂ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...