Homeಮುಖಪುಟಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿ ಕುಸಿತ: ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮುಖಭಂಗ!

- Advertisement -
- Advertisement -

2019 ರಲ್ಲಿ  ಯುನೈಟೆಡ್ ನೇಷನ್ಸ್ ನಡೆಸಿದ ಸಂತೋಷಬರಿತ ದೇಶಗಳ ಸಮೀಕ್ಷೆಯಲ್ಲಿ ಒಟ್ಟು 156 ಒಕ್ಕೂಟ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ 140ನೇ ಸ್ಥಾನಕ್ಕೆ ಕುಸಿದಿತ್ತು. ಪಕ್ಕದ ರಾಷ್ಟ್ರಗಳಾದ ಶ್ರೀಲಂಕಾ, ಬಾಂಗ್ಲದೇಶ, ನೇಪಾಳ ಇನ್ನಿತ್ಯಾದಿ ದೇಶಗಳಿಗಿಂತಲೂ ಕೆಳಗಿನ ಸ್ಥಾನ ಪಡೆದು ಅವಮಾನ ಅನುಭವಿಸಿತ್ತು. ಯಾವುದೇ ಒಂದು ದೇಶಕ್ಕೆ ಅಲ್ಲಿರುವ ಜನರ ನೆಮ್ಮದಿ ಹಾಗೂ ಸರ್ಕಾರದ ಆಡಳಿತವನ್ನಾಧರಿಸಿ ನಡೆಯುವ ಈ ಸಮೀಕ್ಷೆ ಬಹಳ ಮುಖ್ಯವಾಗಿರುತ್ತದೆ.

ಇದೀಗ ಅಷ್ಟೇ ಮುಖ್ಯವಾದ ದೇಶದ ಪ್ರಜಾಪ್ರಭುತ್ವದ ಸೂಚ್ಯಂಕದಲ್ಲಿಯೂ ಭಾರತ ಕುಸಿತ ಕಂಡಿದೆ. ನಾಗರೀಕ ಸ್ವಾತಂತ್ರ್ಯಕ್ಕೆ ಅಡ್ಡಿ ಹಿನ್ನಲೆಯಲ್ಲಿ ಭಾರತ ಹತ್ತು ಸ್ಥಾನಗಳಿಂದ ಕೆಳೆದುಕೊಂಡು 51ನೇ ಸ್ಥಾನಕ್ಕೆ ಕುಸಿದಿದೆ ಎಂದು ಇಐಯು (ಎಕಾನಾಮಿಸ್ಟ್ ಇಂಟಲಿಜೆನ್ಸ್ ಯೂನಿಟ್) ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ. 2018ರಲ್ಲಿ 7.23 ಅಂಕಗಳನ್ನು ಗಳಿಸಿದ್ದ ಭಾರತ ಈ ಬಾರಿ 6.90 ಅಂಕವನ್ನು ಪಡೆದಿದೆ. ಭಾರತದ ಮಟ್ಟಿಗೆ ಇದು ಅತ್ಯಂತ ಕಡಿಮೆ ಅಂಕವಾಗಿದ್ದು ಐತಿಹಾಸಿಕವಾದ ಇಳಿಕೆ ಕಂಡಿದೆ ಎಂದು ವರದಿಗಳು ತಿಳಿಸಿವೆ. ಇತ್ತೇಚೆಗೆ ಭಾರತದಲ್ಲಿ ನಾಗರೀಕ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ದಾಳಿಗಳ ಪರಿಣಾಮವಾಗಿ ಈ ಕುಸಿತದ ಪ್ರಾಥಮಿಕ ಕಾರಣ ಎಂದು ವರದಿಗಳು ತಿಳಿಸಿವೆ.

ಮುಖ್ಯವಾದ 5 ಮಾನದಂಡಗಳ ಆಧಾರದ ಮೇಲೆ ಸೂಚ್ಯಂಕವು ನಿರ್ಧಾರಗೊಂಡಿದೆ, ಅವುಗಳು. 1. ಚುನಾವಣಾ ಪ್ರಕ್ರಿಯೆ ಹಾಗೂ ಬಹುತ್ವ 2. ಸರ್ಕಾರದ ಆಡಳಿತ ವೈಖರಿ, 3. ರಾಜಕೀಯ ಭಾಗವಹಿಸುವಿಕೆ, 4. ರಾಜಕೀಯ ಸಂಸ್ಕೃತಿ ಹಾಗೂ 5. ನಾಗರೀಕ ಸ್ವಾತಂತ್ರ್ಯ. ಸೂಚ್ಯಾಂಕದ ಅಂಕಗಳ ವಿಭಾಗದ ಅನುಸಾರ ಭಾರತದ 6.90 ಅಂಕವು ‘ದೋಷಪೂರಿತ ಪ್ರಜಾಪ್ರಭುತ್ವ’ದ ವಿಭಾಗದಲ್ಲಿ ದಾಖಲಾಗುತ್ತದೆ.

“ಕಳೆದ ವರ್ಷಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಗಳು, ಅದರಲ್ಲೂ ವಿಶೇಷವಾಗಿ ವಾಯುವ್ಯ ಭಾಗದ ಕ್ಸಿನ್ಜಿಯಾಂಗ್ ನಲ್ಲಿ ನಡೆದ ತಾರತಮ್ಯ ತೀವ್ರಗೊಂಡಿದೆ ಹಾಗೂ ಸಾಮಾನ್ಯ ಜನರ ಮೇಲೆ ಡಿಜಿಟಲ್ ಕಣ್ಗಾವಲು ಕೂಡ 2019 ರಲ್ಲಿ ವೇಗವಾಗಿ ಮುಂದುವರೆದಿದೆ. ಇದು ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಮತ್ತಷ್ಟು ನಿರ್ಬಂಧವನ್ನು ಹೇರುತ್ತದೆ” ಎಂದು ವರದಿ ತಿಳಿಸಿದೆ. ಇದರಿಂದಾಗಿ ಚೀನಾ ಕೇವಲ 2.26 ಅಂಕ ಪಡೆದು 153ನೇ ಸ್ಥಾನಕ್ಕೆ ಕುಸಿದಿದೆ.

ನೆರೆಯ ಪಾಕಿಸ್ತಾನ 108ನೇ ಸ್ಥಾನ, ಶ್ರೀಲಂಕಾ 69ನೇ ಸ್ಥಾನ ಹಾಗೂ ಬಾಂಗ್ಲದೇಶ 80ನೇ ಸ್ಥಾನ ಪಡೆದಿದೆ.

ಸಂತೋಷಭರಿತ ಸೂಚ್ಯಾಂಕದಲ್ಲಿ (ಹ್ಯಾಪಿನೆಸ್ ಇಂಡೆಕ್ಸ್) ಉನ್ನತ ಸ್ಥಾನ ಪಡೆದ ದೇಶಗಳೇ ಪ್ರಜಾಪ್ರಭುತ್ವ ಸೂಚ್ಯಾಂಕದ ಪಟ್ಟಿಯಲ್ಲಿಯೂ ಉನ್ನತ ಸ್ಥಾನಗಳು ಪಡೆದಿವೆ. ಕ್ರಮವಾಗಿ ನಾರ್ವೇ, ಐಸ್ಲ್ಯಾಂಡ್, ಸ್ವೀಡನ್, ನ್ಯೂಜಿಲ್ಯಾಂಡ್, ಫಿನ್ಲ್ಯಾಂಡ್, ಐರ್ಲ್ಯಾಂಡ್, ಡೆನ್ಮಾರ್ಕ್, ಕೆನಡಾ, ಆಸ್ಟ್ರೇಲಿಯಾ, ಸ್ವಿಜರ್ಲ್ಯಾಂಡ್ ಟಾಪ್ ಟೆನ್ ದೇಶಗಳಾಗಿವೆ. ದಕ್ಷಿಣ ಕೋರಿಯಾ 167ನೇ ಸ್ಥಾನ ಪಡೆದು ಕೊನೆಯಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದಕ್ಕೆಲ್ಲ ಕಾರಣರಾದವರು ಮೋದಿಯ ಮೇಕ್ ಇನ್ ಇಂಡಿಯಾ ಹೋಗಿ
    ಹಳ್ಳಿ ಭಾಷೆಯಲ್ಲಿ ಹೇಳಿದರೆ ಮಕಾಡೆ ಮಲಗುವ ಇಂಡಿಯಾ ಆಗುತ್ತಿದೆ
    ಸರ್ವ ಜನಾಂಗವನ್ನು ಒಂದೇ ಮಾರ್ಗವಾಗಿ ನೋಡದೆ ಜಾತಿ ಬೀಜ ಎನ್ನುವುದನ್ನು ಬಿತ್ತನೆ ಮಾಡಿ
    ಕ್ರೂರ ಕಠೋರವಾದ ಆಡಳಿತಗಾರರು ಎಂದರೆ ಹಿಂದುತ್ವದಲ್ಲಿ ಹಿಂದುತ್ವ ಹೆಸರೇಳಿಕೊಂಡು ಭಾರತೀಯರ ಹಕ್ಕುಗಳನ್ನು ಕಗ್ಗೊಲೆ ಮಾಡಲು ಹೊರಟಿರುವ ಅತ್ಯಂತ ದುರ್ದೈವ ಮೋದಿ ಸರ್ಕಾರವಿದೆ ಎಂದರೆ ತಪ್ಪಾಗಲಾರದು

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...