Homeಮುಖಪುಟಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಮೋದಿ ಆಪ್ತ ಮುಖೇಶ್‌‌ರ ವಿಮಲ್ ಗುಟ್ಕಾ ಕಂಪನಿಯಿಂದ ಕನ್ನಡಿಗರಿಗೆ ಮಹಾದ್ರೋಹ

ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

- Advertisement -
- Advertisement -

ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಮಲ್ ಗುಟ್ಕಾ ತಯಾರಿಕಾ ಕಂಪನಿಯಲ್ಲಿ  ಕೆಲಸ ಮಾಡುವವರೆಲ್ಲರೂ ಹೊರ ರಾಜ್ಯದವರೇ ಆಗಿದ್ದಾರೆ. ವಿಎನ್ ಮತ್ತು VSNನ ಐದು ಘಟಕಗಳು ಕಾರ್ಯ ನಿರ್ವಹಿಸುತ್ತಿದ್ದು ಇದರಲ್ಲಿ ಸುಮಾರು ಬೆರಳೆಣಿಕೆಯಷ್ಟು ಜನ ಕನ್ನಡಿಗರಿಗೆ ಉದ್ಯೋಗ ಸಿಕ್ಕಿದೆ. 20 ಜನ ಮಂದಿ ಸ್ಥಳೀಯರು ಅಂದರೆ ಕರ್ನಾಟಕದವರು ಕೆಲಸ ನಿರ್ವಹಿಸುತ್ತಿದ್ದು ಇವರನ್ನು ಚರಂಡಿ ಸ್ವಚ್ಚಗೊಳಿಸಲು ಮಾತ್ರ ಬಳಿಸಕೊಳ್ಳಲಾಗುತ್ತಿದೆ. ಗುಟ್ಕಾ ತಯಾರಿಕೆ ಮತ್ತ ಪಾನ್ ಮಸಾಲಾ ತಯಾರಿಕೆ ಘಟಕಗಳು ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿಗೆ ನೂರು ಕಿಲೋಮೀಟರ್ ದೂರದಲ್ಲಿದ್ದರೂ ಕನ್ನಡಿಗರಿಗೆ ಮಾತ್ರ ಕೆಲಸ ನೀಡದೆ ದ್ರೋಹ ಎಸಗಲಾಗಿದೆ.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕಾ ಘಟಕಗಳು ದೆಹಲಿಯ ಮುಖೇಶ್‌ ಎಂಬ ಮಾರ್ವಾಡಿಗೆ ಸೇರಿದವು. ತುಮಕೂರಿನಿಂದಲೇ ಇಡೀ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೂ ವಿಎನ್, ವಿಎನ್ಎಸ್ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆ ಮಾಡುವ ಅತ್ಯಂತ ದೊಡ್ಡ ಕಂಪನಿ ಇದಾಗಿದೆ ಗುಟ್ಕಾ ಮತ್ತು ಪಾನ್ ಮಸಾಲವನ್ನು ದಕ್ಷಿಣದವರಿಗೆ ತಿನ್ನಿಸಿ ಕರ್ನಾಟದ ಕನ್ನಡಿಗರಿಗೆ ಕೆಲಸವನ್ನು ನೀಡದೆ ಇಲ್ಲಿಂದ ಹಣವನ್ನು ದೋಚುತ್ತಿದ್ದಾರೆ. ಪ್ರಮುಖ ಹುದ್ದೆಗಳೆಲ್ಲ ಉತ್ತರಭಾರತೀಯರ ಪಾಲಾಗಿದೆ. ಕೇವಲ ಕಸ ಗುಡಿಸುವ, ಚರಂಡಿ ಶುಚಿಗೊಳಿಸುವಂತಹ ಕೆಲಸಗಳನ್ನು ಸ್ಥಳೀಯರಿಗೆ ನೀಡಿದ್ದರೂ ಯಾರು ದನಿ ಎತ್ತುತ್ತಿಲ್ಲ.

ಯಾವುದೇ ಕಂಪನಿ ಆರಂಭಿಸಿದರೂ ಸ್ಥಳೀಯರಿಗೆ ಆದ್ಯತೆ ನೀಡಬೇಕೆಂಬ ನಿಯಮವಿದೆ. ಡಾ.ಸರೋಜಿನಿ ಮಹಿಷಿ ವರದಿ ಪ್ರಕಾರ ಸ್ಥಳೀಯರಿಗೆ ಹೆಚ್ಚಿನ ಪ್ರಾಧ್ಯಾನ್ಯತೆ ನೀಡಬೇಕು. ಆದರೆ ಈ ನಿಯಮಗಳನ್ನು ಗಾಳಿಗೆ ತೂರಿರುವ ಕಂಪನಿ ಮಾಲಿಕ ಮುಖೇಶ್‌ ರಾಜ್ಯದ ನೆಲ, ಜಲ, ವಿದ್ಯುತ್ ಎಲ್ಲವನ್ನೂ ಕರ್ನಾಟಕ ಸರ್ಕಾರದಿಂದಲೇ ಪಡೆದುಕೊಂಡಿದ್ದರೂ ಇಲ್ಲಿ ಕನ್ನಡಗರನ್ನು ಉದ್ಯೋಗಕ್ಕೆ ತೆಗೆದುಕೊಳ್ಳದೆ ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಐದು ಘಟಕಗಳಲ್ಲಿ ಸುಮಾರು 1000 ಸಾವಿರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಈ ಉದ್ಯೋಗಗಳೆಲ್ಲವೂ ಉತ್ತರ ಭಾರತೀಯರ ಪಾಲಾಗಿವೆ. ಬೆರಳೆಣಿಕೆಯಲ್ಲಿರುವ ಕನ್ನಡಿಗರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

ಮುಖೇಶ್ ದೆಹಲಿಯ ದೊಡ್ಡ ಕುಳ. ಈತ ಪ್ರಧಾನಿ ನರೇಂದ್ರ ಮೋದಿಯ ಆಪ್ತರಲ್ಲೊಬ್ಬ. ಇದೇ ಕಾರಣಕ್ಕೆ ಇತ್ತೀಚೆಗೆ  ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಆಗಮಿಸಿದ್ದ ಸಂದರ್ಭದಲ್ಲಿ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಪ್ರಧಾನಿ ಪಕ್ಕದಲ್ಲೇ ಇದ್ದುದು ಗಮನಿಸಬೇಕಾದ ಸಂಗತಿ. ಕರ್ನಾಟಕದ  ಉಪಮುಖ್ಯಮಂತ್ರಿಗಳಿಗೆ ಪ್ರಧಾನಿ ಪಕ್ಕ ಕುಳಿತುಕೊಳ್ಳಲು ಮತ್ತು ವೇದಿಕೆ ಹಂಚಿಕೊಳ್ಳಲು ಸಾಧ್ಯವಾಗದೇ ಇರುವಾಗ ಒಬ್ಬ ಉದ್ಯಮಿ ಅದೂ ವಿಮಲ್ ಗುಟ್ಕಾ ಮತ್ತು ಪಾನ್ ಮಸಾಲಾ ಕಂಪನಿಯ ಮಾಲಿಕ ಪ್ರಧಾನಿ ಜೊತೆ ವೇದಿಕೆ ಏರುತ್ತಾನೆ ಎಂದರೆ ಆತನ ಪ್ರಭಾವ ಎಷ್ಟಿರಬೇಕೆಂಬುದನ್ನು ಊಹಿಸಿಕೊಳ್ಳಿ. ಸ್ಪೆಷಲ್ ಪ್ರೊಟಕ್ಷನ್ ಗ್ರೂಪ್ ರಾಜ್ಯದ ಘಟಾನುಘಟಿ ನಾಯಕರನ್ನೇ ಕ್ಯಾರೇ ಅನ್ನದಿದ್ದಾಗ ಮುಖೇಶ್ ಪ್ರಧಾನಿಯ ಆಪ್ತರಲ್ಲಿ ಗುರುತಿಸಿಕೊಂಡು ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದರು.

ಬಲದಿಂದ ಮೂರನೇಯ ವ್ಯಕ್ತಿ ಮುಖೇಶ್‌

ವಸಂತನರಸಾಪುರದ ಕೈಗಾರಿಕಾ ಪ್ರದೇಶದಲ್ಲಿರುವ ವಿಎನ್ ಮತ್ತು ವಿ.ಎಸ್.ಎನ್  ಕಂಪನಿ ಇಡೀ ದಕ್ಷಿಣ ಭಾರತದ ಗುಟ್ಕಾ ಮತ್ತು ಪಾನ್ ಮಸಾಲಾ ಪೂರೈಕೆದಾರ ಎಂದರೆ ಈತ ಆದಾಯ ಎಷ್ಟಿರಬೇಡ. ನೂರಾರು ಕೋಟಿಗಳ ವಹಿವಾಟು ತಿಂಗಳಲ್ಲಿ ನಡೆದುಹೋಗುತ್ತದೆ. ಇಂತಹ ದೊಡ್ಡ ಕುಳ ಪ್ರಧಾನಿ ಭಾಗವಹಿಸಿದ್ದ ವೇದಿಕೆಯಲ್ಲಿ ಮಿಂಚಿಹೋದರು. ಬಿಜೆಪಿಗೆ ಫಂಡು ನೀಡುವಲ್ಲಿ ಈತನೂ ಒಬ್ಬ ಎನ್ನುತ್ತವೆ ಮೂಲಗಳು. ಅದೇ ಕಾರಣಕ್ಕೆ ವೇದಿಕೆಯಲ್ಲಿ ಎಲ್ಲರಿಗಿಂತ ಹೆಚ್ಚು ಕಾಣಿಸಿಕೊಂಡಿದ್ದು ಮುಖೇಶ್. ಈತನ ಕಂಪನಿಯಲ್ಲಿ ಕನ್ನಡಿಗರು ಕಸ ಹೊಡೆಯುವುದಕ್ಕೆ ಮಾತ್ರ ಸೀಮಿತರಾಗಿದ್ದಾರೆ. ಅಂದರೆ ಅವರಿಗೆ ಸಂಬಳವೆಂದು ಬರುವುದು ಆರೇಳು ಸಾವಿರ. ಇಂತಹ ತಾರತಮ್ಯಕ್ಕೆ ಸ್ಥಳೀಯ ಕಾರ್ಮಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.

ನಿತ್ಯವೂ ಕೋಟ್ಯಂತರ ವಹಿವಾಟು ನಡೆಯುತ್ತಿದ್ದರೂ ಸೇಲ್ ಟ್ಯಾಕ್ಸ್ ಅಧಿಕಾರಿಗಳು ಮೌನ ವಹಿಸಿ ಕುಳಿತಿದ್ದಾರೆ ಎಂಬ ಆರೋಪಗಳು ವ್ಯಾಪಕವಾಗಿ ಕೇಳಿಬಂದಿವೆ. ವಾರಕ್ಕೊಮ್ಮೆಯಾದರೂ ಭೇಟಿ ನೀಡಿ ಸೆಲ್ಸ್ ಟ್ಯಾಕ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಆದರೆ ಬಂದ ಅಧಿಕಾರಿಗಳಿಗೆ “ಒಳ್ಳೆಯ” ಊಟ, ಚಹ ಕೊಟ್ಟು ಮೇಲೆ ಅಧಿಕಾರಿಗಳು ಮತ್ತು ಗಮ್ಮತ್ತಿನಿಂದ ಹಿಂದಿರುಗುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ನೌಕರರು ಹೇಳುತ್ತಾರೆ.

ಮೊನ್ನೆಮೊನ್ನೆ ಚಿಕ್ಕಬಳ್ಳಾಪುರದಲ್ಲಿ ಗುಟ್ಕಾ ಚೀಲಗಳು ದೊರೆತಿದ್ದು ಆ ಗುಟ್ಕಾ ಮೌಲ್ಯ ಸುಮಾರು 50 ಸಾವಿರ ರೂಪಾಯಿಗೂ ಹೆಚ್ಚು. ಗುಟ್ಕಾದ ಮಾಲಿಕ ಅಲ್ಲಿಯೇ ಇದ್ದ. ಅವುಗಳನ್ನು ತನ್ನವು ಎಂದರೆ ಟ್ಯಾಕ್ಸ್ ಕಟ್ಟಬೇಕಾಗಿದೀತು ಎಂಬ ಕಾರಣಕ್ಕೆ ಆತ ಅಧಿಕಾರಿಗಳ ಮುಂದೆ ಬಂದಿಲ್ಲ ಎನ್ನುತ್ತಾರೆ ಗುಟ್ಕಾ ಮತ್ತು ಪಾನ್ ಮಸಾಲ ತಯಾರಿಕೆಯನ್ನು ಹತ್ತಿರದಿಂದ ಬಲ್ಲವರು.

ವಿಎನ್ ಮತ್ತು ವಿ.ಎಸ್.ಎನ್ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಘಟಕಗಳು ತುಮಕೂರು ಬಿಟ್ಟರೆ ಅಹಮದಾಬಾದ್ ಮತ್ತು ನೋಯಿಡಾದಲ್ಲಿಯೂ ಇವೆ ಎಂದು ಹೇಳಲಾಗುತ್ತಿದೆ. ಕಂಪನಿ ಕರ್ನಾಟಕದಲ್ಲಿದ್ದರೂ ಕನ್ನಡಿಗರಿಗೆ ಕೆಲಸ ಸಿಕ್ಕಿಲ್ಲ. ಕಂಪನಿ ಸ್ಥಾಪಿಸುವಾಗ ಸ್ಥಳೀಯರಿಗ ಉದ್ಯೋಗ ಕೋಡುತ್ತೇನೆ ಎಂದು ಬೂಸಿ ಬಿಟ್ಟಿದ್ದ ಈತ ಕನ್ನಡಿಗರು ಕೆಲಸ ಕೇಳಿದರೂ ಕೊಡದೇ ವಂಚಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...