Homeಮುಖಪುಟನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ಸಂಜೀವ್‌ ಬಲ್ಯಾನ್‌ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

- Advertisement -
- Advertisement -

ಬೆಂಕಿ ಉಗುಳುವ ಮತ್ತು ವಿಭಜಿಸುವ ಹೇಳಿಕೆಗಳಿಗೆ ಹೆಸರುವಾಸಿಯಾದ ಕೇಂದ್ರ ಸಚಿವ ಸಂಜೀವ್ ಬಲ್ಯಾನ್, ಜೆಎನ್‌ಯು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಿಗೆ “ಇದೇ ಸರಿಯಾದ ಚಿಕಿತ್ಸೆ” ಎಂದು ಘೋಷಿಸಿ ಬೆದರಿಕೆ ಹಾಕಿದ್ದಾರೆ.

ಸಿಎಎ ಪ್ರತಿಭಟನೆ ಮತ್ತು ಜೆಎನ್‌ಯು ಹಿಂಸಾಚಾರದ ನಂತರ ದೇಶಾದ್ಯಂತ ಪ್ರಸಂಶೆಗೆ ಒಳಗಾಗಿರುವ ಜೆಎನ್‌ಯು ಮತ್ತು ಜಾಮಿಯ ವಿದ್ಯಾರ್ಥಿಗಳಿಗೆ ಬುದ್ದಿ ಕಲಿಸಬೇಕೆಂದರೆ “ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಸ್ಥಾನಗಳನ್ನು ಮೀಸಲಿಡಬೇಕು” ಆಗ ಸರಿ ಹೋಗುತ್ತದೆ ಎಂದು ಸಂಜೀವ್‌ ಬಲ್ಯಾನ್‌ ಮೀರತ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಘೋಷಿಸಿದ್ದಾರೆ.

“ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರವರಲ್ಲಿ ವಿನಂತಿಸುತ್ತೇನೆ . ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗುವ ಜೆಎನ್‌ಯು ಮತ್ತು ಜಾಮಿಯಾದ ವಿದ್ಯಾರ್ಥಿಗಳಿಗೆ ಒಂದೇ ಒಂದು ಚಿಕಿತ್ಸೆ ಇದೆ. ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಕೋಟಾ ಮೀಸಲಿಡಿ. ಆಗ ಎಲ್ಲರೂ ಗುಣಮುಖರಾಗುತ್ತಾರೆ ಮತ್ತೇನೂ ಇಲ್ಲ” ಎಂದು ಅವರು ಬೆದರಿಕೆ ಹಾಕಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶವು ಭಾರತದಲ್ಲಿಯೇ ಅತಿ ಹೆಚ್ಚು ಅಪರಾಧಗಳು ದಾಖಲಾಗುವ, ಅತಿ ಹೆಚ್ಚು ಗೂಂಡಾಗಳಿರುವ ಪ್ರದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಅಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗಿರುವುದರಿಂದ ಅಲ್ಲಿನ ಜನ ಈ ವಿಶ್ವವಿದ್ಯಾಲಯಗಳಿಗೆ ಬಂದರೆ ಹೊಡೆದು ಬಡಿದು ನಿಯಂತ್ರಣಕ್ಕೆ ತರುತ್ತಾರೆ ಎಂದು ಹೇಳುವ ಮೂಲಕ ಸಚಿವರು ಸ್ವತಃ ಹಿಂಸೆಗೆ ಬಹಿರಂಗವಾಗಿ ಕರೆ ನೀಡಿದ್ದಾರೆ.

ಬಾಲ್ಯನ್ ಅವರು ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾಗಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅವಧಿಯಲ್ಲಿ ಸಹ ಕಿರಿಯ ಸಚಿವರಾಗಿದ್ದರು.

ಈ ಬಿಜೆಪಿ ಸಚಿವರು ತಮ್ಮ ಅತಿರೇಕದ ಹೇಳಿಕೆಗಳಿಂದ ಆಗಾಗ್ಗೆ ಜನರಿಂದ ಭಾರೀ ಟೀಕೆಗೊಳಗಾಗಿದ್ದಾರೆ. ಕಳೆದ ತಿಂಗಳು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ “ಮದರಾಸಾದ ಮಕ್ಕಳು” ಹಿಂಸಾಚಾರದಲ್ಲಿ ಪಾತ್ರವಹಿಸಿದ್ದಾರೆ ಎಂದು ಹೇಳುವ ಮೂಲಕ ದೊಡ್ಡ ವಿವಾದಕ್ಕೆ ನಾಂದಿ ಹಾಡಿದ್ದರು.

ಅವರು 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

ಗಲಭೆಗೆ ಮುನ್ನ ನಡೆದ ದೊಡ್ಡ ಸಭೆ ಅಥವಾ ಮಹಾಪಂಚಾಯತ್‌ನಲ್ಲಿ ಕೋಮು ಪ್ರಚೋದನೆ ಭಾಷಣಗಳನ್ನು ಮಾಡಿದ ಆರೋಪ ಹೊತ್ತಿರುವ ಹಲವು ನಾಯಕರಲ್ಲಿ ಬಾಲ್ಯನ್ ಕೂಡ ಇದ್ದರು. ನಂತರ ಕೋಮು ಸಂಘರ್ಷಗಳು ಭುಗಿಲೆದ್ದವು. ಗಲಭೆಯಲ್ಲಿ ಅವರ ಪಾತ್ರದ ಕುರಿತ ಆರೋಪವನ್ನು ಅವರು ನಿರಾಕರಿಸಿದ್ದಾರೆ.

ಈ ಗಲಭೆಯ ವಿವಾದಾತ್ಮಕ ದಾಖಲೆಯ ಹೊರತಾಗಿಯೂ ಬಿಜೆಪಿ ಬಾಲ್ಯನ್‌ರನ್ನು ಕಣಕ್ಕಿಳಿಸಲಾಯಿತು ಮತ್ತು ಮುಜಫರ್‌ನಗರ ಕ್ಷೇತ್ರದಿಂದ 2014 ರಲ್ಲಿ ಲೋಕಸಭೆಗೆ ಆಯ್ಕೆಯಾದರು. ಕಳೆದ ವರ್ಷದ ಚುನಾವಣೆಯಲ್ಲಿ ಅವರು ಮತ್ತೆ ಗೆದ್ದರು ಮತ್ತು ಅವರನ್ನು ಮಂತ್ರಿಯನ್ನಾಗಿ ಮಾಡಲಾಗಿದೆ. ಅವರು ನೋಡಿದರೆ ವಿದ್ಯಾರ್ಥಿಗಳ ಮೇಲೆ ಗೂಂಡಾಗಳು ಹಲ್ಲೆ ಮಾಡಿದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ ಎಂಬ ಬೇಜವಬ್ದಾರಿ ಮಾತುಗಳನ್ನಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...