Homeಮುಖಪುಟನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ನಿಮಗೆ ಇದೇ ಸರಿಯಾದ ಚಿಕಿತ್ಸೆ : ಜೆಎನ್‌ಯು, ಜಾಮಿಯ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕೇಂದ್ರ ಸಚಿವ..

ಸಂಜೀವ್‌ ಬಲ್ಯಾನ್‌ 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

- Advertisement -
- Advertisement -

ಬೆಂಕಿ ಉಗುಳುವ ಮತ್ತು ವಿಭಜಿಸುವ ಹೇಳಿಕೆಗಳಿಗೆ ಹೆಸರುವಾಸಿಯಾದ ಕೇಂದ್ರ ಸಚಿವ ಸಂಜೀವ್ ಬಲ್ಯಾನ್, ಜೆಎನ್‌ಯು ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳಿಗೆ “ಇದೇ ಸರಿಯಾದ ಚಿಕಿತ್ಸೆ” ಎಂದು ಘೋಷಿಸಿ ಬೆದರಿಕೆ ಹಾಕಿದ್ದಾರೆ.

ಸಿಎಎ ಪ್ರತಿಭಟನೆ ಮತ್ತು ಜೆಎನ್‌ಯು ಹಿಂಸಾಚಾರದ ನಂತರ ದೇಶಾದ್ಯಂತ ಪ್ರಸಂಶೆಗೆ ಒಳಗಾಗಿರುವ ಜೆಎನ್‌ಯು ಮತ್ತು ಜಾಮಿಯ ವಿದ್ಯಾರ್ಥಿಗಳಿಗೆ ಬುದ್ದಿ ಕಲಿಸಬೇಕೆಂದರೆ “ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಸ್ಥಾನಗಳನ್ನು ಮೀಸಲಿಡಬೇಕು” ಆಗ ಸರಿ ಹೋಗುತ್ತದೆ ಎಂದು ಸಂಜೀವ್‌ ಬಲ್ಯಾನ್‌ ಮೀರತ್‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಘೋಷಿಸಿದ್ದಾರೆ.

“ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರವರಲ್ಲಿ ವಿನಂತಿಸುತ್ತೇನೆ . ರಾಷ್ಟ್ರ ವಿರೋಧಿ ಘೋಷಣೆಗಳನ್ನು ಕೂಗುವ ಜೆಎನ್‌ಯು ಮತ್ತು ಜಾಮಿಯಾದ ವಿದ್ಯಾರ್ಥಿಗಳಿಗೆ ಒಂದೇ ಒಂದು ಚಿಕಿತ್ಸೆ ಇದೆ. ಪಶ್ಚಿಮ ಉತ್ತರ ಪ್ರದೇಶದ ಜನರಿಗೆ ವಿಶ್ವವಿದ್ಯಾಲಯಗಳಲ್ಲಿ ಶೇ 10 ರಷ್ಟು ಕೋಟಾ ಮೀಸಲಿಡಿ. ಆಗ ಎಲ್ಲರೂ ಗುಣಮುಖರಾಗುತ್ತಾರೆ ಮತ್ತೇನೂ ಇಲ್ಲ” ಎಂದು ಅವರು ಬೆದರಿಕೆ ಹಾಕಿದ್ದಾರೆ.

ಪಶ್ಚಿಮ ಉತ್ತರ ಪ್ರದೇಶವು ಭಾರತದಲ್ಲಿಯೇ ಅತಿ ಹೆಚ್ಚು ಅಪರಾಧಗಳು ದಾಖಲಾಗುವ, ಅತಿ ಹೆಚ್ಚು ಗೂಂಡಾಗಳಿರುವ ಪ್ರದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಅಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗಿರುವುದರಿಂದ ಅಲ್ಲಿನ ಜನ ಈ ವಿಶ್ವವಿದ್ಯಾಲಯಗಳಿಗೆ ಬಂದರೆ ಹೊಡೆದು ಬಡಿದು ನಿಯಂತ್ರಣಕ್ಕೆ ತರುತ್ತಾರೆ ಎಂದು ಹೇಳುವ ಮೂಲಕ ಸಚಿವರು ಸ್ವತಃ ಹಿಂಸೆಗೆ ಬಹಿರಂಗವಾಗಿ ಕರೆ ನೀಡಿದ್ದಾರೆ.

ಬಾಲ್ಯನ್ ಅವರು ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾಗಿದ್ದಾರೆ. ಹಾಗೆಯೇ ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅವಧಿಯಲ್ಲಿ ಸಹ ಕಿರಿಯ ಸಚಿವರಾಗಿದ್ದರು.

ಈ ಬಿಜೆಪಿ ಸಚಿವರು ತಮ್ಮ ಅತಿರೇಕದ ಹೇಳಿಕೆಗಳಿಂದ ಆಗಾಗ್ಗೆ ಜನರಿಂದ ಭಾರೀ ಟೀಕೆಗೊಳಗಾಗಿದ್ದಾರೆ. ಕಳೆದ ತಿಂಗಳು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ “ಮದರಾಸಾದ ಮಕ್ಕಳು” ಹಿಂಸಾಚಾರದಲ್ಲಿ ಪಾತ್ರವಹಿಸಿದ್ದಾರೆ ಎಂದು ಹೇಳುವ ಮೂಲಕ ದೊಡ್ಡ ವಿವಾದಕ್ಕೆ ನಾಂದಿ ಹಾಡಿದ್ದರು.

ಅವರು 2013 ರಲ್ಲಿ ನಡೆದ ಮುಜಫರ್‌ನಗರ ಗಲಭೆಯಲ್ಲಿ ಪ್ರಮುಖ ಆರೋಪಿಯಾಗಿದ್ದರು. ಈ ಗಲಭೆಯಲ್ಲಿ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು.

ಗಲಭೆಗೆ ಮುನ್ನ ನಡೆದ ದೊಡ್ಡ ಸಭೆ ಅಥವಾ ಮಹಾಪಂಚಾಯತ್‌ನಲ್ಲಿ ಕೋಮು ಪ್ರಚೋದನೆ ಭಾಷಣಗಳನ್ನು ಮಾಡಿದ ಆರೋಪ ಹೊತ್ತಿರುವ ಹಲವು ನಾಯಕರಲ್ಲಿ ಬಾಲ್ಯನ್ ಕೂಡ ಇದ್ದರು. ನಂತರ ಕೋಮು ಸಂಘರ್ಷಗಳು ಭುಗಿಲೆದ್ದವು. ಗಲಭೆಯಲ್ಲಿ ಅವರ ಪಾತ್ರದ ಕುರಿತ ಆರೋಪವನ್ನು ಅವರು ನಿರಾಕರಿಸಿದ್ದಾರೆ.

ಈ ಗಲಭೆಯ ವಿವಾದಾತ್ಮಕ ದಾಖಲೆಯ ಹೊರತಾಗಿಯೂ ಬಿಜೆಪಿ ಬಾಲ್ಯನ್‌ರನ್ನು ಕಣಕ್ಕಿಳಿಸಲಾಯಿತು ಮತ್ತು ಮುಜಫರ್‌ನಗರ ಕ್ಷೇತ್ರದಿಂದ 2014 ರಲ್ಲಿ ಲೋಕಸಭೆಗೆ ಆಯ್ಕೆಯಾದರು. ಕಳೆದ ವರ್ಷದ ಚುನಾವಣೆಯಲ್ಲಿ ಅವರು ಮತ್ತೆ ಗೆದ್ದರು ಮತ್ತು ಅವರನ್ನು ಮಂತ್ರಿಯನ್ನಾಗಿ ಮಾಡಲಾಗಿದೆ. ಅವರು ನೋಡಿದರೆ ವಿದ್ಯಾರ್ಥಿಗಳ ಮೇಲೆ ಗೂಂಡಾಗಳು ಹಲ್ಲೆ ಮಾಡಿದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತದೆ ಎಂಬ ಬೇಜವಬ್ದಾರಿ ಮಾತುಗಳನ್ನಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...