Homeಅಂಕಣಗಳುವಿಶ್ವ ಸಿದ್ದೇಶ್ವರರು ತ್ರಿಮತಸ್ಥರಂತೆ ಕಂಗೊಳಿಸಿದರಂತಲ್ಲಾ

ವಿಶ್ವ ಸಿದ್ದೇಶ್ವರರು ತ್ರಿಮತಸ್ಥರಂತೆ ಕಂಗೊಳಿಸಿದರಂತಲ್ಲಾ

- Advertisement -
- Advertisement -

ಭಾರತಕ್ಕೆ ವಕ್ಕರಿಸಿರುವ, ಮೋದಿ ಶಾ ಎಂಬ ಕರಟಕ ದಮನಕರಿಂದ ಇಡೀ ಭಾರತದ ಮನೆಯ ನೆಮ್ಮದಿಯೇ ಹಾಳಾಗಿದೆಯಂತಲ್ಲಾ. ಅದು ಸಹಜ. ಮನೆಯ ಒಬ್ಬ ಸದಸ್ಯನ ತಲೆ ಕೆಟ್ಟರೆ ಆತ ಯಾವ ಸಮಯದಲ್ಲಿ ಏನು ಮಾಡುತ್ತಾನೋ ಎಂದು ಹೆದರಿದ ಮನೆಯ ಸದಸ್ಯರು ಕ್ಷೋಭೆಗೆ ತುತ್ತಾಗಿರುತ್ತಾರೆ. ಆದರೆ ಎರಡು ಜನ ತಲೆಕೆಟ್ಟವರಿದ್ದರೆ ಕತೆಯೇನು? ಇಂತದ್ದೊಂದು ಸ್ಥಿತಿಯನ್ನು ಭಾರತಾಂಬೆಯ ಅವಿಭಕ್ತ ಕುಟುಂಬ ಎದರಿಸುತ್ತಿದೆ. ಅಚ್ಚರಿಯ ಸಂಗತಿ ಎಂದರೆ ತಲೆಕೆಟ್ಟ ಗಿರಾಕಿಗಳೇ ಮನೆಯ ಯಜಮಾನರುಗಳಾಗಿರುವುದು. ಒಮ್ಮೊಮ್ಮೆ ಅವನಾಡುವ ಮಾತನ್ನು ಇವನಾಡುತ್ತಾನೆ, ಇವನ ಮಾತನ್ನು ಅವನಾಡುತ್ತಾನೆ. ಯಾರು ಯಾವ ಮಾತನ್ನಾಡಬಾರದೊ ಅವರೇ ಆಡುತ್ತಾ ಭಾರತವನ್ನೆ ಅತಂತ್ರಕ್ಕೆ ದೂಡಿಬಿಟ್ಟಿದ್ದಾರೆ. ಇದರಿಂದ ಭಾರತದ ಸಮಸ್ತ ಜನಕೋಟಿಯೇ ಆತಂಕಕ್ಕೀಡಾಗಿದೆ. ಆದರೆ ಈ ಪೈಕಿ ಬಿಜೆಪಿಯಲ್ಲಿ ಆಶ್ರಯ ಪಡೆದಿರುವ ಜನ ಮಾತ್ರ ಯಂಥದೋ ಖುಷಿಯಿಂದ ಕೇಕೆ ಹಾಕುತ್ತಿವೆ. ಸೂಕ್ಷ್ಮವಾಗಿ ನೋಡಿದರೆ ಕರಟಕ ದಮನಕರ ಮನಸ್ಥಿತಿ ಇವರಿಗೂ ಆವರಿಸಿರುವ ಕಾರಣಕ್ಕೇ ಈ ಕೇಕೆಯಂತಲ್ಲಾ ಥೂತ್ತೇರಿ….

ಕೃಷ್ಣ ಭಗವಧ್ಗೀತೆಯ ಹೊರಗೂ ಒಂದು ಮಾತನ್ನಾಡಿದ್ದಾನೆ. ದುರ್ಯೋಧನನಿಂದ ಇಡೀ ಕುರುವಂಶವೇ ಯುದ್ಧ ಎದುರಿಸಿ, ನಾಶವಾಗುವುದರ ಬದಲು ದುರ್ಯೋಧನನನ್ನೇ ನಿಯಂತ್ರಿಸಿದರೆ ಹೇಗೆ? ಅಂದರೆ, ಒಂದು ದೇಶ ಉಳಿಸುವ ಸಲುವಾಗಿ ಒಂದು ಗ್ರಾಮವನ್ನು ಬಲಿಕೊಡಬೇಕಾಗಿ ಬಂದರೆ ಹಿಂದೆ ಮುಂದೆ ನೋಡಬಾರದು, ಹಾಗೆಯೇ ಒಂದು ಊರನ್ನ ಉಳಿಸಬೇಕಾದರೆ ಒಂದು ಕುಟುಂಬದ ಬಲಿಯ ಅಗತ್ಯಬಿದ್ದರೆ, ಕನಿಕರ ಒಳ್ಳೆಯದಲ್ಲ. ಅದರಂತೆ ಒಂದು ಕುಟುಂಬದ ಉಳುವಿಗಾಗಿ ಒಬ್ಬ ವ್ಯಕ್ತಿಯ ಬಲಿ ಅನಿವಾರ್ಯವಾದರೆ ಬಲಿಕೊಡಲೇಬೇಕು ಎಂದು ಕೃಷ್ಣ ಹೇಳಿದ್ದಾನೆ, ಆದರೆ, ಇದು ಕತೆಯಾಯಿತು. ಭಾರತದ ಸಂವಿಧಾನದ ರೀತ್ಯ ಚುನಾವಣೆಯಲ್ಲಿ ಆರಿಸಿ ಬಂದು ಪ್ರಧಾನಿಯಾದವ, ತನ್ನನ್ನು ಆರಿಸಿದ ಎಂ.ಪಿ.ಗಳ ಬೀಜವನೇ ಎಗರಿಸಿ ಸೀಡ್‍ಲೆಸ್ ಎಂಪಿಗಳನ್ನಾಗಿಸಿದ್ದಾನೆ. ಧಿಕ್ಕಾರ ಕೂಗಿದವನನ್ನೇ ಜೈಲಿಗೆ ಹಾಕುತ್ತೇನೆ ಎನ್ನುತ್ತಿದ್ದಾನೆ. ಅಂತೂ ಆತನ ಹುಲಿ ಸವಾರಿಗೊಂದು ಅಂತ್ಯ ಬರಬೇಕಾದರೆ ಮತ್ತೆ ಚುನಾವಣೆ ಬರಬೇಕು. ಆದರೆ ಅದೂ ಭಯ, ಏಕೆಂದರೆ ಕರ್ನಾಟಕದ ಜನತಾ ಜನಾರ್ಧನ ಅನರ್ಹರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ್ದಾನಲ್ಲಾ ಥೂತ್ತೇರಿ…

ಇದ್ದುದರಲ್ಲಿ ಹುಣಸೂರಿನ ಜನ ಅನರ್ಹ ವಿಶ್ವನಾಥರನ್ನ ಸೋಲಿಸಿ, ತಕ್ಕ ಉತ್ತರ ಕೊಟ್ಟಿದ್ದಾರಂತಲ್ಲಾ. ತನ್ನ ಸೋಲಿಗೆ ಸಿದ್ದು ಕಾರಣ ಎಂದು ಹೇಳಿದ ವಿಶ್ವನಾಥ್ ಮೊನ್ನೆ ದೊಡ್ಡಕೊಪ್ಪಲಿನಲ್ಲಿ ಸಿದ್ದುವನ್ನು ಮಧ್ಯಕ್ಕೆ ಕೂರಿಸಿಕೊಂಡು ಆಕಡೆಗೆ ಈಶ್ವರಪ್ಪನನ್ನು ಸ್ಥಾಪಿಸಿಕೊಂಡು ಬ್ರಾಹ್ಮಣ ಸಮಾಜದ ತ್ರಿಮತಸ್ಥರಂತೆ ವಿರಾಜಮಾನರಾಗಿದ್ದು ನೋಡಿದ ದೊಡ್ಡಕೊಪ್ಪಲ ಕುರುಬರ ಕಣ್ಣಲ್ಲಿ ಆನಂದ ಭಾಷ್ಪಾ ಹರಿದು ಹೋದವಂತಲ್ಲಾ. ಕರ್ನಾಟಕದ ಬ್ರಾಹ್ಮಣ ಸಮಾಜದ ರಾಜಕಾರಣಿಗಳು, ತ್ರಿಮತಸ್ಥರು ಒಂದಾದರೆ ಅದೆಷ್ಟು ಚಂದ, ಮತ್ತೆ ಪುರೋಹಿತಶಾಹಿ ಕಾಲ ಮರುಕಳಿಸುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಹರಸಾಹಸ ಪಡುತ್ತಿರಬೇಕಾದರೆ ಕುರುಬ ಕುಲದ ತ್ರಿಮತಸ್ಥರಂತೆ ಕಾಣುವ ಸಿದ್ದು ವಿಶ್ವ ಈಶ್ವರ ಬಾಡಿನೂಟಕ್ಕೆ ಸೇರಿದ ಬಾಡು ಒಕ್ಕರಂತೆ ಒಂದೇ ಮೈಕಿನಿಂದ ಪರಸ್ಪರ ಹಿಗ್ಗಾಮುಗ್ಗಾ ಹೊಗಳಿಕೊಂಡರಲ್ಲಾ. ಹಾಗೆ ನೋಡಿದರೆ, ಈ ಮೂವರು ತ್ರಿಮತಸ್ಥರೆಂಬುದರಲ್ಲಿ ಯಾವ ಸಂಶಯವೂ ಇಲ್ಲ. ಮನೋಗತದಲ್ಲಿ ಕುಲಾಚರಣೆಯಲ್ಲಿ ಪ್ರತಿನಿಧಿಸುವ ಪಾರ್ಟಿ ವಿಷಯದಲ್ಲೂ ಇವರು ತ್ರಿಮತಸ್ಥರಂತಲ್ಲಾ ಥೂತ್ತೇರಿ…

ಬ್ರಾಹ್ಮಣ ತ್ರಿಮತಸ್ಥರು ಒಂದಾಗುವ ಅಗತ್ಯವಿಲ್ಲ. ಏಕೆಂದರೆ ಪುರೋಹಿತಶಾಹಿ ಚಿಹ್ನೆಯಾದ ಬೆಲ್ಟು ಅವರನ್ನೆಲ್ಲಾ ಬಂಧಿಸಿದೆ. ಅವರ ಯೋಗಕ್ಷೇಮವನ್ನು ಆರೆಸೆಸ್ಸ್ ನೋಡಿಕೊಳ್ಳುತ್ತಿದೆ. ಆದರೆ ಕುರುಬರಿಗೆ ಅಂತ ಬೆಲ್ಟೇ ಇಲ್ಲ. ವಿಶ್ವನಾಥ ಮತ ಕೆದಕಿದರೆ ಕಾಂಗ್ರೆಸ್ ಮನೆ ಇತಿಹಾಸ ಹೇಳುತ್ತಾರೆ. ಸಿದ್ದು ಕುಲಕೇಳಿದರೆ ಜನತಾದಳದ ಮನೆಬಿಟ್ಟು ಬಂದ ಅಗಲಿಕೆ ವಾಸನೆ ಇನ್ನೂ ಇದೆ. ಈ ಪೈಕಿ ಈಶ್ವರಪ್ಪ ಮಾತ್ರ ಹೆಸರಿಗೆ ಕುರುಬ ಅಷ್ಟೇ, ಆತನ ಮಾತು ಮನಸ್ಸು ಚಡ್ಡಿಮಯವಾಗಿದೆ. ಅದಕ್ಕೆ ಉಡುಪಿಯಲ್ಲಿ ಕನಕ ಗೋಪುರವೇ ಇರಲಿಲ್ಲ ಎಂದುದಲ್ಲದೆ, ಅಧಿಕಾರ ಇರಲಿ ಇಲ್ಲದಿರಲಿ ಆತ ಮಾಡುವ ಕೆಲಸದಲ್ಲಿ ಮೊದಲನೆಯದು ಬ್ರಾಹ್ಮಣರ ಪರಿಚಾರಿಕೆ. ನಂತರ ಲಿಂಗಾಯಿತರದ್ದು. ಉಳಿದಂತೆ ಮರೆಯಲ್ಲಿ ಕುರುಬರದ್ದು. ಸಾರ್ವಜನಿಕವಾಗಿ ಖಂಡನೆ, ಹೀಯಾಳಿಕೆ ಮೂದಲಿಕೆ ಮಾತುಗಳನ್ನಾಡಿದರೂ ಕೂಡ, ದೊಡ್ಡಕೊಪ್ಪಲ ಮೈದಾನದಲಿ ವಿಶ್ವಸಿದ್ದೇಶ್ವರರ ಸಮಾಗಮ ನೋಡಿದ ಒಕ್ಕಲಿಗರು “ನೋಡಿರ್ಲ ಅವುರ್ಯಂಗೆ ಒಂಥಾಯಿ ಮಕ್ಕಳಂಗೆ ಕುಂತವರೆ! ನಮ್ಮದ್ಯಾವೇಗೌಡ ಜೀವಮಾನದಲ್ಲಿ ಹಿಂಗೆ ನಮ್ಮ ಜಾತಿ ಲೀಡ್ರು ಜತೆ ಕುಂತಿದ್ದ ನೋಡಕ್ಕಾಗಲೇಯಿಲವಲ್ಲಾ” ಎಂದು ಹಲುಬಿದರಂತಲ್ಲಾ. ಥೂತ್ತೇರಿ..

ಮೊನ್ನೆ ಮೊನ್ನೆಯವರೆಗೆ ಒಂದೇ ತಂದೆಯ ಮಕ್ಕಳಂತೆ ಕಂಗೊಳಿಸಿದ್ದ ಕುಮಾರಣ್ಣ ಮತ್ತು ಈಶ್ವರಣ್ಣ ಕೋಳಿಗಳಂತೆ ಜಗಳಕ್ಕೆ ಬಿದ್ದಿದ್ದಾರಲ್ಲಾ, ಇದನ್ನೇನು ಗಂಭೀರವಾಗಿ ಪರಿಗಣಿಸುವಂತಿಲ್ಲ. ಏಕೆಂದರೆ ಈಶ್ವರಪ್ಪ ಸಿದ್ದು ಜಗಳ ಮತ್ತು ವಿಶ್ವನಾಥ್ ಸಿದ್ದು ಫೈಟಿಂಗ್ ನೋಡಿದವರಿಗೆ ಮೊನ್ನೆ ನಡೆದ ದೊಡ್ಡಕೊಪ್ಪಲ ಸಭೆ ನೆನಪಿಸಿಕೊಂಡರೆ ಸಾಕು, ಈ ನಟಸಾರ್ವಭೌಮರ ಜಗಳ ನಟನೆಯೆಂಬುದು ಸಾಬೀತಾಗಿದೆ. ಇದೇ ಈಶ್ವರಪ್ಪ 2013ರ ಚುನಾವಣೆಯಲ್ಲಿ `ನಿಮ್ಮ ಜೆಡಿಎಸ್ ಅಭ್ಯರ್ಥಿ ಶಿವಮೊಗ್ಗದಲ್ಲಿ ತೊಡಕಾಗಿದ್ದಾನೆ’ ಎಂದು ಕುಮಾರಣ್ಣನಿಗೆ ಫೋನ್ ಮಾಡಿದಾಗ, ಕುಮಾರಣ್ಣ “ಆಯ್ತು ಬ್ರದರ್ ಹೆದರಬೇಡಿ” ಎಂದು ಆಶ್ವಾಸನೆ ಕೊಟ್ಟ ಮರುದಿನದಿಂದಲೇ ಜೆ.ಡಿ.ಎಸ್ ಕ್ಯಾಂಡಿಡೇಟ್ ಶ್ರೀಕಾಂತ್ ಕೈಗೆ ಯಾವ ಕಾರ್ಯಕರ್ತರೂ ಸಿಗಲಿಲ್ಲ. ಆದರೇನು ಲಿಂಗಾಯಿತರು ಈಶ್ವರಪ್ಪನನ್ನ ಮಗ್ಗ ಮಲಗಿಸಿದ್ದರು. ಆಪತ್ಕಾಲದಲ್ಲಿ ಸಹಾಯ ಮಾಡುವ ಕುಮಾರಣ್ಣನೇ ಈಗ `ಈಶ್ವರಪ್ಪನ ನಾಲಿಗೆ ಇರಬೇಕಾದ ಜಾಗದಲ್ಲಿ ಇರಬೇಕು’ ಎಂದಿದ್ದಾರಲ್ಲಾ. ವಿಶ್ವನಾಥ್ ಸಿದ್ದು ಜಗಳದ ಎದುರು ಇದ್ಯಾವ ಮಹಾ ಅಂತೀರಾ ಥೂತ್ತೇರಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...