Homeಮುಖಪುಟಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ.

- Advertisement -
- Advertisement -

ಆ ದಿನಗಳು ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ನಟ ಚೇತನ್, ಮೈನಾ ಚಿತ್ರದಲ್ಲಿ ಎಲ್ಲರ ಗಮನ ಸೆಳೆದರೂ ಜನರಿಗೆ ಪರಿಚಿತರಾಗಿದ್ದು ಮಾತ್ರ ತನ್ನ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿಂದ. ಪೆರಿಯಾರ್ ಮತ್ತು ಅಂಬೇಡ್ಕರ್‌ವರ ಆದರ್ಶ, ಆಶಯಗಳೊಂದಿಗೆ ಜೀವನ ರೂಪಿಸಿಕೊಳ್ಳಲು ಮುಂದಾಗಿದ್ದ ಚೇತನ್, ತನ್ನ ಸಿನಿಮಾ ಬದುಕಿಗಿಂತಲೂ ಹೆಚ್ಚು ಸಮಯ ಕಳೆದದ್ದು ಬಡವರ, ಹಿಂದುಳಿದವರ, ಆದಿವಾಸಿಗಳ ತಳಸಮುದಾಯದವರ ಪರವಾದ ಕೆಲಸಗಳಲ್ಲಿಯೇ.

ಸಿನಿಮಾಗಳು ಮತ್ತು ಸಾಮಾಜಿಕ ಚಟುವಟಿಕೆಗಳಿಂದ ಸಿನಿ ಅಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಮನ ಗೆದ್ದಿರುವ ಚೇತನ್ ಮುಂದಿನ ತಿಂಗಳ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಮೇಘಾರವರು ಚೇತನ್ ಸಂಗಾತಿಯಾಗಲಿದ್ದಾರೆ. ಮೇಘಾ ಮೂಲತಃ ಇಂಜಿನಿಯರ್ ಆಗಿದ್ದರೂ ಅವರನ್ನು ಸೆಳೆದದ್ದು ಮಾನವ ಹಕ್ಕುಗಳ ಅಧ್ಯಯನ. ಅಧ್ಯಯನದ ಜೊತೆಗೆ ಲಿಂಗ ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಬೇಕೆಂದು ನಿರ್ಧರಿಸಿದ ಮೇಘ, ಹೋರಾಟವನ್ನೇ ತಮ್ಮ ಬದುಕಾಗಿಸಿಕೊಂಡಿದ್ದರು. ಸಾಮಾಜಿಕ ಕಳಿಕಳಿಯುಳ್ಳ ಈ ಇಬ್ಬರನ್ನು ಸಂದರ್ಭ ಭೇಟಿ ಮಾಡಿಸಿತು. ಈ ಎರಡೂ ಮಾನವೀಯ ಮನಸ್ಸುಗಳ ಸ್ನೇಹ ಈಗ ಪ್ರೀತಿಯ ಸಂಬಂಧಕ್ಕೆ ಕಾರಣವಾಗಿದೆ.

ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳೀಯ ಆಡಳಿತ ನಿರಾಶ್ರಿತರನ್ನಾಗಿ ಮಾಡಿದ್ದಾಗ ಚೇತನ್‌ ದಿಟ್ಟ ಹೋರಾಟದಲ್ಲಿ ಪಾಲ್ಗೊಳ್ಳುವುದರೊಂದಿಗೆ ಆ ಜನರಿಗೆ ಪುನರ್ವಸತಿ ಸಿಗುವವರೆಗೂ ಹೋರಾಟ ನಡೆಸಿದ್ದರು.. ಅಂದಿನಿಂದ ನೂರಾರು ರಚನಾತ್ಮಕ ಚಟುವಟಿಕೆ ಮತ್ತು ಹೋರಾಟದಲ್ಲಿ ಅವರು ಭಾಗಿಯಾಗಿದ್ದಾರೆ.

2007ರಲ್ಲಿ ತೆರೆಕಂಡ ಆ ದಿನಗಳು ಹಿಟ್‌ ಆಗುವುದರೊಂದಿಗೆ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟ ಸಿನಿಮಾ. ನಂತರ ಮೈನಾ ಶತದಿನೋತ್ಸವ ಆಚರಿಸಿತ್ತು. ಅವರ ಕೊನೆಯದಾಗಿ ಬಿಡುಗಡೆಯಾದ ಸಿನಿಮಾ ಅತಿರಥ (2017). ಈಗ ಅವರ ಮುಂದಿನ ಚಿತ್ರ ’ರಣಂ’ ಬಿಡುಗಡೆಗಡೆ ಸಿದ್ದವಾಗಿದೆ.

ಕಳೆದ ಐದು ವರ್ಷಗಳಿಂದ ಜೊತೆಯಾಗಿ ಹಲವಾರು ಕಡೆಗಳಲ್ಲಿ ಹಿಂದುಳಿದವರಿಗೆ ನೆರವು ನೀಡುತ್ತಾ ಬಂದಿರುವ ಈ ಜೋಡಿಗಳು ಸಾವಿತ್ರಿ ಬಾಯಿ ಫುಲೆ – ಜ್ಯೋತಿ ಬಾ ಫುಲೆ ಮತ್ತು ಪ್ರಕಾಶ್ ಅಮ್ಟೆ – ಮಂದಾಕಿನಿ ಅಮ್ಟೆ ದಂಪತಿಗಳು ನಮ್ಮ ಜೀವನದ ರೋಲ್ ಮಾಡಲ್‍ಗಳು ಎಂದು ಘೋಷಿಸಿಕೊಂಡಿದ್ದು, ಅವರಂತೆಯೇ ಆದರ್ಶದ ಬದುಕು ಸಾಗಿಸಬೇಕೆಂದು ನಿರ್ಧರಿಸಿದ್ದಾರೆ.

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ. ಬಹುತ್ವದ ಸಂದೇಶ ಸಾರಲು ಅಂದು ವಚನ, ಸೂಫಿ ಗಾಯನ, ಸಿದ್ದಿ ನೃತ್ಯ, ಲಂಬಾಣಿ ನೃತ್ಯ, ಕೊರಗ ನೃತ್ಯದಂತಹ ಜನಪರ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ, ನವಜೋಡಿಗಳು ಪ್ರತಿಜ್ಞೆ ಕೈಗೊಂಡು ಮನದ ಮಾತುಗಳನ್ನಾಡಲಿದ್ದಾರೆ. ಈ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನವೂ ನಡೆಯಲಿದೆ.

“ಆಡಂಬರದ ಆಚರಣೆಯಲ್ಲದ, ಸಮಾನತೆ ಮತ್ತು ಸೇವೆಯನ್ನು ಉತ್ತೇಜಿಸುವ ಸಾಮಾಜಿಕ ಪ್ರಜ್ಞೆಯ ವಿವಾಹಗಳ ಸ್ಫೂರ್ತಿಯೊಂದಿಗೆ” ಈ ಜೋಡಿಗಳು ಮಂತ್ರಮಾಂಗಲ್ಯದೊಂದಿಗೆ ಸರಳ ವಿವಾಹವಾಗುತ್ತಿದ್ದಾರೆ.  ಸಾಮಾಜಿಕ ಜವಾಬ್ದಾರಿಯೊಂದಿಗೆ ಜೀವನಸಂಗಾತಿಗಳಾಗುತ್ತಿರುವ ನವ ಜೋಡಿಗಳ ಭವಿಷ್ಯ ನೆಮ್ಮದಿ-ಸಂತೋಷದಿಂದಿರಲಿ ಎಂದು ಪ್ರೀತಿಯಿಂದ ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...