Homeಮುಖಪುಟಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ.

- Advertisement -
- Advertisement -

ಆ ದಿನಗಳು ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ನಟ ಚೇತನ್, ಮೈನಾ ಚಿತ್ರದಲ್ಲಿ ಎಲ್ಲರ ಗಮನ ಸೆಳೆದರೂ ಜನರಿಗೆ ಪರಿಚಿತರಾಗಿದ್ದು ಮಾತ್ರ ತನ್ನ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿಂದ. ಪೆರಿಯಾರ್ ಮತ್ತು ಅಂಬೇಡ್ಕರ್‌ವರ ಆದರ್ಶ, ಆಶಯಗಳೊಂದಿಗೆ ಜೀವನ ರೂಪಿಸಿಕೊಳ್ಳಲು ಮುಂದಾಗಿದ್ದ ಚೇತನ್, ತನ್ನ ಸಿನಿಮಾ ಬದುಕಿಗಿಂತಲೂ ಹೆಚ್ಚು ಸಮಯ ಕಳೆದದ್ದು ಬಡವರ, ಹಿಂದುಳಿದವರ, ಆದಿವಾಸಿಗಳ ತಳಸಮುದಾಯದವರ ಪರವಾದ ಕೆಲಸಗಳಲ್ಲಿಯೇ.

ಸಿನಿಮಾಗಳು ಮತ್ತು ಸಾಮಾಜಿಕ ಚಟುವಟಿಕೆಗಳಿಂದ ಸಿನಿ ಅಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಮನ ಗೆದ್ದಿರುವ ಚೇತನ್ ಮುಂದಿನ ತಿಂಗಳ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಮೇಘಾರವರು ಚೇತನ್ ಸಂಗಾತಿಯಾಗಲಿದ್ದಾರೆ. ಮೇಘಾ ಮೂಲತಃ ಇಂಜಿನಿಯರ್ ಆಗಿದ್ದರೂ ಅವರನ್ನು ಸೆಳೆದದ್ದು ಮಾನವ ಹಕ್ಕುಗಳ ಅಧ್ಯಯನ. ಅಧ್ಯಯನದ ಜೊತೆಗೆ ಲಿಂಗ ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಬೇಕೆಂದು ನಿರ್ಧರಿಸಿದ ಮೇಘ, ಹೋರಾಟವನ್ನೇ ತಮ್ಮ ಬದುಕಾಗಿಸಿಕೊಂಡಿದ್ದರು. ಸಾಮಾಜಿಕ ಕಳಿಕಳಿಯುಳ್ಳ ಈ ಇಬ್ಬರನ್ನು ಸಂದರ್ಭ ಭೇಟಿ ಮಾಡಿಸಿತು. ಈ ಎರಡೂ ಮಾನವೀಯ ಮನಸ್ಸುಗಳ ಸ್ನೇಹ ಈಗ ಪ್ರೀತಿಯ ಸಂಬಂಧಕ್ಕೆ ಕಾರಣವಾಗಿದೆ.

ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳೀಯ ಆಡಳಿತ ನಿರಾಶ್ರಿತರನ್ನಾಗಿ ಮಾಡಿದ್ದಾಗ ಚೇತನ್‌ ದಿಟ್ಟ ಹೋರಾಟದಲ್ಲಿ ಪಾಲ್ಗೊಳ್ಳುವುದರೊಂದಿಗೆ ಆ ಜನರಿಗೆ ಪುನರ್ವಸತಿ ಸಿಗುವವರೆಗೂ ಹೋರಾಟ ನಡೆಸಿದ್ದರು.. ಅಂದಿನಿಂದ ನೂರಾರು ರಚನಾತ್ಮಕ ಚಟುವಟಿಕೆ ಮತ್ತು ಹೋರಾಟದಲ್ಲಿ ಅವರು ಭಾಗಿಯಾಗಿದ್ದಾರೆ.

2007ರಲ್ಲಿ ತೆರೆಕಂಡ ಆ ದಿನಗಳು ಹಿಟ್‌ ಆಗುವುದರೊಂದಿಗೆ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟ ಸಿನಿಮಾ. ನಂತರ ಮೈನಾ ಶತದಿನೋತ್ಸವ ಆಚರಿಸಿತ್ತು. ಅವರ ಕೊನೆಯದಾಗಿ ಬಿಡುಗಡೆಯಾದ ಸಿನಿಮಾ ಅತಿರಥ (2017). ಈಗ ಅವರ ಮುಂದಿನ ಚಿತ್ರ ’ರಣಂ’ ಬಿಡುಗಡೆಗಡೆ ಸಿದ್ದವಾಗಿದೆ.

ಕಳೆದ ಐದು ವರ್ಷಗಳಿಂದ ಜೊತೆಯಾಗಿ ಹಲವಾರು ಕಡೆಗಳಲ್ಲಿ ಹಿಂದುಳಿದವರಿಗೆ ನೆರವು ನೀಡುತ್ತಾ ಬಂದಿರುವ ಈ ಜೋಡಿಗಳು ಸಾವಿತ್ರಿ ಬಾಯಿ ಫುಲೆ – ಜ್ಯೋತಿ ಬಾ ಫುಲೆ ಮತ್ತು ಪ್ರಕಾಶ್ ಅಮ್ಟೆ – ಮಂದಾಕಿನಿ ಅಮ್ಟೆ ದಂಪತಿಗಳು ನಮ್ಮ ಜೀವನದ ರೋಲ್ ಮಾಡಲ್‍ಗಳು ಎಂದು ಘೋಷಿಸಿಕೊಂಡಿದ್ದು, ಅವರಂತೆಯೇ ಆದರ್ಶದ ಬದುಕು ಸಾಗಿಸಬೇಕೆಂದು ನಿರ್ಧರಿಸಿದ್ದಾರೆ.

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ. ಬಹುತ್ವದ ಸಂದೇಶ ಸಾರಲು ಅಂದು ವಚನ, ಸೂಫಿ ಗಾಯನ, ಸಿದ್ದಿ ನೃತ್ಯ, ಲಂಬಾಣಿ ನೃತ್ಯ, ಕೊರಗ ನೃತ್ಯದಂತಹ ಜನಪರ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ, ನವಜೋಡಿಗಳು ಪ್ರತಿಜ್ಞೆ ಕೈಗೊಂಡು ಮನದ ಮಾತುಗಳನ್ನಾಡಲಿದ್ದಾರೆ. ಈ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನವೂ ನಡೆಯಲಿದೆ.

“ಆಡಂಬರದ ಆಚರಣೆಯಲ್ಲದ, ಸಮಾನತೆ ಮತ್ತು ಸೇವೆಯನ್ನು ಉತ್ತೇಜಿಸುವ ಸಾಮಾಜಿಕ ಪ್ರಜ್ಞೆಯ ವಿವಾಹಗಳ ಸ್ಫೂರ್ತಿಯೊಂದಿಗೆ” ಈ ಜೋಡಿಗಳು ಮಂತ್ರಮಾಂಗಲ್ಯದೊಂದಿಗೆ ಸರಳ ವಿವಾಹವಾಗುತ್ತಿದ್ದಾರೆ.  ಸಾಮಾಜಿಕ ಜವಾಬ್ದಾರಿಯೊಂದಿಗೆ ಜೀವನಸಂಗಾತಿಗಳಾಗುತ್ತಿರುವ ನವ ಜೋಡಿಗಳ ಭವಿಷ್ಯ ನೆಮ್ಮದಿ-ಸಂತೋಷದಿಂದಿರಲಿ ಎಂದು ಪ್ರೀತಿಯಿಂದ ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...