Homeಮುಖಪುಟಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಸ್ಟಾರ್ ನಟನ ಸರಳ ಮತ್ತು ವಿಶೇಷ ವಿವಾಹ

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ.

- Advertisement -
- Advertisement -

ಆ ದಿನಗಳು ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ನಟ ಚೇತನ್, ಮೈನಾ ಚಿತ್ರದಲ್ಲಿ ಎಲ್ಲರ ಗಮನ ಸೆಳೆದರೂ ಜನರಿಗೆ ಪರಿಚಿತರಾಗಿದ್ದು ಮಾತ್ರ ತನ್ನ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯಿಂದ. ಪೆರಿಯಾರ್ ಮತ್ತು ಅಂಬೇಡ್ಕರ್‌ವರ ಆದರ್ಶ, ಆಶಯಗಳೊಂದಿಗೆ ಜೀವನ ರೂಪಿಸಿಕೊಳ್ಳಲು ಮುಂದಾಗಿದ್ದ ಚೇತನ್, ತನ್ನ ಸಿನಿಮಾ ಬದುಕಿಗಿಂತಲೂ ಹೆಚ್ಚು ಸಮಯ ಕಳೆದದ್ದು ಬಡವರ, ಹಿಂದುಳಿದವರ, ಆದಿವಾಸಿಗಳ ತಳಸಮುದಾಯದವರ ಪರವಾದ ಕೆಲಸಗಳಲ್ಲಿಯೇ.

ಸಿನಿಮಾಗಳು ಮತ್ತು ಸಾಮಾಜಿಕ ಚಟುವಟಿಕೆಗಳಿಂದ ಸಿನಿ ಅಭಿಮಾನಿಗಳು ಮತ್ತು ಸಾಮಾಜಿಕ ಕಾರ್ಯಕರ್ತರ ಮನ ಗೆದ್ದಿರುವ ಚೇತನ್ ಮುಂದಿನ ತಿಂಗಳ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ಮೇಘಾರವರು ಚೇತನ್ ಸಂಗಾತಿಯಾಗಲಿದ್ದಾರೆ. ಮೇಘಾ ಮೂಲತಃ ಇಂಜಿನಿಯರ್ ಆಗಿದ್ದರೂ ಅವರನ್ನು ಸೆಳೆದದ್ದು ಮಾನವ ಹಕ್ಕುಗಳ ಅಧ್ಯಯನ. ಅಧ್ಯಯನದ ಜೊತೆಗೆ ಲಿಂಗ ಸಮಾನತೆ, ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮುಂದುವರೆಸಬೇಕೆಂದು ನಿರ್ಧರಿಸಿದ ಮೇಘ, ಹೋರಾಟವನ್ನೇ ತಮ್ಮ ಬದುಕಾಗಿಸಿಕೊಂಡಿದ್ದರು. ಸಾಮಾಜಿಕ ಕಳಿಕಳಿಯುಳ್ಳ ಈ ಇಬ್ಬರನ್ನು ಸಂದರ್ಭ ಭೇಟಿ ಮಾಡಿಸಿತು. ಈ ಎರಡೂ ಮಾನವೀಯ ಮನಸ್ಸುಗಳ ಸ್ನೇಹ ಈಗ ಪ್ರೀತಿಯ ಸಂಬಂಧಕ್ಕೆ ಕಾರಣವಾಗಿದೆ.

ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳೀಯ ಆಡಳಿತ ನಿರಾಶ್ರಿತರನ್ನಾಗಿ ಮಾಡಿದ್ದಾಗ ಚೇತನ್‌ ದಿಟ್ಟ ಹೋರಾಟದಲ್ಲಿ ಪಾಲ್ಗೊಳ್ಳುವುದರೊಂದಿಗೆ ಆ ಜನರಿಗೆ ಪುನರ್ವಸತಿ ಸಿಗುವವರೆಗೂ ಹೋರಾಟ ನಡೆಸಿದ್ದರು.. ಅಂದಿನಿಂದ ನೂರಾರು ರಚನಾತ್ಮಕ ಚಟುವಟಿಕೆ ಮತ್ತು ಹೋರಾಟದಲ್ಲಿ ಅವರು ಭಾಗಿಯಾಗಿದ್ದಾರೆ.

2007ರಲ್ಲಿ ತೆರೆಕಂಡ ಆ ದಿನಗಳು ಹಿಟ್‌ ಆಗುವುದರೊಂದಿಗೆ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟ ಸಿನಿಮಾ. ನಂತರ ಮೈನಾ ಶತದಿನೋತ್ಸವ ಆಚರಿಸಿತ್ತು. ಅವರ ಕೊನೆಯದಾಗಿ ಬಿಡುಗಡೆಯಾದ ಸಿನಿಮಾ ಅತಿರಥ (2017). ಈಗ ಅವರ ಮುಂದಿನ ಚಿತ್ರ ’ರಣಂ’ ಬಿಡುಗಡೆಗಡೆ ಸಿದ್ದವಾಗಿದೆ.

ಕಳೆದ ಐದು ವರ್ಷಗಳಿಂದ ಜೊತೆಯಾಗಿ ಹಲವಾರು ಕಡೆಗಳಲ್ಲಿ ಹಿಂದುಳಿದವರಿಗೆ ನೆರವು ನೀಡುತ್ತಾ ಬಂದಿರುವ ಈ ಜೋಡಿಗಳು ಸಾವಿತ್ರಿ ಬಾಯಿ ಫುಲೆ – ಜ್ಯೋತಿ ಬಾ ಫುಲೆ ಮತ್ತು ಪ್ರಕಾಶ್ ಅಮ್ಟೆ – ಮಂದಾಕಿನಿ ಅಮ್ಟೆ ದಂಪತಿಗಳು ನಮ್ಮ ಜೀವನದ ರೋಲ್ ಮಾಡಲ್‍ಗಳು ಎಂದು ಘೋಷಿಸಿಕೊಂಡಿದ್ದು, ಅವರಂತೆಯೇ ಆದರ್ಶದ ಬದುಕು ಸಾಗಿಸಬೇಕೆಂದು ನಿರ್ಧರಿಸಿದ್ದಾರೆ.

ಅನಾಥಾಶ್ರಮದ ಮಕ್ಕಳು ಮತ್ತು ವೃದ್ಧರೊಡನೆ ಸರಳವಾಗಿ ವಿವಾಹವಾಗಲು ಚೇತನ್‌ ಮತ್ತು ಮೇಘಾ ನಿರ್ಧರಿಸಿದ್ದು ಫೆಬ್ರವರಿ 02ರಂದು ಬೆಂಗಳೂರಿನಲ್ಲಿ ಬಾಳಸಂಗಾತಿಗಳಾಗುತ್ತಿದ್ದಾರೆ. ಬಹುತ್ವದ ಸಂದೇಶ ಸಾರಲು ಅಂದು ವಚನ, ಸೂಫಿ ಗಾಯನ, ಸಿದ್ದಿ ನೃತ್ಯ, ಲಂಬಾಣಿ ನೃತ್ಯ, ಕೊರಗ ನೃತ್ಯದಂತಹ ಜನಪರ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ, ನವಜೋಡಿಗಳು ಪ್ರತಿಜ್ಞೆ ಕೈಗೊಂಡು ಮನದ ಮಾತುಗಳನ್ನಾಡಲಿದ್ದಾರೆ. ಈ ಸಂದರ್ಭದಲ್ಲಿ ಪುಸ್ತಕ ಪ್ರದರ್ಶನವೂ ನಡೆಯಲಿದೆ.

“ಆಡಂಬರದ ಆಚರಣೆಯಲ್ಲದ, ಸಮಾನತೆ ಮತ್ತು ಸೇವೆಯನ್ನು ಉತ್ತೇಜಿಸುವ ಸಾಮಾಜಿಕ ಪ್ರಜ್ಞೆಯ ವಿವಾಹಗಳ ಸ್ಫೂರ್ತಿಯೊಂದಿಗೆ” ಈ ಜೋಡಿಗಳು ಮಂತ್ರಮಾಂಗಲ್ಯದೊಂದಿಗೆ ಸರಳ ವಿವಾಹವಾಗುತ್ತಿದ್ದಾರೆ.  ಸಾಮಾಜಿಕ ಜವಾಬ್ದಾರಿಯೊಂದಿಗೆ ಜೀವನಸಂಗಾತಿಗಳಾಗುತ್ತಿರುವ ನವ ಜೋಡಿಗಳ ಭವಿಷ್ಯ ನೆಮ್ಮದಿ-ಸಂತೋಷದಿಂದಿರಲಿ ಎಂದು ಪ್ರೀತಿಯಿಂದ ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...