Homeಮುಖಪುಟಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ..

ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ: JNU ಶುಲ್ಕ ಹೆಚ್ಚಳಕ್ಕೆ ಹೈಕೋರ್ಟ್‌ ವಿರೋಧ..

ಶುಲ್ಕ ಹೆಚ್ಚಳಕ್ಕೂ ಮುಂದೆ ಇದ್ದ ಕಡಿಮೆ ಶುಲ್ಕವನ್ನೇ ಪಡೆದು ವಿದ್ಯಾರ್ಥಿಗಳನ್ನು ಮುಂದಿನ ಸೆಮೆಸ್ಟರ್‌ಗೆ ಸೇರಲು ಅವಕಾಶ ನೀಡುವಂತೆ ನ್ಯಾಯಮೂರ್ತಿ ರಾಜೀವ್ ಶಕ್ದೇರ್‌ ವಿಶ್ವವಿದ್ಯಾಲಯಕ್ಕೆ ತಿಳಿಸಿದ್ದಾರೆ.

- Advertisement -
- Advertisement -

ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ. ಸಾರ್ವಜನಿಕ ಶಿಕ್ಷಣಕ್ಕೆ ಧನಸಹಾಯವನ್ನು ಮುಂದುವರಿಸಬೇಕೆಂದು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳದ ವಿರುದ್ಧ ವಿದ್ಯಾರ್ಥಿ ಸಂಘದ ಮುಖಂಡರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ಶುಲ್ಕ ಹೆಚ್ಚಳದ ಕಾರಣಕ್ಕಾಗಿ ಮುಂದಿನ ಸೆಮಿಸ್ಟರ್‌ಗೆ ನೋಂದಾಯಿಸದ ವಿದ್ಯಾರ್ಥಿಗಳಿಗೆ ಮುಂದಿನ ಒಂದು ವಾರದೊಳಗೆ ಔಪಚಾರಿಕತೆಯನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ವಿಶ್ವವಿದ್ಯಾಲಯಕ್ಕೆ ಆದೇಶಿಸಿದೆ.

ಶುಲ್ಕ ಹೆಚ್ಚಳಕ್ಕೂ ಮುಂದೆ ಇದ್ದ ಕಡಿಮೆ ಶುಲ್ಕವನ್ನೇ ಪಡೆದು ವಿದ್ಯಾರ್ಥಿಗಳನ್ನು ಮುಂದಿನ ಸೆಮೆಸ್ಟರ್‌ಗೆ ಸೇರಲು ಅವಕಾಶ ನೀಡುವಂತೆ ನ್ಯಾಯಮೂರ್ತಿ ರಾಜೀವ್ ಶಕ್ದೇರ್‌ ವಿಶ್ವವಿದ್ಯಾಲಯಕ್ಕೆ ತಿಳಿಸಿದ್ದಾರೆ.

ಶುಲ್ಕ ಹೆಚ್ಚಳವನ್ನು ಪ್ರಶ್ನಿಸಿರುವ ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ಮುಖಂಡರು ಕಳೆದ ವರ್ಷ ಇದ್ದಷ್ಟೆ ಶುಲ್ಕವನ್ನು ಮುಂದುವರೆಸಬೇಕು, ಹೊಸ ಶುಲ್ಕ ಹೆಚ್ಚಳದ ಆದೇಶವನ್ನು ಕೈಬಿಡಬೇಕೆಂದು ಅರ್ಜಿಯಲ್ಲಿ ಒತ್ತಾಯಿಸಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿಂಕಿ ಆನಂದ್ ಅವರು ವಿದ್ಯಾರ್ಥಿಗಳ ಮನವಿಯನ್ನು ಈಗಿನಿಂದಲೇ ತಿರಸ್ಕರಿಸುವಂತೆ ನ್ಯಾಯಾಲಯವನ್ನು ಕೋರಿದರು. ಶೇಕಡಾ 90 ರಷ್ಟು ವಿದ್ಯಾರ್ಥಿಗಳು ಈಗಾಗಲೇ ಹೆಚ್ಚುವರಿ  ಶುಲ್ಕ ಪಾವತಿಸಿದ್ದಾರೆ ಎಂದು ಸೂಚಿಸಿದರು.

ಈ ವಾದವನ್ನು ಒಪ್ಪದ ನ್ಯಾಯಾಧೀಶರು “ನಿಮಗೆ ಆಯ್ಕೆಯೇ ಇಲ್ಲದಿದ್ದರೆ, ನೀವು ಏನು ಮಾಡುತ್ತೀರಿ?” ಎಂದು ಪ್ರಶ್ನಿಸಿದರು. ಆಗ ಕೇಂದ್ರದ ಹಿರಿಯ ಕಾನೂನು ಅಧಿಕಾರಿ, ವಿಶ್ವವಿದ್ಯಾನಿಲಯವು ನೇಮಕ ಮಾಡಿಕೊಂಡ ಗುತ್ತಿಗೆ ಕಾರ್ಮಿಕರಿಗೆ ಸಂಬಳ ನೀಡಲು ಶುಲ್ಕವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಆ ವಾದವನ್ನು ನ್ಯಾಯಮೂರ್ತಿ ಶಕ್ದೇರ್‌ ಪ್ರತಿರೋಧಿಸಿದರು.

“ಸರ್ಕಾರವು ಶಿಕ್ಷಣ ಕ್ಷೇತ್ರದಿಂದ ಹಿಂದೆ ಸರಿಯುವಂತಿಲ್ಲ. ಸಾರ್ವಜನಿಕ ಶಿಕ್ಷಣಕ್ಕೆ ಧನಸಹಾಯವನ್ನು ಮುಂದುವರಿಸಬೇಕು. ಗುತ್ತಿಗೆ ಕಾರ್ಮಿಕರ ವೇತನವನ್ನು ಪಾವತಿಸುವ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹಾಕುವುದು ಸಮರ್ಥನೀಯವಲ್ಲ. ಅದಕ್ಕಾಗಿ ಬೇರೆ ಮೂಲವನ್ನು ಹುಡುಕಿಕೊಳ್ಳಬೇಕು ಎಂದು ನ್ಯಾಯಮೂರ್ತಿ ಸೂಚಿಸಿದ್ದಾರೆ. ನಂತರ ಮುಂದಿನ ವಿಚಾರಣೆಯನ್ನು ಫೆಬ್ರವರಿ 28 ಕ್ಕೆ ಮುಂದೂಡಿದರು.

ಜೆಎನ್‌ಯುಎಸ್‌ಯು ಪದಾಧಿಕಾರಿಗಳು ಸಲ್ಲಿಸಿದ ಅರ್ಜಿಯಲ್ಲಿ ಹಾಸ್ಟೆಲ್ ಕೈಪಿಡಿ ಮತ್ತು ಶುಲ್ಕಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ವಿಶ್ವವಿದ್ಯಾಲಯಕ್ಕೆ ಆದೇಶಿಸುವಂತೆ ಕೇಳಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯಾಲಯದಲ್ಲಿ ಜಯ ದೊರಕಿರುವುದು ಸಂತೋಷದ ಸಂಗತಿ.

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...