Homeಮುಖಪುಟನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು, ಒಕ್ಕಲಿಗ ಅಸ್ಮಿತೆಯ ವಿರೋಧಿಗಳು: ಎಚ್‌.ಡಿ ಕುಮಾರಸ್ವಾಮಿ

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ.

- Advertisement -
- Advertisement -

ಸಮಾಜದ ಶಾಂತಿಗಾಗಿ ಹೋರಾಡಿದ್ದಕ್ಕೆ ನನ್ನನ್ನು ಕೊಲ್ಲುವ ಸಂಚು ನಡೆಯುತ್ತಿದೆಯಂತೆ. ನನ್ನನ್ನು ಕೊಲ್ಲಿಸುವ ಕೆಲಸಕ್ಕೆ ಕೈಹಾಕಿದವರೇ ಒಂದು ವಿಚಾರ ತಿಳಿದುಕೊಳ್ಳಿ. ನನ್ನಂತೆ ಹೋರಾಡಬಲ್ಲ ಲಕ್ಷಾಂತರ ಕಾರ್ಯಕರ್ತರು, ಅಭಿಮಾನಿಗಳ ಪಡೆ ನನ್ನ ಬೆನ್ನಿಗಿದೆ. ನನ್ನನ್ನು ಕೊಲ್ಲಬಹುದು. ಆದರೆ ನನ್ನ ಬೆನ್ನಿಗೆ ನಿಂತವರನ್ನು ಕೊಲ್ಲಲಾದೀತೆ? ಎಂದು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದೇ ಸಾಮಾಜಿಕ ಸ್ವಾಸ್ಥ್ಯಕ್ಕಾಗಿ ನಾನು‌ ನಡೆಸುತ್ತಿರುವ ಹೋರಾಟಕ್ಕೆ ಬೆದರಿರುವ ಬಿಜೆಪಿ ನನ್ನನ್ನು ‘ಪಾಕಿಸ್ತಾನಿ’ ಎಂದು ಕರೆದು ಅಪಮಾನಿಸುವ ಪ್ರಯತ್ನ ಮಾಡುತ್ತಿದೆ. ಕೊಲ್ಲಲು ಬಂದವರದ್ದು ಬೆದರಿಕೆಯ ‘ಉಗ್ರ’ ತಂತ್ರವಾದರೆ, ಅವರದ್ದೇ ಸಿದ್ದಾಂತ ಪ್ರತಿಪಾದಿಸುತ್ತಿರುವ ಬಿಜೆಪಿಯದ್ದು ಅಪಮಾನದ ತಂತ್ರ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ಕರ್ನಾಟಕದಲ್ಲಿ ಒಕ್ಕಲಿಗ ನಾಯಕತ್ವದ ವಿರುದ್ಧ ಹಿಂದಿನಿಂದಲೂ ದೌರ್ಜನ್ಯ ರಾಜಕಾರಣ ಇದ್ದದ್ದೇ. ಮೂದಲಿಸುವುದು, ಸಲ್ಲದ ಆರೋಪ ಮಾಡುವುದು‌. ಈ ಹಿಂದೆ ನಡೆದ ತಂತ್ರಗಳು. ಆದರೆ ಈಗಿನ ಕೊಲ್ಲುವ ಸಂಚು, ಪಾಕಿಸ್ತಾನಿ ಪ್ರಯೋಗ ಒಕ್ಕಲಿಗ ರಾಜಕಾರಣದ ವಿರುದ್ಧ ನಡೆಯುತ್ತಿರುವ ಮತ್ತೊಂದು ಬಗೆಯ ದೌರ್ಜನ್ಯ ಎಂದು ಆರೋಪಿಸಿದ್ದಾರೆ.

ಒಕ್ಕಲಿಗರು ಹೋರಾಟಕ್ಕಿಳಿದರೆ, ಅಧಿಕಾರಕ್ಕೆ ಬಂದರೆ ಅವರನ್ನು ಬೆದರಿಸುವ, ಸರ್ಕಾರಗಳನ್ನು ಬೀಳಿಸುವ ಕಾಯಕ ಹಿಂದಿನಿಂದ ನಡೆದುಕೊಂಡು ಬಂದಿದೆ. ದೇವೇಗೌಡರಂಥವರ ಮೇಲೇ ಹಲ್ಲೆ ಪ್ರಯತ್ನಗಳು ನಡೆದಿವೆ. ಅವರಿಗೆ ಅಧಿಕಾರ ವಂಚಿಸಲು ಯತ್ನಿಸಿದ್ದನ್ನು ಸಮಾಜ ನೋಡಿದೆ. ಈಗ ಈ ಶಕ್ತಿಗಳು ನನ್ನ ವಿರುದ್ಧ ನಿಂತಿವೆ. ಇದಕ್ಕೆ ಬೆದರುವ ವ್ಯಕ್ತಿ ನಾನಲ್ಲ ಎಂದಿದ್ದಾರೆ.

“ಒಕ್ಕಲಿಗ ಒಕ್ಕದಿದ್ದರೆ ಬಿಕ್ಕುವುದು ಜಗತ್ತು” ಎಂಬ ಕವಿವಾಣಿ ನೆನಪಿರಲಿ. ಅವರ ಪ್ರತಿನಿಧಿ ನಾನು. ರೈತರಿಗಾಗಿ ಕಾರ್ಯಕ್ರಮ ಹಮ್ಮಿಕೊಂಡವ ನಾನು. ನೀವು ನನ್ನನ್ನು ಕೊಲ್ಲಲಾದೀತೇ? ನನ್ನನ್ನು ಪಾಕಿಸ್ತಾನಿ ಎನ್ನುವಿರೇ? ಮುಂದೊಂದು ದಿನ ಪ್ರಾಯಶ್ಚಿತ ಪಡಲೆಂದೇ ಇಂದು ನೀವು ಮಾಡಿಕೊಳ್ಳುತ್ತಿರುವ ಪಾಪಗಳಿವು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ… ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...