Homeಮುಖಪುಟತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’...

ತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’…

- Advertisement -
- Advertisement -

ದಾವಣಗೆರೆಯಿಂದ ನಿಜಗುಣಾನಂದ ಸ್ವಾಮಿಗಳು ಬಂದಿದ್ದ ಕೊಲೆ ಬೆದರಿಕೆ ಪತ್ರದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಸಹ ಇರುವುದರ ಕುರಿತು ಪ್ರತಿಕ್ರಿಯಿಸಿರುವ ಅವರು ’ಚಲೋ ಹಮ್‌ ದೇಖೇಂಗೆ’… ಎಂದು ಟ್ವೀಟ್‌ ಮಾಡಿದ್ದಾರೆ.

ನಿಜಗುಣಾನಂದ ಸ್ವಾಮಿ ಅವರನ್ನು ತೊಡೆದುಹಾಕುತ್ತೇವೆ ಎಂದು ಹೇಡಿಗಳ ಗುಂಪು ಬೆದರಿಕೆ ಹಾಕಿದೆ. ಪತ್ರದ ಪಟ್ಟಿಯಲ್ಲಿ ನನ್ನ ಹೆಸರೂ ಸಹ ಇದೆ. ಚಲೋ ಹಮ್‌ ದೇಖೇಂಗೆ.., ಇಂಡಿಯಾ ಎಗೆನೆಸ್ಟ್‌ ಸಿಎಎ, ಎನ್‌ಆರ್‌ಸಿ, ಜಸ್ಟ್‌ ಆಸ್ಕಿಂಗ್‌ ಎಂದು ಟ್ವೀಟ್‌ ಮಾಡಿದ್ದಾರೆ. ಅಂದರೆ ನಡೀರಿ ನೋಡೋ ಬೀಡೋಣ ಅದೇನೆಂತ.. ಎಂಬರ್ಥ ಬರುತ್ತದೆ.

ಏನಿದು ಹಮ್‌ ದೇಖೇಂಗೆ?

ಹಮ್ ದೇಖೇಂಗೇ ಕವಿತೆಯನ್ನು ಫೈಜ್ ಅಹಮದ್ ಫೈಜ್ ಬರೆದಿದ್ದು 1979ರಲ್ಲಿ. ಪಾಕಿಸ್ತಾನದ ಪ್ರಧಾನಿ ಜುಲ್ಫಿಕರ್ ಬುಟ್ಟೋ ಅವರನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆ ಬಂದ ಮಿಲಿಟರಿ ಜನರಲ್ ಜಿಯಾ ಉಲ್ ಹಕ್ ಕಟ್ಟರ್ ಪಂಥೀಯನಾಗಿದ್ದು ಇಡೀ ಪಾಕಿಸ್ತಾನವನ್ನು ಮತಾಂಧತೆಯೆಡೆಗೆ ದೂಡುತ್ತಿದ್ದ ಸನ್ನಿವೇಶದಲ್ಲಿ ಅವನ ದುರಾಡಳಿತದ ಅಂತ್ಯವನ್ನು ಬಯಸಿ ಫೈಜ್ ಬರೆದಿದ್ದ ಕವಿತೆಯೇ ‘ಹಮ್ ದೇಖೇಂಗೆ’.

1984ರಲ್ಲಿ ಫೈಜ್ ನಿಧನದ ಮರುವರ್ಷ ಅಂದರೆ 1985ರಲ್ಲಿ ಪಾಕಿಸ್ತಾನದ ಮಹಿಳೆಯರು ಸೀರೆ ಉಡುವಂತಿಲ್ಲ ಎಂಬ ಉಘಲಕ್ ಶಾಸನವನ್ನು ಜಿಯಾ ಉಲ್ ಹಕ್ ಘೋಷಿಸಿದ್ದ. ಈ ಶಾಸನವನ್ನು ಖಂಡಿಸಿ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ಇಕ್ಬಾಲ್ ಬಾನೋ ಲಾಹೋರಿನ ಗಡಾಫಿ ಕ್ರೀಡಾಂಗಣದಲ್ಲಿ ಕಪ್ಪು ಸೀರೆಯುಟ್ಟುಕೊಂಡು ಬಂದು ಫೈಜ್ ಅವರ “ಹಮ್ ದೇಖೇಂಗೇ” ಕವಿತೆಯನ್ನು ಸುಶ್ರಾವ್ಯವಾಗಿ ಹಾಡಿದ್ದರು. ಫೈಜ್ ಬರೆದ ಈ ಹಾಡಿನ ಗಾಯನವನ್ನು ಕೇಳಲೆಂದೇ ಅಂದು ಸುಮಾರು 50,000 ಜನರು ನೆರೆದಿದ್ದರು ಎಂದು ಹೇಳಲಾಗುತ್ತದೆ.

ಫೈಜ್‌ ಅಹಮದ್‌ ಫೈಜ್‌ರವರ ಹಮ್‌ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಪಲ್ಲವಿ ಮತ್ತು ಬಿಂದು ಕನ್ನಡದಲ್ಲಿ ಹಾಡಿದಾಗ..

ಫೈಜ್ ಅಹಮದ್ ಫೈಜ್ ರವರ ಹಮ್ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಅದ್ಭುತವಾಗಿ ಹಾಡಿದ ಪಲ್ಲವಿ ಮತ್ತು ಬಿಂದುರವರು.. ಕೇಳಿಬಿಡಿ

Posted by Naanu Gauri on Thursday, January 9, 2020

ಹಾಡಿನುದ್ದಕ್ಕೂ ಕರತಾಡನ ಮಾಡುತ್ತಿದ್ದ ಜನರು ಹಾಡಿನ ಕೊನೆಯಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೂಗಿದ್ದರು. ಅಂದು ಇಕ್ಬಾಲ್ ಹಾಡಿದ್ದ ಈ ಗಾಯನದ ಧ್ವನಿಮುದ್ರಿಕೆಯನ್ನು ಹೇಗೋ ರಕ್ಷಿಸಿಕೊಂಡು ಬರಲಾಗಿದ್ದು ಇಂದಿಗೂ ಯೂಟ್ಯೂಬಿನಲ್ಲಿ ಕೇಳಲು ಲಭ್ಯವಿದೆ. ತದನಂತರದಲ್ಲಿ ಈ ಹಮ್ ದೇಖೇಂಗೇ ಕವಿತೆ ಒಂದು ಕ್ರಾಂತಿಗೀತೆಯಂತೆ ದಬ್ಬಾಳಿಕೆ ನಡೆಸುವ ಸರ್ಕಾರಗಳ ವಿರುದ್ಧದ ಹೋರಾಟಗಳಲ್ಲಿ ರಾಷ್ಟ್ರಗೀತೆಯಂತೆ ಹಾಡಲಾಗುತ್ತಿದೆ.

ಬೆದರಿಕೆ ಪತ್ರದ ಕುರಿತು

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...