Homeಮುಖಪುಟತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’...

ತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’…

- Advertisement -
- Advertisement -

ದಾವಣಗೆರೆಯಿಂದ ನಿಜಗುಣಾನಂದ ಸ್ವಾಮಿಗಳು ಬಂದಿದ್ದ ಕೊಲೆ ಬೆದರಿಕೆ ಪತ್ರದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಸಹ ಇರುವುದರ ಕುರಿತು ಪ್ರತಿಕ್ರಿಯಿಸಿರುವ ಅವರು ’ಚಲೋ ಹಮ್‌ ದೇಖೇಂಗೆ’… ಎಂದು ಟ್ವೀಟ್‌ ಮಾಡಿದ್ದಾರೆ.

ನಿಜಗುಣಾನಂದ ಸ್ವಾಮಿ ಅವರನ್ನು ತೊಡೆದುಹಾಕುತ್ತೇವೆ ಎಂದು ಹೇಡಿಗಳ ಗುಂಪು ಬೆದರಿಕೆ ಹಾಕಿದೆ. ಪತ್ರದ ಪಟ್ಟಿಯಲ್ಲಿ ನನ್ನ ಹೆಸರೂ ಸಹ ಇದೆ. ಚಲೋ ಹಮ್‌ ದೇಖೇಂಗೆ.., ಇಂಡಿಯಾ ಎಗೆನೆಸ್ಟ್‌ ಸಿಎಎ, ಎನ್‌ಆರ್‌ಸಿ, ಜಸ್ಟ್‌ ಆಸ್ಕಿಂಗ್‌ ಎಂದು ಟ್ವೀಟ್‌ ಮಾಡಿದ್ದಾರೆ. ಅಂದರೆ ನಡೀರಿ ನೋಡೋ ಬೀಡೋಣ ಅದೇನೆಂತ.. ಎಂಬರ್ಥ ಬರುತ್ತದೆ.

ಏನಿದು ಹಮ್‌ ದೇಖೇಂಗೆ?

ಹಮ್ ದೇಖೇಂಗೇ ಕವಿತೆಯನ್ನು ಫೈಜ್ ಅಹಮದ್ ಫೈಜ್ ಬರೆದಿದ್ದು 1979ರಲ್ಲಿ. ಪಾಕಿಸ್ತಾನದ ಪ್ರಧಾನಿ ಜುಲ್ಫಿಕರ್ ಬುಟ್ಟೋ ಅವರನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆ ಬಂದ ಮಿಲಿಟರಿ ಜನರಲ್ ಜಿಯಾ ಉಲ್ ಹಕ್ ಕಟ್ಟರ್ ಪಂಥೀಯನಾಗಿದ್ದು ಇಡೀ ಪಾಕಿಸ್ತಾನವನ್ನು ಮತಾಂಧತೆಯೆಡೆಗೆ ದೂಡುತ್ತಿದ್ದ ಸನ್ನಿವೇಶದಲ್ಲಿ ಅವನ ದುರಾಡಳಿತದ ಅಂತ್ಯವನ್ನು ಬಯಸಿ ಫೈಜ್ ಬರೆದಿದ್ದ ಕವಿತೆಯೇ ‘ಹಮ್ ದೇಖೇಂಗೆ’.

1984ರಲ್ಲಿ ಫೈಜ್ ನಿಧನದ ಮರುವರ್ಷ ಅಂದರೆ 1985ರಲ್ಲಿ ಪಾಕಿಸ್ತಾನದ ಮಹಿಳೆಯರು ಸೀರೆ ಉಡುವಂತಿಲ್ಲ ಎಂಬ ಉಘಲಕ್ ಶಾಸನವನ್ನು ಜಿಯಾ ಉಲ್ ಹಕ್ ಘೋಷಿಸಿದ್ದ. ಈ ಶಾಸನವನ್ನು ಖಂಡಿಸಿ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ಇಕ್ಬಾಲ್ ಬಾನೋ ಲಾಹೋರಿನ ಗಡಾಫಿ ಕ್ರೀಡಾಂಗಣದಲ್ಲಿ ಕಪ್ಪು ಸೀರೆಯುಟ್ಟುಕೊಂಡು ಬಂದು ಫೈಜ್ ಅವರ “ಹಮ್ ದೇಖೇಂಗೇ” ಕವಿತೆಯನ್ನು ಸುಶ್ರಾವ್ಯವಾಗಿ ಹಾಡಿದ್ದರು. ಫೈಜ್ ಬರೆದ ಈ ಹಾಡಿನ ಗಾಯನವನ್ನು ಕೇಳಲೆಂದೇ ಅಂದು ಸುಮಾರು 50,000 ಜನರು ನೆರೆದಿದ್ದರು ಎಂದು ಹೇಳಲಾಗುತ್ತದೆ.

ಫೈಜ್‌ ಅಹಮದ್‌ ಫೈಜ್‌ರವರ ಹಮ್‌ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಪಲ್ಲವಿ ಮತ್ತು ಬಿಂದು ಕನ್ನಡದಲ್ಲಿ ಹಾಡಿದಾಗ..

ಫೈಜ್ ಅಹಮದ್ ಫೈಜ್ ರವರ ಹಮ್ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಅದ್ಭುತವಾಗಿ ಹಾಡಿದ ಪಲ್ಲವಿ ಮತ್ತು ಬಿಂದುರವರು.. ಕೇಳಿಬಿಡಿ

Posted by Naanu Gauri on Thursday, January 9, 2020

ಹಾಡಿನುದ್ದಕ್ಕೂ ಕರತಾಡನ ಮಾಡುತ್ತಿದ್ದ ಜನರು ಹಾಡಿನ ಕೊನೆಯಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೂಗಿದ್ದರು. ಅಂದು ಇಕ್ಬಾಲ್ ಹಾಡಿದ್ದ ಈ ಗಾಯನದ ಧ್ವನಿಮುದ್ರಿಕೆಯನ್ನು ಹೇಗೋ ರಕ್ಷಿಸಿಕೊಂಡು ಬರಲಾಗಿದ್ದು ಇಂದಿಗೂ ಯೂಟ್ಯೂಬಿನಲ್ಲಿ ಕೇಳಲು ಲಭ್ಯವಿದೆ. ತದನಂತರದಲ್ಲಿ ಈ ಹಮ್ ದೇಖೇಂಗೇ ಕವಿತೆ ಒಂದು ಕ್ರಾಂತಿಗೀತೆಯಂತೆ ದಬ್ಬಾಳಿಕೆ ನಡೆಸುವ ಸರ್ಕಾರಗಳ ವಿರುದ್ಧದ ಹೋರಾಟಗಳಲ್ಲಿ ರಾಷ್ಟ್ರಗೀತೆಯಂತೆ ಹಾಡಲಾಗುತ್ತಿದೆ.

ಬೆದರಿಕೆ ಪತ್ರದ ಕುರಿತು

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...