Homeಮುಖಪುಟರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಿ: ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಕೇರಳ ಪ್ರತಿಪಕ್ಷ ನಾಯಕರ ದೂರು..

ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳಿ: ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ಕೇರಳ ಪ್ರತಿಪಕ್ಷ ನಾಯಕರ ದೂರು..

- Advertisement -
- Advertisement -

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಲು ಅನುಮತಿ ಕೋರಿ ಕೇರಳ ವಿಧಾನಸಭೆಯ ಪ್ರತಿಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಅವರು ವಿಧಾನಸಭೆ ಸ್ಪೀಕರ್‌ಗೆ ನೋಟಿಸ್ ನೀಡಿದ್ದಾರೆ.

ಆ ಮೂಲಕ ಕೇರಳದ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ನಡೆಯುತ್ತಿದ್ದ ಗುದ್ದಾಟಕ್ಕೆ ಮತ್ತೊಂದು ಆಯಾಮ ದೊರಕಿದ್ದು ಆಡಳಿತ ಪಕ್ಷದ ಪರವಾಗಿ ಪ್ರತಿಪಕ್ಷವು ನಿಂತಿದೆ.

ಮುಖ್ಯವಾಗಿ ಸಿಎಎ, ಎನ್‌ಆರ್‌ಸಿ ವಿರುದ್ಧದ ಹೋರಾಟ ಆರಂಭವಾದೊಡನೆಯೂ ರಾಜ್ಯಪಾಲರೊಂದಿಗೆ ಸರ್ಕಾರಕ್ಕೆ ಇರಿಸುಮುರಿಸು ಆರಂಭವಾಗಿತ್ತು. ಈಗ ಅವರನ್ನು ವಾಪಸ್‌ ಕರೆಸಿಕೊಳ್ಳಿ ಎಂಬವಲ್ಲಿಗೆ ಬಂದು ನಿಂತಿದೆ.

ತಿಂಗಳ ಹಿಂದೆ ಕಣ್ಣೂರು ವಿಶ್ವವಿದ್ಯಾಲಯದಲ್ಲಿ ನಡೆದ ಭಾರತೀಯ ಇತಿಹಾಸ ಕಾಂಗ್ರೆಸ್ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದ ವೇಳೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಮಾತನಾಡಿದ್ದರು. ಆಗ ಅದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮತ್ತೊಬ್ಬ ಅತಿಥಿ, ಇತಿಹಾಸ ತಜ್ಞ ಇರ್ಫಾನ್ ಹಬೀಬ್ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭಾಷಣ ಮಾಡುವುದನ್ನು ಅರ್ಧಕ್ಕೇ ತಡೆದಿದ್ದರು. ಅವರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದರು.

ಆದಾದ ನಂತರ ಪ್ರಪಥಮ ಬಾರಿಗೆ ಕೇರಳ ಸಿಎಎ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯವನ್ನು ಅಂಗೀಕರಿಸಿತ್ತು. ಆಗ ಆರ್ಟಿಕಲ್ 254 ರ ಪ್ರಕಾರ ಎಲ್ಲ ರಾಜ್ಯಗಳೂ CAA ಯನ್ನು ಜಾರಿಗೊಳಿಸಬೇಕು. ರಾಜ್ಯಗಳು ಬೇಕಾದರೆ ಈ ವಿಷಯದಲ್ಲಿ ಸುಪ್ರೀಂ ಕೋರ್ಟ್‌‌ಗೆ ಹೋಗಬಹದು ಆದರೆ ಯಾವ ರಾಜ್ಯಕ್ಕೂ CAA ಯನ್ನು ಜಾರಿಗೊಳಿಸದೆ ಬೇರೆ ದಾರಿಯೇ ಇಲ್ಲವೆಂದು ಕೇರಳ ರಾಜ್ಯಪಾಲರಾದ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯಿಸಿದ್ದರು.

ಆನಂತರ ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತು. ಆಗ ಮತ್ತೆ ರಾಜ್ಯಪಾಲರು “ಸಿಎಎ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಕ್ಕೆ ತಮ್ಮ ಅಭ್ಯಂತರವಿಲ್ಲ. ಆದರೆ, ರಾಜ್ಯದ ಸಾಂವಿಧಾನಿಕ ವ್ಯವಸ್ಥೆಯ ಮುಖ್ಯಸ್ಥರಾಗಿರುವ ತಮಗೆ ಮಾಹಿತಿ ನೀಡದೇ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಬೇಸರವಾಗಿದೆ ಎಂದು ಸಿಡಿಮಿಡಿಗೊಂಡಿದ್ದರು.

ರಾಜ್ಯ ಸರ್ಕಾರವು ತೆಗೆದುಕೊಳ್ಳುವ ನಿರ್ಧಾರವನ್ನು ರಾಜ್ಯಪಾಲರ ಗಮನಕ್ಕೆ ತರುತ್ತಿಲ್ಲ. ಸುದ್ದಿ ಮಾಧ್ಯಮ ಹಾಗೂ ದಿನಪತ್ರಿಕೆಗಳ ಮೂಲಕ ಅದನ್ನೆಲ್ಲ ತಿಳಿದುಕೊಳ್ಳುವಂತಾ ಪರಿಸ್ಥಿತಿ ಎದುರಾಗಿದೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಒಟ್ಟಿನಲ್ಲಿ ಸದಾ ಸರ್ಕಾರದೊಂದಿಗೆ ತಗಾದೆ ತೆಗೆಯುತ್ತಿರುವ ಈ ರಾಜ್ಯಪಾಲರು ಬೇಡ ಎಂದು ವಿಧಾನಸಭೆಯಲ್ಲಿಯೇ ನಿರ್ಣಯ ಅಂಗೀಕರಿಸಲು ಪ್ರತಿಪಕ್ಷ ಯುಡಿಎಫ್‌ ಸಿದ್ದವಾಗಿದೆ. ಇದು ಎಲ್ಲಿಗೆ ಹೋಗಿ ಮುಟ್ಟುತ್ತದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...