Homeಮುಖಪುಟನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ: ಆಯುಷ್ಮಾನ್‌ ಖುರಾನ

- Advertisement -
- Advertisement -

ಹೊಸ ವರ್ಷವನ್ನು ಸಮಾನತೆ ಮತ್ತು ಹೆಮ್ಮೆಯಿಂದ ಸ್ವಾಗತಿಸಿರುವ ಖ್ಯಾತ ಬಾಲಿವುಟ್‌ ನಟ ಆಯುಷ್ಮಾನ್ ಖುರಾನಾ, ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ ಎಂದು ಹೇಳಿದ್ದಾರೆ.

ದೇಶದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹಿಂದೂಸ್ತಾನ್‌ ಟೈಮ್ಸ್‌ನೊಂದಿಗಿನ ಸಂದರ್ಶನದಲ್ಲಿ ಅವರು “ಸಮಾನತೆಯ ಬಗ್ಗೆ ಹೆಮ್ಮೆಪಡುವ ತಾನು ಸಾಮಾಜಿಕವಾಗಿ ಜಾಗೃತ ನಾಗರಿಕ ಎಂದು ಹೇಳಿಕೊಂಡಿದ್ದಾರೆ. ಅವರ ಸಿನೆಮಾ ಆಯ್ಕೆಯು ಯಾವಾಗಲೂ ಸಾಮಾಜಿಕವಾಗಿ ಸಂಬಂಧಿಸಿದ ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ, ಅದು ಚರ್ಚೆಯನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ.

ಅವರ ಚೊಚ್ಚಲ ಬಾಲಿವುಡ್ ಚಿತ್ರ ’ವಿಕ್ಕಿಂಗ್ ವಿಕಿ ದಾನಿ (2012) ದಿಂದ ಅವರ ಕೊನೆಯ ತೆರೆಯ ಬಂದ ಜಾಯ್‌ರೈಡ್ ಬಾಲಾ (2019) ಮತ್ತು ಮುಂಬರುವ ಸಲಿಂಗಕಾಮದ ಕುರಿತ “ಶುಭ್ ಮಂಗಲ್ ಜ್ಯಾದ ಸಾವಧಾನ್”ವರೆಗೂ ಸಾಮಾಜಿಕ ಬದಲಾವಣೆಯು ತಮ್ಮ ಚಲನಚಿತ್ರಗಳಲ್ಲಿ ಮುಖ್ಯ ಆಧಾರವಾಗಿದೆ ಎಂದು ಆಯುಷ್ಮಾನ್ ಖುರಾನಾ ಹೇಳಿದ್ದಾರೆ.

ಚಿತ್ರವೊಂದರಲ್ಲಿಅ ವರು ಒಂದು ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಮತ್ತೊಂದು ಕೈಯಲ್ಲಿ ಎಲ್ಜಿಬಿಟಿಕ್ ಹೆಮ್ಮೆಯ ಭಾವುಟವನ್ನು ಹಿಡಿದುಕೊಂಡಿದ್ದಾರೆ. ಇದು ಸಲಿಂಗಕಾಮ ಮತ್ತು ಎಲ್ಜಿಬಿಟಿಕ್ ಸಮುದಾಯದ ವಿಷಯಕ್ಕೆ ಬಂದಾಗ ಭಾರತವನ್ನು ಪ್ರಗತಿಪರ ನಿಲುವಿನಲ್ಲಿ ತೋರಿಸುತ್ತದೆ. ಇದು ಸೆಕ್ಷನ್ 377 (ಭಾರತೀಯ ದಂಡ ಸಂಹಿತೆಯ) ಯನ್ನು ತಾರತಮ್ಯಗೊಳಿಸಿದೆ ಮತ್ತು ನಾವು ಹೆಚ್ಚು ಹೆಮ್ಮೆಪಡುವಂತಿಲ್ಲ ಎಂದು ಅವರು ಹೇಳುತ್ತಾರೆ.

ಅವರ ಚಲನಚಿತ್ರಗಳ ಆಯ್ಕೆಯ ಕುರಿತು (ಆರ್ಟಿಕಲ್ 15) (ಶುಭ್ ಮಂಗಲ್ ಜ್ಯಾದ ಸಾವಧಾನ್)  ಸಾಮಾಜಿಕವಾಗಿ ಪ್ರಸ್ತುತವಾದ, ಒಂದು ಕೋಲಾಹಲವನ್ನು ಉಂಟುಮಾಡುವ ಅಥವಾ ಕೆಲವು ರೀತಿಯ ಚರ್ಚೆಯನ್ನು ಉಂಟುಮಾಡುವ ವಿಷಯಗಳನ್ನು ಆಯ್ಕೆ ಮಾಡಲು ನಾನು ಯಾವಾಗಲೂ ಬಯಸುತ್ತೇನೆ. ಹೌದು, ನಾನು ಸಾಮಾಜಿಕವಾಗಿ ಜಾಗೃತ ನಾಗರಿಕ. ನಾನು ಸಾಮಾಜಿಕವಾಗಿ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತ ಬೀದಿ ನಾಟಕವನ್ನು ಮಾಡಿದ್ದೇನೆ ಮತ್ತು ನಾನು ಮಾಡುತ್ತಿರುವ ಸಿನೆಮಾ ನನ್ನ ರಂಗಭೂಮಿ ದಿನಗಳ ವಿಸ್ತರಣೆಯಾಗಿದೆ ಎನ್ನುತ್ತಾರೆ.

ಗಣರಾಜ್ಯೋತ್ಸವದ ಮಹತ್ವ ಮತ್ತು ದೇಶಪ್ರೇಮವನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ಎಂಬ ಪ್ರಶ್ನೆಗೆ
ಗಣರಾಜ್ಯೋತ್ಸವು ನಮ್ಮ ದೇಶದಲ್ಲಿ ಒಬ್ಬರಾಗಿ ನಮ್ಮ ದೇಶವು ಹೊಂದಿರು ಬಹು – ಸಾಂಸ್ಕೃತಿಕ ವಿಭಿನ್ನತೆಯನ್ನು ಸಂಭ್ರಮಿಸಬೆಕು. ನಿಜವಾದ ದೇಶಪ್ರೇಮ ಎಂದರೆ ಅಂಧಭಕ್ತಿ ಅಲ್ಲ, ನಮ್ಮ ದೇಶವನ್ನು ಸುಧಾರಿಸುವುದಾಗಿದೆ. ದೇಶಪ್ರೇಮವು ಒಂದು ಜವಾಬ್ದಾರಿಯೊಂದಿಗೆ ಬರುತ್ತದೆ, ನಿಮ್ಮ ದೇಶದ ಮೇಲಿನ ಪ್ರೀತಿಯು ನಾನು ಪುನರುಚ್ಚರಿಸಿದಂತೆ ಇದು ಕುರುಡು ಪ್ರೀತಿ ಆಗಿರಬಾರದು ಎನ್ನುತ್ತಾರೆ.

ನಮ್ಮ ದೇಶದಲ್ಲಿ ವೈವಿಧ್ಯತೆಯಲ್ಲಿ ಏಕತೆ ಇದೆ. ಇದು ನಮ್ಮ ಅತಿದೊಡ್ಡ ಶಕ್ತಿ ಮತ್ತು ನಮ್ಮ ದೊಡ್ಡ ದೌರ್ಬಲ್ಯವೂ ಆಗಿದೆ. ನಾವು ವೈವಿಧ್ಯಮಯರು ಜೊತೆಗೆ ನಾವು ಒಟ್ಟಾಗಿರಬೇಕು. ನಾನು ಆಚರಿಸುವುದು ಭಾರತವು ಸಂಸ್ಕೃತಿಯಾಗಿದೆ. ನಮ್ಮ ಕೊರತೆಯೆಂದರೆ ನಾವು ದೇಶವನ್ನು ಸ್ವಚ್ಛವಾಗಿಟ್ಟಿಲ್ಲ. ಸಣ್ಣ ಆರ್ಥಿಕತೆಯನ್ನು ಹೊಂದಿರುವ ದೇಶಗಳು ಸಹ ನಮಗಿಂತ ಸ್ವಚ್ಛವಾಗಿವೆ ಎನ್ನುತ್ತಾರೆ.

ಎಲ್ಜಿಬಿಟಿಕ್ ಸಮುದಾಯ ಮತ್ತು ವಿವಿಧ ಜಾತಿಯ ಜನರಿಗೆ ಸಾಂವಿಧಾನಿಕ ಸಿಂಧುತ್ವ ಇರಬಹುದು, ಆದರೆ ಅಂತಿಮವಾಗಿ ಸ್ವೀಕಾರಾರ್ಹತೆಯ ಜವಾಬ್ದಾರಿ ರಾಷ್ಟ್ರದ ಜನರ ಮೇಲಿದೆ ಎಂದು ನೀವು ನಂಬುತ್ತೀರಾ? ಎಂಬ ಪ್ರಶ್ನೆಗೆ ಅವರು ಈ ಸಮುದಾಯದ ಕುರಿತು ಯೂಟ್ಯೂಬ್‌ನಲ್ಲಿ ಟ್ರೈಲರ್‌ನಲ್‌ಇ ನಾವು ನೋಡಿದ ರೀತಿಯ ವೀಕ್ಷಣೆಗಳು ಮತ್ತು ಕಾಮೆಂಟ್‌ಗಳು ನಮ್ಮ ದೇಶದ ಪ್ರಗತಿಪರ ನಿಲುವನ್ನು ತೋರಿಸುತ್ತದೆ. ಇದು ಸಲಿಂಗಕಾಮವನ್ನು ಆಧರಿಸಿದ ಚಿತ್ರಕ್ಕಾಗಿ ಸಿದ್ಧವಾಗಿದೆ. ಚಿತ್ರದ ಟ್ರೈಲರ್ ಅನ್ನು ನಮ್ಮ ದೇಶ ಸ್ವೀಕರಿಸಿದೆ ಎಂದು ಅದು ತೋರಿಸುತ್ತದೆ. ಇದು 2020ರ ಸಲಿಂಗಕಾಮಿ ಪ್ರೇಮಕಥೆಯ ಮುಖ್ಯವಾಹಿನಿಯ ಅತಿ ದೊಡ್ಡ ಕಮರ್ಷಿಯಲ್‌ ಹಿಂದಿ ಸಿನೆಮಾವಾಗಿದೆ ಎಂದಿದ್ದಾರೆ.

ನಮ್ಮ ಚಲನಚಿತ್ರೋದ್ಯಮದ ಸಾಮಾಜಿಕ ಒಳಗೊಳ್ಳುವಿಕೆ ಸಾಕಷ್ಟಿದೆಯೇ? ಎಂಬ ಪ್ರಶ್ನೆಗೆ ಉದ್ಯಮದಲ್ಲಿ ನಾವು ಮುಕ್ತತೆಯಿಂದ ಇದ್ದೇವೆ. ನೀವು ಯಾವ ಜಾತಿ, ಬಣ್ಣ, ಧರ್ಮಕ್ಕೆ ಸೇರಿದವರು ಅಥವಾ ನಿಮ್ಮ ಲೈಂಗಿಕತೆ ಏನೆಂಬುದು ನಮಗೆ ಮುಖ್ಯವಲ್ಲ. ನಿಮ್ಮ ಪ್ರತಿಭೆಯ ಬಗ್ಗೆ ಮಾತ್ರ ನಾವು ಕಾಳಜಿ ವಹಿಸುತ್ತೇವೆ. ನೀವು ಸಾಕಷ್ಟು ಒಳ್ಳೆಯವರಾಗಿದ್ದರೆ, ನೀವು ಅಲ್ಲಿಗೆ ಹೋಗುತ್ತೀರಿ ಮತ್ತು ನಿಮಗಾಗಿ ಒಳ್ಳೆಯದನ್ನು ಮಾಡುತ್ತೀರಿ ಎಂದು ಅವರು ಹೇಳಿದ್ದಾರೆ.

ಕೃಪೆ: ಹಿಂದೂಸ್ತಾನ್‌ ಟೈಮ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...