Homeಮುಖಪುಟಬಿಜೆಪಿ ಆಳ್ವಿಕೆಯಲ್ಲಿ ಕರ್ನಾಟಕ ಕುಸಿತ: ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದ ಸಿದ್ದರಾಮಯ್ಯ

ಬಿಜೆಪಿ ಆಳ್ವಿಕೆಯಲ್ಲಿ ಕರ್ನಾಟಕ ಕುಸಿತ: ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಎಂದ ಸಿದ್ದರಾಮಯ್ಯ

- Advertisement -
- Advertisement -

ಶಾಸಕರ ಸ್ಥಳೀಯ ಪ್ರದೇಶಾಭಿವೃದ‍್ಧಿ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು, ತೆರಿಗೆ ಸಂಗ್ರಹ ಇಳಿಯುತ್ತಿದೆ, ಸಾಲದ ಹೊರೆ ಹೆಚ್ಚಾಗುತ್ತಿದೆ, ಕೇಂದ್ರ ಅನುದಾನದ ಬಾಕಿ ಏರುತ್ತಿದೆ. ಶೀಘ್ರದಲ್ಲಿ ನೌಕರರ ಸಂಬಳಕ್ಕೂ ತತ್ವಾರ ಬರಲಿದೆ. ಅಡ್ಡಕಸುಬಿಗಳ ಕೈಗೆ ಅಧಿಕಾರ ಕೊಟ್ಟರೆ ಇದೇ ಗತಿ ಆಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಹಣ ಇಲ್ಲದೆ ಅಭಿವೃದ್ಧಿ ಯೋಜನೆಗಳು ಸ್ಥಗಿತಗೊಂಡಿವೆ, ಗುತ್ತಿಗೆದಾರರು ಕಾಮಗಾರಿಗಳನ್ನು ಅರ್ಧಕ್ಕೆ ಬಿಟ್ಟು ಓಡಿಹೋಗುತ್ತಿದ್ದಾರೆ, ಖಾಲಿ ಖಜಾನೆ ತುಂಬಲು ರೈತರಿಂದ ಬಲತ್ಕಾರವಾಗಿ ಸಾಲ ವಸೂಲಿ ಮಾಡಲು ಪೀಡಿಸುತ್ತಿದ್ದಾರೆ. ಸುಭೀಕ್ಷೆಯಿಂದ ಇದ್ದ ರಾಜ್ಯ ಅರಾಜಕತೆಯತ್ತ ಭರದಿಂದ ಸಾಗಿದೆ. ಕೇಂದ್ರ ಪ್ರಾಯೋಜಕತ್ವದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ, ತೆರಿಗೆ ಪಾಲು ಬರ್ತಿಲ್ಲ, ಜಿಎಸ್‌ಟಿ ಪರಿಹಾರ ಕೊಡ್ತಿಲ್ಲ. ಇತ್ತ ಸಂಪುಟ ವಿಸ್ತರಣೆಗೂ ಒಪ್ಪಿಗೆ ಕೊಡ್ತಿಲ್ಲ.‌ ಕರ್ನಾಟಕದ ಬಗ್ಗೆ ಮೋದಿ-ಶಾ ಜೋಡಿ‌ಗೆ ಯಾಕಿಷ್ಟು ಸಿಟ್ಟು ಎಂದು ಸಿದ್ದರಾಮಯ್ಯ ಸಾಲು ಸಾಲು ಸಮಸ್ಯೆಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಸಂಪುಟ ವಿಸ್ತರಣೆ, ಅತೃಪ್ತರ ಓಲೈಕೆ, ಹೈಕಮಾಂಡ್‌ಗೆ ಮೊರೆ, ಭಿನ್ನಮತೀಯರಿಗೆ ಸಮಾಧಾನ ಇವಿಷ್ಟೇ ಕೆಲಸದಲ್ಲಿ ಯಡಿಯೂರಪ್ಪ ಅವರು ಆರು ತಿಂಗಳು ಕಳೆದಿದ್ದಾರೆ. ಆಡಳಿತ ಕೈಗೆ ಸಿಗುತ್ತಿಲ್ಲ, ಹೈಕಮಾಂಡ್ ಕ್ಯಾರೇ ಅನ್ತಿಲ್ಲ. ಯಡಿಯೂರಪ್ಪ ಮುಳುಗುತ್ತಿದ್ದಾರೆ, ಜೊತೆಗೆ ರಾಜ್ಯವನ್ನೂ ಮುಳುಗಿಸಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಇಪ್ಪತ್ತು ವರ್ಷಗಳಲ್ಲಿಯೇ ಮೊದಲ ಬಾರಿ ಕೇಂದ್ರ ಸರ್ಕಾರದ ವರಮಾನ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿಯೂ ಅದೇ ಸ್ಥಿತಿ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು, ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯವನ್ನು ದಿವಾಳಿ ಮಾಡಲು ನಿರ್ಧಾರ ಮಾಡಿದ ಹಾಗಿದೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹತಾಶರನ್ನಾಗಿ‌ಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಮೋದಿ-ಶಾ ಜೋಡಿ ಅವರನ್ನು ದಂಡಿಸುತ್ತಿದೆಯೇ? ಬಿಜೆಪಿಯ ಆಂತರಿಕ ಕಲಹಕ್ಕೆ ರಾಜ್ಯದ ಜನ ಬಲಿಪಶುಗಳಾಗುತ್ತಿದ್ದಾರೆ. ರಾಜ್ಯದ ಖಜಾನೆ ಖಾಲಿಯಾಗುತ್ತಿದೆ, ಅಧಿಕಾರಿಗಳು ಬಜೆಟ್ ಮಾಡುವುದು ಹೇಗೆ ಎಂದು ತಲೆಮೇಲೆ ಕೈಯಿಟ್ಟು ಕೂತಿದ್ದಾರೆ ಎಂದು ಸಿದ್ದು ತಿಳಿಸಿದ್ದಾರೆ.

ಯಡಿಯೂರಪ್ಪ ಅವರೇ, ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ, ರಾಜ್ಯದ ಹಿತ ಬಲಿ‌ಕೊಡಬೇಡಿ. ತಮ್ಮ ವೈಫಲ್ಯದಿಂದಾಗಿ ದೇಶವನ್ನು ಕಬರ್ ಸ್ತಾನ ಮಾಡಲು ಹೊರಟಿರುವ ನರೇಂದ್ರ ಮೋದಿ ಅವರು ತಮ್ಮ ಅಸಾಮರ್ಥ್ಯವನ್ನು ಮುಚ್ಚಿಕೊಳ್ಳಲು ಪಾಕಿಸ್ತಾನದ ಜಪ ಮಾಡುತ್ತಿದ್ದಾರೆ. ನಾಯಕನ ಮೇಲ್ಪಂಕ್ತಿಯನ್ನು ಅನುಸರಿಸುತ್ತಿರುವ ರಾಜ್ಯದ ನಾಯಕರು ತಲೆಕೆಟ್ಟವರಂತೆ ಕೋಮುದ್ವೇಷಕ್ಕೆ ಪ್ರಚೋದನೆ ನೀಡತೊಡಗಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...