Homeಮುಖಪುಟಸಿಎಎ ವಿರುದ್ಧ ದನಿ: ನಾಳೆ ದೇಶಾದ್ಯಂತ ಎಲ್ಲಾ ಚರ್ಚ್‌ಗಳಲ್ಲಿ ’ಸಂವಿಧಾನ ಪ್ರಸ್ತಾವನೆ ಓದು’

ಸಿಎಎ ವಿರುದ್ಧ ದನಿ: ನಾಳೆ ದೇಶಾದ್ಯಂತ ಎಲ್ಲಾ ಚರ್ಚ್‌ಗಳಲ್ಲಿ ’ಸಂವಿಧಾನ ಪ್ರಸ್ತಾವನೆ ಓದು’

- Advertisement -
- Advertisement -

ಜನವರಿ 26ರಂದು ಆಚರಿಸಲಿರುವ 71ನೇ ಗಣರಾಜ್ಯೋತ್ಸವವನ್ನು ಸಂವಿಧಾನ ರಕ್ಷಣಾ ದಿನವೆಂದು ಘೋಷಣೆ ಎಂದು ಕರೆದಿದ್ದು ದೇಶದ ಅತಿದೊಡ್ಡ ಸಮೂಹವನ್ನೊಳಗೊಂಡಿರುವ ಕ್ಯಾಥೋಲಿಕ ಆರ್ಚ್‌ ಬಿಷಪ್ ಚರ್ಚ್ ದೇಶವ್ಯಾಪಿ ಎಲ್ಲಾ ಚರ್ಚ್‌ಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವಂತೆ ಮನವಿ ಮಾಡಿದೆ.

ದೇಶದ ಎಲ್ಲಾ ಕ್ಯಾಥೋಲಿಕ್ ಚರ್ಚ್‌ಗಳ ಪಾದ್ರಿಗಳಿಗೆ ಮನವಿ ಮಾಡಿರುವ ಕೇರಳದ ಕೊಲ್ಲಂ ಬಿಷಪ್ ಚರ್ಚ್ ಪಾದ್ರಿ ಪಾಲ್ ಆಂಟೋನಿ ಮುಲ್ಲೇಸರಿ ಕ್ಯಾಥೋಲಿಕ್ ಸಂಘಟನೆಗಳು ಸಂವಿಧಾನ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನ ರಕ್ಷಣಾ ದಿನವನ್ನು ಆಚರಿಸುವಂತೆ ಕರೆ ನೀಡಿದ್ದಾರೆ.

ಭಾರತ ಅಸಮಾನ್ಯ ಸಾಮಾಜಿಕ ಪರಿಸ್ಥಿತಿಯತ್ತ ಸಾಗುತ್ತಿದೆ. ಸಂವಿಧಾನದ ಪ್ರತಿಗೆ ಮುತ್ತಿಟ್ಟು ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ಬಳಿಕ ಸಂವಿಧಾನದ ಮೌಲ್ಯಗಳನ್ನು ಉಲ್ಲಂಘಿಸುವ ಕೆಲಸ ವ್ಯಾಪಕವಾಗಿ ನಡೆಯುತ್ತಿದೆ. ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಮೂಲಕ ಸಂವಿಧಾನದ ಮೌಲ್ಯಗಳನ್ನು ಉಲ್ಲಂಘಿಸಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯ ಮೂಲಕ ಕೇವಲ ಒಂದು ಸಮುದಾಯವನ್ನು ಹೊರಗಿಡುತ್ತಿರುವ ಬಗ್ಗೆ ನಾವು ತೀಕ್ಷ್ಣವಾಗಿ ಮತ್ತು ಗಂಭೀರವಾಗಿ ಪ್ರತಿಕ್ರಿಯೆ ನೀಡಬೇಕಾಗಿದೆ. ಇಲ್ಲಿ ಕ್ರಿಶ್ಚಿಯನ್ನರನ್ನು ಹೊರಗಿಡುವ ಕೆಲಸ ನಡೆಯುತ್ತಿದೆ. ಲೋಕಸಭೆಯಲ್ಲಿ ಆಂಗ್ಲೋ ಇಂಡಿಯನ್ನರಿಗೆ ಖಾತ್ರಿಗೊಳಿಸಿದ್ದ ಮೀಸಲಾತಿಯನ್ನು ನಿಲ್ಲಿಸಿರುವುದು ಮತ್ತು ಮೀಸಲಾತಿಯಿಂದ ದಲಿತ ಕ್ರಿಶ್ಚಿಯನ್ನರನ್ನು ಹೊರಗಿಟ್ಟಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಕೊಲ್ಕತ್ತಾ ಆರ್ಚಬಿಷಪ್ ಥಾಮಸ್ ಡಿಸೋಜ ಮಾತನಾಡಿ ಯುನೈಟೆಡ್ ಇಂಟರ್ ರಿಲಿಜಿಯನ್ ಫೆಡರೇಷನ್ ಕೈಗೊಂಡಿರುವ CAA, NRC ಮತ್ತು NPR ವಿರುದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಮನವಿ ಮಾಡಿದ್ದಾರೆ.

ಪಾರ್ಸಿಗಳು, ಅರೆ ಪಾರ್ಸಿಗಳ ಚರ್ಚುಗಳು ಮಾನವ ಸರಪಳಿಯಲ್ಲಿ ಕೈ ಜೋಡಿಸಿ ಸೌಹಾರ್ದತೆ, ಸಹಭಾಗಿತ್ವವನ್ನು ಸಾರಬೇಕು. ಸಂವಿಧಾನದ ಪ್ರಸ್ತಾವವೆಯನ್ನು ಓದಿ ಸಂವಿಧಾನ ರಕ್ಷಣೆ ದಿನವನ್ನಾಗಿ ಆಚರಿಸಬೇಕು ಎಂದು ಕರೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಜಕ್ಕೂ ಇದೊಂದು ಸ್ವಾಗತಾರ್ಹ ಬೆಳವಣಿಗೆ. ಎಲ್ಲಾ ಧರ್ಮದವರೂ ಇದನ್ನು ಅನುಸರಿಸಬೇಕು.

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...