Homeಕರ್ನಾಟಕಸಂಪುಟ ವಿಸ್ತರಣೆ ಬೆನ್ನಿಗೆ ಬಿಎಸ್​ವೈಗೆ ಶುರುವಾಯ್ತು ಮತ್ತೊಂದು ಕಂಟಕ; ವಿಧಾನ ಪರಿಷತ್ ಟಿಕೆಟ್ ಯಾರಿಗೆ?

ಸಂಪುಟ ವಿಸ್ತರಣೆ ಬೆನ್ನಿಗೆ ಬಿಎಸ್​ವೈಗೆ ಶುರುವಾಯ್ತು ಮತ್ತೊಂದು ಕಂಟಕ; ವಿಧಾನ ಪರಿಷತ್ ಟಿಕೆಟ್ ಯಾರಿಗೆ?

ಒಂದು ವೇಳೆ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಲಿದೆ ಎಂದು ಬಿಂಬಿಸಲಾಗಿರುವ ಸಚಿವ ಸಂಪುಟ ವಿಸ್ತರಣೆಯನ್ನು ಬಿಎಸ್​ವೈ ಯಶಸ್ವಿಯಾಗಿ ನಿಭಾಯಿಸಿದರೂ ಸಹ, ಮುಂದಿನ ವಿಧಾನ ಪರಿಷತ್ ಚುನಾವಣೆ ಅವರ ಪಾಲಿಗೆ ಕತ್ತಿಯಂಚಿನ ದಾರಿಯಂತಾಗಲಿದೆ ಎಂದು ರಾಜ್ಯ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

- Advertisement -
- Advertisement -

ಬೆಂಗಳೂರು (ಜನವರಿ 27); ಹೈಕಮಾಂಡ್​ನೊಂದಿಗೆ ಸತತ ಎರಡು ತಿಂಗಳ ಹಗ್ಗಾಜಗ್ಗಾಟದ ನಂತರ ಕೊನೆಗೂ ಸಚಿವ ಸಂಪುಟ ವಿಸ್ತರಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಅಂತಿಮ ತಯಾರಿ ನಡೆಸುತ್ತಿದ್ದಾರೆ. ಇದಕ್ಕಾಗಿ ವಲಸಿಗರಿಗೆ 9 ಮತ್ತು ಮೂಲ ಬಿಜೆಪಿಗರಿಗೆ 3 ಸಚಿವ ಸ್ಥಾನ ಎಂಬ ಸೂತ್ರವನ್ನು ಸಿದ್ದಪಡಿಸಿದ್ದಾರೆ. ಆದರೆ, ಸಂಪುಟ ವಿಸ್ತರಣೆ ಬೆನ್ನಿಗೆ ವಿಧಾನ ಪರಿಷತ್ ಚುನಾವಣೆ ಎದುರಾಗುತ್ತಿದ್ದು, ಬಿಎಸ್​ವೈ ಎದುರು ಮತ್ತೊಂದು ದೊಡ್ಡ ಕಂಟಕ ಎದುರಾಗುವ ಎಲ್ಲಾ ಸಾಧ್ಯತೆಗಳನ್ನು ತೆರೆದಿಟ್ಟಿದೆ.

ಕಾಂಗ್ರೆಸ್ ಪಕ್ಷದ ರಿಜ್ವಾನ್ ಅರ್ಷದ್ ಅವರ ರಾಜೀನಾಮೆಯಿಂದ ತೆರವಾಗಿದ್ದ 1 ವಿಧಾನ ಪರಿಷತ್ ಸ್ಥಾನಕ್ಕೆ ಮುಂದಿನ ತಿಂಗಳು ಫೆಬ್ರವರಿ 17ಕ್ಕೆ ಚುನಾವಣೆ ನಡೆಯಲಿದೆ. ಆದರೆ, ಇರುವ ಈ ಒಂದು ಸ್ಥಾನವನ್ನು ಯಾರಿಗೆ ನೀಡುವುದು? ಎಂಬುದು ಇದೀಗ ಬಿಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಬೇಕು ಎಂದರೆ ಶತಾಯಗತಾಯ ವಿಧಾನ ಪರಿಷತ್​ಗೆ ಆಯ್ಕೆ ಆಗಲೇಬೇಕು. ಇನ್ನೂ ರಾಣಿಬೆನ್ನೂರು ಮಾಜಿ ಶಾಸಕ ಆರ್. ಶಂಕರ್ ಅವರಿಗೆ ವಿಧಾನ ಪರಿಷತ್​ಗೆ ನಾಮ ನಿರ್ದೇಶನ ಮಾಡಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಏಕೈಕ ಕಾರಣಕ್ಕೆ ಅವರು ಬಿಜೆಪಿ ನಾಯಕರ ಅಣತಿಯಂತೆ ತಮ್ಮ ಶಾಸಕ ಸ್ಥಾನವನ್ನೂ ಬಿಟ್ಟುಕೊಟ್ಟಿದ್ದರು.

ಇದೀಗ ಮುಂದಿನ ತಿಂಗಳು ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿಯ ಇಬ್ಬರು ನಾಯಕರು ಪೈಪೋಟಿ ನಡೆಸುತ್ತಿದ್ದಾರೆ. ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನೀಡದಿದ್ದರೆ, ಉತ್ತರ ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತ ಸಮುದಾಯದ ಮತಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಇನ್ನೂ ಸಚಿವ ಸ್ಥಾನಕ್ಕಾಗಿಯೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸೆ ಬಂದಿರುವ ಆರ್. ಶಂಕರ್​ಗೆ ಸಚಿವ ಸ್ಥಾನ ನೀಡಿ ವಿಧಾನ ಪರಿಷತ್​ಗೆ ಆಯ್ಕೆ ಮಾಡದಿದ್ದರೆ, ವಚನ ಭ್ರಷ್ಟ ಎಂಬ ಅಪಖ್ಯಾತಿ ಬಿಜೆಪಿ ಪಕ್ಷಕ್ಕೆ ಅಂಟಿಕೊಳ್ಳುತ್ತದೆ. ಅಲ್ಲದೆ ಅರ್ಹ ಶಾಸಕರ ಬಣದಲ್ಲಿ ಅಸಮಾಧಾನಕ್ಕೂ ಕಾರಣವಾಗಲಿದೆ.

ಹೀಗಾಗಿ, ಒಂದು ವೇಳೆ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಲಿದೆ ಎಂದು ಬಿಂಬಿಸಲಾಗಿರುವ ಸಚಿವ ಸಂಪುಟ ವಿಸ್ತರಣೆಯನ್ನು ಬಿಎಸ್​ವೈ ಯಶಸ್ವಿಯಾಗಿ ನಿಭಾಯಿಸಿದರೂ ಸಹ, ಮುಂದಿನ ವಿಧಾನ ಪರಿಷತ್ ಚುನಾವಣೆ ಅವರ ಪಾಲಿಗೆ ಕತ್ತಿಯಂಚಿನ ದಾರಿಯಂತಾಗಲಿದೆ ಎಂದು ರಾಜ್ಯ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...