Homeಕರ್ನಾಟಕಸಂಪುಟ ವಿಸ್ತರಣೆ ಬೆನ್ನಿಗೆ ಬಿಎಸ್​ವೈಗೆ ಶುರುವಾಯ್ತು ಮತ್ತೊಂದು ಕಂಟಕ; ವಿಧಾನ ಪರಿಷತ್ ಟಿಕೆಟ್ ಯಾರಿಗೆ?

ಸಂಪುಟ ವಿಸ್ತರಣೆ ಬೆನ್ನಿಗೆ ಬಿಎಸ್​ವೈಗೆ ಶುರುವಾಯ್ತು ಮತ್ತೊಂದು ಕಂಟಕ; ವಿಧಾನ ಪರಿಷತ್ ಟಿಕೆಟ್ ಯಾರಿಗೆ?

ಒಂದು ವೇಳೆ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಲಿದೆ ಎಂದು ಬಿಂಬಿಸಲಾಗಿರುವ ಸಚಿವ ಸಂಪುಟ ವಿಸ್ತರಣೆಯನ್ನು ಬಿಎಸ್​ವೈ ಯಶಸ್ವಿಯಾಗಿ ನಿಭಾಯಿಸಿದರೂ ಸಹ, ಮುಂದಿನ ವಿಧಾನ ಪರಿಷತ್ ಚುನಾವಣೆ ಅವರ ಪಾಲಿಗೆ ಕತ್ತಿಯಂಚಿನ ದಾರಿಯಂತಾಗಲಿದೆ ಎಂದು ರಾಜ್ಯ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

- Advertisement -
- Advertisement -

ಬೆಂಗಳೂರು (ಜನವರಿ 27); ಹೈಕಮಾಂಡ್​ನೊಂದಿಗೆ ಸತತ ಎರಡು ತಿಂಗಳ ಹಗ್ಗಾಜಗ್ಗಾಟದ ನಂತರ ಕೊನೆಗೂ ಸಚಿವ ಸಂಪುಟ ವಿಸ್ತರಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಅಂತಿಮ ತಯಾರಿ ನಡೆಸುತ್ತಿದ್ದಾರೆ. ಇದಕ್ಕಾಗಿ ವಲಸಿಗರಿಗೆ 9 ಮತ್ತು ಮೂಲ ಬಿಜೆಪಿಗರಿಗೆ 3 ಸಚಿವ ಸ್ಥಾನ ಎಂಬ ಸೂತ್ರವನ್ನು ಸಿದ್ದಪಡಿಸಿದ್ದಾರೆ. ಆದರೆ, ಸಂಪುಟ ವಿಸ್ತರಣೆ ಬೆನ್ನಿಗೆ ವಿಧಾನ ಪರಿಷತ್ ಚುನಾವಣೆ ಎದುರಾಗುತ್ತಿದ್ದು, ಬಿಎಸ್​ವೈ ಎದುರು ಮತ್ತೊಂದು ದೊಡ್ಡ ಕಂಟಕ ಎದುರಾಗುವ ಎಲ್ಲಾ ಸಾಧ್ಯತೆಗಳನ್ನು ತೆರೆದಿಟ್ಟಿದೆ.

ಕಾಂಗ್ರೆಸ್ ಪಕ್ಷದ ರಿಜ್ವಾನ್ ಅರ್ಷದ್ ಅವರ ರಾಜೀನಾಮೆಯಿಂದ ತೆರವಾಗಿದ್ದ 1 ವಿಧಾನ ಪರಿಷತ್ ಸ್ಥಾನಕ್ಕೆ ಮುಂದಿನ ತಿಂಗಳು ಫೆಬ್ರವರಿ 17ಕ್ಕೆ ಚುನಾವಣೆ ನಡೆಯಲಿದೆ. ಆದರೆ, ಇರುವ ಈ ಒಂದು ಸ್ಥಾನವನ್ನು ಯಾರಿಗೆ ನೀಡುವುದು? ಎಂಬುದು ಇದೀಗ ಬಿಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತನ್ನ ಸ್ಥಾನವನ್ನು ಉಳಿಸಿಕೊಳ್ಳಬೇಕು ಎಂದರೆ ಶತಾಯಗತಾಯ ವಿಧಾನ ಪರಿಷತ್​ಗೆ ಆಯ್ಕೆ ಆಗಲೇಬೇಕು. ಇನ್ನೂ ರಾಣಿಬೆನ್ನೂರು ಮಾಜಿ ಶಾಸಕ ಆರ್. ಶಂಕರ್ ಅವರಿಗೆ ವಿಧಾನ ಪರಿಷತ್​ಗೆ ನಾಮ ನಿರ್ದೇಶನ ಮಾಡಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಏಕೈಕ ಕಾರಣಕ್ಕೆ ಅವರು ಬಿಜೆಪಿ ನಾಯಕರ ಅಣತಿಯಂತೆ ತಮ್ಮ ಶಾಸಕ ಸ್ಥಾನವನ್ನೂ ಬಿಟ್ಟುಕೊಟ್ಟಿದ್ದರು.

ಇದೀಗ ಮುಂದಿನ ತಿಂಗಳು ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿಯ ಇಬ್ಬರು ನಾಯಕರು ಪೈಪೋಟಿ ನಡೆಸುತ್ತಿದ್ದಾರೆ. ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನೀಡದಿದ್ದರೆ, ಉತ್ತರ ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತ ಸಮುದಾಯದ ಮತಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಇನ್ನೂ ಸಚಿವ ಸ್ಥಾನಕ್ಕಾಗಿಯೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸೆ ಬಂದಿರುವ ಆರ್. ಶಂಕರ್​ಗೆ ಸಚಿವ ಸ್ಥಾನ ನೀಡಿ ವಿಧಾನ ಪರಿಷತ್​ಗೆ ಆಯ್ಕೆ ಮಾಡದಿದ್ದರೆ, ವಚನ ಭ್ರಷ್ಟ ಎಂಬ ಅಪಖ್ಯಾತಿ ಬಿಜೆಪಿ ಪಕ್ಷಕ್ಕೆ ಅಂಟಿಕೊಳ್ಳುತ್ತದೆ. ಅಲ್ಲದೆ ಅರ್ಹ ಶಾಸಕರ ಬಣದಲ್ಲಿ ಅಸಮಾಧಾನಕ್ಕೂ ಕಾರಣವಾಗಲಿದೆ.

ಹೀಗಾಗಿ, ಒಂದು ವೇಳೆ ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಲಿದೆ ಎಂದು ಬಿಂಬಿಸಲಾಗಿರುವ ಸಚಿವ ಸಂಪುಟ ವಿಸ್ತರಣೆಯನ್ನು ಬಿಎಸ್​ವೈ ಯಶಸ್ವಿಯಾಗಿ ನಿಭಾಯಿಸಿದರೂ ಸಹ, ಮುಂದಿನ ವಿಧಾನ ಪರಿಷತ್ ಚುನಾವಣೆ ಅವರ ಪಾಲಿಗೆ ಕತ್ತಿಯಂಚಿನ ದಾರಿಯಂತಾಗಲಿದೆ ಎಂದು ರಾಜ್ಯ ರಾಜಕೀಯ ಪಂಡಿತರು ವಿಶ್ಲೇಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...