Homeಮುಖಪುಟದುಷ್ಕರ್ಮಿ ಗುಂಡು ಹಾರಿಸುವಾಗ ಪೊಲೀಸರು ಕೈಕಟ್ಟಿ ನಿಂತಿದ್ದೇಕೆ? ದೆಹಲಿ ಪೊಲೀಸರ ವಿರುದ್ಧ ದೇಶವ್ಯಾಪಿ ಖಂಡನೆ

ದುಷ್ಕರ್ಮಿ ಗುಂಡು ಹಾರಿಸುವಾಗ ಪೊಲೀಸರು ಕೈಕಟ್ಟಿ ನಿಂತಿದ್ದೇಕೆ? ದೆಹಲಿ ಪೊಲೀಸರ ವಿರುದ್ಧ ದೇಶವ್ಯಾಪಿ ಖಂಡನೆ

ಇದಕ್ಕೆ ಪ್ರೇರೇಪಣೆ ಕೊಟ್ಟಿದ್ದಕ್ಕಾಗಿ ಅನುರಾಗ್ ಠಾಕೂರ್ ಅವರನ್ನು ಈಗ ಬಂಧಿಸಲಾಗುತ್ತದೆಯೇ? ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಸಿಎಎ ವಿರುದ್ಧ ಪ್ರತಿಭಟಿಸುತ್ತಿದ್ದ ಜನರ ಮೇಲೆ ಇಂದು ಮಧ್ಯಾಹ್ನ ಅಪರಿಚಿತ ವ್ಯಕ್ತಿ ಗುಂಡು ಹಾರಿಸಿದ್ದು, ಅದನ್ನು ತಡೆಯದೇ ಕೈಕಟ್ಟಿ ನಿಂತಿದ್ದ ಪೊಲೀಸರ ವಿರುದ್ಧ ದೇಶಾವ್ಯಾಪಿ ಖಂಡನೆ ವ್ಯಕ್ತವಾಗಿದೆ.

ಕೆಲ ದಿನಗಳ ಹಿಂದೆ ಅನುರಾಗ್ ಠಾಕೂರ್ ’ದೇಶ್ ಕೆ ಗಡ್ಡಾರೊ ಕೊ ಗೋಲಿ ಮಾರೊ ಸಾಲೋ ಕೋ’ (ದೇಶದೊಳಗಿನ ದೇಶದ್ರೋಹಿಗಳನ್ನು ಗುಂಡು ಹೊಡೆದು ಸಾಯಿಸಿ) ಎಂದು ಘೋಷಣೆ ಕೂಗಿದ್ದರು. ಇಂದು ನಾನು ನಿಮಗೆ ಅಜಾದಿ ನೀಡುತ್ತೇನೆ ಎಂದು ಕೂಗುತ್ತಾ ಜಾಮಿಯಾ ವಿದ್ಯಾರ್ಥಿಗಳ ಮೇಲೆ ಒಬ್ಬ ಗುಂಡು ಹಾರಿಸಿದ್ದಾನೆ. ಇದಕ್ಕೆ ಪ್ರೇರೇಪಣೆ ಕೊಟ್ಟಿದ್ದಕ್ಕಾಗಿ ಅನುರಾಗ್ ಠಾಕೂರ್ ಅವರನ್ನು ಈಗ ಬಂಧಿಸಲಾಗುತ್ತದೆಯೇ? ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಗಾಂಧಿಯವರ ಮರಣದಿನದಂದು ಒಬ್ಬ ವ್ಯಕ್ತಿಯು ಸಾರ್ವಜನಿಕವಾಗಿ ಬಂದೂಕಿನಿಂದ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸುತ್ತಾನೆ. ಬಿಜೆಪಿ ನಿಯಂತ್ರಿತ ದೆಹಲಿ ಪೊಲೀಸರು ಹಿಂದೆ ನಿಂತು ಅವನನ್ನು ನೋಡುತ್ತಿದ್ದಾರೆ. ಇದಕ್ಕೂ ಮೊದಲು ಬಿಜೆಪಿ ನಾಯಕರು ಗೋಲಿ ಮಾರೊ ಎಂಬ ಘೋಷಣೆಗಳನ್ನು ಕೂಗಿದ್ದರು. ಈ ಪಕ್ಷವು ಇಡೀ ರಾಷ್ಟ್ರವನ್ನು ರಾಜಕೀಯಕ್ಕಾಗಿ ಸುಡಬಹುದು ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಕಿಡಿಕಾರಿದ್ದಾರೆ.

ಅಸಾದುದ್ದೀನ್‌ ಒವೈಸಿ ಟ್ವೀಟ್‌ ಮಾಡಿ, “ದೆಹಲಿ ಪೊಲೀಸರೆ, ಕಳೆದ ತಿಂಗಳು ಜಾಮಿಯಾದಲ್ಲಿ ವಿದ್ಯಾರ್ಥಿಗಳ ಮೇಲೆ ನೀವು ತೋರಿಸಿದ ಧೈರ್ಯಶಾಲಿ ಏನಾಯಿತು? ‘ಅಸಹಾಯಕ’ ಪ್ರೇಕ್ಷಕರಾಗಿರುವುದಕ್ಕೆ ಬಹುಮಾನವಿದ್ದರೆ, ನೀವು ಅದನ್ನು ಪ್ರತಿ ಬಾರಿಯೂ ಗೆಲ್ಲುತ್ತೀರಿ. ಗುಂಡೇಟಿಗೆ ಬಲಿಯಾದವನು ಬ್ಯಾರಿಕೇಡ್‌ನ ಮೇಲೆ ಹತ್ತಲು ಏಕೆ ಬಿಟ್ಟಿರಿ ಎಂಬುದನ್ನು ನೀವು ವಿವರಿಸಬಹುದೇ? ನಿಮ್ಮ ಸೇವಾ ನಿಯಮಗಳು ನಿಮ್ಮನ್ನು ಮಾನವೀಯತೆಯಿಂದ ತಡೆಯುತ್ತವೆಯೇ?” ಎಂದು ಪ್ರಶ್ನಿಸಿದ್ದಾರೆ.

ಅರೆಸ್ಟ್‌ ಅನುರಾಗ್‌ ಠಾಕೂರ್‌ ಎಂಬ ಹ್ಯಾಸ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಗಿದೆ. ಈ ಘಟನೆಗೆ ಅವರೆ  ಹೊಣೆಹೊರಬೇಕು, ಅವರನ್ನು ಬಂಧಿಸಬೇಕು ಎಂಬ ಒತ್ತಾಯ ಬಲವಾಗಿ ಕೇಳಿಬಂದಿದೆ.

ಪ್ರತಿಭಟನಾಕಾರರ ಮೇಲೆ “ಯೆ ಲೋ ಆಜಾದಿ (ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ) ಎಂದು ಕೂಗಿ ಗುಂಡು ಹಾರಿಸಿದ ವ್ಯಕ್ತಿಯನ್ನು ಗೋಪಾಲ್‌ ಎಂದು ಗುರುತಿಸಲಾಗಿದ್ದು ಸದ್ಯಕ್ಕೆ ಪೊಲೀಸ್‌ ಕಸ್ಟಡಿಯಲ್ಲಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...