Homeಮುಖಪುಟಜಾಮಿಯದಲ್ಲಿ ಗುಂಡು ಹೊಡೆಯುವ ಮುನ್ನ ಆ ದುಷ್ಕರ್ಮಿ ಫೇಸ್‌ಬುಕ್‌ ಲೈವ್‌ನಲ್ಲಿ ಹೇಳಿದ್ದೇನು?

ಜಾಮಿಯದಲ್ಲಿ ಗುಂಡು ಹೊಡೆಯುವ ಮುನ್ನ ಆ ದುಷ್ಕರ್ಮಿ ಫೇಸ್‌ಬುಕ್‌ ಲೈವ್‌ನಲ್ಲಿ ಹೇಳಿದ್ದೇನು?

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಸಿಎಎ ವಿರುದ್ಧ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ವ್ಯಕ್ತಿ, ಘಟನೆಗೆ ಕೆಲವೇ ನಿಮಿಷಗಳ ಮೊದಲು ತನ್ನ ಎಲ್ಲಾ ಚಟುವಟಿಕೆಗಳನ್ನು ಫೇಸ್‌ಬುಕ್‌ನಲ್ಲಿ ನೇರಪ್ರಸಾರ ಮಾಡಿರುವುದು ಕಂಡುಬಂದಿದೆ.

ಗುಂಡು ಹೊಡೆದ ಘಟನೆಯ ನಂತರ ವೈರಲ್ ಆಗಿರುವ ವಿಡಿಯೋದಲ್ಲಿ ಪೊಲೀಸರು ಕರೆದೊಯ್ಯುವಾಗ ದಾಳಿಕೋರನು ತನ್ನನ್ನು ‘ರಾಮ್‌ಭಕ್ತ್‌ ಗೋಪಾಲ್’ ಎಂದು ಗುರುತಿಸಿಕೊಂಡಿದ್ದಾನೆ.

Posted by Rambhakt Gopal on Thursday, January 30, 2020

ಫೇಸ್‌ಬುಕ್‌ನಲ್ಲಿ ಗೋಪಾಲ್ ಅವರ ಬಯೋ ಹೇಳುವಂತೆ ‘ರಾಮ್‌ಭಕ್ತ್‌, ಸಾಕು ವಿಶ್ರಾಂತಿ, ಸಮಯ ಬಂದಿದೆ’. ಅಂತಿಮವಾಗಿ ಜಾಮಿಯಾ ವಿದ್ಯಾರ್ಥಿಗಳಿಗೆ ಗುಂಡು ಹಾರಿಸುವ ಮೊದಲು ಅವನು ಕೆಲವು ಬಾರಿ ಫೇಸ್‌ಬುಕ್‌ನಲ್ಲಿ ಲೈವ್‌ ಬಂದಿದ್ದಾನೆ. ಅವನ ಕೆಲವು ವೀಡಿಯೊಗಳು ಪ್ರತಿಭಟನೆಯ ನೋಟವನ್ನು ತೋರಿಸಿದರೆ, ಇತರ ಕೆಲವು ವಿಡಿಯೋಗಳಲ್ಲಿ ಮೊಬೈಲ್‌ನ ಸೆಲ್ಫಿ ಕ್ಯಾಮೆರಾವನ್ನು ಬಳಸಿದ್ದಾನೆ.

ದೆಹಲಿಯ ಶಾಹೀನ್ ಬಾಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಅವನು ತೆಗೆದುಕೊಳ್ಳಲು ಯೋಜಿಸುತ್ತಿರುವ ಪ್ರತೀಕಾರದ ಬಗ್ಗೆ ಹಲವು ಪೋಸ್ಟ್‌‌ಗಳನ್ನು ಮಾಡಿದ್ದಾನೆ. “ಶಾಹೀನ್ ಬಾಗ್ … ಆಟ ಮುಗಿದಿದೆ” ಎಂಬುದು ಅವನ ಪೋಸ್ಟ್‌ಗಳಲ್ಲಿ ಒಂದಾಗಿದ್ದು ಅದನ್ನು ಏಳುನೂರಕ್ಕೂ ಹೆಚ್ಚು ಜನರು ಲೈಕ್‌ ಮಾಡಿದ್ದಾರೆ.

ಅಲ್ಲದೇ ಮತ್ತೊಂದು ಪೋಸ್ಟ್‌ನಲ್ಲಿ ಇಲ್ಲಿ ಹಿಂದೂ ಮಾಧ್ಯಮಗಳು ಒಂದೂ ಇಲ್ಲ ಎಂದು ಪೋಸ್ಟ್‌ ಮಾಡಿದ್ದಾನೆ. ಒಟ್ಟಿನಲ್ಲಿ ಈತನ ಪೋಸ್ಟ್‌ಗಳ್ಲಿ ವಿಪರೀತ ದ್ವೇಷವೇ ತುಂಬಿಕೊಂಡಿದೆ. ಈ ಪ್ರತಿಕಾರವನ್ನು ಚಂದನ್‌ ಅಣ್ಣನಿಗೆ ಅರ್ಪಿಸುತ್ತೇನೆ ಎಂದು ಬರೆದುಕೊಂಡಿದ್ದಾನೆ. ನಾನೋಬ್ಬನೇ ಹಿಂದು ಇಲ್ಲಿರುವುದು ಎಂದು ಬರೆದಿದ್ದಾನೆ. ನನ್ನ ಕುಟುಂಬದ ಬಗ್ಗೆ ಕಾಳಜಿ ವಹಿಸಿ,

ಒಂದು ಪೋಸ್ಟ್‌ನಲ್ಲಿ, ತನಗೆ ಕರೆ ಮಾಡದಂತೆ ತನ್ನ ಫೇಸ್‌ಬುಕ್ ಸ್ನೇಹಿತರನ್ನು ಒತ್ತಾಯಿಸಿದ್ದಾನೆ. ಎಲ್ಲಾ ಪೋಸ್ಟ್‌ಗಳು ಹಿಂದಿಯಲ್ಲಿವೆ.

ಆತನ ಫೇಸ್‌ಬುಕ್‌ ಕವರ್‌ ಫೋಟೊದಲ್ಲಿ ಆತ ಹರಿತವಾದ ತಲ್ವಾರ್‌(ಮಚ್ಚು)ಗೆ ಮುತ್ತು ಕೊಡುತ್ತಿರುವ ಫೋಟೊ ಹಾಕಿದ್ದಾನೆ. ಕೇಸರಿ ಬಣ್ಣದ ಬಟ್ಟೆಗಳ ಅವನ ಫೋಟೊಗಳು ಫೇಸ್‌ಬುಕ್‌ನಲ್ಲಿವೆ. ಜೈಶ್ರೀರಾಮ್‌,

ಪಿಸ್ತೂಲ್ ಹೊತ್ತುಕೊಂಡಿದ್ದ ಗೋಪಾಲ್ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದು, ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಜನಸಮೂಹವು ಅವನನ್ನು ಹಿಡಿಯಿತು ಮತ್ತು ನಂತರ ಪೊಲೀಸರು ಆ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

“ನಾವು ಹೋಲಿ ಫ್ಯಾಮಿಲಿ ಆಸ್ಪತ್ರೆಯತ್ತ ಸಾಗುತ್ತಿದ್ದೆವು, ಅಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಇದ್ದಕ್ಕಿದ್ದಂತೆ, ಬಂದೂಕು ಹಿಡಿದ ವ್ಯಕ್ತಿಯೊಬ್ಬರು ಹೊರಗೆ ಬಂದು ಗುಂಡು ಹಾರಿಸಿದರು. ಒಂದು ಗುಂಡು ನನ್ನ ಸ್ನೇಹಿತನ ಕೈಗೆ ಬಡಿಯಿತು ”ಎಂದು ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ವಿದ್ಯಾರ್ಥಿನಿ ಆಮ್ನಾ ಆಸಿಫ್ ಪಿಟಿಐಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...