Homeಮುಖಪುಟಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು... ಆದರೆ?

ಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು… ಆದರೆ?

- Advertisement -
- Advertisement -

ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಕಾಯಂ, ಡಿಸೆಂಬರ್ ಮುಗಿಯಲಿ ನೋಡೋಣ, ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆ ಒಳ್ಳೆಯದಲ್ಲ, ಸಂಕ್ರಾಂತಿಯೊಂದು ಆಗಿಬಿಡಲಿ, ದಾವೋಸ್ ಸಮ್ಮೇಳನ ನಂತರ ಸಂಪುಟ ವಿಸ್ತರಣೆ ಖಚಿತ… ಅಬ್ಬಬ್ಬಾ! ಭಾಗಶಃ ಕಳೆದ ಎರಡು ತಿಂಗಳಿನ ಅವಧಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಿಎಎ ನಂತರ ಅತಿಹೆಚ್ಚು ಗಮನ ಸೆಳೆದ ವಿಚಾರ ಎಂದರೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ಇರಬೇಕು.

ಬಿಎಸ್‌ವೈ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಸಚಿವರಿಲ್ಲದೆ ಒನ್ ಮ್ಯಾನ್ ಶೋ ನೀಡುತ್ತಿದ್ದ ಸಂದರ್ಭದಲ್ಲೂ ಸಹ ಸಂಪುಟ ರಚನೆಗೆ ಇಷ್ಟೇ ವಿಳಂಬವಾಗಿತ್ತು ಎಂಬುದು ಉಲ್ಲೇಖಾರ್ಹ.

ಹಾಗೆ ನೋಡಿದರೆ, ಸಂಪುಟ ವಿಸ್ತರಣೆ ಮಾಡುವುದು ಶಿಸ್ತಿನ ಪಕ್ಷ ಎನಿಸಿಕೊಂಡ ಬಿಜೆಪಿಯಲ್ಲಿ ದೊಡ್ಡ ವಿಚಾರ ಏನಲ್ಲ. ಆದರೆ, ಅಧಿಕಾರದ ವಿಚಾರದಲ್ಲಿ ಯಾವ ಶಾಸಕನನ್ನೂ ಮುಂಚಿನಂತೆ ಶಿಸ್ತಿನ ಹೆಸರಲ್ಲಿ ಕಟ್ಟಿಹಾಕಲು ಸಾಧ್ಯವಿಲ್ಲ. ಸ್ವಲ್ಪ ಎಡವಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಂತೆ ಬಿಜೆಪಿ ಸರ್ಕಾರವೂ ಅತೃಪ್ತರ ಭಿನ್ನಮತದಿಂದ ಪತನಗೊಳ್ಳುವುದು ಗ್ಯಾರಂಟಿ ಎಂಬ ವಿಚಾರ ತಿಳಿಯದ ಅಮಾಯಕರೇನಲ್ಲ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್.

ಇದೇ ಕಾರಣಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇತ್ತು. ಆದರೆ, ಎಷ್ಟೇ ದಿನವಾದರೂ ಗಜಪ್ರಸವ ಕೊನೆಗೊಂದು ದಿನ ಆಗಲೇಬೇಕಲ್ಲ. ಆ ಕಾಲ ಸನ್ನಿಹಿತವಾಗಿದೆ. ಜನವರಿ ೩೧ ರಂದು ಶತಾಯಗತಾಯ ಸಂಪುಟ ವಿಸ್ತರಣೆ ಆಗಲೇಬೇಕು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ೧೨ಜನರಿಗೆ ಸಚಿವ ಸ್ಥಾನ ನೀಡಲು ಉದ್ದೇಶಿಸಿರುವ ಯಡಿಯೂರಪ್ಪ ೯-೩ ಸೂತ್ರಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಪಕ್ಷದೊಳಗಿನ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಇದರ ಎರಡರಷ್ಟಿದೆ. ಇನ್ನೂ ಅರ್ಹ ಶಾಸಕರ ಗುಂಪಿನಲ್ಲೂ ಎದ್ದಿರುವ ಭಿನ್ನಮತವನ್ನು ಶಮನಗೊಳಿಸುವುದು ಬಿಜೆಪಿಗೆ ಅಷ್ಟು ಸುಲಭದ ಮಾತಲ್ಲ.

ಬಿಜೆಪಿಯಲ್ಲಿ ೩ ಸ್ಥಾನಕ್ಕೆ
೩೦ ಜನರ ಲಾಬಿ
ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಈಗಾಗಲೇ ಸ್ವತಃ ಯಡಿಯೂರಪ್ಪ ಸ್ಪಷ್ಟಪಡಿಸಿರುವಂತೆ ೧೨ ಜನರಿಗೆ ಮಾತ್ರ ಸಚಿವ ಸ್ಥಾನ ಈ ಪೈಕಿ ೯ ಸ್ಥಾನ ವಲಸೆ/ಅರ್ಹ ಶಾಸಕರ ಪಾಲಾದರೆ, ಉಳಿದ ಮೂರು ಸ್ಥಾನಗಳು ಮಾತ್ರ ಮೂಲ ಬಿಜೆಪಿಗರಿಗೆ ಎನ್ನಲಾಗುತ್ತಿದೆ.

ಈ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ ಈಗಾಗಲೇ ಶಾಸಕರನ್ನು ಫೈನಲ್ ಮಾಡಲಾಗಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಹಾಗೆ ನೋಡಿದರೆ ಮೂಲ ಬಿಜೆಪಿಗರಿಗೆ ಉಳಿಯುವುದು ಇನ್ನೂ ಒಂದು ಸ್ಥಾನ ಮಾತ್ರ. ಆದರೆ, ಈ ಒಂದು ಸ್ಥಾನಕ್ಕೆ ಸುಮಾರು ೩೦ ಜನ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ.

ಹಿರಿಯ ಶಾಸಕರಾದ ದತ್ತಾತ್ರೇಯ ರೇವೂರ್ ಪಾಟೀಲ್, ಎಸ್. ಅಂಗಾರ, ಎಸ್.ಎ. ರಾಮದಾಸ್, ಮುರುಗೇಶ್ ನಿರಾಣಿ, ಅಪ್ಪಚ್ಚು ರಂಜನ್, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಪೂರ್ಣಿಮ ಶ್ರೀನಿವಾಸ್, ಜಿ. ರಾಜುಗೌಡ, ವಿ. ಸುನೀಲ್‌ಕುಮಾರ್, ಹಾಲಪ್ಪ ಆಚಾರ್ ಹೀಗೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.

ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಲಿರುವ ಕತ್ತಿ
ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕರ ಪೈಕಿ ಉಮೇಶ್ ಕತ್ತಿ ಅಗ್ರಗಣ್ಯರು. ಸತತ ೮ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕತ್ತಿ ಬೆನ್ನ ಹಿಂದೆ ರಾಜ್ಯದಲ್ಲಿ ಬೃಹತ್ ಮತಬ್ಯಾಂಕ್ ಹೊಂದಿರುವ ಲಿಂಗಾಯತ ಸಮಾಜ ಇದೆ. ಇದೇ ಧೈರ್ಯದಲ್ಲಿ ಕೆಲ ದಿನಗಳ ಹಿಂದೆ ಅವರು ಸ್ವತಂತ್ರ‍್ಯ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಮುಂದಿಟ್ಟಿದ್ದರು.

ಆದರೆ, ಬಿಎಸ್‌ವೈ ಸಂಪುಟದಲ್ಲಿ ಎಲ್ಲಾ ಸಮಾಜದವರಿಗೂ ಅವಕಾಶ ಮಾಡಿಕೊಡಬೇಕು ಎಂಬ ಏಕೈಕ ಉದ್ದೇಶದಿಂದ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಹೇಗಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂದು ನಿರ್ಧರಿಸಿದ್ದ ಕತ್ತಿ ಕಳೆದ ಆರು ತಿಂಗಳಿನಿAದ ಪ್ರತಿನಿತ್ಯ ಯಡಿಯೂರಪ್ಪನವರ ಮನೆಗೆ ಎಡತಾಕುತ್ತಿದ್ದರು. ಆದರೆ, ಈ ಎಲ್ಲಾ ಪ್ರಯತ್ನ ವಿಫಲವಾಗಿವೆ. ಪರಿಣಾಮ ಇದೀಗ ಕತ್ತಿ ನೇರವಾಗಿ ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ನಾಯಕರಿಂದ ಒತ್ತಡ ಹೇರಲು ಮುಂದಾಗಿದ್ದಾರೆ.

ಇಷ್ಟಾದರೂ ಒಂದು ವೇಳೆ ಉಮೇಶ್ ಕತ್ತಿಗೆ ಸಚಿವ ಸ್ಥಾನ ನಿರಾಕರಿಸಿದರೆ ಅವರು ಸುಮ್ಮನೆ ಕೂರುವವರಲ್ಲ. ರಾಜಕೀಯವಾಗಿ ಭವಿಷ್ಯದಲ್ಲಿ ಅವರು ಏನೇ ತಂತ್ರ ಹೂಡಿದರೂ ಅದರ ಫಲವನ್ನು ಯಡಿಯೂರಪ್ಪ ಅನುಭವಿಸಲೇಬೇಕು.

ಅರ್ಹ/ಅತೃಪ್ತರ ಆತ್ಮಗಳಿಗೂ
ಸಿಗದ ಶಾಂತಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಏಕೈಕ ಕಾರಣಕ್ಕ ೧೭ ಜನ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರವನ್ನು ಬೀಳಿಸಿ ಬಿಜೆಪಿಗೆ ಹಾರಿದ್ದರು. ಸಚಿವ ಸ್ಥಾನದ ಆಸೆಯಿಂದಲೇ ಅವರೆಲ್ಲಾ ಬಿಜೆಪಿ ಪಾಲಾದರು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ. ಆದರೆ, ಕಳೆದ ಉಪ ಚುನಾವಣೆಯ ನಂತರ ಈ ಎಲ್ಲಾ ಅರ್ಹ/ಅತೃಪ್ತ ಶಾಸಕರದ್ದೂ ಒಬ್ಬೊಬ್ಬರದ್ದು ಒಂದೊAದು ಕಥೆ ಎಂಬಂತಾಗಿದೆ.

೧೫ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಪೈಕಿ ೧೨ ಕ್ಷೇತ್ರದಲ್ಲಿ ಅನರ್ಹ ಶಾಸಕರು ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮಾತಿಗೆ ಕಟ್ಟುಬಿದ್ದ ರಾಣಿಬೆನ್ನೂರು ಕ್ಷೇತ್ರದ ಆರ್.ಶಂಕರ್ ವಿಧಾನ ಪರಿಷತ್‌ಗೆ ನಾಮ ನಿರ್ದೇಶನಗೊಂಡು ಸಚಿವನಾಗುವ ಆಸೆಯಿಂದ ಶಾಸಕ ಸ್ಥಾನವನ್ನೂ ತ್ಯಾಗ ಮಾಡಿದ್ದಾರೆ. ಇನ್ನೂ ಚುನಾವಣೆಯಲ್ಲಿ ಸೋಲನುಭವಿಸಿರುವ ಎಂಟಿಬಿ ನಾಗರಾಜ್ ಮತ್ತು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಸಹ ಪ್ರಮುಖ ಸಚಿವ ಸ್ಥಾನ ಆಕಾಂಕ್ಷಿಗಳು.
ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ ೯ ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ ೧೫. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

ಈ ೧೫ ಜನರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಕಾರಣಕ್ಕೆ ಇವರು ಮೈತ್ರಿ ಸರ್ಕಾರವನ್ನೇ ಬೀಳಿಸಿದ್ದರು. ಆದರೆ, ಪ್ರಸ್ತುತ ಈ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡದಿದ್ದರೂ ಸಹ ಮುಂದಾಗಬಹುದಾದ ಪರಿಣಾಮ ಏನು? ಎಂಬುದು ಇದೀಗ ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ತಲೆನೋವಿಗೆ ಕಾರಣವಾಗಿದೆ.

ಇನ್ನೂ ಫೆ.೧೭ಕ್ಕೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಇರುವ ಒಂದು ಸ್ಥಾನಕ್ಕೆ ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ಸ್ಥಾನ ಸವದಿಗೆ ಖಾಯಂ ಎನ್ನಲಾಗುತ್ತಿದೆ. ಇದು ಸಾಧ್ಯವಾದರೆ ಆರ್.ಶಂಕರ್ ಸ್ಥಿತಿ ಇರುವುದಲ್ಲೇ ಶೋಚನೀಯ ಎಂಬಂತಾಗುವುದರಲ್ಲಿ ಎರಡು ಮಾತಿಲ್ಲ.

ಒಟ್ಟಿನಲ್ಲಿ ಬಿಜೆಪಿ ಸಂಪುಟ ರಚನೆಗೆ ತೆಗೆದುಕೊಂಡದ್ದಕ್ಕಿಂತ ಹೆಚ್ಚಿನ ಸಮಯವನ್ನು ಸಂಪುಟ ವಿಸ್ತರಣೆ ತೆಗೆದುಕೊಂಡಿದೆ. ಆದರೂ, ಈವರೆಗೆ ಯಾವುದೇ ವಿವಾದವಿಲ್ಲದೆ, ಸಂಪುಟ ವಿಸ್ತರಣೆಯಾಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಮುಂದಿನ ಒಂದು ವಾರಗಳ ಕಾಲ ಯಡಿಯೂರಪ್ಪನವರದ್ದು ಮಾತ್ರ ಬೆಂಕಿ ಮೇಲಿನ ನಡೆ ಎನ್ನಲು ಅಡ್ಡಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...