Homeಮುಖಪುಟಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು... ಆದರೆ?

ಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು… ಆದರೆ?

- Advertisement -
- Advertisement -

ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಕಾಯಂ, ಡಿಸೆಂಬರ್ ಮುಗಿಯಲಿ ನೋಡೋಣ, ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆ ಒಳ್ಳೆಯದಲ್ಲ, ಸಂಕ್ರಾಂತಿಯೊಂದು ಆಗಿಬಿಡಲಿ, ದಾವೋಸ್ ಸಮ್ಮೇಳನ ನಂತರ ಸಂಪುಟ ವಿಸ್ತರಣೆ ಖಚಿತ… ಅಬ್ಬಬ್ಬಾ! ಭಾಗಶಃ ಕಳೆದ ಎರಡು ತಿಂಗಳಿನ ಅವಧಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಿಎಎ ನಂತರ ಅತಿಹೆಚ್ಚು ಗಮನ ಸೆಳೆದ ವಿಚಾರ ಎಂದರೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ಇರಬೇಕು.

ಬಿಎಸ್‌ವೈ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಸಚಿವರಿಲ್ಲದೆ ಒನ್ ಮ್ಯಾನ್ ಶೋ ನೀಡುತ್ತಿದ್ದ ಸಂದರ್ಭದಲ್ಲೂ ಸಹ ಸಂಪುಟ ರಚನೆಗೆ ಇಷ್ಟೇ ವಿಳಂಬವಾಗಿತ್ತು ಎಂಬುದು ಉಲ್ಲೇಖಾರ್ಹ.

ಹಾಗೆ ನೋಡಿದರೆ, ಸಂಪುಟ ವಿಸ್ತರಣೆ ಮಾಡುವುದು ಶಿಸ್ತಿನ ಪಕ್ಷ ಎನಿಸಿಕೊಂಡ ಬಿಜೆಪಿಯಲ್ಲಿ ದೊಡ್ಡ ವಿಚಾರ ಏನಲ್ಲ. ಆದರೆ, ಅಧಿಕಾರದ ವಿಚಾರದಲ್ಲಿ ಯಾವ ಶಾಸಕನನ್ನೂ ಮುಂಚಿನಂತೆ ಶಿಸ್ತಿನ ಹೆಸರಲ್ಲಿ ಕಟ್ಟಿಹಾಕಲು ಸಾಧ್ಯವಿಲ್ಲ. ಸ್ವಲ್ಪ ಎಡವಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಂತೆ ಬಿಜೆಪಿ ಸರ್ಕಾರವೂ ಅತೃಪ್ತರ ಭಿನ್ನಮತದಿಂದ ಪತನಗೊಳ್ಳುವುದು ಗ್ಯಾರಂಟಿ ಎಂಬ ವಿಚಾರ ತಿಳಿಯದ ಅಮಾಯಕರೇನಲ್ಲ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್.

ಇದೇ ಕಾರಣಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇತ್ತು. ಆದರೆ, ಎಷ್ಟೇ ದಿನವಾದರೂ ಗಜಪ್ರಸವ ಕೊನೆಗೊಂದು ದಿನ ಆಗಲೇಬೇಕಲ್ಲ. ಆ ಕಾಲ ಸನ್ನಿಹಿತವಾಗಿದೆ. ಜನವರಿ ೩೧ ರಂದು ಶತಾಯಗತಾಯ ಸಂಪುಟ ವಿಸ್ತರಣೆ ಆಗಲೇಬೇಕು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ೧೨ಜನರಿಗೆ ಸಚಿವ ಸ್ಥಾನ ನೀಡಲು ಉದ್ದೇಶಿಸಿರುವ ಯಡಿಯೂರಪ್ಪ ೯-೩ ಸೂತ್ರಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಪಕ್ಷದೊಳಗಿನ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಇದರ ಎರಡರಷ್ಟಿದೆ. ಇನ್ನೂ ಅರ್ಹ ಶಾಸಕರ ಗುಂಪಿನಲ್ಲೂ ಎದ್ದಿರುವ ಭಿನ್ನಮತವನ್ನು ಶಮನಗೊಳಿಸುವುದು ಬಿಜೆಪಿಗೆ ಅಷ್ಟು ಸುಲಭದ ಮಾತಲ್ಲ.

ಬಿಜೆಪಿಯಲ್ಲಿ ೩ ಸ್ಥಾನಕ್ಕೆ
೩೦ ಜನರ ಲಾಬಿ
ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಈಗಾಗಲೇ ಸ್ವತಃ ಯಡಿಯೂರಪ್ಪ ಸ್ಪಷ್ಟಪಡಿಸಿರುವಂತೆ ೧೨ ಜನರಿಗೆ ಮಾತ್ರ ಸಚಿವ ಸ್ಥಾನ ಈ ಪೈಕಿ ೯ ಸ್ಥಾನ ವಲಸೆ/ಅರ್ಹ ಶಾಸಕರ ಪಾಲಾದರೆ, ಉಳಿದ ಮೂರು ಸ್ಥಾನಗಳು ಮಾತ್ರ ಮೂಲ ಬಿಜೆಪಿಗರಿಗೆ ಎನ್ನಲಾಗುತ್ತಿದೆ.

ಈ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ ಈಗಾಗಲೇ ಶಾಸಕರನ್ನು ಫೈನಲ್ ಮಾಡಲಾಗಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಹಾಗೆ ನೋಡಿದರೆ ಮೂಲ ಬಿಜೆಪಿಗರಿಗೆ ಉಳಿಯುವುದು ಇನ್ನೂ ಒಂದು ಸ್ಥಾನ ಮಾತ್ರ. ಆದರೆ, ಈ ಒಂದು ಸ್ಥಾನಕ್ಕೆ ಸುಮಾರು ೩೦ ಜನ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ.

ಹಿರಿಯ ಶಾಸಕರಾದ ದತ್ತಾತ್ರೇಯ ರೇವೂರ್ ಪಾಟೀಲ್, ಎಸ್. ಅಂಗಾರ, ಎಸ್.ಎ. ರಾಮದಾಸ್, ಮುರುಗೇಶ್ ನಿರಾಣಿ, ಅಪ್ಪಚ್ಚು ರಂಜನ್, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಪೂರ್ಣಿಮ ಶ್ರೀನಿವಾಸ್, ಜಿ. ರಾಜುಗೌಡ, ವಿ. ಸುನೀಲ್‌ಕುಮಾರ್, ಹಾಲಪ್ಪ ಆಚಾರ್ ಹೀಗೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.

ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಲಿರುವ ಕತ್ತಿ
ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕರ ಪೈಕಿ ಉಮೇಶ್ ಕತ್ತಿ ಅಗ್ರಗಣ್ಯರು. ಸತತ ೮ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕತ್ತಿ ಬೆನ್ನ ಹಿಂದೆ ರಾಜ್ಯದಲ್ಲಿ ಬೃಹತ್ ಮತಬ್ಯಾಂಕ್ ಹೊಂದಿರುವ ಲಿಂಗಾಯತ ಸಮಾಜ ಇದೆ. ಇದೇ ಧೈರ್ಯದಲ್ಲಿ ಕೆಲ ದಿನಗಳ ಹಿಂದೆ ಅವರು ಸ್ವತಂತ್ರ‍್ಯ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಮುಂದಿಟ್ಟಿದ್ದರು.

ಆದರೆ, ಬಿಎಸ್‌ವೈ ಸಂಪುಟದಲ್ಲಿ ಎಲ್ಲಾ ಸಮಾಜದವರಿಗೂ ಅವಕಾಶ ಮಾಡಿಕೊಡಬೇಕು ಎಂಬ ಏಕೈಕ ಉದ್ದೇಶದಿಂದ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಹೇಗಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂದು ನಿರ್ಧರಿಸಿದ್ದ ಕತ್ತಿ ಕಳೆದ ಆರು ತಿಂಗಳಿನಿAದ ಪ್ರತಿನಿತ್ಯ ಯಡಿಯೂರಪ್ಪನವರ ಮನೆಗೆ ಎಡತಾಕುತ್ತಿದ್ದರು. ಆದರೆ, ಈ ಎಲ್ಲಾ ಪ್ರಯತ್ನ ವಿಫಲವಾಗಿವೆ. ಪರಿಣಾಮ ಇದೀಗ ಕತ್ತಿ ನೇರವಾಗಿ ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ನಾಯಕರಿಂದ ಒತ್ತಡ ಹೇರಲು ಮುಂದಾಗಿದ್ದಾರೆ.

ಇಷ್ಟಾದರೂ ಒಂದು ವೇಳೆ ಉಮೇಶ್ ಕತ್ತಿಗೆ ಸಚಿವ ಸ್ಥಾನ ನಿರಾಕರಿಸಿದರೆ ಅವರು ಸುಮ್ಮನೆ ಕೂರುವವರಲ್ಲ. ರಾಜಕೀಯವಾಗಿ ಭವಿಷ್ಯದಲ್ಲಿ ಅವರು ಏನೇ ತಂತ್ರ ಹೂಡಿದರೂ ಅದರ ಫಲವನ್ನು ಯಡಿಯೂರಪ್ಪ ಅನುಭವಿಸಲೇಬೇಕು.

ಅರ್ಹ/ಅತೃಪ್ತರ ಆತ್ಮಗಳಿಗೂ
ಸಿಗದ ಶಾಂತಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಏಕೈಕ ಕಾರಣಕ್ಕ ೧೭ ಜನ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರವನ್ನು ಬೀಳಿಸಿ ಬಿಜೆಪಿಗೆ ಹಾರಿದ್ದರು. ಸಚಿವ ಸ್ಥಾನದ ಆಸೆಯಿಂದಲೇ ಅವರೆಲ್ಲಾ ಬಿಜೆಪಿ ಪಾಲಾದರು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ. ಆದರೆ, ಕಳೆದ ಉಪ ಚುನಾವಣೆಯ ನಂತರ ಈ ಎಲ್ಲಾ ಅರ್ಹ/ಅತೃಪ್ತ ಶಾಸಕರದ್ದೂ ಒಬ್ಬೊಬ್ಬರದ್ದು ಒಂದೊAದು ಕಥೆ ಎಂಬಂತಾಗಿದೆ.

೧೫ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಪೈಕಿ ೧೨ ಕ್ಷೇತ್ರದಲ್ಲಿ ಅನರ್ಹ ಶಾಸಕರು ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮಾತಿಗೆ ಕಟ್ಟುಬಿದ್ದ ರಾಣಿಬೆನ್ನೂರು ಕ್ಷೇತ್ರದ ಆರ್.ಶಂಕರ್ ವಿಧಾನ ಪರಿಷತ್‌ಗೆ ನಾಮ ನಿರ್ದೇಶನಗೊಂಡು ಸಚಿವನಾಗುವ ಆಸೆಯಿಂದ ಶಾಸಕ ಸ್ಥಾನವನ್ನೂ ತ್ಯಾಗ ಮಾಡಿದ್ದಾರೆ. ಇನ್ನೂ ಚುನಾವಣೆಯಲ್ಲಿ ಸೋಲನುಭವಿಸಿರುವ ಎಂಟಿಬಿ ನಾಗರಾಜ್ ಮತ್ತು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಸಹ ಪ್ರಮುಖ ಸಚಿವ ಸ್ಥಾನ ಆಕಾಂಕ್ಷಿಗಳು.
ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ ೯ ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ ೧೫. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

ಈ ೧೫ ಜನರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಕಾರಣಕ್ಕೆ ಇವರು ಮೈತ್ರಿ ಸರ್ಕಾರವನ್ನೇ ಬೀಳಿಸಿದ್ದರು. ಆದರೆ, ಪ್ರಸ್ತುತ ಈ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡದಿದ್ದರೂ ಸಹ ಮುಂದಾಗಬಹುದಾದ ಪರಿಣಾಮ ಏನು? ಎಂಬುದು ಇದೀಗ ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ತಲೆನೋವಿಗೆ ಕಾರಣವಾಗಿದೆ.

ಇನ್ನೂ ಫೆ.೧೭ಕ್ಕೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಇರುವ ಒಂದು ಸ್ಥಾನಕ್ಕೆ ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ಸ್ಥಾನ ಸವದಿಗೆ ಖಾಯಂ ಎನ್ನಲಾಗುತ್ತಿದೆ. ಇದು ಸಾಧ್ಯವಾದರೆ ಆರ್.ಶಂಕರ್ ಸ್ಥಿತಿ ಇರುವುದಲ್ಲೇ ಶೋಚನೀಯ ಎಂಬಂತಾಗುವುದರಲ್ಲಿ ಎರಡು ಮಾತಿಲ್ಲ.

ಒಟ್ಟಿನಲ್ಲಿ ಬಿಜೆಪಿ ಸಂಪುಟ ರಚನೆಗೆ ತೆಗೆದುಕೊಂಡದ್ದಕ್ಕಿಂತ ಹೆಚ್ಚಿನ ಸಮಯವನ್ನು ಸಂಪುಟ ವಿಸ್ತರಣೆ ತೆಗೆದುಕೊಂಡಿದೆ. ಆದರೂ, ಈವರೆಗೆ ಯಾವುದೇ ವಿವಾದವಿಲ್ಲದೆ, ಸಂಪುಟ ವಿಸ್ತರಣೆಯಾಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಮುಂದಿನ ಒಂದು ವಾರಗಳ ಕಾಲ ಯಡಿಯೂರಪ್ಪನವರದ್ದು ಮಾತ್ರ ಬೆಂಕಿ ಮೇಲಿನ ನಡೆ ಎನ್ನಲು ಅಡ್ಡಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...