Homeಮುಖಪುಟಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

ಹುತಾತ್ಮ ಗಾಂಧಿಗೆ ಬೆಳಕಿನ ನಮನ: ಅಹಿಂಸಾ ಮಾರ್ಗದಲ್ಲಿ ನಡೆಯಲು ಪಣ

- Advertisement -
- Advertisement -

ದೇಶದ ತುಂಬ ದ್ವೇಷ ಹರಡುವ ಶಕ್ತಿಗಳು ಹೆಚ್ಚುತ್ತಿವೆ. ಅಸಹಿಷ್ಣುತೆ ಮನೆ ಮಾಡಿದೆ. ಯುದ್ದೋನ್ಮಾದದ ವಾತಾವರಣ ಸೃಷ್ಟಿಯಾಗಿದೆ. ದೇಶದಲ್ಲಿ ಶಾಂತಿ, ಸುವ್ಯವಸ್ಥೆ,, ಜನರ ನಡುವೆ ಪ್ರೀತಿ, ಸಹಬಾಳ್ವೆಯನ್ನು ಬಿತ್ತಬೇಕಾದವರೇ ದ್ವೇಷದ ಮಾತುಗಳನ್ನಾಡುತ್ತಿದ್ದಾರೆ. ಇದಕ್ಕೆ ಅಂತ್ಯ ಹಾಡಬೇಕಾದರೆ ಮಹಾತ್ಮ ಗಾಂಧಿ ಅವರ ಅಹಿಂಸಾ ಮಾರ್ಗ ಅನುಸರಿಸುವುದು ಬಹಳ ಮುಖ್ಯವಾಗಿದೆ. ದ್ವೇಷವನ್ನು ಅಳಿಸಿ ಪ್ರೀತಿಯನ್ನು ಹಂಚುವಂತಹ ಕೆಲಸಕ್ಕೆ ಎಲ್ಲರೂ ಮುಂದಾಗಬೇಕೆಂಬ ಪಣವನ್ನು ಗಾಂಧಿ ಹುತಾತ್ಮ ದಿನವಾದ ಜನವರಿ 30ರಂದು ತೊಟ್ಟರು.

ಜನಪರ ಸಂಘಟನೆಗಳ ಒಕ್ಕೂಟದಿಂದ ತುಮಕೂರಿನ ಸ್ವಾತಂತ್ರ್ಯ ಚೌಕದಲ್ಲಿ ಹಮ್ಮಿಕೊಂಡಿದ್ದ ಹುತಾತ್ಮ ದಿನಾಚರಣೆಯನ್ನು ಮೇಣದ ಬತ್ತಿಗಳನ್ನು ಹಚ್ಚಿ ಮಾನವೀಯತೆ ಸಾಕಾರಗೊಳ್ಳಲಿ. ಶಾಂತಿ ಮತ್ತು ಅಹಿಂಸೆಯೇ ನಮ್ಮ ಧ್ಯೇಯ, ನಮ್ಮಲ್ಲಿರುವುದು ಒಂದೇ ರಕ್ತ ನಾವು ಮನುಷ್ಯರು ಎಂಬ ಘೋಷಣೆಗಳನ್ನು ಕೂಗಿದರು. ಇದು ಬೆಳಕು. ಈ ಬೆಳಕಿನಲ್ಲಿ ಮಾನವೀಯತೆ ಸಾರೋಣ. ಯಾವುದೇ ಜಾತಿ, ಮತ, ಧರ್ಮ ಮತ್ತು ಪ್ರಾದೇಶಿಕತೆ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಶಕ್ತಿಗಳ ಬಗ್ಗೆ ಎಚ್ಚರದಿಂದ ಇರೋಣ ಎಂಬ ಸಂದೇಶಗಳನ್ನು ಸಾರಲಾಯಿತು.

ಭಾಷಣಕಾರರ ಮಾತುಗಳೆಲ್ಲವೂ ಗಾಂಧೀ ಅವರ ಅಹಿಂಸೆ ಕುರಿತಾಗಿದ್ದವು.ನಮ್ಮದು ಕೊಲ್ಲುವ ಸಂಸ್ಕೃತಿಯಲ್ಲ. ದ್ವೇಷದ ಸಂಸ್ಕೃತಿಯಲ್ಲ.ಬದಲಿಗೆ ಪ್ರೀತಿ ಮತ್ತು ಸಹನೆಯ, ಧರ್ಮನಿರಪೇಕ್ಷೆಯ ಸಂವಿಧಾನ ಹೊಂದಿರುವ ದೇಶ. ನಾವು ಬಾಳ್ವೆಯಿಂದ ಬದುಕಬೇಕು. ಯುದ್ದೋನ್ಮಾದಕ್ಕೆ ಅವಕಾಶ ಕೊಡಬಾರದು. ಹಿಂಸೆ ನಮ್ಮ ಸಂಸ್ಕೃತಿಯಲ್ಲ. ಹಿಂಸೆ ಶಾಶ್ವತ ಪರಿಹಾರವನ್ನು ತಂದುಕೊಡುವುದಿಲ್ಲ. ಹಿಂಸೆಯಿಂದ ದುಃಖ ಹೆಚ್ಚುತ್ತದೆ. ಹಿಂಸೆ ನೋವನ್ನು ತರಿಸುತ್ತದೆ. ಹೀಗಾಗಿ ಗಾಂಧೀ ಅವರ ಅಹಿಂಸೆ ಮಾರ್ಗ ಸುಂದರ ಸಮಾಜವನ್ನು ನಿರ್ಮಾಣ ಮಾಡುತ್ತದೆ. ಅತ್ತ ನಾವು ಹೋಗಬೇಕು ಎಂಬುದನ್ನು ಜನಪರ ಚಿಂತಕೆ ಕೆ.ದೊರೈರಾಜ್ ಸಾರಿ ಹೇಳಿದರು.

ಗಾಂಧೀಜಿ ಸುಳ್ಳನ್ನು ಹೇಳಬೇಡಿ ಅಂದ್ರು ಆದರೆ ಸುಳ್ಳುಕೋರರು ಜಾಸ್ತಿಯಾಗಿದ್ದಾರೆ. ಹಿಂಸೆ ಮಾಡಬಾರದು ಅಂದ್ರು, ಆದರೆ ಹಿಂಸೆಯ ಮಾತುಗಳನ್ನಾಡುವವರು ಹೆಚ್ಚಾಗಿದ್ದಾರೆ. ಸತ್ಯವನ್ನು ನುಡಿಯಬೇಕು ಅಂದ್ರು, ಆದರೆ ಅಸತ್ಯವನ್ನೇ ಮನೆಮಾತಾಗಿಸಿಕೊಂಡವರು ಹೆಚ್ಚು. ಗಾಂಧೀ ಚಿಂತನೆಗಳನ್ನು ಹೇಳುತ್ತಲೇ, ಹಿಂಸೆಗೂ ಪ್ರಚೋದಿಸುವ ಶಕ್ತಿಗಳು ಸಮಾಜದಲ್ಲಿ ದ್ವೇಷವನ್ನೂ ಹರಡುತ್ತಾ ಜನರ ನೆಮ್ಮದಿಗೆ ಭಂಗ ತರುತ್ತಿವೆ. ಇದು ಶಾಶ್ವತವಲ್ಲ. ಆದರೂ ಕೋಮುವಾದಿ ಶಕ್ತಿಗಳು ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿವೆ. ನಾವು ಪ್ರೀತಿಯೊಂದನ್ನು ಹಂಚಬೇಕಾಗಿದೆ ಎಂಬಂತಹ ಮಾತುಗಳನ್ನು ಗಣ್ಯರು ಹೇಳಿದರು.

ಟೌನ್ ಹಾಲ್ ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ನೂರಾರು ಕಾರ್ಯಕರ್ತರು ಯುವ ಮುಖಂಡ ತಾಜುದ್ದೀನ್ ಶರೀಪ್ ನೇತೃತ್ವದಲ್ಲಿ ಗಾಂಧೀ ಹುತಾತ್ಮ ದಿನವನ್ನು ಆಚರಿಸಲಾಯಿತು.ಮಹಾತ್ಮ ಗಾಂಧಿ ಅವರನ್ನು ನಾಥೂರಾಮ್ ಗೋಡ್ಸೆ ಕೊಂದು ಹಾಕಿದರು. ಗೋಡ್ಸೆ ಸಂತತಿ ಇಂದಿಗೂ ತನ್ನ ಮಸಲತ್ತು ನಡೆಸಿದೆ. ಕೋಮುವಾದಿ ಶಕ್ತಿಗಳು ಆಳ್ವಿಕೆ ನಡೆಸುತ್ತಿದ್ದು ಶಾಂತಿಯುತ ಪ್ರತಿಭಟನೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿ ಅಮಾಯಕರನ್ನು ಕೊಲ್ಲಲಾಗಿದೆ. ಇಂತಹ ಘಟನೆಗಳು ನಡೆಯಬಾರದು. ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಗಾಂಧೀಯ ವಿಚಾರಗಳಿಗೆ ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂಬುದನ್ನು ಭಾಷಣಕಾರರು ಬೊಟ್ಟು ಮಾಡಿ ಹೇಳಿದರು.

CAA, NRC ಮತ್ತು NPR ಕಾಯ್ದೆಗಳು ಒಡೆದು ಆಳುವ ನೀತಿಗೆ ಪೂರಕವಾಗಿವೆ. ಅಲ್ಪಸಂಖ್ಯಾತ ಸಮುದಾಯ, ಬಡವರು, ದಲಿತರಲ್ಲಿ ಆತಂಕವನ್ನುಂಟು ಮಾಡಿದೆ. ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ಸಮಾಜವನ್ನು ಛಿದ್ರಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಸಮಾಜವನ್ನು ಒಡೆಯುವ ಕೆಲಸವನ್ನು ಬಿಡಬೇಕು. ಸಂವಿಧಾನದ ಆಶಯಗಳಂತೆ ಸರ್ಕಾರವನ್ನು ನಡೆಸಬೇಕು ಎಂದು ಆಗ್ರಹಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶಕ್ಕಿಂದು ಒದಗಿರುವ ವಿಷಮ ಪರಿಸ್ಥಿತಿಯಿಂದ, ಮಹಾತ್ಮ ಗಾಂಧಿ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮಾತ್ರ ನಮ್ಮಂನ್ನಿಂದು ಪಾರುಮಾಡಬಲ್ಲವು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...