Homeಮುಖಪುಟಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

ಭೀಮಾ ಕೋರೆಗಾಂವ್- ಕೇಂದ್ರದ ಹಸ್ತಕ್ಷೇಪ ದುರುದ್ದೇಶಪೂರಿತ

- Advertisement -
- Advertisement -

ಈ ಕೇಸನ್ನು ಕೇಂದ್ರ ಸರ್ಕಾರದ ಕೆಳಗೆ ಕೆಲಸ ಮಾಡುವ ಎನ್.ಐ.ಎ.ಗೆ ವಹಿಸಿಕೊಡುತ್ತಿರುವ ಸಂದರ್ಭ ಮತ್ತು ಸಮಯ ಎರಡೂ ಪ್ರಶ್ನಾರ್ಹ.

ಎಲ್ಗಾರ್ ಪರಿಷತ್- ಭೀಮಾ ಕೋರೆಗಾಂವ್ ಕೇಸಿನ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಗೆ ವಹಿಸಿಕೊಡುತ್ತಿರುವ ಕ್ರಮ ನಿಂದನೀಯ. ಕಾನೂನು ಪ್ರಕಾರ ಹೀಗೆ ರಾಜ್ಯ ಸರ್ಕಾರದ ಪರಿಧಿಯಲ್ಲಿದ್ದ ಕೇಸೊಂದನ್ನು, ಆ ರಾಜ್ಯದ ಅನುಮೋದನೆ ಇಲ್ಲದೆ ಏಕಪಕ್ಷೀಯವಾಗಿ ಎನ್.ಐ.ಎ.ಗೆ ವಹಿಸಿಕೊಡುವ ಕ್ರಮ ಕಾನೂನುಬಾಹಿರವೇನೂ ಅಲ್ಲ. ಕಾನೂನಿನಲ್ಲಿ ಇಂತಹ ಹಸ್ತಾಂತರಕ್ಕೆ ಅವಕಾಶವಿದೆ. ಆದರೆ ಈ ಕೇಸನ್ನು ಕೇಂದ್ರ ಸರ್ಕಾರದ ಕೆಳಗೆ ಕೆಲಸ ಮಾಡುವ ಎನ್.ಐ.ಎ.ಗೆ ವಹಿಸಿಕೊಡುತ್ತಿರುವ ಸಂದರ್ಭ ಮತ್ತು ಸಮಯ ಎರಡೂ ಪ್ರಶ್ನಾರ್ಹ.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ತನಗಿರುವ ಅಧಿಕಾರವನ್ನು ಹೆಚ್ಚು ಎಚ್ಚರಿಕೆಯಿಂದ ಪ್ರಯೋಗಿಸಬೇಕಾಗುತ್ತದೆ. ಅಧಿಕಾರವಿದೆ ಎಂದ ಮಾತ್ರಕ್ಕೆ ರಾಜ್ಯ ಸರ್ಕಾರಗಳನ್ನು ಧಿಕ್ಕರಿಸಿ ನಡೆದುಕೊಳ್ಳುವುದು ಸಲ್ಲದು. ಕೇಂದ್ರ ಮತ್ತು ರಾಜ್ಯದ ನಡುವಣ ಸಂಬಂಧಗಳು ಸೌಹಾರ್ದಯುತವಾಗಿರಬೇಕು. ಈ ಸಂಬಂಧ ಕೆಟ್ಟರೆ ಅದರ ಫಲವನ್ನು ಕೇವಲ ನಿರ್ದಿಷ್ಟ ರಾಜ್ಯ ಮಾತ್ರವೇ ಅಲ್ಲದೆ ಪ್ರತ್ಯಕ್ಷ-ಪರೋಕ್ಷವಾಗಿ ಇಡೀ ದೇಶವೇ ಅನುಭವಿಸಬೇಕಾಗುತ್ತದೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೂಡಲಾದ ಈ ಕೇಸಿನಲ್ಲಿ ಮಾಡಲಾಗಿರುವ ಆಪಾದನೆಗಳಿಗೆ ಬಲವಾದ ಸಾಕ್ಷ್ಯ ಪುರಾವೆಗಳಿಲ್ಲ ಎಂಬುದು ಮಹಾರಾಷ್ಟ್ರದ ಈಗಿನ ಸಮ್ಮಿಶ್ರ ಸರ್ಕಾರದ ಸ್ಪಷ್ಟ ನಿಲುವು. ಬಂಧಿತ ಸಾಮಾಜಿಕ ಹೋರಾಟಗಾರರು ಭೀಮಾ ಕೋರೆಗಾಂವ್ ಹಿಂಸೆಯನ್ನು ಪ್ರಚೋದಿಸಿದ್ದರು ಎಂಬುದು ಪುಣೆ ಪೋಲಿಸರ ಆರೋಪ. ಆದಕ್ಕೆ ಅವರು ಒದಗಿಸಿರುವ ಪುರಾವೆಗಳು ಕೇವಲ ಕೆಲ ಪುಸ್ತಕಗಳು ಮತ್ತು ಸಿ.ಡಿ.ಗಳು. ಕೇಸನ್ನು ಎನ್.ಐ.ಎ.ಗೆ ವರ್ಗಾಯಿಸುವ ಕೇಂದ್ರದ ಕ್ರಮ ಕುರಿತು ಮಹಾರಾಷ್ಟ್ರ ಸರ್ಕಾರ ಕಾನೂನು ಸಲಹೆ ಕೋರಿದೆ.

ಮಹಾರಾಷ್ಟ್ರ ಸರ್ಕಾರ ಈ ಕೇಸಿನ ಆರೋಪಪಟ್ಟಿಯನ್ನು ಮರುವಿಮರ್ಶೆ ಮಾಡುವ ನಿರ್ಧಾರ ಕೈಗೊಂಡ ಮರುದಿನವೇ ಹೊರಬಿದ್ದಿರುವ ಕೇಂದ್ರ ಸರ್ಕಾರದ ನಿರ್ಧಾರ ಕೇವಲ ಕಾಕತಾಳೀಯ ಆಗಿರುವುದು ಸಾಧ್ಯವಿಲ್ಲ. ಈ ಕೇಸಿನ ತನಿಖೆಯನ್ನು 2018ರಿಂದ ಪುಣೆಯ ಪೋಲಿಸರು ನಡೆಸುತ್ತಿದ್ದಾರೆ. ಈ ತನಿಖೆಯನ್ನು ಪುಣೆ ಪೋಲಿಸರಿಂದ ವಿಶೇಷ ತನಿಖಾ ತಂಡಕ್ಕೆ ಹಸ್ತಾಂತರ ಮಾಡುವ ಇಂಗಿತವನ್ನು ರಾಜ್ಯ ಸರ್ಕಾರ ನೀಡಿತ್ತು. ರಾಜ್ಯ ಸರ್ಕಾರ ಈ ಕೇಸನ್ನು ಮರುವಿಮರ್ಶೆಗೆ ಒಳಪಡಿಸುವ ನಿರ್ಧಾರ ತೆಗೆದುಕೊಂಡರೆ ಆ ನಿರ್ಧಾರವೇ ಅಂತಿಮ ಅಲ್ಲ. ಅಂತಹ ನಿರ್ಧಾರವು ನ್ಯಾಯಾಲಯದ ಪರೀಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನಾ-ಎನ್.ಸಿ.ಪಿ.- ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿತ್ತು. ಈ ಸರ್ಕಾರದ ಹಿಂದಿನ ಶಕ್ತಿಯಾಗಿರುವ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಈ ಕೇಸಿನಲ್ಲಿ ಸಾಮಾಜಿಕ ಹೋರಾಟಗಾರರು ಮತ್ತು ಬುದ್ಧಿಜೀವಿಗಳನ್ನು ಸಿಕ್ಕಿಸಿ ಜೈಲಿಗೆ ತಳ್ಳಿದ ಕ್ರಮವನ್ನು ಕಟುವಾಗಿ ಟೀಕಿಸಿದ್ದರು. ಪುಣೆ ಪೋಲಿಸರಾಗಲಿ, ಉದ್ದೇಶಿತ ವಿಶೇಷ ತನಿಖಾ ತಂಡವಾಗಲಿ ರಾಜ್ಯ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತವೆ. ಆದರೆ ಎನ್.ಐ.ಎ. ನೇರವಾಗಿ ಕೇಂದ್ರ ಸರ್ಕಾರದ ಗೃಹಮಂತ್ರಿ ಅಮಿತ್ ಶಾ ಅವರ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂಬುದು ಗಮನಿಸಬೇಕಿರುವ ಅಂಶ. ಎಲ್ಗಾರ್ ಪರಿಷತ್ ಕೇಸು ಈಗಾಗಲೆ ತನಿಖೆಯ ಹಂತವನ್ನು ಹಾದು ನ್ಯಾಯಾಲಯವನ್ನು ಮುಟ್ಟಿದೆ. ಈ ಹಂತದಲ್ಲಿ ಕೇಂದ್ರ ಸರ್ಕಾರ ಮೂಗು ತೂರಿಸಿರುವುದು ಶಂಕೆಗೆ ಆಸ್ಪದ ಮಾಡಿದೆ. ಈ ಹಿಂದಿನ ಬಿಜೆಪಿ ಸರ್ಕಾರವನ್ನು ರಕ್ಷಿಸುವ ಹುನ್ನಾರವಿದು ಎಂದು ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಪಕ್ಷಗಳು ಕೇಂದ್ರದ ಹಸ್ತಕ್ಷೇಪವನ್ನು ಟೀಕಿಸಿವೆ. ಎನ್.ಐ.ಎ. ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ತನಿಖಾ ಸಂಸ್ಥೆಯಲ್ಲ, ಸಿ.ಬಿ.ಐ. ಸಂಸ್ಥೆಯಂತೆಯೇ ಕೇಂದ್ರ ಸರ್ಕಾರದ ಇಷಾರೆಯಂತೆ ನಡೆದುಕೊಳ್ಳುವ ಪಂಜರದ ಗಿಳಿ ಎಂಬ ಟೀಕೆಗಳನ್ನು ಎದುರಿಸಿದೆ. ಸಂವಿಧಾನ ಎತ್ತಿ ಹಿಡಿದಿರುವ ಒಕ್ಕೂಟ ವ್ಯವಸ್ಥೆಯ ಆಶಯವನ್ನು ಈ ಕ್ರಮ ಬೀಳುಗಳೆದಿದೆ. ಮಾಲೇಗಾಂವ್ ಸ್ಫೋಟಗಳ ಸಂಬಂಧದಲ್ಲಿ ಬಂಧಿಸಲಾಗಿದ್ದ ಸಾಧ್ವಿ ಪ್ರಗ್ಯಾ ಮತ್ತಿತರರ ಕುರಿತು ಮೆದು ಧೋರಣೆ ತಳೆಯುವಂತೆ ಎನ್.ಐ.ಎ. ತಮಗೆ ಸೂಚಿಸಿತ್ತೆಂದು ಈ ಕೇಸಿನ ಸರ್ಕಾರಿ ವಕೀಲರಾದ ರೋಹಿಣಿ ಸಾಲಿಯಾನ್ ದೂರು ಕೆಲ ವರ್ಷಗಳ ಹಿಂದೆ ಭಾರೀ ಸದ್ದು ಮಾಡಿತ್ತು.

ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಈ ಕೇಸಿನ ಕುರಿತು ಪುಣೆ ಪೋಲೀಸರು ನಡೆಸಿದ ತನಿಖೆಯ ಪ್ರಗತಿ ಕುರಿತು ಎನ್.ಐ.ಎ. ತೃಪ್ತಿ ವ್ಯಕ್ತಪಡಿಸಿತ್ತು ಎಂಬುದು ಗಮನಾರ್ಹ ಅಂಶ.

ಎಲ್ಗಾರ್ ಪರಿಷತ್- ಭೀಮಾ ಕೋರೆಗಾಂವ್ ಕೇಸಿಗೆ ರಾಜಕೀಯ ದುರುದ್ದೇಶವಿದೆ ಎಂಬ ಆಪಾದನೆ ಆರಂಭದಿಂದಲೂ ಕೇಳಿ ಬಂದಿತ್ತು. ಈ ಪ್ರಕರಣವು ಮಾವೋವಾದಿಗಳ ಒಳಸಂಚು ಎಂಬುದು ಪುಣೆ ಪೋಲೀಸರ ಆರೋಪ. ಈ ಆರೋಪದಲ್ಲಿ ಹುರುಳಿಲ್ಲವೆಂದು ಗಟ್ಟಿ ದನಿಗಳು ಕೇಳಿ ಬಂದಿವೆ. ಭೀಮಾ ಕೋರೆಗಾಂವ್‍ನಲ್ಲಿ ಜರುಗಿದ ಹಿಂಸೆಯನ್ನು ಪ್ರಚೋದಿಸಿದ್ದು ಹಿಂದೂ ಕಟ್ಟರ್‍ವಾದಿ ಸಂಘಟನೆಗಳು. ಈ ಗುಂಪುಗಳನ್ನು ರಕ್ಷಿಸಲು ಸಾಮಾಜಿಕ ಕಾರ್ಯಕರ್ತರು ಮತ್ತು ಮಾನವಹಕ್ಕುಗಳ ಹೋರಾಟಗಾರರ ಮೇಲೆ ಹುಸಿ ಆರೋಪಗಳನ್ನು ಹೊರಿಸಲಾಗಿದೆ ಎಂದು ಬಿಜೆಪಿಯೇತರ ರಾಜಕೀಯ- ಸಾಮಾಜಿಕ ಸಂಘಟನೆಗಳು ವಾದಿಸಿವೆ. ಈಗಾಗಲೆ ರಾಜಕೀಯಗೊಳಿಸಿರುವ ಈ ಕೇಸನ್ನು ಕೇಂದ್ರದ ಕ್ರಮವು ಮತ್ತಷ್ಟು ರಾಜಕೀಯಗೊಳಿಸಲಿದೆ.

ಈ ಕೇಸಿನ ಮರುವಿಮರ್ಶೆಯನ್ನು ತಪ್ಪಿಸುವುದೇ ಕೇಂದ್ರದ ಉದ್ದೇಶ. 2017ರ ಡಿಸೆಂಬರ್ 31ರಂದು ಎಲ್ಗಾರ್ ಪರಿಷತ್ತಿನ ಸಭೆಯಲ್ಲಿ ಮಾಡಲಾದ ಭಾಷಣಗಳನ್ನು ಆಧರಿಸಿ ಈ ಕೇಸನ್ನು ದುರುದ್ದೇಶಪೂರ್ವಕವಾಗಿ ಬೃಹದಾಕಾರವಾಗಿ ಬೆಳೆಸಲಾಗಿದೆ. 200 ವರ್ಷಗಳ ಹಿಂದೆ ದಲಿತ ಪೀಡಕ ಪೇಶ್ವೆಗಳ ಸೈನ್ಯದ ವಿರುದ್ಧ ದಲಿತರು ಗಳಿಸಿದ ವಿಜಯವನ್ನು ಪರಿಷತ್ ಸಭೆಯಲ್ಲಿ ಆಚರಿಸಲಾಗಿತ್ತು. ಮರುದಿನ ಈ ಸಭೆಗೆ ಪ್ರತಿಕ್ರಿಯೆಯಾಗಿ ಹಿಂದೂ ಕಟ್ಟರ್ ಪಂಥೀಯ ಗುಂಪುಗಳು ಗಲಭೆಯನ್ನು ಪ್ರಚೋದಿಸಿದ್ದವು. ಈ ಹಿನ್ನೆಲೆಯನ್ನು ಇಟ್ಟುಕೊಂಡು ಕೇಂದ್ರ ಸರ್ಕಾರವನ್ನು ಉರುಳಿಸುವ ಸಂಚಿನ ಆರೋಪವನ್ನು ಹೊರಿಸಲಾಯಿತು. ಪ್ರಧಾನಿಯವರ ಹತ್ಯೆಯ ಆರೋಪವನ್ನು ಮಾಡಲಾದರೂ, ಈ ಆರೋಪ ಎಫ್.ಐ.ಆರ್.ನಲ್ಲಿ ನಮೂದಾಗಲಿಲ್ಲ. ಪೋಲೀಸರ ಆರಂಭಿಕ ತನಿಖೆಯಲ್ಲಿ ಹಿಂಸೆಯ ಹಿಂದೆ ಹಿಂದೂ ಕಟ್ಟರ್‍ವಾದಿ ಗುಂಪುಗಳ ಕೈವಾಡ ಕಂಡುಬಂದಿತ್ತು. ಆನಂತರ ಈ ತನಿಖೆಯ ದಾರಿ ವಿರುದ್ಧ ದಿಕ್ಕು ಹಿಡಿಯಿತು. ಈ ಕೇಸಿನ ಸ್ವತಂತ್ರ ತನಿಖೆ ಸುಪ್ರೀಮ್ ಕೋರ್ಟ್ ಉಸ್ತುವಾರಿಯಲ್ಲಿ ನಡೆಯಬೇಕೆಂಬ ವಾದವನ್ನು ಅಂದಿನ ಮಹಾರಾಷ್ಟ್ರ ಸರ್ಕಾರ ಬಲವಾಗಿ ವಿರೋಧಿಸಿತ್ತು. ಆ ಸಂದರ್ಭದಲ್ಲಿ ಈ ಕೇಸನ್ನು ಎನ್.ಐ.ಎ.ಗೆ ವಹಿಸಿಕೊಡುವ ಇರಾದೆ ಕೇಂದ್ರ ಸರ್ಕಾರಕ್ಕೆ ಇರಲಿಲ್ಲ.

ಮಾನವಹಕ್ಕುಗಳ ಪ್ರತಿಪಾದಕರು ಮತ್ತು ಸಾಮಾಜಿಕ ಹೋರಾಟಗಾರರನ್ನು ಜೈಲಿಗೆ ತಳ್ಳಲು ಮತ್ತು ಮೋದಿ ಸರ್ಕಾರದ ವಿರುದ್ಧದ ಭಿನ್ನಮತದ ದನಿಗಳನ್ನು ಅಡಗಿಸಲು ಹೂಡಲಾಗಿರುವ ದುರುದ್ದೇಶಪೂರಿತ ಮೊಕದ್ದಮೆಯಿದು. ಇಂತಹ ಕೇಸಿನಲ್ಲಿ ನ್ಯಾಯವಾದ ಮತ್ತು ನಿಷ್ಪಕ್ಷಪಾತದ ತನಿಖೆಯ ಅವಕಾಶವನ್ನು ನಿರಾಕರಿಸಿರುವುದು ಖಂಡನೀಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತನ್ನ ವಿರುದ್ಧ ದನಿ ಎತ್ತುವವರಿಗೆಲ್ಲಾ, “ದೇಶದ್ರೋಹಿ” ಎಂಬ ಹಣೆಪಟ್ಟಿಯನ್ನು ಹಚ್ಚಿ ಅವರನ್ನು ಜೈಲಿನಲ್ಲಿ ಕೊಳೆಯುವಂತೆ ಮಾಡಿದರೆ, ವಿರೋಧದ ದನಿ ಅಡಗುತ್ತದೆ ಎಂದು, ಕೇಂದ್ರ ಸರ್ಕಾರ ತಿಳಿದಿರುವಂತಿದೆ. ಆದರೆ, ಕೇಂದ್ರ ಸರ್ಕಾರದ ಈ ತಿಳುವಳಿಕೆ ‘ತಪ್ಪು’ ಎಂಬುದು ಪ್ರಪಂಚದ ಇತಿಹಾಸದಲ್ಲಿ ಅನೇಕ ಬಾರಿ ಸಾಬೀತಾಗಿದೆ. ಎಂತೆಂತಹ ಸರ್ವಾಧಿಕಾರಿಗಳೂ ಮಣ್ಣುಮುಕ್ಕಿ ವಿಫಲರಾಗಿರುವ ಇತಿಹಾಸ ನಮ್ಮ ಕಣ್ಮುಂದೆ ಇರುವಾಗ, ಈ ಮನುವಾದಿಗಳ ಆಟ ಹೆಚ್ಚುದಿನ ನಡೆಯುವುದಿಲ್ಲ. ಆದರೆ ಇವರಿಂದ ಅನ್ಯಾಯವಾಗಿ ಜೈಲುಪಾಲಾಗಿರುವ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರ ಪರವಾಗಿ ಈ ದೇಶದ ಪ್ರಜ್ಞಾವಂತರೆಲ್ಲರೂ ಒಕ್ಕೊರಲಿನಿಂದ ದನಿ ಎತ್ತಬೇಕು. ಆಗ ಮಾತ್ರ ಅಮಾಯಕರಿಗೆ ಈ ಮನುವಾದಿಗಳಿಂದ ಆಗುತ್ತಿರುವ ಅನ್ಯಾಯವನ್ನು ನಾವು ತಡೆಗಟ್ಟಬಹುದು.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...