Homeಮುಖಪುಟಕಂಗನಾ, ಪದ್ಮಶ್ರೀ ಮತ್ತು ತುಕ್ಡೇಗ್ಯಾಂಗ್

ಕಂಗನಾ, ಪದ್ಮಶ್ರೀ ಮತ್ತು ತುಕ್ಡೇಗ್ಯಾಂಗ್

- Advertisement -
- Advertisement -

ಮೊನ್ನೆಯಷ್ಟೇ ಕೇಂದ್ರ ಸರ್ಕಾರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರತಿಷ್ಠಿತ ಗೌರವದ ಪ್ರಶಸ್ತಿಗಳನ್ನು ನೀಡಿ ಹಲವರನ್ನು ಗೌರವಿಸಿದೆ. ಅದರಲ್ಲಿ ಇಡೀ ದೇಶದ ಗಮನ ಸೆಳೆದದ್ದು ಸಿನಿಮಾ ಕ್ಷೇತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿರುವುದು. ಅಂದಹಾಗೆ ಕಂಗನಾ ಇತ್ತೀಚೆಗಷ್ಟೇ ಸಿನಿಮಾ ಇಂಡಸ್ಟ್ರಿಗೆ ಬಂದವರು. ಅಂತಹ ಗಮನಾರ್ಹವಾದ, ವಿಭಿನ್ನವಾದ ಸಿನಿಮಾಗಳನ್ನೇನೂ ಆಕೆ ಮಾಡಿಲ್ಲ. ನಟಿಸಿರುವುದು ಸುಮಾರು 34 ಸಿನಿಮಾಗಳಷ್ಟೇ. ಹಾಗೆ ನೋಡಿದರೆ ನೂರಾರು ಸಿನಿಮಾಗಳನ್ನು ಮಾಡಿ, ಸಿನಿಮಾರಂಗಕ್ಕೆ ಮೆರಗು ತಂದುಕೊಟ್ಟು, ತಮ್ಮದೇ ಆದ ಛಾಪು ಮೂಡಿಸಿರುವ ಹಲವಾರು ಸ್ಟಾರ್‍ಗಳು ಇನ್ನೂ ನಮ್ಮ ಮಧ್ಯದಲ್ಲೇ ಇದ್ದಾರೆ. ಕೆಲವರು ನಮ್ಮನ್ನೆಲ್ಲಾ ಅಗಲಿದ್ದಾರೆ. ಅವರಾರಿಗೂ ಸಿಗದ ಪದ್ಮಶ್ರೀ ಪ್ರಶಸ್ತಿ ಕಂಗನಾಗೆ ಮಾತ್ರ ಏಕೆ ಎಂಬುದು ಸಿನಿ ಅಭಿಮಾನಿಗಳಿಂದ ಹಿಡಿದು ಹಲವರ ಪ್ರಶ್ನೆ. ಇಂತಹ ಪ್ರಶ್ನೆಗಳಿಗೆ ಉತ್ತರವೂ ನಮ್ಮೆದುರಿಗೇ ಇದೆ. ಇತ್ತೀಚೆಗೆ ಜೆಎನ್‍ಯು ವಿದ್ಯಾರ್ಥಿಗಳ ಮೇಲೆ ಸಂಘಿ ಭಯೋತ್ಪಾದಕರು ನಡೆಸಿದ ಹಲ್ಲೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ದೀಪಿಕಾ ಭಾಗವಹಿಸಿದ್ದರು. ಕಪ್ಪುಡುಗೆ ಧರಿಸಿ ಏನು ಮಾತನಾಡದೆ ಪ್ರತಿಭಟನೆಯಲ್ಲಿ ಭಾಗವಹಿಸಿ ಬಂದಿದ್ದ ದೀಪಿಕಾ ಮೌನವಾಗಿಯೇ ದೇಶಕ್ಕೆ ಸಂದೇಶ ರವಾನಿಸಿದ್ದರು. ಇದೇ ವಿಚಾರವಾಗಿ ಸಂದರ್ಶನವೊಂದರಲ್ಲಿ ಕಂಗನಾಗೆ ದೀಪಿಕಾ ನಡೆಯ ಬಗ್ಗೆ ಕೇಳಿದ್ದ ಪ್ರಶ್ನೆಗೆ ದೀಪಿಕಾ ಬಗ್ಗೆ ನಾನೇನು ಹೇಳುವುದಿಲ್ಲ. ಆದರೆ ತುಕಡೆ ಗ್ಯಾಂಗ್ ಜೊತೆ ನಾನು ಹೋಗಿನಿಲ್ಲುವುದಿಲ್ಲ, ಅವರನ್ನು ನಾನು ವಿರೋಧಿಸುತ್ತೇನೆ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯೊಂದೇ ಸಾಕಾಗಿತ್ತು ಆಕೆ ಕೇಂದ್ರದ ಕೃಪಾಕಟಾಕ್ಷಕ್ಕೆ ಪಾತ್ರರಾಗಲು. ಅಂದಹಾಗೆ ಕಂಗನಾಗೆ ಆ ಮುಂಚೆ ಮತ್ತೊಂದು ಮಾಹಿತಿ ಗೊತ್ತಿರಲಿಲ್ಲ. ಕೇಂದ್ರ ಗೃಹಸಚಿವಾಲಯ ದೇಶದಲ್ಲಿ ಯಾವುದೇ ತುಕಡೇ ಗ್ಯಾಂಗ್‍ಗಳು ಇಲ್ಲವೆಂದು ಹೇಳುತ್ತದೆಂದು. ಏನೇ ಇರಲಿ ತುಕಡೇ ಗ್ಯಾಂಗ್ ಎಂಬ ಒಂದು ಪದದ ಉಚ್ಚಾರ ಕಂಗನಾರ ಜೀವಮಾನದ ಗಮನಾರ್ಹ ಸಾಧನೆಯಾಗಿ ಪರಿಣಮಿಸಿ ಪದ್ಮಶ್ರೀ ಒಲಿಯುವಂತೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...