Homeಎಕಾನಮಿಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌... : ಡಾ.ಬಿ.ಸಿ ಬಸವರಾಜ್

ಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌… : ಡಾ.ಬಿ.ಸಿ ಬಸವರಾಜ್

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

- Advertisement -
- Advertisement -

2019 – 20 ರಲ್ಲಿ ಭಾರತದ ಜಿಡಿಪಿ ಕೇವಲ 5% ಬೆಳವಣಿಗೆ ಕಾಣುತ್ತಿದ್ದು ಇಡೀ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ. ಈಗಾಗಲೇ ತಿಳಿದಿರುವಂತೆ ಇದಕ್ಕೆ ಮುಖ್ಯ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದು ಅಥವಾ ಜನರ ಒಟ್ಟಾರೆ ಕೊಳ್ಳುವ ಶಕ್ತಿ ಕಡಿಮೆಯಾಗಿರುವುದು.

ಅಂದರೆ, ಜನರಲ್ಲಿ ಹಣ ಖರ್ಚು ಮಾಡುವ ಸಾಮರ್ಥ್ಯ ಕುಂದಿರುವುದು. ಇದನ್ನೇ ಇನ್ನೊಂದು ರೀತಿ ಹೇಳುವುದಾದರೆ, ಜನರ ಸಂಪಾದನೆ ಮಾಡುವ ಅವಕಾಶ ಕಡಿಮೆಯಾಗಿರುವುದು.

ಇದಕ್ಕೆ ಕಳೆದ ನಲವತೈದು ವರ್ಷಗಳಲ್ಲಿಯೇ ಅತಿಹೆಚ್ಚು ನಿರುದ್ಯೋಗ ಉಂಟಾಗಿರುವುದೂ ಪ್ರಮುಖ ಕಾರಣವಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಉದ್ಯೋಗ ಸೃಷ್ಟಿಸುವುದಕ್ಕೆ ಮತ್ತು ಅದರ ಮೂಲಕ ಜನರ ಕೊಳ್ಳುವ ಶಕ್ತಿ ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ಕೊಡಬೇಕಿತ್ತು. ಆದರೆ, ಈ ಬಾರಿಯ ಬಜೆಟ್ ಇದರಲ್ಲಿ ದಯನೀಯವಾಗಿ ಸೋತಿರುವುದು ಕಾಣಿಸುತ್ತಿದೆ.

ಇದಕ್ಕೆ ಸರಳ ಉದಾಹರಣೆ ಎಂದರೆ ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ನರೇಗಾ) ಕೇವಲ 61,500 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಹೋದವರ್ಷ ಅಂದರೆ 2019-20 ರಲ್ಲಿ ಈ ಯೋಜನೆಗೆ ಖರ್ಚಾಗಿದ್ದ ಹಣ 71,000 ಕೋಟಿ ರೂಪಾಯಿಗಳು.

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

ಸರ್ಕಾದ ಅಂಕಿಅಂಶಗಳ ಪ್ರಕಾರವೇ 2011-12 ರಲ್ಲಿ ಗ್ರಾಮೀಣ ಭಾಗದ ಪ್ರತಿ ವ್ಯಕ್ತಿಯ ತಿಂಗಳ ಖರ್ಚು ಸರಾಸರಿ ₹1216.88 ರಷ್ಟಿದ್ದರೆ ಅದು 2017-18 ರಲ್ಲಿ ₹1109.74 ರಷ್ಟಕ್ಕೆ ಇಳಿದಿದೆ. ಈ ಒಟ್ಟಾರೆ ಕುಸಿತದ ಪ್ರಮಾಣ ಶೇ 8.8 ರಷ್ಟಿದೆ. ಭಾರತದ ಗ್ರಾಮೀಣ ಆರ್ಥಿಕ ಕುಸಿತದ ಚಿತ್ರಣವನ್ನು ಈ ಅಂಕಿಅಂಶ ಸ್ಪಷ್ಟವಾಗಿ ತೋರಿಸುತ್ತವೆ.

ಇಂತಹ ಪರಿಸ್ಥಿತಿಯಲ್ಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ತಕ್ಷಣ ಉದ್ಯೋಗ ಸೃಷ್ಟಿ ಮಾಡುವ ಮತ್ತು ಗ್ರಾಮೀಣ ಭಾಗದ ಜನರ ಕೊಳ್ಳುವ ಸಾಮರ್ಥ್ಯವನ್ನು ತಕ್ಷಣವೇ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದ್ದು ಅದನ್ನು ಹಾಗೆಯೇ ಬಳಸಿಕೊಳ್ಳಬೇಕಿತ್ತು.

ಅಂದರೆ, ಈ ಬಾರಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ಟಿನಲ್ಲಿ ಕನಿಷ್ಟ ಒಂದು ಲಕ್ಷ ಕೋಟಿಯಷ್ಟು ಅನುದಾನ ಕೊಡಬೇಕಿತ್ತು. ಇದರಿಂದಾಗಿ ಇವತ್ತಿಗೂ ಭಾರತದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಹಳ್ಳಿಗಳಲ್ಲಿ ತಾತ್ಕಾಲಿಕವಾದ ಉದ್ಯೋಗವಾದರೂ ಸೃಷ್ಟಿಯಾಗಿ ಅದರಿಂದ ಆರ್ಥಿಕ ಚೇತರಿಕೆಯೂ ಆಗುತ್ತಿತ್ತು.

ಆದರೆ, ಈ ಯೋಜನೆಗೆ ಕಳೆದ ಬಾರಿ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ ಕೊಡುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ ತನಗೆ ಬದ್ಧತೆಯಿಲ್ಲ ಎಂಬುದನ್ನು ತೋರಿಸಿದಂತಾಗಿದೆ.

ಹಾಗೆಯೇ, ಆರ್ಥಿಕ ಕುಸಿತದಿಂದ ದೇಶವನ್ನು ಮೇಲೆತ್ತುವ ಕ್ರಮಗಳ ಬಗ್ಗೆಯೂ ತನಗಿರುವ ಅಜ್ಞಾನವನ್ನು ತೋರಿಸಿದೆ.

ಆರ್ಥಿಕ ತಜ್ಞ ಕೇನ್ಸ್‌ನ ಪ್ರಖ್ಯಾತ ಹೇಳಿಕೆಯೊಂದಿದೆ.

“ಆರ್ಥಿಕ ಕುಸಿತದ ಕಾಲದಲ್ಲಿ ಸರ್ಕಾರ ಅತಿ ಹೆಚ್ಚು ಖರ್ಚು ಮಾಡಬೇಕು. ಜನರ ಕೈಯಲ್ಲಿ ಗುಂಡಿ ತೆಗೆಸಿ, ನಂತರ ಅದೇ ಗುಂಡಿಯನ್ನು ಅವರ ಕೈಲೇ ಪುನಃ ಮುಚ್ಚಿಸಿ ಅವರಿಗೆ ಆ ಕೆಲಸ ಮಾಡಿದ್ದಕ್ಕೆ ಸರ್ಕಾರ ಹಣ ಕೊಟ್ಟು ಜನರ ಕೈಯಲ್ಲಿ ಹಣ ಓಡಾಡುವಂತೆ ಮಾಡಬೇಕು.”

ಆರ್ಥಿಕ ತಜ್ಞ ಕೇನ್ಸ್‌

ಆದರೆ, ಈಗಿನ ಬಜೆಟ್‌ನಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿ ಸರ್ಕಾರ ನಡೆದುಕೊಂಡಿರುವಂತೆ ಕಾಣುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಹೋದಬಾರಿಗಿಂತ ಕೇವಲ 4,800 ಕೋಟಿಗಳಷ್ಟು ಮಾತ್ರ ಹೆಚ್ಚುವರಿ ಹಣ ನೀಡಲಾಗಿದೆ (ಹೋದಬಾರಿ 94,800 ಕೋಟಿ ಮತ್ತು ಈ ಬಾರಿ 99,300 ಕೋಟಿ). ಶಿಕ್ಷಣಕ್ಕೆ ಹೆಚ್ಚು ಹಣ ನೀಡಿ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಕ್ಷಮತೆಯುಳ್ಳ ಯುವಜನರು ತಯಾರಾಗಿ ಉದ್ಯೋಗಗಳನ್ನು ಪಡೆಯಲು ಅರ್ಹರಾಗುತ್ತಾರೆ. ಆದರೆ, ಈ ಬಜೆಟ್ ಶಿಕ್ಷಣಕ್ಕೆ ಅಗತ್ಯವಿರುವಷ್ಟು ಒತ್ತು ನೀಡಿಲ್ಲದಿರುವುದು ಮೇಲ್ನೋಟಕ್ಕೇ ಕಾಣಿಸುತ್ತಿದೆ.

ಹಾಗೆಯೇ, skill development ಗೆ ಈ ಬಜೆಟ್ ಮೀಸಲಿಟ್ಟಿರುವ ಹಣ ಕೇವಲ 3,000 ಕೋಟಿ.

ಇವತ್ತು ಕೋಟ್ಯಂತರ ನಿರುದ್ಯೋಗಿಗಳಿರುವಾಗ ಉದ್ಯೋಗ ಪಡೆಯಲು ಅಗತ್ಯ ತರಬೇತಿಯ ತುರ್ತಿತ್ತು. ಆದರೆ ಅದಕ್ಕೆ ಅತಿಕಡಿಮೆ ಹಣ ನಿಗದಿಪಡಿಸುವ ಮೂಲಕ ಸರ್ಕಾರ ಉದ್ಯೋಗ ಸೃಷ್ಟಿಯ ಬಗ್ಗೆ ತನಗಿರುವ ತಾತ್ಸಾರ ತೋರಿದಂತಾಗಿದೆ.

ಜೊತೆಗೆ, ಹೆಚ್ಚಿನ ಉದ್ಯೋಗ ಸೃಷ್ಟಿಸಬಲ್ಲ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ನಿರ್ಮಾಣ ಮತ್ತು ತಯಾರಿಕಾ ಕ್ಷೇತ್ರಗಳಿಗೆ ಈ ಕುಸಿತದ ಸಂದರ್ಭದಲ್ಲಿ ಮಾಮೂಲಿಗಿಂತ ಹೆಚ್ಚಿನ ಅನುದಾನ ನೀಡಬೇಕಿತ್ತು. ಇದು ಕೂಡ ಬಜೆಟ್ಟಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್ ಅತೀ ಅವಶ್ಯವಿದ್ದ ಉದ್ಯೋಗ ಸೃಷ್ಟಿಗಾಗಲೀ ತನ್ಮೂಲಕ ಆರ್ಥಿಕ ಚೇತರಿಕೆಗಾಗಲೀ ಒತ್ತು ಕೊಟ್ಟಿಲ್ಲ ಎನ್ನುವುದು ಮೇಲ್ನೋಟಕ್ಕೇ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...