Homeಎಕಾನಮಿಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌... : ಡಾ.ಬಿ.ಸಿ ಬಸವರಾಜ್

ಉದ್ಯೋಗ ಸೃಷ್ಟಿಯಲ್ಲಿ ದಯನೀಯವಾಗಿ ಸೋತ ಕೇಂದ್ರ ಬಜೆಟ್‌… : ಡಾ.ಬಿ.ಸಿ ಬಸವರಾಜ್

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

- Advertisement -
- Advertisement -

2019 – 20 ರಲ್ಲಿ ಭಾರತದ ಜಿಡಿಪಿ ಕೇವಲ 5% ಬೆಳವಣಿಗೆ ಕಾಣುತ್ತಿದ್ದು ಇಡೀ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ. ಈಗಾಗಲೇ ತಿಳಿದಿರುವಂತೆ ಇದಕ್ಕೆ ಮುಖ್ಯ ಕಾರಣ, ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದಿರುವುದು ಅಥವಾ ಜನರ ಒಟ್ಟಾರೆ ಕೊಳ್ಳುವ ಶಕ್ತಿ ಕಡಿಮೆಯಾಗಿರುವುದು.

ಅಂದರೆ, ಜನರಲ್ಲಿ ಹಣ ಖರ್ಚು ಮಾಡುವ ಸಾಮರ್ಥ್ಯ ಕುಂದಿರುವುದು. ಇದನ್ನೇ ಇನ್ನೊಂದು ರೀತಿ ಹೇಳುವುದಾದರೆ, ಜನರ ಸಂಪಾದನೆ ಮಾಡುವ ಅವಕಾಶ ಕಡಿಮೆಯಾಗಿರುವುದು.

ಇದಕ್ಕೆ ಕಳೆದ ನಲವತೈದು ವರ್ಷಗಳಲ್ಲಿಯೇ ಅತಿಹೆಚ್ಚು ನಿರುದ್ಯೋಗ ಉಂಟಾಗಿರುವುದೂ ಪ್ರಮುಖ ಕಾರಣವಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಉದ್ಯೋಗ ಸೃಷ್ಟಿಸುವುದಕ್ಕೆ ಮತ್ತು ಅದರ ಮೂಲಕ ಜನರ ಕೊಳ್ಳುವ ಶಕ್ತಿ ಹೆಚ್ಚಿಸುವುದಕ್ಕೆ ಹೆಚ್ಚಿನ ಒತ್ತು ಕೊಡಬೇಕಿತ್ತು. ಆದರೆ, ಈ ಬಾರಿಯ ಬಜೆಟ್ ಇದರಲ್ಲಿ ದಯನೀಯವಾಗಿ ಸೋತಿರುವುದು ಕಾಣಿಸುತ್ತಿದೆ.

ಇದಕ್ಕೆ ಸರಳ ಉದಾಹರಣೆ ಎಂದರೆ ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ (ನರೇಗಾ) ಕೇವಲ 61,500 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ.

ಹೋದವರ್ಷ ಅಂದರೆ 2019-20 ರಲ್ಲಿ ಈ ಯೋಜನೆಗೆ ಖರ್ಚಾಗಿದ್ದ ಹಣ 71,000 ಕೋಟಿ ರೂಪಾಯಿಗಳು.

ಹೋದವರ್ಷಕ್ಕಿಂತ ಈ 2020-21 ರ ಬಜೆಟ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 9,500 ಕೋಟಿಗಳಷ್ಟು ಕಡಿಮೆ ಹಣ ತೆಗೆದಿರಿಸಲಾಗಿದೆ.

ಸರ್ಕಾದ ಅಂಕಿಅಂಶಗಳ ಪ್ರಕಾರವೇ 2011-12 ರಲ್ಲಿ ಗ್ರಾಮೀಣ ಭಾಗದ ಪ್ರತಿ ವ್ಯಕ್ತಿಯ ತಿಂಗಳ ಖರ್ಚು ಸರಾಸರಿ ₹1216.88 ರಷ್ಟಿದ್ದರೆ ಅದು 2017-18 ರಲ್ಲಿ ₹1109.74 ರಷ್ಟಕ್ಕೆ ಇಳಿದಿದೆ. ಈ ಒಟ್ಟಾರೆ ಕುಸಿತದ ಪ್ರಮಾಣ ಶೇ 8.8 ರಷ್ಟಿದೆ. ಭಾರತದ ಗ್ರಾಮೀಣ ಆರ್ಥಿಕ ಕುಸಿತದ ಚಿತ್ರಣವನ್ನು ಈ ಅಂಕಿಅಂಶ ಸ್ಪಷ್ಟವಾಗಿ ತೋರಿಸುತ್ತವೆ.

ಇಂತಹ ಪರಿಸ್ಥಿತಿಯಲ್ಲಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯು ತಕ್ಷಣ ಉದ್ಯೋಗ ಸೃಷ್ಟಿ ಮಾಡುವ ಮತ್ತು ಗ್ರಾಮೀಣ ಭಾಗದ ಜನರ ಕೊಳ್ಳುವ ಸಾಮರ್ಥ್ಯವನ್ನು ತಕ್ಷಣವೇ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದ್ದು ಅದನ್ನು ಹಾಗೆಯೇ ಬಳಸಿಕೊಳ್ಳಬೇಕಿತ್ತು.

ಅಂದರೆ, ಈ ಬಾರಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಬಜೆಟ್ಟಿನಲ್ಲಿ ಕನಿಷ್ಟ ಒಂದು ಲಕ್ಷ ಕೋಟಿಯಷ್ಟು ಅನುದಾನ ಕೊಡಬೇಕಿತ್ತು. ಇದರಿಂದಾಗಿ ಇವತ್ತಿಗೂ ಭಾರತದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆಯಿರುವ ಹಳ್ಳಿಗಳಲ್ಲಿ ತಾತ್ಕಾಲಿಕವಾದ ಉದ್ಯೋಗವಾದರೂ ಸೃಷ್ಟಿಯಾಗಿ ಅದರಿಂದ ಆರ್ಥಿಕ ಚೇತರಿಕೆಯೂ ಆಗುತ್ತಿತ್ತು.

ಆದರೆ, ಈ ಯೋಜನೆಗೆ ಕಳೆದ ಬಾರಿ ಖರ್ಚು ಮಾಡಿದ್ದಕ್ಕಿಂತ ಕಡಿಮೆ ಅನುದಾನ ಕೊಡುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಬಗ್ಗೆ ತನಗೆ ಬದ್ಧತೆಯಿಲ್ಲ ಎಂಬುದನ್ನು ತೋರಿಸಿದಂತಾಗಿದೆ.

ಹಾಗೆಯೇ, ಆರ್ಥಿಕ ಕುಸಿತದಿಂದ ದೇಶವನ್ನು ಮೇಲೆತ್ತುವ ಕ್ರಮಗಳ ಬಗ್ಗೆಯೂ ತನಗಿರುವ ಅಜ್ಞಾನವನ್ನು ತೋರಿಸಿದೆ.

ಆರ್ಥಿಕ ತಜ್ಞ ಕೇನ್ಸ್‌ನ ಪ್ರಖ್ಯಾತ ಹೇಳಿಕೆಯೊಂದಿದೆ.

“ಆರ್ಥಿಕ ಕುಸಿತದ ಕಾಲದಲ್ಲಿ ಸರ್ಕಾರ ಅತಿ ಹೆಚ್ಚು ಖರ್ಚು ಮಾಡಬೇಕು. ಜನರ ಕೈಯಲ್ಲಿ ಗುಂಡಿ ತೆಗೆಸಿ, ನಂತರ ಅದೇ ಗುಂಡಿಯನ್ನು ಅವರ ಕೈಲೇ ಪುನಃ ಮುಚ್ಚಿಸಿ ಅವರಿಗೆ ಆ ಕೆಲಸ ಮಾಡಿದ್ದಕ್ಕೆ ಸರ್ಕಾರ ಹಣ ಕೊಟ್ಟು ಜನರ ಕೈಯಲ್ಲಿ ಹಣ ಓಡಾಡುವಂತೆ ಮಾಡಬೇಕು.”

ಆರ್ಥಿಕ ತಜ್ಞ ಕೇನ್ಸ್‌

ಆದರೆ, ಈಗಿನ ಬಜೆಟ್‌ನಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿ ಸರ್ಕಾರ ನಡೆದುಕೊಂಡಿರುವಂತೆ ಕಾಣುತ್ತದೆ.

ಶಿಕ್ಷಣ ಕ್ಷೇತ್ರಕ್ಕೆ ಹೋದಬಾರಿಗಿಂತ ಕೇವಲ 4,800 ಕೋಟಿಗಳಷ್ಟು ಮಾತ್ರ ಹೆಚ್ಚುವರಿ ಹಣ ನೀಡಲಾಗಿದೆ (ಹೋದಬಾರಿ 94,800 ಕೋಟಿ ಮತ್ತು ಈ ಬಾರಿ 99,300 ಕೋಟಿ). ಶಿಕ್ಷಣಕ್ಕೆ ಹೆಚ್ಚು ಹಣ ನೀಡಿ ಉತ್ತಮ ಶಿಕ್ಷಣ ಕೊಟ್ಟಾಗ ಮಾತ್ರ ಕ್ಷಮತೆಯುಳ್ಳ ಯುವಜನರು ತಯಾರಾಗಿ ಉದ್ಯೋಗಗಳನ್ನು ಪಡೆಯಲು ಅರ್ಹರಾಗುತ್ತಾರೆ. ಆದರೆ, ಈ ಬಜೆಟ್ ಶಿಕ್ಷಣಕ್ಕೆ ಅಗತ್ಯವಿರುವಷ್ಟು ಒತ್ತು ನೀಡಿಲ್ಲದಿರುವುದು ಮೇಲ್ನೋಟಕ್ಕೇ ಕಾಣಿಸುತ್ತಿದೆ.

ಹಾಗೆಯೇ, skill development ಗೆ ಈ ಬಜೆಟ್ ಮೀಸಲಿಟ್ಟಿರುವ ಹಣ ಕೇವಲ 3,000 ಕೋಟಿ.

ಇವತ್ತು ಕೋಟ್ಯಂತರ ನಿರುದ್ಯೋಗಿಗಳಿರುವಾಗ ಉದ್ಯೋಗ ಪಡೆಯಲು ಅಗತ್ಯ ತರಬೇತಿಯ ತುರ್ತಿತ್ತು. ಆದರೆ ಅದಕ್ಕೆ ಅತಿಕಡಿಮೆ ಹಣ ನಿಗದಿಪಡಿಸುವ ಮೂಲಕ ಸರ್ಕಾರ ಉದ್ಯೋಗ ಸೃಷ್ಟಿಯ ಬಗ್ಗೆ ತನಗಿರುವ ತಾತ್ಸಾರ ತೋರಿದಂತಾಗಿದೆ.

ಜೊತೆಗೆ, ಹೆಚ್ಚಿನ ಉದ್ಯೋಗ ಸೃಷ್ಟಿಸಬಲ್ಲ ಮೂಲಸೌಕರ್ಯ ಅಭಿವೃದ್ಧಿ, ಕಟ್ಟಡ ನಿರ್ಮಾಣ ಮತ್ತು ತಯಾರಿಕಾ ಕ್ಷೇತ್ರಗಳಿಗೆ ಈ ಕುಸಿತದ ಸಂದರ್ಭದಲ್ಲಿ ಮಾಮೂಲಿಗಿಂತ ಹೆಚ್ಚಿನ ಅನುದಾನ ನೀಡಬೇಕಿತ್ತು. ಇದು ಕೂಡ ಬಜೆಟ್ಟಲ್ಲಿ ಕಾಣುತ್ತಿಲ್ಲ.

ಒಟ್ಟಾರೆಯಾಗಿ, ಈ ಬಾರಿಯ ಬಜೆಟ್ ಅತೀ ಅವಶ್ಯವಿದ್ದ ಉದ್ಯೋಗ ಸೃಷ್ಟಿಗಾಗಲೀ ತನ್ಮೂಲಕ ಆರ್ಥಿಕ ಚೇತರಿಕೆಗಾಗಲೀ ಒತ್ತು ಕೊಟ್ಟಿಲ್ಲ ಎನ್ನುವುದು ಮೇಲ್ನೋಟಕ್ಕೇ ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...