HomeಮುಖಪುಟJNU ನಲ್ಲಿ ಎಡಪಂಥೀಯ ವಿದ್ಯಾರ್ಥಿಗಳು ದಾಳಿ ಮಾಡಿದ್ದಾರೆ ಎಂದು ಫ್ಲೆಕ್ಸ್ ಹಾಕಿದ ABVP : ಇಲ್ಲ...

JNU ನಲ್ಲಿ ಎಡಪಂಥೀಯ ವಿದ್ಯಾರ್ಥಿಗಳು ದಾಳಿ ಮಾಡಿದ್ದಾರೆ ಎಂದು ಫ್ಲೆಕ್ಸ್ ಹಾಕಿದ ABVP : ಇಲ್ಲ ಎಂದ ಸಂತ್ರಸ್ತ..

- Advertisement -
- Advertisement -

ಜನವರಿ 5 ರಂದು ದೆಹಲಿಯ ಜೆಎನ್‌ಯು ವಿವಿಗೆ ಮುಸುಕುಧಾರಿ ಗೂಂಡಾಗಳು ನುಗ್ಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದರು. ಇದಾದನಂತರ ಹಲ್ಲೆ ಮಾಡಿದವರು ಎಡಪಂಥೀಯ ವಿದ್ಯಾರ್ಥಿಗಳು ಎಂದು ಆರೋಪಿಸಿ ABVP, ಸಂತ್ರಸ್ತರ ಫೋಟೊಗಳ ಫ್ಲೆಕ್ಸ್ ಹಾಕಿ ಪ್ರಚಾರ ಮಾಡಿತ್ತು. ಅದರಲ್ಲಿ ಕಮಲೇಶ್ ಮಂಡ್ರಿಯ ಎಂಬ ವ್ಯಕ್ತಿಗೆ ತಲೆಗೆ ಆದ ಗಾಯಗಳಿರುವ ಹಲವು ಫೋಟೊಗಳನ್ನು ಎಬಿವಿಪಿ ಬಳಸಿಕೊಂಡು ಲೆಫ್ಟ್ ಅಟ್ಯಾಕ್ ಜೆಎನ್‌ಯು ಎಂಬ ಹ್ಯಾಷ್ ಟ್ಯಾಗ್ ಬಳಸಿತ್ತು.

ಕರ್ನಾಟಕದ ಎಬಿವಿಪಿ ಟ್ವಿಟ್ಟರ್ ಅಕೌಂಟ್‌ನಿಂದ ಸಹ “ಹಿಂಸಾಚಾರ ಮಾತ್ರ ಎಡಪಂಥೀಯರನ್ನು ವಿವರಿಸುತ್ತದೆ ಎಂದು ಮತ್ತೊಮ್ಮೆ ಸಾಬೀತಾಗಿದೆ. ಎಡ ಗೂಂಡಾಗಳು ವಿನಾಶಕ್ಕೆ ಹೋಗಲು ಜೆಎನ್‌ಯು ನೆಲವಾಗಿರಲು ಸಾಧ್ಯವಿಲ್ಲ. ಇದು ಈಗ ಸೈದ್ಧಾಂತಿಕ ಯುದ್ಧವಲ್ಲ. ಸಾಕು ಸಾಕು! ಎಬಿವಿಪಿ ಅವರು ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ ಉತ್ತರಿಸುತ್ತಾರೆ” ಎಂದು ಬರೆದುಕೊಂಡಿತ್ತು. ಇದನ್ನು ಸೂಕ್ಷö್ಮವಾಗಿ ಗಮನಿಸಿದರೆ ಬೇರೆ ಭಾಷೆಯಿಂದ ಗೂಗಲ್ ಅನುವಾದ ಮಾಡಿದಂತೆ ಕಾಣುತ್ತದೆ.

ಆದರೆ ಸತ್ಯ ಏನೆಂದರೆ, ಯಾರ ಫೋಟೊವನ್ನು ಎಬಿವಿಪಿ ಬಳಸಿಕೊಂಡಿತ್ತೋ ಅದೇ ಕಮಲೇಶ್ ಮಂಡ್ರಿಯ ಎಂಬ ವ್ಯಕ್ತಿ, “ನನ್ನ ಮೇಲೆ ಹಲ್ಲೆಯಾಗಿದ್ದು ನಿಜ. ದಾಳಿ ಮಾಡಿದವರು ಎಡಪಂಥೀಯ ವಿದ್ಯಾರ್ಥಿಗಳಲ್ಲ ಬದಲಿಗೆ ಎಬಿವಿಪಿ ಸದಸ್ಯರು ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ, “ನಾನು ಜೆಎನ್‌ಯುನಲ್ಲಿ ಯಾವುದೇ ರಾಜಕೀಯ ಗುಂಪಿನ ಭಾಗವಲ್ಲ. ಆದರೂ ಜನವರಿ 4 ರಂದು ನಡೆದ ಹಿಂಸಾಚಾರದ ವಿರುದ್ಧ ನಾನು ಜೆಎನ್‌ಯು ಶಿಕ್ಷಕರ ಸಂಘ (ಜೆಎನ್‌ಯುಟಿಎ) ಜೊತೆಗೆ ಒಗ್ಗಟ್ಟಿನ ಮೆರವಣಿಗೆಯ ಭಾಗವಾಗಿದ್ದೆ.” ಎಂದು ಸಂದರ್ಶನದಲ್ಲಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಸಹ ಮಾಡಿದ್ದಾರೆ.

ಅಲ್ಲಿಗೆ ಎಬಿವಿಪಿ ಹೆಣೆದಿದ್ದು ಸುಳ್ಳು, ಹಾಕಿದ್ದ ಫ್ಲೆಕ್ಸ್ ಎಲ್ಲಾ ಸುಳ್ಳು ಎಂಬುದು ಜಗಜ್ಜಾಹೀರಾಗಿದೆ. ಅಲ್ಲದೇ ಎಬಿವಿಪಿಯವರೇ ದಾಳಿಕೋರರು ಎಂದು ಆತ ಹೇಳಿದ್ದಾನೆ. ಸಿಎನ್‌ಎನ್‌18 ನ ಜೆಬ ವಾರ್ಸಿ ಎಂಬುವವರೊಂದಿಗೆ ನಡೆಸಿದ ಸಂದರ್ಶನ ಇಲ್ಲಿದೆ ನೋಡಿ..

ಕೃಪೆ: ಆಲ್ಟ್‌ನ್ಯೂಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...