Homeಮುಖಪುಟಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ : ನಟ ರಜನಿಕಾಂತ್

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ : ನಟ ರಜನಿಕಾಂತ್

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್), ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಕುರಿತು ರಾಜಕೀಯ ಪಕ್ಷಗಳು ಸಾರ್ವಜನಿಕರನ್ನು ಪ್ರಚೋದಿಸುತ್ತಿವೆ ಎಂದು ನಟ ರಜನಿಕಾಂತ್ ಹೇಳಿದ್ದಾರೆ.

ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ದೇಶದಲ್ಲಿ ಮುಸ್ಲಿಮರಿಗೆ ಏನಾದರೂ ತೊಂದರೆಯಾದರೆ ನಾನು ಅವರ ಪರವಾಗಿ ದ್ವನಿ ಎತ್ತುತ್ತೇನೆ’ ಎಂದರು.

“ಈ ಕಾನೂನಿಂದ ಮುಸ್ಲಿಮರಿಗೆ ಯಾವುದೇ ತೊಂದರೆ ಇಲ್ಲ. ರಾಜಕೀಯ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಸಿಎಎ ಮೇಲೆ ಭಯವನ್ನು ಹರಡುತ್ತಿವೆ ಇದು ತುಂಬಾ ತಪ್ಪು. ಸಿಎಎ ಭಾರತೀಯ ನಾಗರಿಕರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಸ್ಪಷ್ಟವಾಗಿ ಹೇಳಿದೆ. ಇದು ನೆರೆಯ ರಾಷ್ಟ್ರಗಳ ನಿವಾಸಿಗಳಿಗೆ ಪೌರತ್ವ ನೀಡುವ ಕಾನೂನಾಗಿದೆ ” ಎಂದು ರಜನಿಕಾಂತ್ ಹೇಳಿದರು.

“ಇಲ್ಲಿ ಮುಸ್ಲಿಮರು ಚೆನ್ನಾಗಿಯೆ ಇದ್ದಾರೆ, ಅವರನ್ನು ಕೆಲವರು ಪ್ರಚೋದಿಸುತ್ತಿದ್ದಾರೆ, ವಿಭಜನೆಯ ಸಮಯದಲ್ಲಿ ಕೆಲವರು ಪಾಕಿಸ್ತಾನಕ್ಕೆ ಹೋದರೆ ಉಳಿದುಕೊಂಡಿರುವ ಮುಸ್ಲಿಮರು ಇದುವೆ ನಮ್ಮ ತಾಯಿನಾಡು ಎಂದು ನಿರ್ಧರಿಸಿ ಇಲ್ಲಿಯೆ ವಾಸಿಸುವುದಾಗಿ ಉಳಿದವರು, ಯಾರಾದರೂ ಅವರನ್ನು ದೇಶದಿಂದ ಹೊರಗೆ ಕಳುಹಿಸುವುದು ಹೇಗೆ? ಇಲ್ಲಿ ಮುಸ್ಲಿಮರಿಗೆ ಏನಾದರೂ ತೊಂದರೆಯಾದರೆ ನಾನು ಮೊದಲು ಧ್ವನಿ ಎತ್ತುತ್ತೇನೆ. ಎಂದಿದ್ದಾರೆ.

“ಸಿಎಎ ವಿರುದ್ಧ ಪ್ರತಿಭಟಿಸುವ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಮೊದಲು ಆಳವಾಗಿ ವಿಶ್ಲೇಷಿಸಬೇಕು. ಜೊತೆಗೆ ಪ್ರಾಧ್ಯಾಪಕರು ಅಥವಾ ಹಿರಿಯರೊಂದಿಗೆ ಮಾತುಕತೆ ನಡೆಸಬೇಕು. ಇಲ್ಲದಿದ್ದರೆ ರಾಜಕೀಯ ಮುಖಂಡರು ತಮ್ಮನ್ನು ಲಾಭಕ್ಕಾಗಿ ಬಳಸುತ್ತಾರೆ . ಒಂದು ವೇಳೆ ಎಫ್ಐಆರ್ ಆದರೆ ವಿದ್ಯಾರ್ಥಿಗಳು ತಮ್ಮ ಜೀವನವನ್ನೇ ಕಳೆದುಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಭಾರತೀಯ ನಾಗರಿಕರು ಮತ್ತು ವಿದೇಶಿಯರ ನಡುವೆ ವ್ಯತ್ಯಾಸವನ್ನು ತೋರಿಸಲು ಎನ್‌ಪಿಆರ್ ಅತ್ಯಗತ್ಯ ಎಂದು ರಜನಿಕಾಂತ್ ಹೇಳಿದರು. “ಎನ್‌ಪಿಆರ್ ಅತ್ಯಗತ್ಯ, ಕಾಂಗ್ರೆಸ್ ಇದನ್ನು 2010 ರಲ್ಲಿ ಮಾಡಿತ್ತು, ಅದನ್ನು 2015 ರಲ್ಲಿಯೂ ಮಾಡಲಾಯಿತು ಹಾಗೂ ಅದನ್ನು 2021 ರಲ್ಲಿ ಜನಸಂಖ್ಯೆಗಾಗಿ ಮಾಡಬೇಕಾಗಿದೆ. ಈ ದೇಶದ ಎಲ್ಲ ನಾಗರಿಕರು ಮತ್ತು ಹೊರಗಿನಿಂದ ಬಂದವರು ಯಾರು ಎಂದು ನಮಗೆ ತಿಳಿಯಬೇಕಲ್ಲವೇ? ”ಎಂದು ಅವರು ಕೇಳಿದರು.

“ಎನ್‌ಆರ್‌ಸಿ ಇದು ಕರಡು ಮಾಡಿದ ನಂತರವೇ ವಿವರಗಳು ಹೊರಬರುತ್ತವೆ ಎನ್‌ಆರ್‌ಸಿ ಇನ್ನೂ ಜಾರಿಗೆ ಬಂದಿಲ್ಲ …ಅದು ಬಂದರೆ ಅದರ ವಿವರಗಳನ್ನು ತಿಳಿದುಕೊಳ್ಳುತ್ತೇನೆ.” ಎಂದರು

ಶ್ರೀಲಂಕಾದ ತಮಿಳರ ಬಗ್ಗೆ,”ಕಳೆದ 30 ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಉಭಯ ಪೌರತ್ವವನ್ನು ನೀಡುವ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು. “ಶ್ರೀಲಂಕಾದಲ್ಲಿ ಇರುವ ತಮಿಳರಿಗೆ ತೊಂದರೆ ಕೊಡಬಾರದು, ಅವರು ಚೋಳರ ಕಾಲದಿಂದಲೂ ಅಲ್ಲಿ ವಾಸಿಸುತ್ತಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...