Homeಮುಖಪುಟಐದು ವರ್ಷ ಮುಖ್ಯಮಂತ್ರಿ ಆಗಿದ್ದರೂ ಕಾರು ಹೊಂದಿಲ್ಲದ ವ್ಯಕ್ತಿ!! ಕೇಜ್ರಿವಾಲ್ ಆಸ್ತಿ ಅಫಿಡವಿಟ್ ಘೋಷಣೆ.

ಐದು ವರ್ಷ ಮುಖ್ಯಮಂತ್ರಿ ಆಗಿದ್ದರೂ ಕಾರು ಹೊಂದಿಲ್ಲದ ವ್ಯಕ್ತಿ!! ಕೇಜ್ರಿವಾಲ್ ಆಸ್ತಿ ಅಫಿಡವಿಟ್ ಘೋಷಣೆ.

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ನವದೆಹಲಿಯಿಂದ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 3.4 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಇದು 2015 ರಿಂದ 1.3 ಕೋಟಿ ರೂ.ಗಳ ಅಲ್ಪ ಹೆಚ್ಚಳವಾಗಿದೆ ಎಂದು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. 2015 ರಲ್ಲಿ, ಕೇಜ್ರಿವಾಲ್ ಅವರ ಒಟ್ಟು ಆಸ್ತಿ 2.1 ಕೋಟಿ ರೂ ಇತ್ತು.

ಕೇಜ್ರಿವಾಲ್ ಅವರು ಚುನಾವಣಾ ಆಯೋಗಕ್ಕೆ ನೀಡಿದ ಇತ್ತೀಚಿನ ಅಫಿಡವಿಟ್‌ನಲ್ಲಿ ನೀಡಿದ ವಿವರಗಳ ಪ್ರಕಾರ, ನಗದು ಮತ್ತು ಹೂಡಿಕೆಯಂತಹ ಚರ ಆಸ್ತಿಗಳನ್ನು 9.95 ಲಕ್ಷ ರೂ ಎಂದು ಘೋಷಿಸಿದ್ದಾರೆ. ಅವರ ಪತ್ನಿ ಸುನಿತಾ ಒಟ್ಟು 12 ಲಕ್ಷ ಮೌಲ್ಯದ 320 ಗ್ರಾಂ ಚಿನ್ನ ಸೇರಿದಂತೆ ಒಟ್ಟು 57.07 ಲಕ್ಷ ರೂ. ಮತ್ತು 1 ಕೆಜಿ ಬೆಳ್ಳಿ 40,000 ರೂ ಆಗಿದೆ. 2015 ರಲ್ಲಿ ಕೇಜ್ರಿವಾಲ್ 2.26 ಲಕ್ಷ ರೂ.ಗಳ ಚರ ಆಸ್ತಿಯನ್ನು ಘೋಷಿಸಿದ್ದರೆ, ಅವರ ಪತ್ನಿ 15.28 ಲಕ್ಷ ಹೊಂದಿದ್ದರು.

ವಿಶೇಷವೆಂದರೆ, ಕೇಜ್ರಿವಾಲ್ ಅವರ ಆದಾಯವು 2014-15ರಲ್ಲಿ 7.42 ಲಕ್ಷ ರೂ.ಗಳಿಂದ 2018-19ರಲ್ಲಿ 2.81 ಲಕ್ಷ ರೂ.ಗೆ ಇಳಿದಿದೆ. ಅವರ ಪತ್ನಿ ಸುನೀತಾ ಅವರ ಆದಾಯವೂ 2014-15ರಲ್ಲಿ 12.08 ಲಕ್ಷ ರೂ.ಗಳಿಂದ 2018-19ರಲ್ಲಿ 9.94 ಲಕ್ಷ ರೂ.ಗೆ ಇಳಿದಿದೆ.

32 ಲಕ್ಷ ಮೌಲ್ಯದ ನಗದು ಮತ್ತು ನಿಶ್ಚಿತ ಠೇವಣಿಯನ್ನು ಸ್ವಯಂಪ್ರೇರಿತ ನಿವೃತ್ತಿ ಸೌಲಭ್ಯವಾಗಿ ಸುನಿತಾ ಕೇಜ್ರಿವಾಲ್ ಸ್ವೀಕರಿಸಿದ್ದಾರೆ ಮತ್ತು ಉಳಿದವು ಉಳಿತಾಯವಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಕೇಜ್ರಿವಾಲ್ ಅವರ ಬಳಿ 12,000 ರೂ., ಅವರ ಪತ್ನಿ 9,000 ರೂ. ನಗದು ಹಣವಿದೆ .

ಇದಲ್ಲದೆ, ನವದೆಹಲಿ ಕ್ಷೇತ್ರದ ಚಾಂದನಿ ಚೌಕ್‌ನಲ್ಲಿ ಮತದಾರನಾಗಿರುವ 51 ವರ್ಷದ ಕೇಜ್ರಿವಾಲ್‌ ಸ್ವತಃ ವಾಹನ ಹೊಂದಿಲ್ಲ. ಅವರ ಪತ್ನಿ 6.20 ಲಕ್ಷ ರೂಪಾಯಿ ಮೌಲ್ಯದ ಮಾರುತಿ ಬಲೆನೊ ಹೊಂದಿದ್ದಾರೆ. ಸುನಿತಾ ಅವರು ಸಾರ್ವಜನಿಕ ಭವಿಷ್ಯ ನಿಧಿಗಳು ಮತ್ತು ಎಸ್‌ಬಿಐ ಮ್ಯೂಚುವಲ್ ಫಂಡ್‌ಗಳಲ್ಲೂ ಹೂಡಿಕೆ ಮಾಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಅವರು ತಮ್ಮ ಹೆಸರಿನಲ್ಲಿ ಗಾಜಿಯಾಬಾದ್‌ನ ಇಂದಿರಾಪುರಂನಲ್ಲಿ ಖರೀದಿಸಿದ ಫ್ಲ್ಯಾಟ್ ಮತ್ತು ಹರಿಯಾಣದ ಶಿವಾನಿಯಲ್ಲಿ ಅನುವಂಶಿಕವಾಗಿ ಪಡೆದ ಆಸ್ತಿಯನ್ನು ಪ್ರಸ್ತುತ ಮಾರುಕಟ್ಟೆ ಮೌಲ್ಯ ಕ್ರಮವಾಗಿ 1.4 ಕೋಟಿ ಮತ್ತು 37 ಲಕ್ಷ ರೂ. ಆಗಿದೆ. 2010 ರಲ್ಲಿ ಗುರುಗ್ರಾಮ್‌ನಲ್ಲಿ ಸುನೀತಾ ಅವರು ಫ್ಲ್ಯಾಟ್ ಖರೀದಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ, ಇದರ ಮಾರುಕಟ್ಟೆ ಮೌಲ್ಯವು ಈಗ 1 ಕೋಟಿ ರೂ. ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...