Homeಮುಖಪುಟಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ..

ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ..

- Advertisement -
- Advertisement -

ಸಿದ್ದಗಂಗಾ ಮಠವೂ ಸೇರಿದಂತೆ 355 ಶಾಲೆಗಳಿಗೆ ಅಕ್ಕಿ ಮತ್ತು ಗೋದಿ ಪೂರೈಕೆ ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರ ಇದರಿಂದಾದ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಚಿವೆ ಶಶಿಕಲಾ ಜೊಲ್ಲೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮಿಗಳೊಂದಿಗೆ ಚರ್ಚೆ ನಡೆಸಿದರು. ಕೇಂದ್ರ ಸರ್ಕಾರ ಸಬ್ಸೀಡಿ ಅಕ್ಕಿ ಮತ್ತು ಗೋದಿ ನಿಲ್ಲಿಸಿರುವುದರಿಂದ ತಾತ್ಕಾಲಿಕ ವ್ಯತ್ಯಯವಾಗಿದೆ ಎಂಬುದನ್ನು ಸ್ವಾಮಿಗಳ ಗಮನಕ್ಕೆ ತಂದಿದ್ದಾರೆ.

ಕೆಲವು ಸಂಘ ಸಂಸ್ಥೆಗಳು ಸರ್ಕಾರಕ್ಕೆ ಪತ್ರವನ್ನು ಬರೆದಿದ್ದವು. ಆ ಪತ್ರಗಳನ್ನು ಪರಿಶೀಲಿಸಿದ ಅಧಿಕಾರಿಗಳು ಕೇಂದ್ರ ಸರ್ಕಾರ ಸಬ್ಸೀಡಿ ಅಕ್ಕಿ ಗೋದಿ ನಿಲ್ಲಿಸಿದೆ. ಸಿದ್ದಗಂಗಾ ಮಠಕ್ಕೆ ಅಕ್ಷರ ದಾಸೋಹ ಯೋಜನೆಯಡಿ ನೀಡುತ್ತಿದ್ದ ಅಕ್ಕಿ, ಗೋದಿ ನಿಲ್ಲಿಸಲಾಗಿದೆ ಎಂಬುದನ್ನು ಮಠದ ಶ್ರೀಗಳಿಗೆ ಸಚಿವೆ ವಿವರಿಸಿದರು. ಆಗಿರುವ ವ್ಯತ್ಯಯಕ್ಕೆ ಸಚಿವ ಶಶಿಕಲಾ ಜೊಲ್ಲೆ ವಿಷಾದ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಸಿದ್ದಲಿಂಗ ಸ್ವಾಮಿಗಳ ಕಚೇರಿಯಿಂದ ಹೊರ ಬಂದ ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಮಾಧಾನದಿಂದಲೇ ಉತ್ತರಿಸಿದರು. ಸಿದ್ದಗಂಗಾ ಮಠ ಸೇರಿದಂತೆ 355 ಶಾಲೆಗೆಳಿಗೆ ಅಕ್ಷರ ದಾಸೋಹದ ಅಕ್ಕಿ ಮತ್ತು ಗೋದಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯಕ್ಕೆ ಮುಖ್ಯಮಂತ್ರಿಗಳು ನನ್ನ ಮೇಲೆ ಗರಂ ಆಗಿಲ್ಲ. ಸಂಘ-ಸಂಸ್ಥೆಗಳು ಬರೆದಿರುವ ಪತ್ರದ ಸಾರಾಂಶವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾಗಿ ಜೊಲ್ಲೆ ಸಮಜಾಯಿಸಿ ನೀಡಿದರು.

ಅಕ್ಷರ ದಾಸೋಹ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಸಬ್ಸೀಡಿ ದರದಲ್ಲಿ ನೀಡುತ್ತಿದ್ದ ಅಕ್ಕಿ ಮತ್ತು ಗೋಧಿಯನ್ನು ಸಂಪೂರ್ಣವಾಗಿ ನಿಲ್ಲಿಸಿದೆ. ಇದರಿಂದ ಒಂದೆರಡು ದಿನ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ಸತ್ಯ ಎಂದು ಒಪ್ಪಿಕೊಂಡ ಸಚಿವೆ ಶಶಿಕಲ ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿಗಳು ಎಷ್ಟು ಖರ್ಚಾಗುತ್ತದೆ ಎಂದು ಕೇಳಿದರು. 18 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಹೇಳಿದೆ. ಅದಕ್ಕೆ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದಿಂದಲೇ ಅಕ್ಕಿ ಗೋಧಿ ಪೂರೈಕೆ ಮಾಡೋಣ ಎಂದು ಅನುಮೋದನೆ ನೀಡಿದರು ಎಂದು ವಿವರಿಸಿದರು.

ಮಠದ ವಿದ್ಯಾರ್ಥಿಗಳಿಗೆ ತಿಂಗಳಿಗೆ 735 ಕ್ವಿಂಟಾಲ್ ಅಕ್ಕಿ, 365 ಕ್ವಿಂಟಾಲ್ ಗೋಧಿ ಬೇಕಾಗುತ್ತದೆ. ವಾರ್ಷಿಕ 360 ಮೆಟ್ರಿಕ್ ಟನ್ ಅಕ್ಕಿ, 160 ಮೆಟ್ರಿಕ್ ಟನ್ ಗೋಧಿ ಬೇಕು. ಅದನ್ನು ರಾಜ್ಯ ಸರ್ಕಾರವೇ ಪೂರೈಕೆ ಮಾಡುತ್ತದೆ. ಯಾವುದೇ ಕಾರಣಕ್ಕೂ ಅಕ್ಕಿ, ಗೋಧಿ ವಿತರಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಅಂಗನವಾಡಿ ಕಾರ್ಯಕರ್ತರಿಗೆ ಬೇರೆ ಹೆಸರನ್ನು ಕೊಡುವ ಬಗ್ಗೆ ಸಮಾಲೋಚನೆ ನಡೆಯುತ್ತಿದೆ. ಕಾರ್ಯಕರ್ತೆ ಅಂದರೆ ಯಾಕೋ ಸರಿಹೋಗುತ್ತಿಲ್ಲ. ಹಾಗಾಗಿ ಸಾರ್ವಜನಿಕರಿಂದ ಉತ್ತಮ ಹೆಸರು ನೀಡುವಂತೆ ಆಹ್ವಾನ ನೀಡಿದ್ದೇವೆ. ಒಳ್ಳೆಯ ಹೆಸರು ದೊರೆತ ಮೇಲೆ ಅಂಗನವಾಡಿ ಕಾರ್ಯಕರ್ತೆಯರ ಹೆಸರು ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...