Homeಮುಖಪುಟಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ..

ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ..

- Advertisement -
- Advertisement -

ಸಿದ್ದಗಂಗಾ ಮಠವೂ ಸೇರಿದಂತೆ 355 ಶಾಲೆಗಳಿಗೆ ಅಕ್ಕಿ ಮತ್ತು ಗೋದಿ ಪೂರೈಕೆ ಸ್ಥಗಿತಗೊಳಿಸಿದ್ದ ರಾಜ್ಯ ಸರ್ಕಾರ ಇದರಿಂದಾದ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಚಿವೆ ಶಶಿಕಲಾ ಜೊಲ್ಲೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮಿಗಳೊಂದಿಗೆ ಚರ್ಚೆ ನಡೆಸಿದರು. ಕೇಂದ್ರ ಸರ್ಕಾರ ಸಬ್ಸೀಡಿ ಅಕ್ಕಿ ಮತ್ತು ಗೋದಿ ನಿಲ್ಲಿಸಿರುವುದರಿಂದ ತಾತ್ಕಾಲಿಕ ವ್ಯತ್ಯಯವಾಗಿದೆ ಎಂಬುದನ್ನು ಸ್ವಾಮಿಗಳ ಗಮನಕ್ಕೆ ತಂದಿದ್ದಾರೆ.

ಕೆಲವು ಸಂಘ ಸಂಸ್ಥೆಗಳು ಸರ್ಕಾರಕ್ಕೆ ಪತ್ರವನ್ನು ಬರೆದಿದ್ದವು. ಆ ಪತ್ರಗಳನ್ನು ಪರಿಶೀಲಿಸಿದ ಅಧಿಕಾರಿಗಳು ಕೇಂದ್ರ ಸರ್ಕಾರ ಸಬ್ಸೀಡಿ ಅಕ್ಕಿ ಗೋದಿ ನಿಲ್ಲಿಸಿದೆ. ಸಿದ್ದಗಂಗಾ ಮಠಕ್ಕೆ ಅಕ್ಷರ ದಾಸೋಹ ಯೋಜನೆಯಡಿ ನೀಡುತ್ತಿದ್ದ ಅಕ್ಕಿ, ಗೋದಿ ನಿಲ್ಲಿಸಲಾಗಿದೆ ಎಂಬುದನ್ನು ಮಠದ ಶ್ರೀಗಳಿಗೆ ಸಚಿವೆ ವಿವರಿಸಿದರು. ಆಗಿರುವ ವ್ಯತ್ಯಯಕ್ಕೆ ಸಚಿವ ಶಶಿಕಲಾ ಜೊಲ್ಲೆ ವಿಷಾದ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.

ಸಿದ್ದಲಿಂಗ ಸ್ವಾಮಿಗಳ ಕಚೇರಿಯಿಂದ ಹೊರ ಬಂದ ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಮಾಧಾನದಿಂದಲೇ ಉತ್ತರಿಸಿದರು. ಸಿದ್ದಗಂಗಾ ಮಠ ಸೇರಿದಂತೆ 355 ಶಾಲೆಗೆಳಿಗೆ ಅಕ್ಷರ ದಾಸೋಹದ ಅಕ್ಕಿ ಮತ್ತು ಗೋದಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯಕ್ಕೆ ಮುಖ್ಯಮಂತ್ರಿಗಳು ನನ್ನ ಮೇಲೆ ಗರಂ ಆಗಿಲ್ಲ. ಸಂಘ-ಸಂಸ್ಥೆಗಳು ಬರೆದಿರುವ ಪತ್ರದ ಸಾರಾಂಶವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾಗಿ ಜೊಲ್ಲೆ ಸಮಜಾಯಿಸಿ ನೀಡಿದರು.

ಅಕ್ಷರ ದಾಸೋಹ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಸಬ್ಸೀಡಿ ದರದಲ್ಲಿ ನೀಡುತ್ತಿದ್ದ ಅಕ್ಕಿ ಮತ್ತು ಗೋಧಿಯನ್ನು ಸಂಪೂರ್ಣವಾಗಿ ನಿಲ್ಲಿಸಿದೆ. ಇದರಿಂದ ಒಂದೆರಡು ದಿನ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದು ಸತ್ಯ ಎಂದು ಒಪ್ಪಿಕೊಂಡ ಸಚಿವೆ ಶಶಿಕಲ ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಮುಖ್ಯಮಂತ್ರಿಗಳು ಎಷ್ಟು ಖರ್ಚಾಗುತ್ತದೆ ಎಂದು ಕೇಳಿದರು. 18 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಹೇಳಿದೆ. ಅದಕ್ಕೆ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರದಿಂದಲೇ ಅಕ್ಕಿ ಗೋಧಿ ಪೂರೈಕೆ ಮಾಡೋಣ ಎಂದು ಅನುಮೋದನೆ ನೀಡಿದರು ಎಂದು ವಿವರಿಸಿದರು.

ಮಠದ ವಿದ್ಯಾರ್ಥಿಗಳಿಗೆ ತಿಂಗಳಿಗೆ 735 ಕ್ವಿಂಟಾಲ್ ಅಕ್ಕಿ, 365 ಕ್ವಿಂಟಾಲ್ ಗೋಧಿ ಬೇಕಾಗುತ್ತದೆ. ವಾರ್ಷಿಕ 360 ಮೆಟ್ರಿಕ್ ಟನ್ ಅಕ್ಕಿ, 160 ಮೆಟ್ರಿಕ್ ಟನ್ ಗೋಧಿ ಬೇಕು. ಅದನ್ನು ರಾಜ್ಯ ಸರ್ಕಾರವೇ ಪೂರೈಕೆ ಮಾಡುತ್ತದೆ. ಯಾವುದೇ ಕಾರಣಕ್ಕೂ ಅಕ್ಕಿ, ಗೋಧಿ ವಿತರಿಸುವುದನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಬರುವ ಅಂಗನವಾಡಿ ಕಾರ್ಯಕರ್ತರಿಗೆ ಬೇರೆ ಹೆಸರನ್ನು ಕೊಡುವ ಬಗ್ಗೆ ಸಮಾಲೋಚನೆ ನಡೆಯುತ್ತಿದೆ. ಕಾರ್ಯಕರ್ತೆ ಅಂದರೆ ಯಾಕೋ ಸರಿಹೋಗುತ್ತಿಲ್ಲ. ಹಾಗಾಗಿ ಸಾರ್ವಜನಿಕರಿಂದ ಉತ್ತಮ ಹೆಸರು ನೀಡುವಂತೆ ಆಹ್ವಾನ ನೀಡಿದ್ದೇವೆ. ಒಳ್ಳೆಯ ಹೆಸರು ದೊರೆತ ಮೇಲೆ ಅಂಗನವಾಡಿ ಕಾರ್ಯಕರ್ತೆಯರ ಹೆಸರು ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...