Homeಚಳವಳಿಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ...

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್‌.ಎಸ್‌.ವಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಹೆಚ್ಚಿದ ಆಕ್ರೋಶ..

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

- Advertisement -
- Advertisement -

ಕಲಬುರಗಿಯಲ್ಲಿ ನಿನ್ನೆಯಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದೆ. ಸಾವಿರಾರು ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಜನಸಾಮಾನ್ಯರು ಅತಿ ಉತ್ಸಾಹದಿಂದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಎಚ್‌.ಎಸ್‌. ವೆಂಕಟೇಶ ಮೂರ್ತಿ ಮತ್ತು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ವಿರುದ್ಧ ಅಪಸ್ವರ ಕೇಳಿಬಂದಿದೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಮೊದಲಿಗೆ ಸರ್ವಾಧ್ಯಕ್ಷರ ನುಡಿಗಳನ್ನಾಡಿದ ಎಚ್‌.ಎಸ್‌. ವೆಂಕಟೇಶ ಮೂರ್ತಿಯವರು “ಒಕ್ಕೂಟ ವ್ಯವಸ್ಥೆಗೆ ಸಂಸ್ಕೃತ ಇಲ್ಲವೇ ಪ್ರಕೃತ ಭಾಷೆ ಅಗತ್ಯವಾಗಿದೆ. ಸಂಸ್ಕೃತಿ ರಾಷ್ಟ್ರಭಾಷೆಯಾಗಲಿ, ಭಾರತದ ಎಲ್ಲಾ ಭಾಷೆಗಳೂ ನಮ್ಮ ಮಾತೃಭಾಷೆಗಳೇ” ಎಂಬ ಭಾಷಣಕ್ಕೆ ಬಹಳಷ್ಟು ಜನ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಹಿಂದೊಮ್ಮೆ ಶಿಕ್ಷಣದಲ್ಲಿ ಸಂಸ್ಕೃತದ ಹೇರಿಕೆಯನ್ನು ಇಡೀ ಕನ್ನಡ ನಾಡು ಅಣ್ಣಾವ್ರ ನೇತೃತ್ವದಲ್ಲಿ ವೀರೋಧಿಸಿ ತನ್ನ ಒಗ್ಗಟ್ಟು ತೋರಿಸಿತ್ತು.

ಈಗ ಸಂಸ್ಕೃತವನ್ನ ದೇಶದ ಸಂಪರ್ಕ ಭಾಷೆಯಾಗಿ ಅಭಿವೃದ್ಧಿಪಡಿಸಬೇಕು ಎನ್ನುವ ತಮ್ಮ ಮಾತನ್ನ ಸಮ್ಮೇಳನಾಧ್ಯಕ್ಷರು ಹಿಂದೆ ಪಡೆಯಬೇಕು. ಹೀಗೆ ಮಾತಾಡುವುದು ಕುವೆಂಪು, ಶಂಬಾ, ರಾಜ್ ಕುಮಾರ್ ಮುಂತಾದ ಹಿರಿಯ ಕನ್ನಡ ಮನಸ್ಸುಗಳನ್ನ ಅಪಮಾನ ಮಾಡಿದಂತೆ ಎಂದು ಕನ್ನಡಿಗರು ಭಾವಿಸಬೇಕು.

ಸನ್ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಹಿಂದೆ ಗೋಕಾಕ್ ಚಳುವಳಿ ಕಾರಣವಾಗಿ, ಗುಂಡೂರಾಯರು ಅಧಿಕಾರ ಕಳೆದುಕೊಂಡರು. ಈಗ ಕನ್ನಡದ ಅಗ್ರಮಾನ್ಯತೆಯನ್ನ ಎತ್ತಿ ಹಿಡಿಯುವ ಸರದಿ ನಿಮ್ಮದು. ಸಮ್ಮೇಳನಾಧ್ಯಕ್ಷರ ಹೇಳಿಕೆಯನ್ನ ವಿರೋಧಿಸಿ ನಿಮ್ಮ ಕನ್ನಡತನವನ್ನ ಮೆರೆಯಿರಿ” ಎಂದು ಕವಿ ಚಿದಂಬರ ನರೇಂದ್ರರವರು ಒತ್ತಾಯಿಸಿದ್ದಾರೆ.

ಮನು ಬಳಿಗಾರ್‌

ಸಂಸ್ಕೃತ ಕೇಳಿದರೆನೆ ಕರ್ಣದಲ್ಲಿ ಕಾದ ಸೀಸ ಉಯ್ದ ಸಂಗತಿಗಳು ಇರುವಾಗ ಅದೇಗೆ ರಾಷ್ಟ್ರಭಾಷೆಯಾಗಬೇಕೆಂದು ಪ್ರತಿಪಾದಿಸುತ್ತಿದ್ದಾರೊ ತಿಳಿಯದೊ? ಎಂದು ಈಹತಾ ಎಂಬುವವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಎಚ್ ಎಸ್ ವೆಂಕಟೇಶ ಮೂರ್ತಿಯವರು ಸಂಸ್ಕೃತ ಸಾಹಿತ್ಯ ಸಮ್ಮೇಳನ ಅಂತ ಏನಾದರೂ ಇದ್ರೆ, ಅವರು ಅದರ ಅಧ್ಯಕ್ಷತೆ ವಹಿಸಲಿ, ಅಲ್ಲಿ ಏನಾದರೂ ಹೇಳಲಿ! ಅವರ ಹೇಳಿಕೆಗೆ ನಮ್ಮ‌ ಸಮ್ಮೇಳನ ವೇದಿಕೆಯಲ್ಲ! ಎಂದು ವಿನಯ ಎಂಬುವವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನು ಬಳಿಗಾರ್‌ ರಾಜೀನಾಮೆಗೆ ವೇದಿಕೆಯಲ್ಲಿ ಹೆಚ್ಚಿದ ಒತ್ತಡ!

ಇನ್ನು ಕಸಾಪ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂಬ ಆಗ್ರಹ ಸಾಹಿತ್ಯ ಸಮ್ಮೇಳನದ ವೇದಿಕೆಯಿಂದಲೇ ಹೆಚ್ಚಾಗುತ್ತಿದೆ. ಚಿಂತಕಿ ಕೆ.ನೀಲಾ ಮತ್ತು ಹಿರಿಯ ಸಾಹಿತಿ, ಬರಹಗಾರ ಆರ್‌.ಕೆ ಹುಡಗಿ ಮನು ಬಳಿಗಾರ್‌ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಲು ಅರ್ಹರಲ್ಲ, ಅವರು ರಾಜೀನಾಮೆ ನಿಡಬೇಕೆಂದು ಒತ್ತಾಯಿಸಿದ್ದಾರೆ.

ಇಂದು ಕಲಬುರಗಿ ಜಿಲ್ಲಾ ದರ್ಶನ ಗೋಷ್ಠಿಯ ಅಧ್ಯಕ್ಷೀಯ ನುಡಿಗಳನ್ನಾಡಿದ ಆರ್‌.ಕೆ ಹುಡಗಿಯವರು “ಕಸಾಪ ಒಂದು ಸ್ವಾಯುತ್ತ ಸಂಸ್ಥೆಯಾಗಿದೆ. ಇಂತಹ ಸಂದರ್ಭದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಳುವ ಸರ್ಕಾರ ಮಿತಿಮೀರಿ ಮಧ್ಯ ಪ್ರವೇಶ ಮಾಡಿತ್ತು. ಕನ್ನಡ ಸಂಸ್ಕೃತಿ ಸಚಿವರೆ ಅನುದಾನ ನೀಡದೇ ಸತಾಯಿಸಿದರು ಮಾತ್ರವಲ್ಲ ಸಮ್ಮೇಳನ ಎರಡನೇ ದಿನ ನಡೆದರೆ ಪೆಟ್ರೋಲ್‌ ಬಾಂಬ್‌ ಹಾಕುತ್ತೇವೆ ಎಂದು ಬೆದರಿಸಿದರು. ಆದರೂ ಅಧ್ಯಕ್ಷ ಮನು ಬಳಿಗಾರ್‌ ಸುಮ್ಮನಿದ್ದರು. ಇಂದಿನ ಸಮ್ಮೇಳನ ಅಧ್ಯಕ್ಷರಾಗಿರುವ ಎಚ್‌.ಎಸ್‌ ವೆಂಕಟೇಶ ಮೂರ್ತಿಯವರು ಸಹ ಆಗ ದನಿ ಎತ್ತಲಿಲ್ಲ” ಎಂದು ಅಸಮಾನಧಾನ ವ್ಯಕ್ತಪಡಿಸಿದ್ದಾರೆ.

ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ನೀಡುವ ವಿಚಾರಕ್ಕೆ ಸಚಿವರು ಅನುದಾನ ನಿಮ್ಮಪ್ಪನ ಮನೆಯದ್ದಲ್ಲೆ ಎಂಬ ದರ್ಪದ ಮಾತುಗಳನ್ನಾಡಿದ್ದಾರೆ. ಅನುದಾನ ಜನಸಾಮಾನ್ಯರು ಕಟ್ಟುವ ತೆರಿಗೆಯಿಂದ ಬಂದಿದ್ದು ಎಂಬುದನ್ನು ಅವರು ಮರೆಯಬಾರದು ಎಂದು ತಿರುಗೇಟು ನೀಡಿದ್ದಾರೆ.

ಕೆ.ನೀಲಾ

ಇನ್ನು ನಿನ್ನೆಯ ಸಮ್ಮೇಳನದಲ್ಲಿ ಕಲಬುರಗಿಯ ಮಹಿಳಾ ಹೋರಾಟಗಾರ್ತಿ ಮತ್ತು ಚಿಂತಕಿ ಕೆ.ನೀಲಾ ಮಾತನಾಡಿ “ಕಸಾಪ ಈಗ ಕನ್ನಡಿಗರ ಸಂಸ್ಥೆಯಾಗಿಲ್ಲ ಬದಲಿಗೆ ಆಳುವವರ ಕೊಂಪೆಯಾಗಿದೆ. ಇದಕ್ಕೆ ಕಾರಣಕರ್ತರಾದ ಅಧ್ಯಕ್ಷ ಮನು ಬಳಿಗಾರ್‌ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದ್ದರು.

ಹಿಂದೆ ಯಾವ ಸಮ್ಮೇಳನದಲ್ಲಿಯೂ ಈ ರೀತಿಯ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಈ ಬಾರಿಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಮತ್ತು ಕಸಾಪ ಅಧ್ಯಕ್ಷರ ವಿರುದ್ಧ ಟೀಕೆಗಳು ಕೇಳಿ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...