Homeಅಂಕಣಗಳುಮ್ಯೂಸಿಯಂನಾಗೆ ಪಕೋಡೇಂದ್ರನ ಫಿಟ್ನೆಸ್ ಪ್ರತಿಮೆ ಮಾಡಿಸಿದ್ರೆ ಹೆಂಗೆ

ಮ್ಯೂಸಿಯಂನಾಗೆ ಪಕೋಡೇಂದ್ರನ ಫಿಟ್ನೆಸ್ ಪ್ರತಿಮೆ ಮಾಡಿಸಿದ್ರೆ ಹೆಂಗೆ

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಈ ದೇಶ ಕಂಡ ಅತ್ಯುತ್ತಮ ಕಮಂಗಿ ಆಡಳಿತಗಾರ ಪಕೋಡತಾತನು ದೇಶವನ್ನಾಳಿದ ಪ್ರಧಾನಿಗಳ ಪ್ರತಿಮೆಗಳನ್ನು ಇಡಲು ಮ್ಯೂಸಿಯಂ ಸ್ಥಾಪನೆಗೆ ಮುಂದಾಗಿದ್ದು, ಈ ಮ್ಯೂಸಿಯಂನಲ್ಲಿ ನೆಹರು ಬಿಟ್ಟು ಉಳಿದೆಲ್ಲ ಪ್ರಧಾನಿಗಳ ಪ್ರತಿಕೃತಿಗಳು ಇರಲಿವೆಯಂತೆ. ನೆಹರು ಹೆಸರು ಕೇಳಿದರೆ ಮೂಲವ್ಯಾಧಿ ಪೀಡಿತರಂತೆ ಬುಳುಬುಳು ನರಳುವ ಸನಾತನಿಗಳ ಈ ಹೊಚ್ಚಹೊಸ ನವರಂಗಿ ನಾಟಕ ಕಂಡು ಕೈ ಪಕ್ಷದವರು ರೊಚ್ಚಿಗೆದ್ದಿದ್ದಾರೆ. ಪಾರ್ಲಿಮೆಂಟ್ ಡಿಸ್ಕೊಡ್ಯಾನ್ಸರ್ ಆಗಿರುವ ಪಕೋಡತಾತನ ಪ್ರತಿಮೆಯನ್ನು ಯಾವ ಬಗೆಯಲ್ಲಿ ಕೆತ್ತಬೇಕೆಂದು ಶಿಲ್ಪಿಗಳು ತಲೆಕೆಡಿಸಿಕೊಂಡಿದ್ದು, ಕನ್ಹಯ್ಯ ಕುಮಾರನ ಸಲಹೆಯಂತೆ “ಬಂಡೆ ಮೇಲೆ ಹೊಟ್ ಮಕಾಡೆ ದಬಾಕೊಂಡಿರೋ ಪಕೋಡತಾತನ” ವಿಗ್ರಹ ಕೆತ್ತಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಪಟ್ಟುಬಿಡದ ಕನ್ಹಯ್ಯ.. ‘ಬಂಡೆ ಮೇಲ್ ಮಕಾಡೆ’ ವಿಗ್ರಹ ಕೆತ್ತಲಾಗದಿದ್ದರೆ, ಪಕೋಡತಾತ ಪುಕ್ಕಲನಂತೆ ಬುಳುಬುಳನೆ ಅಳುತ್ತಾ ಭಾಷಣ ಬಿಗಿಯುತ್ತಿರುವ ವಿಗ್ರಹ ಕೆತ್ತಿ, ಪ್ರತಿಮೆಯ ಕಣ್ಣಿಂದ ಕಣ್ಣೀರು ಬರಲು ಎರಡೂ ಕಣ್ಣಿಗೆ ಗೋಮೂತ್ರದ ಪೈಪುಗಳನ್ನು ಫಿಕ್ಸು ಮಾಡಿ ಎಂದು ಇನ್ನೂ ಆಗ್ರಹಿಸಿಲ್ಲ ಎಂದು ವರದಿಯಾಗಿದೆ.
******
ಕಳ್ಳಕಾಕರು, ಮನೆಹಾಳ ರಾಜಕಾರಣಿಗಳನ್ನು ಕಂಡರೆ ಛಂಗನೆ ಎಗರಿ ಪಾದಕ್ಕೆ ಬೀಳುವ ಪೊಲೀಸರು ಜನಸಾಮಾನ್ಯರು, ಹೋರಾಟಗಾರರನ್ನು ಕಂಡರೆ ಮೂಗಿನೊಳಗೆ ಎರೆಹುಳ ಹೊಕ್ಕಂತಾಡುವುದು ಗೊತ್ತೇ ಇದೆ. ಇದಕ್ಕೆ ಹೊಸ ಉದಾಹರಣೆ ರಾಯಚೂರಿನಿಂದ ಬಂದಿದೆ. ಕಾರ್ಮಿಕರ ಪೀಡಕರ ವಿರುದ್ಧ ಮತ್ತು ವಿದ್ಯಾರ್ಥಿಗಳ ಪರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದ ರಾಯಚೂರಿನ ಮಾನ್ವಿ ನಗರದ ಎಸ್.ಎಫ್.ಐ ಸಂಘಟನೆಯ ಹೋರಾಟಗಾರರನ್ನು ಅಲ್ಲಿನ ಹೇತ್ಲಾಂಡಿ ಪೊಲೀಸರು ಯಾವ ವಿಚಾರಣೆಯಿಲ್ಲದೆ ರೌಡಿಪಟ್ಟಿಗೆ ಸೇರಿಸಿದ್ದಾರೆ. ಇನ್ನೊಂದು ಕಡೆ ಹುಬ್ಬಳ್ಳಿಯ ಗುತ್ತಿಗೆ ಪೌರಕಾರ್ಮಿಕರ ಸಂಘಟನೆಯ ಅಧ್ಯಕ್ಷನನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಅಲ್ಲಿನ ಮೇಯರ್ ಮತ್ತು ಪೊಲೀಸರು ಹುನ್ನಾರ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ತಮ್ಮ ಅಸಲಿ ಸಾಹುಕಾರರು ನಡೆಸೋ ಗಂಡಾಗುಂಡಿ ಯವಾರಗಳ ತಂಟೆಗೆ ಯಾರೇ ಬಂದರೂ ಪ್ಯಾಂಟೇರಿಸಿಕೊಂಡು ಹೊರಡುವ ಈ ಟೋಪಿಧಾರಿ ಸರ್ಕಾರಿ ಗೂಂಡಾಗಳು, ಅಪ್ಲೈ ಆಗದ ಕಾನೂನುಗಳನ್ನು ಹೋರಾಟಗಾರರ ಮೇಲೆ ಸುರಿದು ಮೀಸೆಗಳನ್ನು ತಿರುವಿಕೊಳ್ಳುತ್ತಿದ್ದಾರೆ. ಪೊಲೀಸರು ತಮ್ಮ ಆಳುವ ಯಜಮಾನರುಗಳು ಕಾಲಲ್ಲಿ ತಳ್ಳುವ ಡಾಗ್ ಬಿಸ್ಕತ್ತುಗಳನ್ನು ನಾಲಿಗೆಯಲ್ಲಿ ಎತ್ತಿಕೊಂಡು ಸಂಭ್ರಮಿಸುತ್ತಿರುವುದರಲ್ಲಿ ಆಶ್ಚರ್ಯ ಪಡುವಂಥದ್ದೇನಿಲ್ಲ ಎಂದು ಮಾಜಿ ಹಾಸ್ಯನಟ ಶಾಂಗ್ಲಿಯಾನ ಒಂದೇ ಉಸಿರಿನಲ್ಲಿ ಒದರಿದ್ದಾರೆಂದು ತಿಳಿದು ಬಂದಿದೆ.
******
ರಾಜ್ಯವನ್ನು ಹರಿದು ಎರಡು ಭಾಗ ಮಾಡ್ತೀವಿ ಅಂತ ಹೊರಟಿದ್ದ ಛೀರಾಮುಲು & ಬ್ಲೂಜೆಪಿಯ ಸಿಳ್ಳೇಕ್ಯಾತಗಳು, ಜನರು ಕಾಲಲ್ಲಿದ್ದನ್ನು ಕಳಚಿ ಮೂತಿಗೆ ಪಟಪಟನೆ ಎಸೆಯಲು ಶುರು ಮಾಡುತ್ತಿದ್ದಂತೆ ಸುಯ್ ಟಪಕ್ ಅಂತ ಯೂ ಟರ್ನ್ ತೆಗೆದುಕೊಂಡಿರೋ ವರ್ತಮಾನ ಇದೀಗ ವರದಿಯಾಗಿದೆ. ರಾಜ್ಯಸಭಾ ಸದಸ್ಯತ್ವದ ಟಿಕೆಟುಗಳಲ್ಲಿ ಒಂದನ್ನೂ ಉತ್ತರ ಕರ್ನಾಟಕ ಭಾಗದವರಿಗೆ ಕೊಡದೆ ಆಂಧ್ರ, ಕೇರಳ, ತಮಿಳುನಾಡಿನ ಮುಷಂಡಿಗಳಿಗೆ ಹಾಫ್‍ರೇಟ್, ಚೀಪ್ ರೇಟಿನಲ್ಲಿ ಮಾರಿಕೊಂಡು ಯಂಜಾಯ್ ಮಾಡುತ್ತಿದ್ದ ಈ ಬ್ಲೂಜೆಪಿ ಭಡವ ರಾಸ್ಕಲ್‍ಗಳಿಗೆ ಇದೀಗ ಉತ್ತರ ಕರ್ನಾಟಕದ ಮೇಲೆ ಲವ್ವು ಕಿತ್ಕೊಂಡಿರುವುದು ನಾನಾ ಗುಮಾನಿಗೆ ಕಾರಣವಾಗಿದೆ. ಪಕ್ಷದಲ್ಲಿ ಇರುವ 17 ಸಂಸದರಲ್ಲಿ ಅರ್ಧಕ್ಕರ್ಧ ಮಂದಿ ಉತ್ತರ ಕರ್ನಾಟಕದವರೇ ಇದ್ದರೂ ತಮ್ಮ ಅಧಿಕಾರಾವಧಿಯಲ್ಲಿ ಆ ಭಾಗದ ಅಭಿವೃದ್ಧಿಗೆ ಮೂರುಕಾಸಿನ ಕೆಲಸ ಮಾಡದೆ, ಓತ್ಲಾ ಹೊಡೆದುಕೊಂಡು ತಿರುಗುತ್ತಿದ್ದ ಈ ಬ್ಲೂಜೆಪಿ ದಂಢಪಿಂಡಗಳು ಇದೀಗ ತಾವೇ ಹಾರಿಸಿದ ಪ್ರತ್ಯೇಕ ರಾಜ್ಯದ ಗೂಬೆಯನ್ನು ಆಕ್ಸಿಡೆಂಟಲ್ ಚೀಫ್ ಮಿನಿಸ್ಟರ್ ಕುಮಾರಣ್ಣನ ತಲೆಗೆ ಕಟ್ಟಲು ಹುನ್ನಾರ ನಡೆಸಿರುವುದು ಬಹಿರಂಗವಾಗಿದೆ. ಗಡ್ಡದೊಳಗೇ ಮುಖ ಬಚ್ಚಿಟ್ಟುಕೊಂಡು ತಿರುಗುವ ಛೀರಾಮುಲು, ಇದೀಗ ಪ್ರತ್ಯೇಕ ರಾಜ್ಯದ ಬಗ್ಗೆ ಯಾರಾದ್ರು ಮಾತಾಡಿದ್ರೆ ಅವರ ಎರಡೂ ಕೆನ್ನೆ ಕಚ್ಚುತ್ತೇನೆಂದು ಧಮಕಿ ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ. ಒಟ್ಟಿನಲ್ಲಿ ರಾಜ್ಯದ ಜನರು ಇವರ ಸೆಗಣಿ ಬುರುಡೆಗಳತ್ತ ಗುರಿಯಿಟ್ಟು ಬೀಸಿದ ಹಳೇಕೆರಗಳು ಯಶಸ್ವಿಯಾಗಿ ಗುರಿ ತಲುಪಿವೆಯೆಂದು ತಲೆಗೆ ಬ್ಯಾಂಡೇಜು ಹಾಕಿಸಿಕೊಂಡ ಬ್ಲೂಜೆಪಿ ಮುಠ್ಠಾಳರು ಇನ್ನೂ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿಲ್ಲವೆಂದು ವರದಿಯಾಗಿದೆ.
******
ಸುಮ್ಮನಿರಲಾರದೆ ಇರುವೆ ಬಿಟ್ಟುಕೊಳ್ಳೋರನ್ನು ನೀವು ನೋಡಿರ್ತೀರಿ, ಆದ್ರೆ ಇರಲಾರದೆ ಚೆಡ್ಡಿಯೊಳಗೆ ಹೆಬ್ಬಾವು ಬಿಟ್ಕೊಳೋರನ್ನ ನೀವು ನೋಡಿರಲಿಕ್ಕಿಲ್ಲ. ಮೀಟ್ ಮಿಸ್ಟರ್ ರಾಮ್ಸೇವಕ್ ಶರ್ಮ, ದೂರಸಂಪರ್ಕ ಇಲಾಖೆ ಟ್ರಾಯ್ ನ ಮುಖ್ಯಸ್ಥ. ಈ ಅರುಳುಮರುಳು ಮುದುಕಪ್ಪ ತನ್ನ ಟ್ವಿಟರಿನಲ್ಲಿ ತನ್ನ ಆಧಾರ್ ಕಾರ್ಡ್ ನಂಬರ್ ಹಾಕಿ, ತಾಕತ್ತಿದ್ರೆ ಹ್ಯಾಕ್ ಮಾಡಿ ಅಂತ ಚಾಲೆಂಜು ಹಾಕಿತ್ತು. ತಮ್ ಪಾಡಿಗೆ ತಾವಿದ್ದ ಕಂಪ್ಯೂಟರ್ ಹ್ಯಾಕರ್ ಗಳು ಮುದುಕಪ್ಪನ ಚಾಲೆಂಜಿಗೆ ರೊಚ್ಚಿಗೆದ್ದು ಆತನ ಸರ್ವ ಜಾತಕವನ್ನೆಲ್ಲ ಹ್ಯಾಕ್ ಮಾಡಿ ಅದಕ್ಕೆ ಉಪ್ಪು ಹುಣಸೆಹಣ್ಣು ಸವರಿ ತಗೋ ನೆಕ್ಕೊ ಅಂತ ವಾಪಸ್ ಬಿಸಾಕಿದ್ದಾರೆ. ಆಧಾರ್ ಕಾರ್ಡ್ ನಂಬರ್ ಮೂಲಕ ಮುದುಕಪ್ಪನ ಪರ್ಸನಲ್ ಫೋನಿಗೇ ಕನ್ನ ಕೊರೆದು ವಾಟ್ಸಾಪ್ ಡೀಟೈಲ್ ಎತ್ತಾಕಿ, ಆತನ ಬ್ಯಾಂಕ್ ಅಕೌಂಟಿಗೂ ತೂತ ಕೊರೆದು ಒಂದು ರುಪಾಯಿ ಡೆಪಾಸಿಟ್ ಮಾಡಿ, ಆತನ ಕ್ರೆಡಿಟ್ ಕಾರ್ಡಿಂದಲೇ ಒಂದು ಫೋನು ಬುಕ್ ಮಾಡಿ, ಅವನ ಮಬೆ ಅಡ್ರೆಸ್ಸಿಗೇ ಕಳಿಸಿ, ಹ್ಯಾಕು ಸಾಕಾ, ಇಲ್ಲಾ ಇನ್ನೂ ಬೇಕಾ ಎಂದು ಮುದುಕಪ್ಪನ ಪಂಚೆಯೆಳೆದುಬಿಟ್ಟಿದ್ದಾರೆ. ಇಷ್ಟು ಸಾಲದೆಂದು ಹ್ಯಾಕರ್ ಗಳು ಪಿ.ಎಮ್ ಪಕೋಡಪ್ಪನಿಗೆ ನಿಂದೂ ಆಧಾರ್ ಕಾರ್ಡ್ ನಂಬರ್ ಇದ್ರೆ ಕೊಡು ಒಂದು ಕಡೆಯಿಂದ ಕೆತ್ತಿ ಬಿಸಾಕುತ್ತೇವೆಂದು ಹೊಸ ಚಾಲೆಂಜನ್ನು ಎಸೆದಿದ್ದಾರೆ. ಈ ಮೂಲಕ ಆಧಾರ್ ಕಾರ್ಡ್ ಮಾಹಿತಿಯನ್ನು ಯಾರೂ ಕದಿಯಲಾಗದು, ಅವನ್ನು ಏಳು ಸಮುದ್ರದಾಚೆ ಇರೋ ದ್ವೀಪದಲ್ಲಿರೋ ರಾಕ್ಷಸನ ಅಂಡಿನೊಳಗೆ ಭದ್ರವಾಗಿಟ್ಟಿದ್ದೇವೆಂದು ಕೊಚ್ಚಿಕೊಳ್ಳುತ್ತಿದ್ದ ದ್ವೇಷಭಕ್ತ ಪಕೋಡಪ್ಪನ ಪಂಚೆಯು ಸಂತೆಯಲ್ಲಿ ಉದುರಿಹೋಗಿದೆ. ಯಾವುದೇ ಕಾರಣಕ್ಕು ತನ್ನ ಆಧಾರ್ ನಂಬರ್ ಹ್ಯಾಕರ್‍ಗಳ ಕೈಗೆ ಸಿಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಸಿರೋ ಪಕೋಡಪ್ಪ ಅದೇನಾದರೂ ಲೀಕಾದರೆ ತಾನು ಕದ್ದುಮುಚ್ಚಿ ನೋಡೋ ಪಾರ್ನ್ ಸೈಟ್ ಡೀಟೈಲೆಲ್ಲ ಹೊರಬಿದ್ದು ಮಾನ ಹರಾಜಾಗುವ ಭಯದಲ್ಲಿದ್ದಾರೆಂದು ಮೂಲಗಳು ತಿಳಿಸಿವೆ.
******
ಬುದ್ದಿಜೀವಿಗಳಿಗೆ ಗುಂಡಿಟ್ಟು ಕೊಲ್ಲಿಸುತ್ತಿದ್ದೆ ಎಂದು ಕಯ್ಯಯ್ಯೋ ಅಂದ ಬಸನಘೋಡ ಪಾಟಿಲ್ ಮೇಲೆ ಕಾನೂನುಕ್ರಮ ಕೈಗೊಳ್ಳಲು ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರೋ ಬೆರಕೆ ಸರ್ಕಾರ ಕಡೆಗೂ ಬಸನಘೋಡನನ್ನು ಕೊಚ್ಚೆ ಚರಂಡಿಯಲ್ಲಿ ಹೊರಳಾಡಲು ಬಿಟ್ಟು ತಾನೂ ಅವನೊಡನೆ ಉರುಳಾಡಲು ಯಾವ ಸಮಸ್ಯೆಯೂ ಇಲ್ಲವೆಂದು ಸ್ಪಷ್ಟಪಡಿಸಿದೆ. ಇನ್ನೊಂದು ಕಡೆಯಲ್ಲಿ ಹೈದರಾಬಾದಿನ ಬ್ಲೂಜೆಪಿ ಜನಪ್ರತಿನಿಧಿಯೊಬ್ಬ ಅಸ್ಸಾಂನಲ್ಲಿರೋ ವಲಸಿಗರ ಮೇಲೆ ಗುಂಡು ಹೊಡೆದು ಕೊಲ್ಲಲು ಕೇಂದ್ರ ಸರ್ಕಾರಕ್ಕೆ ಕೇಳಿಕೊಂಡಿದ್ದಾನೆ. ಮುಳ್ಳಂದಿಯ ಮುಖಕ್ಕೆ ಮೀಸೆ ಅಂಟಿಸಿದಂತಿರೋ ಈ ಗುಡಾಣಗಢವನ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಹೈದರಾಬಾದಿನ ಸರ್ಕಾರಕ್ಕೂ ನರದೌರ್ಬಲ್ಯದ ಕೊರತೆ ಕಾಡುತ್ತಿದೆಯಂತೆ. ಮಗದೊಂದು ಕಡೆ ಮೇಕೆ ದೇವರ ಪ್ರತಿರೂಪ, ಆದ್ದರಿಂದ ಯಾರೂ ಮಟನ್ ತಿನ್ನಬಾರದೆಂದು ದ್ವೇಷಭಕ್ತರ ಪಕ್ಷದ ರಾಜ್ಯಾಧ್ಯಕ್ಷನೊಬ್ಬ ಜನರ ಮೇಲೆ ಬೆದರಿಕೆ ಹಾಕಿದ್ದಾನೆ. ಇವರನ್ನೆಲ್ಲ ನೋಡುತ್ತಿದ್ದರೆ ಈ ದ್ವೇಷಭಕ್ತ ಕುನ್ನಿಗಳನ್ನೆಲ್ಲ ಬ್ಲೂಜೆಪಿ ಪಕ್ಷವು “ ಆಲ್ ಇಂಡಿಯ ಬೆಸ್ಟ್ ಮುಠ್ಠಾಳ್ಸ್ ಎಕ್ಸಾಂ” ನಡೆಸಿ ಅದರಲ್ಲಿ ಪಾಸಾದ ಅತ್ತುತ್ತಮ ಮೆಂಟ್ಲುಗಳಿಗೆ ಟಿಕೆಟು ಕೊಟ್ಟು ಎಲೆಕ್ಷನ್‍ಗೆ ಕಳಿಸಿರಬಹುದೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ತಲೆಯಲ್ಲಿ ಮಿದುಳಿರುವ ಜನರನ್ನು ಕಂಡರೆ ಉರಿದುಬೀಳುವ ಈ ಸನಾತನ ಪೀಡೆಗಳು ಸೆಗಣಿ ತಿನ್ನೋ ಜ್ಞಾನದಲ್ಲಿ ಪಿಎಚ್.ಡಿ ಲೆವೆಲ್ಲಿಗೆ ಪಳಗಿರುವುದು ಜನರಲ್ಲಿ ಆಶ್ಚರ್ಯ ಮೂಡಿಸಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...