Homeಮುಖಪುಟರಾಮಮಂದಿರ ನಿರ್ಮಾಣದ ಟ್ರಸ್ಟ್ ಮುಖ್ಯಸ್ಥನಾಗಿ ನೇಮಕವಾದ ರಾಜೀವ್ ಗಾಂಧಿ ಆಪ್ತ

ರಾಮಮಂದಿರ ನಿರ್ಮಾಣದ ಟ್ರಸ್ಟ್ ಮುಖ್ಯಸ್ಥನಾಗಿ ನೇಮಕವಾದ ರಾಜೀವ್ ಗಾಂಧಿ ಆಪ್ತ

ಸುಪ್ರಿಂ ಕೋರ್ಟಿನ ವಕೀಲರಾದ ಕೆ.ಪರಾಸರನ್ ರಾಮಮಂದಿರದ ಪರವಾಗಿ ಪ್ರಕರಣ ದಾಖಲಿಸಿದ್ದರು

- Advertisement -
- Advertisement -

ರಾಮಮಂದಿರ ನಿರ್ಮಾಣ ಟ್ರಸ್ಟ್‌ನ ಮುಖ್ಯಸ್ಥರಾಗಿ ಸುಪ್ರಿಂಕೋರ್ಟಿನ ವಕೀಲರಾದ ಕೆ.ಪರಾಸರನ್ ಅವರು ನೇಮಕಗೊಂಡಿದ್ದಾರೆ. ಇವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಆಪ್ತ ಮತ್ತು ನಿಷ್ಠ ವಲಯಕ್ಕೆ ಸೇರಿದವರಾಗಿದ್ದರು. ರಾಜ್ಯಸಭೆಯ ಮಾಜಿ ಸದಸ್ಯರಾದ ಇವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಮೇಲ್ವಿಚಾರಣೆಯನ್ನು ವಹಿಸಲಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರದ ಪರವಾಗಿ ಪ್ರಕರಣವನ್ನು ದಾಖಲಿಸಿದ ನಂತರ ಇವರು ಸಂಘ ಪರಿವಾರದ ಕಣ್ಮಣಿಯಾಗಿದ್ದಾರೆ. ಆದರೆ ಮೂರು ದಶಕಗಳ ಹಿಂದೆ ಬೋಫೋರ್ಸ್ ಹಗರಣದಲ್ಲಿ ಸಿಲುಕಿದ್ದ ರಾಜೀವ್ ಗಾಂಧಿಯ ಪ್ರಧಾನ ಮಂತ್ರಿ ಸ್ಥಾನವನ್ನು ಉಳಿಸಲು ಸಹಾಯ ಮಾಡಿದ್ದರು.

1987 ರಲ್ಲಿ ಬೋಫೋರ್ಸ್ ಹಗರಣವೂ ಸುದ್ದಿಯಾದಾಗ ರಾಜೀವ್ ಗಾಂಧಿಯನ್ನು ವಜಾಗೊಳಿಸಲು ಅಂದಿನ ಅಧ್ಯಕ್ಷ ಗ್ಯಾನಿ ಜೈಲ್ ಸಿಂಗ್ ಅವರು ತೀರ್ಮಾನಿಸಿದ್ದರು. ಆಗ ಅಟಾರ್ನಿ ಜನರಲ್ ಆಗಿದ್ದ ಪರಾಸರನ್ ಅವರು ಅಂದಿನ ಭಾರತದ ಮುಖ್ಯ ನ್ಯಾಯಮೂರ್ತಿ ಆರ್.ಎಸ್. ಸಿಂಗ್ ಸರ್ಕಾರವನ್ನು ವಜಾಗೊಳಿಸಲು ನಿರ್ಧರಿಸಿದಲ್ಲಿ ಸರ್ಕಾರವು ತಡರಾತ್ರಿ ಸುಪ್ರೀಂ ಕೋರ್ಟ್‌‌ಗೆ ಹೋಗಬಹುದು. ಪಾಠಕ್ ಮತ್ತು ಇತರ ಇಬ್ಬರು ಹಿರಿಯ ನ್ಯಾಯಾಧೀಶರು ಆ ನಡೆಯಲ್ಲಿದ್ದಾರೆ ಎಂದು ತಿಳಿಸಿದ್ದರು.

ಸಿಜೆಐಯೊಂದಿಗೆ ಪರಾಸರನ್ ಅವರ ರಹಸ್ಯ ಸಭೆ ಮಹತ್ವದ್ದಾಗಿದೆ ಎಂದು ಮೂಲಗಳು ತಿಳಿಸಿವೆ. ಏಕೆಂದರೆ ಅಧ್ಯಕ್ಷರು ತಮ್ಮ ಯೋಜನೆಯನ್ನು ಮುಂದಿಟ್ಟಿದ್ದರೆ ರಾಜೀವ್ ನ್ಯಾಯಾಂಗದಿಂದ ತಕ್ಷಣದ ಪರಿಹಾರವನ್ನು ಪಡೆಯಲು ಸಹಾಯ ಮಾಡಬಹುದಿತ್ತು. ಅಂತಿಮವಾಗಿ, ಸಿಂಗ್ ಅಂತಹ ಯಾವುದೇ ಕ್ರಮವನ್ನು ಮಾಡಲಿಲ್ಲ.

2012ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ, ಪರಾಸರನ್ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿತ್ತು.

ಪರಾಸರನ್ ಅವರನ್ನು “ಶ್ರೀ ರಾಮ ಜನ್ಮಭೂಮಿ ತೀರ್ಥ” ಕ್ಷೇತ್ರದ ಮುಖ್ಯಸ್ಥರಾಗಿ ಬುಧವಾರ ನೇಮಿಸಲಾಯಿತು. ಅಯೋಧ್ಯೆಯಲ್ಲಿ ರಾಮಮಂದಿರದದ ನಿರ್ಮಾಣವನ್ನು ಈ ಟ್ರಸ್ಟ್ ನೋಡಿಕೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....