Homeಮುಖಪುಟನಾವು ಅಧಿಕಾರಕ್ಕೆ ಬಂದ ಮೇಲೆ ಈಶಾನ್ಯ ರಾಜ್ಯಗಳು ಸೇನಾ ಹಿಡಿತದಿಂದ ಮುಕ್ತವಾಗಿವೆ : ನರೇಂದ್ರ ಮೋದಿ

ನಾವು ಅಧಿಕಾರಕ್ಕೆ ಬಂದ ಮೇಲೆ ಈಶಾನ್ಯ ರಾಜ್ಯಗಳು ಸೇನಾ ಹಿಡಿತದಿಂದ ಮುಕ್ತವಾಗಿವೆ : ನರೇಂದ್ರ ಮೋದಿ

- Advertisement -
- Advertisement -

ಹಿಂದೆ ಈಶಾನ್ಯ ರಾಜ್ಯಗಳ ಜನರು ಸಶಸ್ತ್ರ ಸೇನಾ ಪಡೆಗಳ ಕಣ್ಗಾವಲಿನಲ್ಲಿ ಜೀವಿಸುತ್ತಿದ್ದರು. ನಾವು ಅಧಿಕಾರಕ್ಕೆ ಬಂದ ಮೇಲೆ ಈಶಾನ್ಯ ರಾಜ್ಯಗಳು ಸೇನಾ ಹಿಡಿತದಿಂದ ಮುಕ್ತವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದರು.

ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀರಿರುವ ಪ್ರಧಾನಿ ಮೋದಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಮಾತನಾಡಿ ಈಶಾನ್ಯ ರಾಜ್ಯಗಳು ಈಗ ಸೇನೆಯಿಂದ ಮುಕ್ತವಾಗಿವೆ. ಹಿಂದೆ ಇಲ್ಲಿ ವ್ಯಾಪಾರಿಗಳು ಬಂಡವಾಳ ಹೂಡಲು ಒಪ್ಪುತ್ತಿರಲಿಲ್ಲ. ಈಗ ಪರಿಸ್ಥಿತಿ ಬದಲಾಗಿದೆ ಎಂದು ವಿವರಿಸಿದರು.

ಈಶಾನ್ಯ ರಾಜ್ಯಗಳ ಸಾವಿರಾರು ಯುವಕರು ತಮ್ಮ ನೆಲದಲ್ಲೇ ನಿರಾಶ್ರಿತರಂತೆ ಬದುಕುತ್ತಿದ್ದರು. ನಾವು ಅಧಿಕಾರ ಹಿಡಿದ ನಂತರ ಅಲ್ಲಿನ ಜನರಿಗೆ ಸಂಪೂರ್ಣ ಪುನರ್ವಸತಿ ಸೌಲಭ್ಯ ಕಲ್ಪಿಸಿರುವುದರಿಂದ ಬದಲಾವಣೆ ಗಾಳಿ ಬೀಸಿದೆ. ಒಂದು ಅವಧಿಯಲ್ಲಿ ಜನರು ಇಲ್ಲಿಗೆ ಬರಲು ಹೆದರುತ್ತಿದ್ದರು. ಈಗ ಅಂತಹ ವಾತಾವರಣ ಇಲ್ಲ. ಮುಂದೆ ಈಶಾನ್ಯ ರಾಜ್ಯಗಳು ಪ್ರವಾಸಿ ತಾಣಗಳಾಗಲಿವೆ. ಇಂತಹ ಬದಲಾವಣೆ ಕ್ಷಣಾರ್ಧಲ್ಲಿ ಆಯಿತೆ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ಇಲ್ಲ ಎಂದರು.

ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳ ಶಿಕ್ಷಣ, ಕೌಶಲ್ಯ ಮತ್ತು ಕ್ರೀಡೆಗಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಅದರ ಭಾಗವಾಗಿ ಇಂತಹ ಕಾರ್ಯಗಳನ್ನು ಮಾಡುತ್ತಿದ್ದೇವೆ. ನಾವು ಈಶಾನ್ಯ ಭಾಗದ ವಿದ್ಯಾರ್ಥಿಗಳಿಗಾಗಿ ದೆಹಲಿ ಮತ್ತು ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಿಸಿದ್ದೇವೆ. ಹೊಸ ರೈಲ್ವೆ ನಿಲ್ದಾಣ, ಹೊಸ ರೈಲ್ವೆ ಮಾರ್ಗಗಳು, ಹೊಸ ವಿಮಾನ ನಿಲ್ದಾಣಗಳು, ಹೊಸ ಜಲಮಾರ್ಗಗಳು ಮತ್ತು ಇಂಟರ್ ನೆಟ್ ಸಂಪರ್ಕ ಕಲ್ಪಿಸಿದ್ದೇವೆ ಎಂದು ತಿಳಿಸಿದರು.

ನಾವು ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿಸುವುದು ಮಾತ್ರವಲ್ಲ, ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ಕಳೆದ ಬಾರಿ 9 ಸಾವಿರ ಕೋಟಿ ರೂಪಾಯಿ ವೆಚ್ಚದ ಗ್ಯಾಸ್ ಗ್ರಿಡ್ ಯೋಜನೆ ಜಾರಿಗೊಳಿಸಿದ್ದೇವೆ. ಬೋಗಿ ಸೇತುವೆ ನಿರ್ಮಾಣ ಮಾಡಿದ್ದೇವೆ. ಈ ಸೇತುವೆ ಲಕ್ಷಾಂತರ ಮಂದಿಗೆ ಸಂಪರ್ಕ ಸೇತುವೆಯಾಗಿದೆ ಎಂದು ಹೇಳಿದರು.

ಕಳೆದ 3-4 ವರ್ಷಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ 3 ಸಾವಿರ ಕಿಲೋ ಮೀಟರ್ ರಸ್ತೆಯನ್ನು ನಿರ್ಮಿಸಿದ್ದೇವೆ. 13ನೇ ಹಣಕಾಸು ಆಯೋಗದಲ್ಲಿ ಈಶಾನ್ಯ ರಾಜ್ಯಗಳಿಗೆ 90 ಸಾವಿರ ಕೋಟಿ ವೆಚ್ಚ ಮಾಡಲಾಗಿತ್ತು. 14ನೇ ಹಣಕಾಸು ಆಯೋಗದ ನಂತರ ನಾವು ಅಧಿಕಾರಕ್ಕೆ ಬಂದಿದ್ದೇವೆ. ನಾವು 3 ಲಕ್ಷ ಕೋಟಿಗೆ ಹೆಚ್ಚಿಸಿದ್ದೇವೆ. ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದೇವೆ. ಈಶಾನ್ಯ ರಾಜ್ಯಗಳ ರೈಲ್ವೆ ಮಾರ್ಗಗಳನ್ನು ಬ್ರಾಡ್ ಬಾಂಡ್ ಗೆ ಬದಲಾವಣೆ ಮಾಡಿದೆ. ಹಳೆಯ ವಿಮಾನ ನಿಲ್ದಾಣವನ್ನು ಆಧುನೀಕರಣಗೊಳಿಸಿದೆ ಎಂದು ಅಭಿವೃದ್ಧಿ ಕೆಲಸಗಳ ಪಟ್ಟಿ ಮಾಡಿದರು.

ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ 1,500 ಕೋಟಿ ರೂಪಾಯಿಯ ವಿಶೇಷ ಅಭಿವೃದ್ಧಿ ಪ್ಯಾಕೇಜ್ ನೀಡುವುದಾಗಿ ಘೋಷಣೆ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...