Homeಅಂಕಣಗಳುಥೂತ್ತೇರಿ | ಯಾಹೂಮೂರು ದಿನದ ರಾಜಕಾರಣಿ ಪರವಾಗಿ ನಿಂತು ಸಾಹಿತ್ಯ ಪರಿಷತ್ ಮಾನವನ್ನೇ ಹರಾಜು ಹಾಕಿದ ಮನು ಬಳಿಗಾರ್‌...

ಮೂರು ದಿನದ ರಾಜಕಾರಣಿ ಪರವಾಗಿ ನಿಂತು ಸಾಹಿತ್ಯ ಪರಿಷತ್ ಮಾನವನ್ನೇ ಹರಾಜು ಹಾಕಿದ ಮನು ಬಳಿಗಾರ್‌ – ಯಾಹೂ

- Advertisement -
- Advertisement -

ಈ ದೇಶದಲ್ಲಿರುವ ಜಾತ್ಯತೀತ ವೇದಿಕೆ ಎಂದರೆ ಅದು ಸಾಹಿತ್ಯ ಪರಿಷತ್. ವ್ಯಕ್ತಿ ಏನೇ ಆಗಿರಲಿ, ಆ ವೇದಿಕೆ ಹತ್ತಿದ ಮೇಲೆ ಜಾತಿ ಸೋಂಕಿನಿಂದ ದೂರವಿರಬೇಕು. ಏಕೆಂದರೆ, ಅದೊಂದು ಸರ್ವ ಜನಾಂಗದ ಶಾಂತಿಯ ತೋಟದ ತಾಣ. ಈಗ ಹಾಲಿ ಇರುವ ಮನುಬಳಿಗಾರ್ ಎಂಬ ವ್ಯಕ್ತಿ ಸರಕಾರದಲ್ಲಿ ನಡುಬಗ್ಗಿಸುವ ಕರ್ಮಚಾರಿಯಾಗಿದ್ದವನು. ಈಗಲೂ ಅದೇ ಕೆಲಸ ಮಾಡುತ್ತಿರುವುದಲ್ಲದೆ, ಸ್ವಜಾತಿ ಜನಗಳನ್ನ ಸಾಹಿತ್ಯ ಸಮ್ಮೇಳನಕ್ಕೆ ಕರೆದು “ವಸತಿವ್ಯವಸ್ಥೆ ಮಾಡುತ್ತೇನೆ ಬನ್ನಿ ಎನ್ನುತ್ತಿದ್ದಾನೆ”.

ಮನು ಬಳಿಗಾರ್‌

ಇದೆಲ್ಲಾ ಹಾಳುಬಿದ್ದು ಹೋಗಲಿ, ಶೃಂಗೇರಿಯಲ್ಲಿನ ಘಟನೆಗೆ ಪರೋಕ್ಷ ಕಾರಣನಾಗಿದ್ದಾನೆ. ಈತ ನಿಲ್ಲಬೇಕಾದದ್ದು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷನ ಪರವಾಗಿ. ಆದರೆ ಮೂರು ದಿನದ ರಾಜಕಾರಣಿ ಪರವಾಗಿ ನಿಂತು ಸಾಹಿತ್ಯ ಪರಿಷತ್ ಮಾನವನ್ನೇ ಹರಾಜು ಹಾಕಿದ್ದಾನೆ. ಇನ್ನ ಈತನ ಟೀಮು ಆರಿಸಿರುವ ವೆಂಕಟೇಶಮೂರ್ತಿ ಎಂಬಾತ ಶೃಂಗೇರಿಯಲ್ಲಿನ ಘಟನೆ ಬಗ್ಗೆ ಏನು ಹೇಳುತ್ತೀರಿ ಎಂದರೆ, ಅದೆಲ್ಲೋ ದೂರದಲ್ಲಿ ನಡೆದ ವಿಷಯ. ಆ ಬಗ್ಗೆ ತಲೆಕೆಡಿಸಿಕೊಳ್ಳಲು ನನಗೆ ಪುರುಸೊತ್ತಿಲ್ಲ ಎಂದಿದ್ದಾರೆ. ಯಾಕೆಂದರೆ ಬೆಂಗಳೂರು ಬ್ರಾಹ್ಮಣರು ಮಾಡಿದ ಸನ್ಮಾನ ತೆಗೆದುಕೊಳ್ಳುವುದರಲ್ಲೇ ಮುಳುಗಿದ್ದ ಇವರು ಇನ್ನೇನು ತಾನೆ ಹೇಳಿಯಾರು ಥೂತ್ತೇರಿ..

* * *

ಕನ್ನಡನಾಡಿನಲ್ಲಿ ಹಿಂದೆಂದೂ ಸಂಭವಿಸದ ಪ್ರವಾಹ ಅನಾಹುತ ಸಂಭವಿಸಿದೆ. ಬದುಕನ್ನು ಕಳೆದುಕೊಂಡವರ ಗೋಳನ್ನ ತೋರದೆ ಸರಕಾರದ ಮರ‍್ಯಾದೆ ಕಾಪಾಡುವುದರಲ್ಲಿ ಮಗ್ನರಾಗಿರುವ ಮಾಧ್ಯಮದವರ ಹೊಟ್ಟೆಪಾಡು ಪ್ರವಾಹದವರಿಗಿಂತಲೂ ಭೀಕರವಾದದ್ದು. ಪ್ರವಾಹ ಸಂತ್ರಸ್ತರ ಕತೆಯೇನು ಎಂಬುದನ್ನು ಈ ನಾಡಿಗೆ ತೋರದೆ ಸಾಹಿತ್ಯ ಸಮ್ಮೇಳನ ಬಿತ್ತರಿಸಲು ತಯಾರಾಗಿರುವ ಮಾಧ್ಯಮದವರಿಗೂ, ಈ ಮನುಬಳಿಗಾರ್‌ಗೂ ಬಂಧುವಿದ್ದಂತೆ. ಅದಕ್ಕಾಗಿ ನಾಡು ಕೊಚ್ಚಿಹೋದರೇನು ಸಾಹಿತ್ಯ ಸಮ್ಮೇಳನ ಜರುಗದಿದ್ದರೆ ಅನಾವೃಷ್ಟಿ ಗ್ಯಾರಂಟಿ ಎಂಬಂತಾಡಿದ ಆತ ಸರಕಾರದಿಂದ ತನಗೆ ಬೇಕಿದ್ದಷ್ಟು ಹಣವನ್ನ ಬಿಡುಗಡೆ ಮಾಡಿಸಿಕೊಂಡಿದ್ದಾನೆ.

ಎಚ್‌. ಎಸ್‌ ವೆಂಕಟೇಶ ಮೂರ್ತಿ

ಕನ್ನಡನಾಡಿನಲ್ಲಿ ಸಾಹಿತ್ಯ ಪರಿಷತ್ ಉದ್ಭವವಾದಾಗಿನಿಂದಲೂ ಸ್ವಾಯತ್ತ ಸಂಸ್ಥೆಯಾಗಿ ಬೆಳೆದು ಕನ್ನಡನಾಡಿನ ಸಾಹಿತಿಗಳ ಘನತೆಯನ್ನು ಎತ್ತಿ ಹಿಡಿಯುತ್ತ ಬಂದ ಈ ಸಂಸ್ಥೆಯ ಮಾನವನ್ನೇ ಹರಾಜುಹಾಕಿ ಮೌನವಾಗಿ ತಾನು ಮಾಡುವುದನ್ನೇ ಮಾಡುತ್ತಾ ಕನ್ನಡದ ಅಸಂಖ್ಯಾತ ಕವಿಗಳಲ್ಲಿ ಒಬ್ಬರಾದ ವೆಂಕಟೇಶ್‌ಮೂರ್ತಿಯನ್ನು ಮೆರೆಸಲು ಹೊರಟ ಮನುಬಳಿಗಾರ ಮುಂದೆ ಇನ್ನು ಸಮಸ್ಯೆಯಾಗುವುದರಲ್ಲಿ ಸಂಶಯವಿಲ್ಲವಂತಲ್ಲಾ ಥೂತ್ತೇರಿ.

* * *

ವೆಂಕಟೇಶ್‌ಮೂರ್ತಿಯಂತಹ ಸಾಧಾರಣ ಕವಿಯನ್ನು ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿಕೊಂಡು ಹತ್ತದಿನೈದು ಕೋಟಿಯನ್ನ ಉಡಾಯಿಸಲು ಹೊರಟಿರುವ ಕನ್ನಡಾಭಿವೃದ್ಧಿ ವಿಷಯವಾಗಿ ಸತ್ತಂತಿರುವ ಸಾಹಿತ್ಯ ಪರಿಷತ್ತಿನ ಹಟ ಹಾಳುಬಿದ್ದೋಗಲಿ ನಮ್ಮ ಸಂತೆ ಶಿವರದ ಭೈರಣ್ಣನ ಕಡೆಯಿಂದ ಸಂತೋಷಕರ ಸುದ್ದಿಯೊಂದು ಹೊರಬಿದ್ದಿದೆಯಲ್ಲಾ. ಅದೇನೆಂದರೆ ಅವರಿನ್ನು ಏನೂ ಬರೆಯುವುದಿಲ್ಲವಂತೆ. ಹಾಗೇ ಇದ್ದು ಸತ್ತು ಹೋಗುತ್ತಾರಂತೆ.

ಹಾಗೆ ನೋಡಿದರೆ ಭೈರಣ್ಣನ ಬರವಣಿಗೆ ಶ್ರಮ ಸಾರ್ಥಕವಾಗಿದೆ. ಅವರ ಆರಂಭದ ಕಾದಂಬರಿ ಧರ್ಮಶ್ರೀ ಈಗ ದೇಶದಲ್ಲೆಲ್ಲಾ ತನ್ನ ಅಜೆಂಡಾ ಮೆರೆಸಿಕೊಂಡು ಸಂಭ್ರಮಪಡುತ್ತಿದೆ. ಅದರ ಬಹುಮುಖ್ಯ ಕಾಳಜಿಯಾದ ರಾಮಮಂದಿರ ತಲೆ ಎತ್ತಲಿದೆ. ಹಿಂದೆ ಅವರ ನಿದ್ದೆ ಹಾಳು ಮಾಡಿದ್ದ ಬಾಬರಿ ಮಸೀದಿ ಇದ್ದ ಗುರುತು ನಾಶವಾಗಿದೆ. ಕಾಶ್ಮೀರಕ್ಕೆ ಕೊಳ್ಳಿ ಇಡಲಾಗಿದೆ. ಜೆಎನ್‌ಯು ವಿದ್ಯಾರ್ಥಿಗಳನ್ನ ಚಚ್ಚಿ ತಹಬಂದಿಗೆ ತರಲಾಗಿದೆ. ದೇಶದ ಪಠ್ಯಪುಸ್ತಕದೊಳಕ್ಕೆ ಪುರೋಹಿತಶಾಹಿ ಅಜೆಂಡಾಗಳನ್ನ ತುರುಕಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಸಿಎಎ ತರಲಾಗಿದೆ. ಈ ಸಂಗತಿ ಹಳೇ ಭೈರಪ್ಪನ ಬರವಣಿಗೆ ಬದುಕನ್ನ ಸಾರ್ಥಕಗೊಳಿಸಿವೆಯಂತಲ್ಲಾ ಥೂತ್ತೇರಿ.

* * *

ಸಾಹಿತಿಯಾದವನು ಚಳವಳಿಗಳಿಂದ ದೂರ ಇರಬೇಕು. ಚಳವಳಿಗಳ ಕಾಲಘಟ್ಟ ಕೃತಿ ರಚನೆಗೆ ಪ್ರೇರಕವಾಗಬಾರದು ಸಾಹಿತಿ ಯಾವುದಕ್ಕೂ ಗಂಟುಬೀಳಬಾರದೆಂದು ಹೇಳುವ ಭೈರಪ್ಪ ಸರಿಯಾಗಿ ಗಂಟುಬಿದ್ದದ್ದು ಜನಿವಾರಕ್ಕೆ. ಇವರ ದಾಟು ಕೃತಿಯಲ್ಲಿ ದಲಿತರ ಹುಡುಗಿಗೆ ಜನಿವಾರ ಬಿಗಿಯುತ್ತಾರೆ. ದಲಿತರು ದೇವಸ್ಥಾನಕ್ಕೆ ನುಗ್ಗಿದ್ದಕ್ಕೆ ಮೂರ್ಛೆ ಬೀಳಿಸುತ್ತಾರೆ. ವಿಧವೆ ಮರುಮದುವೆಯಾದರೆ ಬರೀ ಅಬಾಷನ್ ಎದುರಿಸಬೇಕಾಗುತ್ತದೆ ಇತ್ಯಾದಿ ಪುರೋಹಿತಶಾಹಿ ಅಜೆಂಡಾಗಳನ್ನ ತನ್ನ ಕೃತಿಗಳಲ್ಲಿ ತುರುಕಿರುವ ಭೈರಪ್ಪ, ಬರವಣಿಗೆ ಸಮಯದಲ್ಲಿ ಭೀಕರವಾಗಿ ಎದುರಿಸಿದ್ದು ನವ್ಯ ಲೇಖಕರನ್ನ. ಮತ್ತವರ ಟೀಕೆಯನ್ನ. ನವ್ಯರಿಗೆ ವಿರುದ್ಧ ದಿಕ್ಕಿನಲ್ಲಿ ಕಗ್ಗಹೊಸೆಯುತ್ತಿದ್ದ ಭೈರಪ್ಪ, ಗಮನಿಸಿದರೂ ಮರೆಮಾಚುವ ಸಂಗತಿ ಯಾವುದೆಂದರೆ ನವ್ಯರ ಕೃತಿಗಳನ್ನು ಈಗಲೂ ಉತ್ಸಾಹದಿಂದ ಓದಬಹುದು. ಬರುಬರುತ್ತಾ ಭೈರಪ್ಪ ಆವರಣದಂತಹ ಕೃತಿ ರಚಿಸಿದಾಗ ಪೂರ್ಣಚಂದ್ರ ತೇಜಸ್ವಿಯವರು “ಹೊಟ್ಟೆಗೆ ಅನ್ನ ತಿನ್ನುವ ನರಮನುಷ್ಯರಾರು ಇಂತಹ ಕೃತಿ ಹೇಳಿದ ಮಾತುಗಳು ತಮ್ಮನ್ನೇ ಆವರಿಸಿ ಬರೆಸಿಕೊಂಡು ಉಗಿಸಿದ್ದು ಇತಿಹಾಸ; ಇರಲಿ, 87 ವರ್ಷದ ಭೈರಣ್ಣನ ಕಡೆಯ ಕೃತಿ ಉತ್ತರ ಕಾಂಡ ಓದಿ ಒಂದು ನಮಸ್ಕಾರ ಹೊಡೆಯಬಹುದಲ್ಲಾ ಥೂತ್ತೇರಿ.

* * *

ವ್ಯಕ್ತಿ ಸತ್ಯ ಹೇಳುವಾಗ ಸದೃಢನಾಗಿರುತ್ತಾನೆ. ಆ ಸಮಯವೂ ಕಡಿಮೆ ಇರುತ್ತದೆ. ಅದೇ ಸುಳ್ಳು ಹೇಳುವಾಗ ಕಂಪಿಸುತ್ತಾನೆ. ಏಕೆಂದರೆ ಸುಳ್ಳುಗಳ ಸರಮಾಲೆಗೆ ಸದೃಢತೆ ಬರುವುದಿಲ್ಲ. ನಮ್ಮ ಅಂತಾರಾಷ್ಟ್ರೀಯ ಮಟ್ಟದ ಅರ್ಥಶಾಸ್ತ್ರಜ್ಞೆಯಾದ ಸಚಿವೆ ನಿರ್ಮಲ ಮೋದಿ ಟೀಮು ತಯಾರಿಸಿದ ಸುಳ್ಳು ಬಜೆಟ್ ಓದಿ ಓದಿ ಬಳಲಿ ಬೆಂಡಾಗಿಹೋದಳಲ್ಲಾ. ಆಕೆಯ ಬಳಲಿಕೆಗೆ ತಿರುವಳ್ಳುವರ್ ಕವಿತೆ ತಿಲಮಾತ್ರವೂ ಸ್ಫೂರ್ತಿ ನೀಡದಿದ್ದುದು ವಿಶೇಷ. ಏಕೆಂದರೆ ಕವಿತೆ ಸಾಲುಗಳು ಸುಳ್ಳನ್ನು ವಿಜೃಂಭಿಸಲಾರವು.

ಬಿಜೆಪಿಯಲ್ಲಿ ಭಾರತದ ಹಣಕಾಸಿನ ಸುಧಾರಣಾ ಪ್ರತಿಭೆಗಳೇ ಇಲ್ಲ. ತಲೆಗೆ ಮತದ ಅಮಲೇರಿದಾಗ ಪ್ರತಿಭೆ ಅಲ್ಲಿಂದ ಕಾಲ್ಕೀಳುತ್ತದೆ. ಅಡ್ಡಕಸುಬಿಗಳ ಕೈಗೆ ದೇಶಸಿಕ್ಕಾಗ ಕಸುಬುದಾರ ಕುಬೇರರು ದೇಶ ಕಬಳಿಸಲು ಸಂಚು ಹೂಡುತ್ತಾರೆ. ಅದರಂತೆ ಭಾರತದ ಸರಕಾರದ ಸಂಪತ್ತಿನ ಮೇಲೆ ಕಣ್ಣಿಟ್ಟ ಕುಬೇರರ ಸಂಚನ್ನ ಅರಿತ ಮೋದಿ ಎಲೈಸಿಯನ್ನ ಮಾರುವ ತೀರ್ಮಾನ ಮಾಡಿದ್ದಾನಂತಲ್ಲಾ. ಅಂತೂ ಜೀವವಿಮೆಗೂ ಸಂಚಕಾರ ತಂದ ಮೋದಿ ಇನ್ನೇನನ್ನ ಉಳಿಸಲಾರ ಎಂಬುದನ್ನು ಸಾಬೀತು ಮಾಡಿದ್ದಾನಲ್ಲಾ ಥೂತ್ತೇರಿ.

* * *

ನಮ್ಮ ಸುಂದರವಾದ ಕಡಲತೀರದಲ್ಲಿ ವಿಕೃತವಾಗಿ ಉದ್ಭವಿಸಿಬಂದಂತಿರುವ ಪುರೋಹಿತಶಾಹಿ ಪಿಂಡವೊಂದು, ಮತ್ತೆ ತನ್ನ ವಟಾರದಿಂದ ಗಾಂಧೀಜಿ ವಿರುದ್ಧ ವಿಕಾರವಾಗಿ ಕೂಡಿಕೊಂಡಿದೆ. ಇದರ ಅರಚಾಟ ನೋಡಿ ಬೇಸತ್ತಿದ್ದ ಮೋದಿ ಮಹಾತ್ಮ ಸಮಯ ಕಾದಿದ್ದು, ಇದಕ್ಕೆ ತಕ್ಕ ಶಾಸ್ತಿ ಎಂದರೆ ಮಂತ್ರಿಮಾಡದೆ ಇರುವುದು ಎಂದುಕೊಂಡು. ಅದರಂತೆ ಮಂತ್ರಿಗಿರಿ ಇಲ್ಲದೆ ಮನಗೆ ಕಳಿಸಿದಾಗಿನಿಂದಲೂ ಹೆಚ್ಚು ವಿಕೃತವಾಗಿ ಕೂಗಿದರೆ ಅದು ನಾಗಪುರಕ್ಕೆ ತಲುಪಿ, ಅಲ್ಲಿಂದ ಏನಾದರೂ ಸಂದೇಶ ಚೆಡ್ಡಿಗಳ ಹೈಕಮಾಂಡು ತಲುಪಿ, ಯಾವುದಾದರೂ ಕಿತ್ತುಹೋದ ಖಾತೆ ಸಿಗಬಹುದೆಂದು ಕೂಗುತ್ತಿದೆಯಂತಲ್ಲಾ.

ಇದರ ಹುನ್ನಾರಕ್ಕೆ ಪ್ರತಿಯಾಗಿ, ಬಸನಗೌಡ ಯತ್ನಾಳ್ ಎಂಬ ಎಮ್ಮೆ ಮುಕಳಿ ಕೊಳೆದು ಸುಸ್ತಾಗಿರುವ ವ್ಯಕ್ತಿಯ ಜೊತೆಗೆ ತೀಟೆ ರವಿ, ರೇಣುಕಾದೇವಿ ಭಕ್ತನಾದ ರೇಣುಕಾಚಾರಿ ಇವರೆಲ್ಲಾ ಸೇರಿಕೊಂಡಿದ್ದಾರಂತಲ್ಲಾ ಮುಖ್ಯವಾಗಿ ಇವರ ಉದ್ದೇಶ ಇಷ್ಟೆ. ಎಲ್ಲರನ್ನ ಮೀರಿಸಿ ಮತಾಂಧತೆಯಿಂದ ಒರಲುವುದು. ಆ ನಂತರ ಮೆಂಟಲಾಸ್ಪಿಟಲ್ ಸೇರುವುದೇ ಗುರಿಯಾಗಿದೆಯಂತಲ್ಲಾ ಥೂತ್ತೇರಿ

– ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...