Homeಗೌರಿ ಕಣ್ಣೋಟನಿತೀಶ್ ಕುಮಾರ್ ಮಾಧ್ಯಮಗಳನ್ನು ಬಳಸಿಕೊಂಡ ಬಗೆ! - ಗೌರಿ ಕಣ್ಣೋಟ

ನಿತೀಶ್ ಕುಮಾರ್ ಮಾಧ್ಯಮಗಳನ್ನು ಬಳಸಿಕೊಂಡ ಬಗೆ! – ಗೌರಿ ಕಣ್ಣೋಟ

- Advertisement -
- Advertisement -

ನನಗೆ ಅಚ್ಚರಿ ಮೂಡಿಸಿದ್ದು ಬಿಹಾರದ ಮುಖ್ಯಮಂತ್ರಿ ಆಗಿರುವ ನಿತೀಶ್ ಕುಮಾರ್ ಅವರ ಸರ್ಕಾರದಲ್ಲಿ ಆಗುತ್ತಿರುವ ಪ್ರಜಾಪ್ರಭುತ್ವದ ದಮನ. ಸಭ್ಯನಂತೆ ಸ್ವಚ್ಛಹಸ್ತನಂತೆ ಕಾಣುವ ನಿತೀಶ್ ಕುಮಾರ್ ಹೇಗೆ ತಮ್ಮ ರಾಜ್ಯದ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ ಎಂಬುದನ್ನು ಕುರಿತು ‘ಓಪನ್’ ಪತ್ರಿಕೆಯಲ್ಲಿ ಒಂದು ಸುದೀರ್ಘವಾದ ವರದಿ ಪ್ರಕಟಗೊಂಡಿದೆ. ಅದನ್ನು ಓದಿದನಂತರ ನಿತೀಶ್ ಕುಮಾರ್ ಅವರ ಬಗ್ಗೆ ಅಚ್ಚರಿ ಆಯಿತು.

‘ಓಪನ್’ ಪತ್ರಿಕೆಯಲ್ಲಿ ಧೀರೇಂದ್ರ ಕೆ. ಝಾ ಎಂಬುವವರು ಬರೆದಿರುವ ವರದಿಯ ಸಾರಾಂಶ ಹೀಗಿದೆ:

ಇತ್ತೀಚೆಗೆ ಬಿಹಾರದ ರಾಜಧಾನಿ ಪಾಟ್ನಾದಲ್ಲಿರುವ ಒಂದು ಮನೆಯ ಮೇಲೆ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿದರು. ಆ ದಾಳಿಯಲ್ಲಿ ಅವರಿಗೆ ಐದು ಕೋಟಿ ರೂಪಾಯಿಗಳು ಸಿಕ್ಕವಲ್ಲದೆ, ಪಾಟ್ನಾದಲ್ಲಿರುವ ಸುಮಾರು ಐವತ್ತು ಮನೆಗಳ ಖರೀದಿ ಪತ್ರಗಳೂ ಸಿಕ್ಕವು. ಐದು ಕೋಟಿಯಷ್ಟು ದೊಡ್ಡಮೊತ್ತ ಮತ್ತು ಐವತ್ತು ಮನೆಗಳ ದಾಖಲೆಗಳು ಸಿಕ್ಕಿದ್ದರೂ ಬಿಹಾರದ ಯಾವ ಪತ್ರಿಕೆಯೂ ಈ ದಾಳಿಯ ಬಗ್ಗೆ ವರದಿ ಮಾಡಲಿಲ್ಲ. ಅದಕ್ಕೆ ಕಾರಣ ಆ ಮನೆಯಲ್ಲಿ ವಾಸಿಸುತ್ತಿರುವಾತ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರಿಗೆ ಆಪ್ತನಾಗಿರುವ ಮತ್ತು ನಿತೀಶ್‌ಕುಮಾರ್ ಅವರ ಸಂಯುಕ್ತ ಜನತಾದಳದ ಖಜಾಂಚಿ ಆಗಿರುವ ವಿನಯ್‌ಕುಮಾರ್ ಸಿನ್ಹಾ! ಅಂದಹಾಗೆ ನಿತೀಶ್‌ಕುಮಾರ್ ಅವರು ಮುಖ್ಯಮಂತ್ರಿ ಆಗುವತನಕ ಇದೇ ಮನೆಯಲ್ಲಿ ವಾಸಿಸುತ್ತಿದ್ದರು ಮತ್ತು ಈಗ ಅದನ್ನು ತಮ್ಮ ಆಪ್ತನಿಗೆ ಬಿಟ್ಟುಕೊಟ್ಟಿದ್ದಾರೆ.

ಭ್ರಷ್ಟಾಚಾರ ಮತ್ತು ರಾಜಕೀಯ ವಾಸನೆ ಇರುವ ಈ ದಾಳಿಯ ಬಗ್ಗೆ ಯಾಕೆ ಬಿಹಾರದ ಪತ್ರಿಕೆಗಳು ವರದಿ ಮಾಡಲಿಲ್ಲ ಎಂದು ನೋಡಿದಾಗ ಇದು ಒಂದು ವಿಶೇಷ ಸಂಗತಿ ಅಲ್ಲವೆಂದೂ, ಇಂತಹ ‘ಮರೆಮಾಚುವ’ ಕೆಲಸದಲ್ಲಿ ಆ ರಾಜ್ಯದ ಪತ್ರಿಕೆಗಳೂ ದಿನನಿತ್ಯ ತೊಡಗಿವೆ ಎಂದೂ ಗೊತ್ತಾಯಿತು.

ನಿತೀಶ್‌ಕುಮಾರ್ ಬಿಹಾರದ ಮುಖ್ಯಮಂತ್ರಿ ಆದಾಗಿನಿಂದಲೂ ಅವರು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಅಲ್ಲಿನ ಮಾಧ್ಯಮಗಳನ್ನು ನಿಯಂತ್ರಿಸುತ್ತಿದ್ದಾರೆ. ಅವರನ್ನು ಟೀಕೆ ಮಾಡುವ ಪತ್ರಿಕೆಗಳ ಆದಾಯ ಮೂಲಗಳನ್ನು ಕಡಿದು ಹಾಕುವಮೂಲಕ ಅಂತಹ ‘ದಾರಿ ತಪ್ಪಿದ’ ಮಾಧ್ಯಮಗಳನ್ನು ‘ಸರಿದಾರಿಗೆ’ ತರುತ್ತಿದ್ದಾರೆ. ಹಾಗೆ ‘ಸರಿ ದಾರಿಗೆ’ ಎಳೆಯಲ್ಪಟ್ಟ ಪತ್ರಿಕೆಗಳಲ್ಲಿ ‘ಪಿಂಡಾರ್’ ಎಂಬ ಉರ್ದು ಪತ್ರಿಕೆಯೂ ಒಂದು.

ಈ ‘ಪಿಂಡಾರ್’ ಪತ್ರಿಕೆಗೆ ಡಾ. ರೈಹಾನ್ ಘಾಣಿ ಎಂಬುವವರು ಸಂಪಾದಕರಾಗಿದ್ದರು. 2007ರಲ್ಲಿ ನಿತೀಶ್ ಕುಮಾರ್ ಅವರ ಪತ್ನಿ ಮಡಿದಾಗ ಆಕೆಯ ಅಂತ್ಯಸಂಸ್ಕಾರವನ್ನು ಒಂದು ರಾಜಕೀಯ ಸಭೆಯಾಗಿ ಮುಖ್ಯಮಂತ್ರಿ ಪರಿವರ್ತಿಸಿದ್ದರು. ಇದನ್ನು ಟೀಕಿಸಿ ಘಾಣಿ ಅವರು ಮಾಡಿದ ಈ ‘ಪ್ರಮಾದ’ಕ್ಕೆ ಮಾರನೆ ದಿನವೇ ಅವರಿಗೆ ಬಿಸಿಮುಟ್ಟಿಸಿದ್ದರು ನಿತೀಶ್ ಕುಮಾರ್ ‘ಪಿಂಡಾರ್’ ಪತ್ರಿಕೆಯ ಮಾಲೀಕರ ಮೇಲೆ ಒತ್ತಡ ತಂದು ಘಾಣಿ ಅವರನ್ನು ಸಂಪಾದಕ ಹುದ್ದೆಯಿಂದ ಓಡಿಸಲಾಯಿತು, ಅವರು ಹಲವಾರು ವರ್ಷಗಳಿಂದ ಬರೆಯುತ್ತಿದ್ದ ಅಂಕಣಕ್ಕೆ ಕತ್ತರಿ ಬಿತ್ತು. ಇಂತಹ ಅವಮಾನವನ್ನು ಸಹಿಸದೆ ಘಾಣಿ ಅವರು ರಾಜೀನಾಮೆ ಕೊಟ್ಟು ಆ ಪತ್ರಿಕೆಯಿಂದ ಹೊರಬಿದ್ದರು.

ಈ ಕತೆ ಅಲ್ಲಿಗೇ ಮುಗಿಯುವುದಿಲ್ಲ. ನಿತೀಶ್ ಕುಮಾರ್ ಅವರ ಆಸೆಗೆ ತಕ್ಕಂತೆ ‘ಪಿಂಡಾರ್’ ಪತ್ರಿಕೆಯ ಮಾಲೀಕ ಎ.ಕೆ.ಎಹಸಾನಿ ಅವರು ನಡೆದುಕೊಂಡಿದ್ದರಿಂದ ಆ ಪತ್ರಿಕೆಗೆ ಬಿಹಾರ ಸರ್ಕಾರದಿಂದ ಸಾಕಷ್ಟು ಲಾಭ ಸಿಕ್ಕಿತು. ಘಾಣಿ ಅವರು ಸಂಪಾದಕರಾಗಿದ್ದಾಗ 2007ರಲ್ಲಿ ‘ಪಿಂಡಾರ್’ ಪತ್ರಿಕೆಗೆ ಬಿಹಾರದ ಸರ್ಕಾರದಿಂದ ಕೇವಲ ಒಂದು ಲಕ್ಷ ರೂಪಾಯಿಗಳಷ್ಟು ಜಾಹೀರಾತುಗಳು ಸಿಕ್ಕಿದ್ದವು. ಆದರೆ ಘಾಣಿ ಅವರು ಹೊರನಡೆದ ನಂತರ ಮಾಲೀಕ ಎಹಸಾನಿ ಅವರೇ ಸಂಪಾದಕರಾದ ನಂತರ ಅದೇ ಪತ್ರಿಕೆಗೆ 2008 ರಲ್ಲಿ 24 ಲಕ್ಷ ರೂಪಾಯಿಗಳಷ್ಟು ಜಾಹೀರಾತುಗಳು ಹರಿದುಬಂದವು. ಅದರ ಮುಂದಿನ ವರ್ಷವೂ ‘ಪಿಂಡಾರ್’ ಪತ್ರಿಕೆ ನಿತೀಶ್ ಕುಮಾರ್ ಅವರ ತಾಳಕ್ಕೆ ಕುಣಿದಿದ್ದರಿಂದ 2009ರಲ್ಲಿ ಬರೋಬ್ಬರಿ 40 ಲಕ್ಷದ ಸರ್ಕಾರಿ ಜಾಹೀರಾತುಗಳು ಸಿಕ್ಕಿದವು. 2010ರಲ್ಲಿ ಅದು 48 ಲಕ್ಷಕ್ಕೆ ಏರಿತು! ಸಹಜವಾಗಿಯೇ ‘ಪಿಂಡಾರ್’ ಪತ್ರಿಕೆ ಇವತ್ತು ನಿತೀಶ್ ಕುಮಾರರ ಭಟ್ಟಂಗಿ ಪತ್ರಿಕೆಯಾಗಿದೆ.

ಅಂದಹಾಗೆ ಈ ವಿದ್ಯಮಾನ ಕೇವಲ ‘ಪಿಂಡಾರ್’ ಪತ್ರಿಕೆಗೆ ಸೀಮಿತವಾಗಿಲ್ಲ. ಬಿಹಾರ ರಾಜ್ಯದಲ್ಲಿ ಹೇಳಿಕೊಳ್ಳುವಂತಹ ಖಾಸಗಿ ಉದ್ಯಮ, ಕಾರ್ಖಾನೆ, ಸಂಸ್ಥೆಗಳು ಇಲ್ಲ ಆದ್ದರಿಂದ ಅಲ್ಲಿನ ಪತ್ರಿಕೆಗಳು ತಮ್ಮ ಉಳಿವಿಗಾಗಿ ಸರ್ಕಾರಿ ಜಾಹೀರಾತುಗಳನ್ನೇ ಅವಲಂಬಿಸಲೇಬೇಕಿದೆ. ಇದನ್ನೇ ತನ್ನ ಅಸ್ತ್ರವಾಗಿಸಿಕೊಂಡಿರುವ ನಿತೀಶ್‌ಕುಮಾರ್ ಅಲ್ಲಿನ ಪತ್ರಿಕೆಗಳನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಂಡಿದ್ದಾರೆ. ಅದನ್ನು ಅವರು ಅದೆಷ್ಟು ಚಾಕಚಕ್ಯತೆಯಿಂದ ಮಾಡಿದ್ದಾರೆಂಬುದು ಅಚ್ಚರಿ ಮೂಡಿಸುತ್ತದೆ.

ನಿತೀಶ್‌ಕುಮಾರ್ ಬಿಹಾರದ ಮುಖ್ಯಮಂತ್ರಿ ಆಗುವತನಕ ಆ ರಾಜ್ಯದ ಬಜೆಟ್‌ನಲ್ಲಿ ಸರ್ಕಾರಿ ಜಾಹೀರಾತುಗಳಿಗೆ ಕಡಿಮೆ ಹಣವನ್ನು ಎತ್ತಿಡಲಾಗುತ್ತಿತ್ತು. ಉದಾಹರಣೆಗೆ ಲಾಲೂ ಪ್ರಸಾದ್ ಯಾದವ್ ಅವರ ಆರ್‌ಜೆಡಿ ಪಕ್ಷ ಬಿಹಾರದಲ್ಲಿ ಅಧಿಕಾರದಲ್ಲಿದ್ದ 2005-06ರಲ್ಲಿ ಇಂತಹ ಜಾಹೀರಾತುಗಳಿಗೆ 4.5 ಕೋಟಿ ರೂಪಾಯಿಗಳನ್ನು ಸರ್ಕಾರಿ ಖಜಾನೆಯಿಂದ ವೆಚ್ಚ ಮಾಡಲಾಗಿತ್ತು. ಆದರೆ ನಿತೀಶ್‌ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಮರುವರ್ಷವೇ (2006-07ರಲ್ಲಿ) ಆ ಮೊತ್ತವನ್ನು 5.4 ಕೋಟಿಗಳಿಗೆ ಏರಿಸಲಾಯಿತು. 2007-08ರಲ್ಲಿ ಅದು ದುಪ್ಪಟ್ಟುಗೊಂಡು 9.65 ಕೋಟಿಯಾಯಿತು. 2008-09ರಲ್ಲಿ ಅದು ಮೂರುಪಟ್ಟು ಹೆಚ್ಚಾಗಿ 27.5 ಕೋಟಿಗೆ ಏರಿತು. 2009-10ರಲ್ಲಿ ಮತ್ತಷ್ಟು ಹೆಚ್ಚಾಗಿ 34.5 ಕೋಟಿ ರೂ. ಗೆ ಮುಟ್ಟಿತು.

ಇಷ್ಟು ದೊಡ್ಡ ಮೊತ್ತದಲ್ಲಿ ಯಾವ ಪತ್ರಿಕೆಗೆ ಎಷ್ಟು ಕೊಡಬೇಕೆಂಬ ನಿರ್ಧಾರವನ್ನು ಸ್ವತಃ ನಿತೀಶ್‌ಕುಮಾರ್ ಅವರೇ ತೆಗೆದುಕೊಳ್ಳುವುದರಿಂದ ಇವತ್ತು ಅಲ್ಲಿಯ ಬಹಳಷ್ಟು ಪತ್ರಿಕೆಗಳು ಅವರ ಹೊಗಳುಭಟ್ಟ ಪತ್ರಿಕೆಗಳಾಗಿ ಮಾರ್ಪಾಟುಗೊಂಡಿವೆ. ಇದರ ಬಗ್ಗೆ ‘ಪಿಂಡಾರ್’ ಪತ್ರಿಕೆಯ ಮಾಜಿ ಸಂಪಾದಕ ಘಾಣಿ ಅವರು ಹೇಳುವುದೇನೆಂದರೆ “ತುರ್ತುಪರಿಸ್ಥಿತಿ ಸಂದರ್ಭದಲ್ಲಿ ದೇಶದಾದ್ಯಂತ ಘೋಷಿತ ಪತ್ರಿಕಾ ಸೆನ್ಸಾರ್‌ಶಿಪ್ ಇತ್ತು. ಆದರೆ ನಿತೀಶ್‌ಕುಮಾರ್ ಆಡಳಿತದಡಿ ಬಿಹಾರದಲ್ಲಿ ಅಘೋಷಿತ ಸೆನ್ಸಾರ್‌ಶಿಪ್ ಜಾರಿಯಲ್ಲಿದೆ. ಇದು ಪ್ರಜಾಪ್ರಭುತ್ವಕ್ಕೆ ಬಹಳಷ್ಟು ಅಪಾಯಕಾರಿ” ಎಂದು.

  • ಗೌರಿ ಲಂಕೇಶ್.

ಮೇ 2, 2012

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...