Homeಬಹುಜನ ಭಾರತಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

- Advertisement -
- Advertisement -

ಆಡುವ ನುಡಿಗಳಿಗೆ ಸಾಧಕ ಬಾಧಕಗಳಿರುತ್ತವೆ. ಉಳಿದೆಲ್ಲರಿಗಿಂತ ಹೆಚ್ಚಾಗಿ ನಿತ್ಯ ಜನಸಮೂಹಗಳೊಂದಿಗೆ ಪ್ರತ್ಯಕ್ಷ-ಪರೋಕ್ಷ ಸಂವಾದದಲ್ಲಿ ತೊಡಗುವ ಜನಪ್ರತಿನಿಧಿಗಳಿಗೆ ಈ ಮಾತು ವಿಶೇಷವಾಗಿ ಅನ್ವಯಿಸುತ್ತದೆ. ಜನರಿಗೆ ಮತ್ತು ಜನರಿಂದ ರೂಪಿತವಾಗಿರುವ ಸಂವಿಧಾನದ ಆಶಯಗಳಿಗೆ ಅವರು ಬದ್ಧರಾಗಿರಬೇಕು. ಹಾಗೆಂದು ಶಾಸನಸಭೆ ಮತ್ತು ಸಂಸತ್ತಿನಲ್ಲಿ ನಿಂತು ಪ್ರಮಾಣವಚನ ಸ್ವೀಕರಿಸುತ್ತಾರೆ. ಪ್ರಮಾಣವಚನ ಸ್ವೀಕರಿಸಿದ ನಂತರವೇ ಅವರಿಗೆ ಶಾಸನಸಭೆಗಳು- ಸಂಸತ್ತಿನಲ್ಲಿ ಆಸನಗಳು ದೊರೆಯುತ್ತವೆ. ಮಾತಾಡುವ ಹಕ್ಕು ಲಭಿಸುತ್ತದೆ. ಸಂಬಳ-ಸಾರಿಗೆ-ಭತ್ಯೆಗಳು ಮತ್ತು ಸಂಸದೀಯ ಅಧಿಕಾರಗಳು ದತ್ತವಾಗುತ್ತವೆ. ಮಂತ್ರಿಗಳು ಈ ಪ್ರಮಾಣವಚನವನ್ನು ಎರಡು ಸಲ ಸ್ವೀಕರಿಸುತ್ತಾರೆ. ಸ್ಪೀಕರ್-ಸಭಾಪತಿ ರಾಜ್ಯಪಾಲರು- ರಾಷ್ಟ್ರಪತಿಯವರು ಬೋಧಿಸುವ ಈ ಶಪಥವನ್ನು ಬಹಿರಂಗವಾಗಿ ಬಾಯಲ್ಲಿ ನುಡಿದು ಆಡಬೇಕಾಗುತ್ತದೆ ಎಂಬುದನ್ನು ಗಮನಿಸಬೇಕು.

‘… ಎಂಬುವವನಾದ ನಾನು ದೇವರ- ಸತ್ಯನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇನೆ. ವಿಧಿ ದ್ವಾರಾ ಸ್ಥಾಪಿಸಲಾದ ಭಾರತದ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇನೆ. ನಾನು ಭಾರತದ ಪ್ರಭುತೆ ಮತ್ತು ಅಖಂಡತೆಯನ್ನು ಕಾಪಾಡುತ್ತೇನೆ. ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಶುದ್ಧ ಅಂತಃಕರಣದಿಂದ ನಿರ್ವಹಿಸುತ್ತೇನೆ. ಭಯ ಅಥವಾ ಪಕ್ಷಪಾತ, ಅನುರಾಗ ಇಲ್ಲವೇ ದ್ವೇಷಗಳಿಲ್ಲದೆ, ಎಲ್ಲ ರೀತಿಯ ಜನರಿಗೆ ಸಂವಿಧಾನ ಮತ್ತು ವಿಧಿಯ ಅನುಸಾರ ನ್ಯಾಯ ಸಲ್ಲಿಸುತ್ತೇನೆ’ ಎಂಬುದಾಗಿ ಶಾಸಕರು- ಸಂಸದರು ಸ್ವೀಕರಿಸುವ ಪ್ರತಿಜ್ಞೆಯ ಜೊತೆಗೆ ಪ್ರಧಾನಮಂತ್ರಿ-ಮುಖ್ಯಮಂತ್ರಿ ಹಾಗೂ ಮಂತ್ರಿಗಳು ಗೌಪ್ಯತೆಯ ಶಪಥವನ್ನೂ ಸ್ವೀಕರಿಸುತ್ತಾರೆ.

ಭಯ ಅಥವಾ ಪಕ್ಷಪಾತ ಅನುರಾಗ ಇಲ್ಲವೇ ದ್ವೇಷಗಳಿಲ್ಲದೆ ಶುದ್ಧ ಅಂತಃಕರಣದಿಂದ ತಮ್ಮ ಕರ್ತವ್ಯಗಳನ್ನು ಆಳುವ ಪಕ್ಷದ ಜನಪ್ರತಿನಿಧಿಗಳು ಮಂತ್ರಿಗಳು ಪ್ರಧಾನಮಂತ್ರಿ ನಿರ್ವಹಿಸುತ್ತಿದ್ದಾರೆಯೇ, ಭಾರತದ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಒಮ್ಮೆ ಕೇಳಿಕೊಳ್ಳಬೇಕಿದೆ.

ಎಲ್ಲ ನೈತಿಕ ಎಲ್ಲೆಗಳನ್ನು ಎದೆ ಸೆಟೆಸಿ ಉಲ್ಲಂಘಿಸುವ ಭಂಡತನದಲ್ಲಿ ಪೈಪೋಟಿ ನಡೆಯತೊಡಗಿದೆ. ದ್ವೇಷ, ದ್ರುವೀಕರಣ ಹಾಗೂ ಹಿಂಸೆಗಳನ್ನು ಪ್ರಚೋದಿಸುವ ಪಂದ್ಯಗಳಲ್ಲಿ ತಾವು ಭಾಗವಹಿಸುತ್ತಿದ್ದೇವೆ ಎಂಬ ಭಾವನೆಯನ್ನು ಬಿಜೆಪಿಯಲ್ಲಿ ಮತ್ತು ಈ ಪಕ್ಷದ ಕಟ್ಟರ್‌ವಾದಿ ಬೆಂಬಲಿಗರಲ್ಲಿ ಉತ್ತೇಜಿಸಲಾಗುತ್ತಿದೆ. ಈ ನಾಚಿಕೆಗೇಡಿನಲ್ಲಿ ತೊಡಗಿದವರಿಗೆ ಇಂದಲ್ಲದಿದ್ದರೆ ನಾಳೆ ಪಕ್ಷ ಬಹುಮಾನಗಳನ್ನು ನೀಡಿ ಬೆನ್ನು ತಟ್ಟುತ್ತಿದೆ. ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿರುವ ಭಯೋತ್ಪಾದಕರಿಗೂ ಮುಂದೊಂದು ದಿನ ಬಿಜೆಪಿ ಚುನಾವಣಾ ಟಿಕೆಟ್ ಗಳು ದೊರೆತರೆ ಚಕಿತರಾಗಬೇಕಿಲ್ಲ.

ಸಿ.ಎ.ಎ – ಎನ್.ಆರ್.ಸಿ. ವಿರುದ್ಧ ಶಾಂತಿಯುತ ಪ್ರತಿಭಟನೆ ಜರುಗುತ್ತಿರುವ ಶಾಹೀನ್‌ಬಾಗ್ ಅನ್ನು ಮಿನಿ ಪಾಕಿಸ್ತಾನ ಎಂದು ಕರೆಯುವುದು, ದೇಶ್ ಕೇ ಗದ್ದಾರೋಂ ಕೋ ಗೋಲೀ ಮಾರೋ ಸಾಲೋಂ ಕೋ ಎಂಬ ಘೋಷಣೆಗಳನ್ನು ಜನಸಭೆಗಳಲ್ಲಿ ಕೂಗಿಸುವುದು, ಎಷ್ಟು ಸಿಟ್ಟಿನಿಂದ ನೀವು ಚುನಾವಣಾ ಮತಯಂತ್ರದ ಗುಂಡಿ ಒತ್ತಬೇಕೆಂದರೆ ಅದರ ಆಘಾತ ಶಾಹೀನ್‌ಬಾಗ್‌ಗೆ ತಗುಲಬೇಕು ಎಂದು ಪ್ರಚೋದಿಸುವುದು, ಕಾಶ್ಮೀರದಲ್ಲಿ ಪಂಡಿತರನ್ನು ಹಿಂಸಿಸಿ ಬೆದರಿಸಿ ಓಡಿಸಿದಂತೆಯೇ ದೆಹಲಿಯಲ್ಲಿ ಶಾಹೀನ್‌ಬಾಗ್‌ನ ಪ್ರತಿಭಟನಕಾರರು ನಾಳೆ ನಿಮ್ಮ ಮನೆಗಳಿಗೆ ನುಗ್ಗಿ ನಿಮ್ಮ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿ ಕೊಲ್ಲಬಹುದು ಎಂದು ಒಂದು ಜನಾಂಗದ ವಿರುದ್ಧ ಹೇವರಿಕೆ ಭಯ ದ್ವೇಷ ಹುಟ್ಟಿಸುವುದು, ಶಾಹೀನ್‌ಬಾಗ್ ಪ್ರತಿಭಟನೆಯ ಹಿಂದೆ ದೇಶವನ್ನು ಒಡೆಯುವ ಹುನ್ನಾರವಿದೆ ಎಂಬುವ ವಿಷ ಕಕ್ಕುವ ಮಾತುಗಳು ಬಿಜೆಪಿಯವು.

ಶಾಹೀನ್‌ಬಾಗ್ ನಲ್ಲಿ ಧರಣಿ ಕುಳಿತಿರುವ ಮಹಿಳೆಯರು ಮತ್ತು ಮಕ್ಕಳು ಸಾಯಬಾರದೇಕೆ, ಉತ್ತರಪ್ರದೇಶದಂತಹ ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಸಿಎಎ ಪ್ರತಿಭಟನಾಕಾರರನ್ನು ನಾಯಿಗಳಂತೆ ಗುಂಡು ಹೊಡೆದು ಸಾಯಿಸಲಾಗಿದೆ ಎನ್ನುತ್ತಾರೆ. ತಮ್ಮ ಕಾರ್ಯಕರ್ತರು ಸಿಎಎ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬಳನ್ನು ಬೆಂಬತ್ತಿ ಛೇಡಿಸುವುದನ್ನು ಬೆಂಬಲಿಸುತ್ತಾರೆ. ಅವಳ ಅದೃಷ್ಟ ಚೆನ್ನಾಗಿತ್ತು, ನಮ್ಮ ಕಾರ್ಯಕರ್ತರು ಆಕೆಯನ್ನು ಅಷ್ಟಕ್ಕೇ ಬಿಟ್ಟುಬಿಟ್ಟರು ಎನ್ನುತ್ತಾರೆ ದ್ವೇಷದ ಕಿಚ್ಚು ಹಚ್ಚುವ ನುಡಿಗಳು. ಕಪಿಲ್ ಮಿಶ್ರಾ ಎಂಬ ಪುಡಿ ಪುಢಾರಿಯಿಂದ ಹಿಡಿದು, ಸಂಸದ ಪ್ರವೇಶ್‌ವರ್ಮಾ, ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಕೇಂದ್ರ ಸರ್ಕಾರದ ಕಿರಿಯ ಮಂತ್ರಿ ಅನುರಾಗ್ ಠಾಕೂರ್, ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಕೋಮುವಾದದ ಕಾಳ್ಗಿಚ್ಚನ್ನು ಹೊತ್ತಿಸುವ ಕೃತ್ಯದಲ್ಲಿ ತೊಡಗಿದ್ದಾರೆ. ಈ ದ್ವೇಷದ ಕಿಚ್ಚನ್ನು ಜನಮಾನಸದ ಎದೆಯಲ್ಲಿ ಹೊತ್ತಿಸಿ ದಾರಿ ತಪ್ಪಿಸುವ ಅಪಾಯಕಾರಿ ಆಟವಿದು. ಜನರನ್ನು ಒಡೆದು ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟಿ ಕೊಲ್ಲಿಸುವ ಆಟ. ಈ ಆಟದಲ್ಲಿ ಕಿಚ್ಚು ಹೊತ್ತಿಸುವವರು ಗೆಲ್ಲಬಹುದು, ಆದರೆ ದೇಶ ಸೋಲುತ್ತದೆ.

ಗೋಲಿ ಮಾರೋ ಸಾಲೋಂ ಕೋ ಎಂಬ ತಮ್ಮ ನಾಯಕರು ಕುಡಿಸಿರುವ ದ್ವೇಷದ ನಶೆಯನ್ನು ಏರಿಸಿಕೊಂಡಿರುವ ಯುವಕರು ಈಗಾಗಲೆ ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸತೊಡಗಿದ್ದಾರೆ.

ಈ ಕಿಚ್ಚು ಇಷ್ಟಕ್ಕೇ ನಿಲ್ಲುತ್ತದೆಯೇ, ಪಕ್ಕದ ಮನೆ ಸುಟ್ಟರೆ, ಆ ಬೆಂಕಿ ಇಂದಲ್ಲ ನಾಳೆ ನನ್ನ ಮನೆಯನ್ನೂ ಸುಟ್ಟೀತಲ್ಲವೇ ಎಂಬ ಪ್ರಜ್ಞೆ ಮೂಡಬೇಕಿದೆ. ಚುನಾವಣೆಗಳಲ್ಲಿ ಗೆಲ್ಲುವ ಅಲ್ಪಕಾಲೀನ ತಂತ್ರ ಮಾತ್ರವಲ್ಲದೆ ಮತ್ತು ಕೇಸರಿ ಸೈದ್ಧಾಂತಿಕ ನೆಲೆಯ ಶಾಶ್ವತ ಸ್ಥಾಪನೆಗಾಗಿ ಮುಸ್ಲಿಮರು, ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರು, ಉದಾರವಾದಿಗಳು, ಪ್ರಜ್ಞಾವಂತರು, ಕೇಂದ್ರ ಸರ್ಕಾರದ ನೀತಿ ನಿರ್ಧಾರಗಳನ್ನು ವಿರೋಧಿಸುವ ಯಾರೇ ಇರಲಿ, ಅವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಅವರಿಗೆ ಗುಂಡು ಹೊಡೆಯಬೇಕೆಂದು ಕರೆ ನೀಡಲಾಗುತ್ತಿದೆ. ಈ ಕರೆಯನ್ನು ದೇಶದ ಪ್ರಧಾನಮಂತ್ರಿ- ಗೃಹಮಂತ್ರಿ ಪ್ರತ್ಯಕ್ಷ ಪರೋಕ್ಷವಾಗಿ ಸಮರ್ಥಿಸುತ್ತಿದ್ದಾರೆ. ಇನ್ನು ಬಂಧನ ಕೇಂದ್ರಗಳು ಆರಂಭ ಆಗತೊಡಗಿವೆ.

ವಿದ್ಯಾರ್ಥಿ ಪರಿಷತ್ತಿನ ಸಂಬಂಧವಿದ್ದ ಬಲಪಂಥೀಯ ಮುಸುಕುಧಾರಿಗಳು ಜೆ.ಎನ್.ಯು ಹಾಸ್ಟೆಲುಗಳ ನುಗ್ಗಿ ವಿದ್ಯಾರ್ಥಿಗಳನ್ನು ತಲೆ ಒಡೆದು ರಕ್ತ ಹರಿಸಿ ತಿಂಗಳೇ ಉರುಳಿತು. ಒಬ್ಬನೇ ಒಬ್ಬನನ್ನು ಪೊಲೀಸರು ಈವರೆಗೆ ಬಂಧಿಸಿಲ್ಲ. ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿದ ಗೋಪಾಲ ಶರ್ಮನನ್ನು ಅಪ್ರಾಪ್ತ ವಯಸ್ಕನೆಂದು ಸಾರಿ ರಕ್ಷಿಸಲಾಗಿದೆ. ಅತ್ತ ಬೀದರಿನಲ್ಲಿ ಮನೆಗೆಲಸ ಮಾಡಿ ಹೊಟ್ಟೆ ಹೊರೆವ ಮುಸ್ಲಿಂ ತಾಯಿಯನ್ನು ದೇಶದ್ರೋಹದ ಆಪಾದನೆಯ ಮೇರೆಗೆ ಬಂಧಿಸಲಾಗಿದೆ. ಹೊರಗಿರುವ ಆಕೆಯ ಒಂಬತ್ತು ವರ್ಷದ ಮಗಳು ಈಗ ಏಕಾಂಗಿ. ಕಾಗದ ತೋರಿಸಬೇಕೆಂದು ತೋರಿಸುವವರನ್ನು ಚಪ್ಪಲಿಯಲ್ಲಿ ಹೊಡೆಯಬೇಕು ಎಂಬ ಮಾತು ಇರುವ ನಾಟಕ ಆಡಿಸಿದರೆಂದು ಅಲ್ಪಸಂಖ್ಯಾತ ಶಾಲೆಯೊಂದರ ಮಕ್ಕಳನ್ನು ಪೊಲೀಸರು ಪ್ರಶ್ನಿಸತೊಡಗಿದ್ದಾರೆ. ಗೋಲಿ ಮಾರೋ ಸಾಲೋಂ ಕೋ ಎಂಬುದಾಗಿ ಪ್ರಚೋದಿಸುವವರ ಮೇಲೆ ಕನಿಷ್ಠ ಎಫ್.ಐ.ಆರ್ ಕೂಡ ಇಲ್ಲ.

ನಾಜಿ ಜರ್ಮನಿಯ ಇತಿಹಾಸ ಭಾರತದಲ್ಲಿ ಸುರುಳಿ ಬಿಚ್ಚತೊಡಗಿದೆ. ಅನುಮಾನವೇ ಇಲ್ಲ, ಇದು ದೀರ್ಘ ಇರುಳು. ಆದರೆ ನೆನಪಿಡೋಣ ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಅದೆಷ್ಟೇ ಪ್ರಚಂಡನಾದರೂ ಜನತೆಗಿಂತ ದೊಡ್ಡವನಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...