Homeಮುಖಪುಟದೆಹಲಿ ಚುನಾವಣೆ: ಈವರೆಗೆ ಕಳೆದ ಬಾರಿಗಿಂತ ಕಡಿಮೆ ಮತದಾನ..

ದೆಹಲಿ ಚುನಾವಣೆ: ಈವರೆಗೆ ಕಳೆದ ಬಾರಿಗಿಂತ ಕಡಿಮೆ ಮತದಾನ..

ಶಹೀನ್ ಬಾಗ್‌ನ ಎಲ್ಲಾ ಐದು ಮತಗಟ್ಟೆಗಳು"ಅತೀಸೂಕ್ಷ್ಮ"...!!

- Advertisement -
- Advertisement -

ದೆಹಲಿ ಚುನಾವಣೆ ಪ್ರಾರಂಭವಾಗಿದ್ದು ಈವರೆಗೆ 16.04%ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 1.47 ಕೋಟಿ ಮತದಾರರು ಮತ ಚಲಾಯಿಸಲಿದ್ದು, ಕಣದಲ್ಲಿರುವ 672 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.

70 ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯು ಮೊದಲ ಮೂರು ಗಂಟೆಗಳಲ್ಲಿ ಕಳೆದ ಬಾರಿಗಿಂತ ಕಡಿಮೆ ಮತದಾನ ದಾಖಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದರು.

2015 ರಲ್ಲಿ ನಡೆದ ಕೊನೆಯ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 67.12% ರಷ್ಟು ಮತದಾನವನ್ನು ದಾಖಲಿಸಿತ್ತು.

81,05,236 ಪುರುಷ ಮತದಾರರು ಮತ್ತು 66,80,277 ಮಹಿಳಾ ಮತದಾರರು ಜೊತೆಗೆ 869 ತೃತೀಯ ಲಿಂಗ ಮತದಾರರನ್ನು ದೆಹಲಿ ಹೊಂದಿದೆ. ದೆಹಲಿಯ 2689 ಪ್ರದೇಶಗಳಲ್ಲಿ 13,571 ಮತದಾನ ಕೇಂದ್ರಗಳಲ್ಲಿ ಮತದಾನ ನಡೆಯಲಿದೆ.

ಕಳೆದ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವೂ 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ದಾಖಲಿಸಿದರೆ.ಬಿಜೆಪಿ ಮೂರು ಸ್ಥಾನಗಳು ಮತ್ತು ಕಾಂಗ್ರೆಸ್ ಶೂನ್ಯ ಸಾಧನೆಯನ್ನು ಮಾಡಿತ್ತು.

ಪ್ರಸುತ ಎಎಪಿ ಎಲ್ಲಾ 70 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಬಿಜೆಪಿ 67 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಮತ್ತು ಉಳಿದ ಮೂರು ಸ್ಥಾನಗಳನ್ನು ತನ್ನ ಮಿತ್ರ ಪಕ್ಷಗಳಾದ ಜನತಾದಳ (ಯುನೈಟೆಡ್)ಗೆ ಎರಡು ಮತ್ತು ಲೋಕ ಜನಶಕ್ತಿ ಪಕ್ಷಕ್ಕೆ (ಎಲ್ಜೆಪಿ) ಒಂದು ಸ್ಥಾನವನ್ನು ಬಿಟ್ಟು ಕೊಟ್ಟಿದೆ. ಕಾಂಗ್ರೆಸ್ 66 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ ತನ್ನ ಮಿತ್ರ ಪಕ್ಷ ರಾಷ್ಟ್ರ ಜನತಾದಳಕ್ಕೆ (ಆರ್‌ಜೆಡಿ) ನಾಲ್ಕು ಸ್ಥಾನಗಳನ್ನು ನೀಡಿದೆ.

ಕೇಜ್ರಿವಾಲ್ ಅವರ ಎಎಪಿ ಸತತ ಎರಡನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದರೆ, ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ಮೂಲಕ ಗೆಲ್ಲಲು ಪ್ರಯತ್ನಿಸುತ್ತಿದೆ.

ಎಎಪಿ ಕಳೆದ ಐದು ವರ್ಷಗಳಲ್ಲಿ ಸ್ಥಳೀಯ ಆಡಳಿತ ಸಮಸ್ಯೆಗಳು ಮತ್ತು ಅದರ ಕುರಿತಾಗಿ ಕೇಂದ್ರೀಕರಿಸಿ ಪ್ರಚಾರ ಮಾಡಿದರೆ, ಬಿಜೆಪಿ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತೆಯ ವಿಷಯವನ್ನು ದೊಡ್ಡದಾಗಿ ಬಿಂಬಿಸುವ ಮೂಲಕ ಚುನಾವಣಾ ಪ್ರಚಾರ ಮಾಡಿತ್ತು.

ಮುಖ್ಯಮಂತ್ರಿ ಕೇಜ್ರಿವಾಲ್ ಅವರು ಪ್ರತಿಷ್ಠಿತ ನವದೆಹಲಿಯಿಂದ ಸ್ಪರ್ಧಿಸುತ್ತಿದ್ದಾರೆ, ಬಿಜೆಪಿ ಅವರ ವಿರುದ್ಧ ಸುನಿಲ್ ಯಾದವ್ ಅವರನ್ನು ಕಣಕ್ಕಿಳಿಸಿದೆ, ಕಾಂಗ್ರೆಸ್ ನಿಂದ ರೋಮೇಶ್ ಸಬ್ಬರ್ವಾಲ್ ಅವರು ಸ್ಪರ್ದಿಸುತ್ತಿದ್ದಾರೆ.

ಎಎಪಿಯ ದಿಲೀಪ್ ಪಾಂಡೆ ತಿಮಾರ್‌ಪುರದಿಂದ, ಕಲ್ಕಾಜಿಯಿಂದ ಅತಿಶಿ, ರಾಜೇಂದರ್ ನಗರದಿಂದ ರಾಘವ್ ಚಾಧಾ ಸ್ಪರ್ಧಿಸುತ್ತಿದ್ದಾರೆ.

ರೋಹಿಣಿಯಿಂದ ವಿಜೇಂದರ್ ಗುಪ್ತಾ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಾಜಿ ಎಎಪಿ ಮುಖಂಡ ಕಪಿಲ್ ಮಿಶ್ರಾ ಈ ಚುನಾವಣೆಯಲ್ಲಿ ಮಾಡೆಲ್ ಟೌನ್‌ನ ಬಿಜೆಪಿ ಅಭ್ಯರ್ಥಿ. ತಾಜಿಂದರ್ ಪಾಲ್ ಸಿಂಗ್ ಬಗ್ಗಾ ಹರಿ ನಗರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಗಾಂಧಿ ನಗರದಿಂದ ಅರವಿಂದರ್ ಸಿಂಗ್ ಲವ್ಲಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಮಾಜಿ ಎಎಪಿ ಮುಖಂಡ ಅಲ್ಕಾ ಲಾಂಬಾ ಚಾಂದನಿ ಚೌಕ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಹರೂನ್ ಯೂಸುಫ್ ಬಲ್ಲಿಮಾರನ್ ನಿಂದ ಸ್ಪರ್ಧಿಸುತ್ತಿದ್ದಾರೆ.

ಎಲ್ಲಾ 70 ಅಸೆಂಬ್ಲಿಗಳಲ್ಲಿ ಶಾಂತಿಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) 190 ಗುಂಪುಗಳನ್ನು ನಿಯೋಜಿಸಲಾಗಿದೆ. ಇದಲ್ಲದೆ, 19,000 ಹೋಮ್ ಗಾರ್ಡ್ ಮತ್ತು 42,000 ದೆಹಲಿ ಪೊಲೀಸ್ ಸಿಬ್ಬಂದಿ ಸಹ ಕರ್ತವ್ಯದಲ್ಲಿದ್ದಾರೆ.

ಒಟ್ಟು 3,141 ಮತಗಟ್ಟೆಗಳಿದ್ದು, 144 ಸೂಕ್ಷ್ಮ ಮತಗಟ್ಟೆಗಳು ಹಾಗು 102ಅತೀ ಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.

ಶಹೀನ್ ಬಾಗ್‌ನ ಎಲ್ಲಾ ಐದು ಮತಗಟ್ಟೆಗಳನ್ನು ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) “ಅತಿ ಸೂಕ್ಷ್ಮ” ಎಂದು ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...