Homeಮುಖಪುಟಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿಯನ್ನು ಶ್ಲಾಘಿಸಿ ಅವಾರ್ಡ್‌ ನೀಡಿದ ಬಿಜೆಪಿ!

ಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿಯನ್ನು ಶ್ಲಾಘಿಸಿ ಅವಾರ್ಡ್‌ ನೀಡಿದ ಬಿಜೆಪಿ!

- Advertisement -
- Advertisement -

ಮುಂಬೈ ಘಟಕದ ಬಿಜೆಪಿ ಅಧ್ಯಕ್ಷ ಮಂಗಲ್ ಪ್ರಭಾತ್ ಲೋಧಾ ಅವರು ಫೆಬ್ರವರಿ 5 ರ ಬುಧವಾರದಂದು  ಪ್ರಯಾಣಿಕ, ಕವಿ ಮತ್ತು ಸಿಎಎ ವಿರೋಧಿ ಪ್ರತಿಭಟನಾಕಾರರನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಉಬರ್ ಚಾಲಕನನ್ನು ರೋಹಿತ್‌ ಸಿಂಗ್‌ನನ್ನು ಸನ್ಮಾನಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

‘ಅಲರ್ಟ್‌ ಸಿಟಿಜನ್‌ ಅವಾರ್ಡ್‌’ ಎಂಬ ಭಿತ್ತಿಪತ್ರವನ್ನು ನೀಡಿರುವ ಬಿಜೆಪಿ ಅಧ್ಯಕ್ಷ ಈತನು ಒಳ್ಳೆಯ ಕೆಲಸ ಮಾಡಿದ್ದಾನೆ ಎಂದು ಹಾಡಿ ಹೊಗಳಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಚಾಲಕ ರೋಹಿತ್ ಸಿಂಗ್, “ತಾನು ಮಾಡಿದ ಕೆಲಸಕ್ಕೆ ಹೆಮ್ಮೆ ಇದೆ” ಎಂದು ಹೇಳಿದ್ದಾರೆ.

ನಾನು ಇಲ್ಲಿಯವರೆಗೆ 3,000 ಜನರನ್ನು ತಮ್ಮ ಸ್ಥಳಗಳಿಗೆ ತಲುಪಿಸಿದ್ದೇನೆ. ಆತಿನಿಂದ ನಮ್ಮ ದೇಶಕ್ಕೆ ಹಾನಿಯಾಗಲಿದೆ ಎಂದು ನಾನು ಭಾವಿಸಿದ್ದರಿಂದ ಹಾಗೆ ಮಾಡಿದೆ. ನಾನು ಯಾರನ್ನಾದರೂ ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿರುವುದು ಇದೇ ಮೊದಲು” ಎಂದು ಅವರು ಹೇಳಿದ್ದಾರೆ.

ರೋಹಿತ್ ಸಿಂಗ್ ಅವರು ಈಗಾಗಲೇ ಉಬರ್‌ಗೆ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಕ್ಯಾಬ್ ಅಗ್ರಿಗೇಟರ್ ಉಬರ್‌ ಅವರನ್ನು ಸುಮಾರು 48 ರಿಂದ 72 ಗಂಟೆಗಳ ಕಾಲ ತಾತ್ಕಾಲಿಕವಾಗಿ ಅಮಾನತುಗೊಳಿಸಿ ತನಿಖೆ ನಡೆಸುತ್ತಿದೆ ಎಂದು ಹೇಳಿಕೊಂಡಿದೆ. ಆದರೆ ಚಾಲಕ ರೋಹಿತ್‌ ಸಿಂಗ್‌ ತಾನು ಆನ್‌ಲೈನ್‌ಗೆ ಹಿಂತಿರುಗಲಿದ್ದೇನೆ ಎಂದು ಹೇಳಿದ್ದಾರೆ.

ಬುಧವಾರದಂದು ಸರ್ಕಾರ್‌ ಎಂಬ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ಬುಧವಾರ ರಾತ್ರಿ 10:30ರ ಸುಮಾರಿಗೆ ಜುಹುನಿಂದ ಕುರ್ಲಾಕ್ಕೆ ಉಬರ್ ಕ್ಯಾಬ್ ತೆಗೆದುಕೊಂಡಿದ್ದಾರೆ. ಪ್ರಯಾಣದ ಸಮಯದಲ್ಲಿ ಅವರು ತಮ್ಮ ಸ್ನೇಹಿತರೊಂದಿಗೆ (ಮೊಬೈಲ್ ಫೋನ್‌ನಲ್ಲಿ) ದೆಹಲಿಯ ಶಾಹೀನ್ ಬಾಗ್ ಪ್ರತಿಭಟನೆಯಲ್ಲಿ “ಲಾಲ್ ಸಲಾಮ್” ಘೋಷಣೆಯು ಜನರಿಗೆ ಹೆಚ್ಚು ಒಪ್ಪಿತವಾಗಿಲ್ಲ ಎಂಬ ವಿಷಯದ ಕುರಿತು ಚರ್ಚಿಸುತ್ತಿದ್ದರು.

ಇದನ್ನು ಕೇಳುತ್ತಿದ್ದ ಚಾಲಕ, ಸರ್ಕಾರ್‌ಗೆ ತಾನು ಎಟಿಎಂನಿಂದ ಹಣವನ್ನು ತೆಗೆದುಕೊಳ್ಳುತ್ತೇನೆ ಎಂದು ಕಾರು ನಿಲ್ಲಿಸಿದ್ದಾರೆ. ಆದರೆ ಚಾಲಕ ಇಬ್ಬರು ಪೊಲೀಸರೊಂದಿಗೆ ಹಿಂತಿರುಗಿದ್ದಾನೆ. ಪೊಲೀಸರು ಸರ್ಕಾರ್ ಅವರನ್ನು “ದಫ್ಲಿ” (ತಾಳವಾದ್ಯ) ಏಕೆ ಸಾಗಿಸುತ್ತಿದ್ದೀರಿ ಎಂದು ಕೇಳಿದರು ಮತ್ತು ಅವರ ವಿಳಾಸವನ್ನೂ ಕೇಳಿದ್ದಾರೆ.

ಸರ್ಕಾರ್ ಅವರು ಜೈಪುರದವರು ಮತ್ತು ಸಿಎಎ ವಿರೋಧಿ “ಮುಂಬೈ ಬಾಗ್” ಪ್ರತಿಭಟನೆಗೆ ಭೇಟಿ ನೀಡಿದ್ದರು ಎಂದು ಹೇಳಿದರು. ಅವರು ಪ್ರತಿಭಟನೆಯಲ್ಲಿ ಹಾಡು ಮತ್ತು ಘೋಷಣೆ ಕೂಗಲು ಅವರ ವಾದ್ಯವನ್ನು ಹೊತ್ತೊಯ್ಯುತ್ತಿದ್ದರು ಎಂದು ಅವರು ಹೇಳಿದ್ದಾರೆ..

ಇದನ್ನೂ ಓದಿ: ಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿ : ಸಿಎಎ ಪ್ರತಿಭಟನಾಕಾರ ಮುಂಬೈ ಪೊಲೀಸ್‌ ವಶಕ್ಕೆ

ಹಲವು ಸುತ್ತಿನ ವಿಚಾರಣೆಯ ನಂತರ ಮುಂಜಾನೆ 1 ಗಂಟೆ ಸುಮಾರಿಗೆ ಮತ್ತೊಬ್ಬ ಕಾರ್ಯಕರ್ತ ಎಸ್ ಗೋಹಿಲ್ ಪೊಲೀಸ್ ಠಾಣೆಗೆ ಬಂದ ನಂತರ ಸರ್ಕಾರ್ ಅವರಿಗೆ ಅಲ್ಲಿಂದ ಹೋಗಲು ಅನುಮತಿ ನೀಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...