Homeಮುಖಪುಟಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು... ಯಾಕೆಂದರೆ.? - ಇಸ್ಮತ್‌ ಪಜೀರ್‌

ಮನು ಬಳಿಗಾರ್ ರಾಜೀನಾಮೆ ನೀಡಲೇಬೇಕು… ಯಾಕೆಂದರೆ.? – ಇಸ್ಮತ್‌ ಪಜೀರ್‌

- Advertisement -
- Advertisement -

ಕಲ್ಬುರ್ಗಿಯಲ್ಲಿ ನಡೆಯುತ್ತಿರುವ ಎಂಬತ್ತೈದನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ತನಗೆ ಮಾತನಾಡಲು ಅವಕಾಶ ಕೊಟ್ಟ ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಮನು ಬಳಿಗಾರ್ ಅವರದ್ದೇ ರಾಜೀನಾಮೆಗೆ ಅದೇ ವೇದಿಕೆಯಲ್ಲಿ ನಿಂತು ಬಹಿರಂಗವಾಗಿ ನಮ್ಮ ಸಂಗಾತಿ ಕೆ.ನೀಲಾ ಆಗ್ರಹಿಸಿದ್ದು ಅಧ್ಯಕ್ಷರಿಗೆ ಕೋಲು ಕೊಟ್ಟು ಹೊಡೆಸಿದಂತಾಗಿರಬಹುದು.

ನೀಲಕ್ಕ ಅವರ ಮನು ಬಳಿಗಾರ್ ರಾಜೀನಾಮೆ ಕೊಡಬೇಕೆಂಬ ಆಗ್ರಹಕ್ಕೆ ಮುಖ್ಯ ಕಾರಣ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ತಡೆಹಿಡಿದದ್ದು, ಸಮ್ಮೇಳನಾಧ್ಯಕ್ಷರನ್ನು ಬದಲಿಸಬೇಕೆಂಬ ಸರ್ವಾಧಿಕಾರಿ ಧೋರಣೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿಯ ಭಯೋತ್ಪಾದನೆಯನ್ನು ಮುಂದಿಟ್ಟಾಗಿತ್ತು.

ಸಿ.ಟಿ.ರವಿಯ ಧಮಕಿ ಅಕ್ಷರಶಃ ಭಯೋತ್ಪಾದನೆ. ಎರಡನೇ ದಿನಕ್ಕೆ ಸಾಹಿತ್ಯ ಸಮ್ಮೇಳನವನ್ನು ಮುಂದುವರಿಸಿದರೆ ಪೆಟ್ರೋಲ್ ಬಾಂಬ್ ಹಾಕುತ್ತೇನೆಂದು ಬೆದರಿಸಿದ್ದು ಜನ ಮನದಲ್ಲಿ ಭಯವನ್ನು ಉತ್ಪಾದಿಸುವುದೇ ಆಗಿದೆ. ಅದನ್ನು‌ ಭಯೋತ್ಪಾದನೆ ಎನ್ನದೇ ಬೇರೇನೂ ಎನ್ನಲು ಸಾಧ್ಯವಿಲ್ಲ.

ಮೊನ್ನೆ ನೀಲಕ್ಕ ಹೇಳಿರುವ ಕಾರಣಗಳಲ್ಲದೇ ಮನು ಬಳಿಗಾರ್ ರಾಜೀನಾಮೆ ಕೊಡಲೇಬೇಕು ಎನ್ನುವುದಕ್ಕೆ ಇನ್ನಿತರ ಬಲವಾದ ಸಮರ್ಥನೆಯೂ ಇದೆ.

ಮನು ಬಳಿಗಾರ್ ಈಗ ಸಾಹಿತ್ಯ ಪರಿಷತ್ ಅಧ್ಯಕ್ಷನಾಗಿ ಮುಂದುವರಿದಿರುವುದೇ ಅಸಾಂವಿಧಾನಿಕ ಮತ್ತು ಅಪ್ರಜಾಸತ್ತಾತ್ಮಕ. ಯಾಕೆಂದರೆ ಸಾಹಿತ್ಯ ಪರಿಷತ್‌‌ನ ಮೂಲ ಬೈಲಾ ಪ್ರಕಾರ ಒಂದು ಚುನಾಯಿತ ಸಮಿತಿಯ ಆಡಳಿತಾವಧಿಯು ಮೂರು ವರ್ಷಗಳು ಮಾತ್ರ. ಮೂರು ವರ್ಷಗಳ ಬಳಿಕ ಮತ್ತೆ ಚುನಾವಣೆ ನಡೆಯಬೇಕು. ಆದರೆ ಮನು ಬಳಿಗಾರ್ ತನ್ನ ಅಧ್ಯಕ್ಷಾವಧಿ ಇನ್ನೇನು ಮುಗಿಯಬೇಕೆನ್ನುವಷ್ಟರಲ್ಲಿ ವಿಶೇಷ ತುರ್ತು ಸಾಮಾನ್ಯ ಸಭೆ ಕರೆದು ಬೈಲಾಕ್ಕೆ ತಿದ್ದುಪಡಿ ಮಾಡಿದರು. ತಿದ್ದುಪಡಿ ಮಾಡಲಾದ ಬೈಲಾ ಪ್ರಕಾರ ಆಡಳಿತ ಸಮಿತಿಯ ಅವಧಿಯನ್ನು ಮೂರು ವರ್ಷಗಳಿಂದ ಐದು ವರ್ಷಗಳಿಗೇರಿಸಲಾಯಿತು. ಇದು ಬಹಳ ಸ್ಪಷ್ಟವಾಗಿ ತನ್ನ ಅಧಿಕಾರವನ್ನು ಮುಂದುವರಿಸುವ ಸಲುವಾಗಿಯೇ  ಬೈಲಾ ತಿದ್ದುಪಡಿ ಮಾಡಲಾಗಿದ್ದನ್ನು ಸೂಚಿಸುತ್ತದೆ. ಪ್ರಜಾತಾಂತ್ರಿಕವಾಗಿ ಕಾರ್ಯನಿರ್ವಹಿಸುವ ಯಾವುದೇ ಸಂಸ್ಥೆಯಲ್ಲೂ ಬೈಲಾ ತಿದ್ದುಪಡಿಗೆ ಅನೇಕ ನಿಬಂಧನೆಗಳಿರುತ್ತವೆ. ಆದರೆ ಇಲ್ಲಿ ತನ್ನ ವಾದವನ್ನು ಸಮಿತಿ ಒಪ್ಪಲು ಬೇಕಾದ ತಂತ್ರವನ್ನು ಮೊದಲೇ ಹೆಣೆದು ಏಕಾಏಕೀ ಸಭೆ ಕರೆಯಲಾಗಿತ್ತು. ಪ್ರಜಾತಾಂತ್ರಿಕವಾಗಿ ರಚಿಸಲಾದ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿತ್ತು.

ಬೈಲಾ ತಿದ್ದುಪಡಿಯನ್ನು ತರ್ಕಕ್ಕೆ ಸಮಂಜಸವೆಂದೇ ಒಪ್ಪಿಕೊಳ್ಳೋಣ. ಆದರೆ ಅಧಿಕಾರಾವಧಿ ಮುಗಿಯುವ ಹಂತದಲ್ಲಿ ತಂದ ತಿದ್ದುಪಡಿ ಯಾವುದೇ ಕಾರಣಕ್ಕೂ ಆಗ ಅಧಿಕಾರದಲ್ಲಿರುವ ಸಮಿತಿಗೆ ಅನ್ವಯವಾಗಕೂಡದು. ಅದನ್ನು ಮುಂದಿನ ಅವಧಿಯಿಂದ ಜಾರಿಗೆ ತರಬೇಕಿತ್ತು. ಆದುದರಿಂದ ಸದ್ಯ ಮನು ಬಳಿಗಾರರ ಅಧಿಕಾರವೇ ಅಪ್ರಜಾಸತ್ತಾತ್ಮಕ ಮತ್ತು ಅಸಾಂವಿಧಾನಿಕ. ಆದುದರಿಂದ ಮನು ಬಳಿಗಾರ್ ಕೂಡಲೇ ತನ್ನ ಅಧ್ಯಕ್ಷ ಸ್ಥಾನದ ಸಮಿತಿಯನ್ನು ಬರ್ಖಾಸ್ತುಗೊಳಿಸಲೇಬೇಕು. ಅಧ್ಯಕ್ಷ ಸ್ಥಾನದಿಂದ ಬಳಿಗಾರ್ ಕೆಳಗಿಳಿಯಲೇಬೇಕು ಮತ್ತು ಹೊಸ ಸಮಿತಿಗೆ ಚುನಾವಣೆ ನಡೆಯಬೇಕು.

ಈ ಬಾರಿಯ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಹದಿಮೂರು‌ ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರಕಾರ ನೀಡಿದೆ. ಕಳೆದ ವರ್ಷದ ಧಾರವಾಡ ಸಮ್ಮೇಳನಕ್ಕೂ ಹತ್ತು ಕೋಟಿ ಅನುದಾನ ನೀಡಲಾಗಿತ್ತು. ಅದಕ್ಕಿಂತ ಹಿಂದಿನ ಅವಧಿಗಳಲ್ಲೂ‌ ಹೀಗೆಯೇ ಬಹುಕೋಟಿ ಅನುದಾನ ನೀಡಲಾಗಿತ್ತು.ಮೂಲತಃ ಸಾಹಿತ್ಯ ಪರಿಷತ್ತು ಎನ್ನುವುದು ಸಮಸ್ತ ಕನ್ನಡಿಗರ ಸ್ವಾಯತ್ತ ಸಂಸ್ಥೆಯೇ ಹೊರತು ಆಡಳಿತ ಸಮಿತಿಯ ಮತ್ತು ಕನ್ನಡ-ಸಂಸ್ಕೃತಿ ಇಲಾಖೆಯ ಪಿತ್ರಾರ್ಜಿತ ಸ್ವತ್ತಲ್ಲ. ಅದಕ್ಕೆ ನೀಡುವ ಅನುದಾನಗಳು ಸಮಸ್ತ ಕನ್ನಡಿಗರ ತೆರಿಗೆಯ ದುಡ್ಡು. ಆದುದರಿಂದ ಸಾರ್ವಜನಿಕ ಲೆಕ್ಕಪತ್ರ ಮಂಡನೆಯಾಗಲೇಬೇಕು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರ ಪ್ರೈವೇಟ್ ಲಿಮಿಟೆಡ್ ಕಂಪೆನಿಯಂತಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಾರ್ವಜನಿಕ ಬಿಡಿ, ಸ್ವತಃ ಅದರ ಸದಸ್ಯರ ವಾರ್ಷಿಕ ಸಭೆಯಲ್ಲೂ ಲೆಕ್ಕಪತ್ರ ಮಂಡನೆ ಮಾಡದೇ ದಶಕವೇ ಕಳೆದಿದೆ. ಮನು ಬಳಿಗಾರ್ ಅಧ್ಯಕ್ಷನಾದ ಬಳಿಕ ಅವರನ್ನು ಸಾಹಿತ್ಯ ಪರಿಷತ್‌ನ‌ ಸದಸ್ಯರಾಗಿರುವ ಗೆಳೆಯರೊಬ್ಬರು ಮುಖತಃ ಭೇಟಿಯಾಗಿ ಆ ಬಗ್ಗೆ ದೂರಿ‌ಕೊಂಡರು. ಸ್ವತಃ ನಾನೂ ಪತ್ರಿಕೆಗಳಲ್ಲಿ ಆ ಬಗ್ಗೆ ಬರೆದಿದ್ದೆ. ಆದರೆ ಮನು ಬಳಿಗಾರ್ ಅದಕ್ಕೆ ಈವರೆಗೆ ಸ್ಪಂದಿಸದೇ ಭ್ರಷ್ಟಾಚಾರಕ್ಕೆ ಪರೋಕ್ಷ ಕಾರಣರೂ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ತಿಗೆ ಸ್ವಂತ ಬಿಡಿ, ಬಾಡಿಗೆ ಕಚೇರಿಯೂ ಇಲ್ಲ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರರ ಖಾಸಗಿ ಕಚೇರಿಯಲ್ಲೇ ಬೋರ್ಡೊಂದನ್ನು ತಗಲಿಸಿ ಅದನ್ನೇ ಕಚೇರಿ ಎನ್ನಲಾಗುತ್ತದೆ. ದಕ್ಷಿಣ ಕನ್ನಡದಲ್ಲಿ ಯಾರಾದರೂ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಬಯಸಿದರೆ ಅದಕ್ಕೆ ಅಧ್ಯಕ್ಷನ ಒಪ್ಪಿಗೆಯಿದ್ದರೆ ಮಾತ್ರ ಆತನಿಗೆ ಅರ್ಜಿ ನಮೂನೆ ನೀಡಲಾಗುತ್ತದೆ. ನಮ್ಮಂತಹ ಬಂಡಾಯ ಪ್ರವೃತ್ತಿಯವರು ಸಾಹಿತ್ಯ ಪರಿಷತ್ತಿನ ಸದಸ್ಯರಾಗಲೂ ಜಿಲ್ಲಾಧ್ಯಕ್ಷರು ಬಿಡುತ್ತಿಲ್ಲ. ಈ ವಿಚಾರವೂ ಮನು ಬಳಿಗಾರರಿಗೆ ಗೊತ್ತಿದೆ. ಆದರೆ ಈ ಬಗ್ಗೆ ಈ ವರೆಗೆ ಕ್ರಮ ಕೈ ಗೊಂಡಿಲ್ಲ.

ಇತ್ತೀಚೆಗೆ ಮಾಣಿ ಎಂಬಲ್ಲಿ ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದ ಸಭಾಭವನದ ತುಂಬಾ ಮುಸ್ಲಿಂ ದ್ವೇಷ ಬಿತ್ತುವ ಮತ್ತು ಕೋಮು ಪ್ರಚೋದಕ ಬಿತ್ತಿ ಪತ್ರಗಳನ್ನು ಹಚ್ಚಲಾಗಿತ್ತು. ಇದನ್ನು ಬಂಟ್ವಾಳದ ಕೆಲವು ಪ್ರಜ್ಞಾವಂತ ಯುವಕರು ಗಲಾಟೆ ಮಾಡಿಯೇ ತೆಗೆಸಿದ್ದರು. ಅದಕ್ಕೆ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮತ್ತು ತಾಲೂಕು ಅಧ್ಯಕ್ಷ ನೇರ ಹೊಣೆ. ಈ ವಿಚಾರ ಪತ್ರಿಕೆಯಲ್ಲಿ ವರದಿಯಾಗಿದ್ದರೂ ರಾಜ್ಯಾಧ್ಯಕ್ಷ ಮನು ಬಳಿಗಾರ್ ಆ ಕುರಿತಂತೆ ಕ್ರಮ ಕೈ‌ಗೊಂಡಿಲ್ಲ.

ಇವಿಷ್ಟಲ್ಲದೇ ದುರಾಡಳಿತದ ಹತ್ತಾರು ನಿದರ್ಶನಗಳಿವೆ. ಆದುದರಿಂದ ಅನರ್ಹ ಮನು ಬಳಿಗಾರ್ ಕೂಡಲೇ ರಾಜೀನಾಮೆ ನೀಡಬೇಕು..

(ಲೇಖಕರು ಯುವ ಬರಹಗಾರರು ಮತ್ತು ಸಾಮಾಜಿಕ ಕಾರ್ಯಕರ್ತರು. ಅಭಿಪ್ರಾಯಗಳು ಅವರ ವ್ಯಕ್ತಿಗತವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಬಾಲಬಡುಕರಂತೆ ವರ್ತಿಸುತ್ತಿರುವ ಮನು ಬಳಿಗಾರ್ ಈ ಕೂಡಲೇ ರಾಜೀನಾಮೆ ಕೊಡಬೇಕು. ಈ ಬಗ್ಗೆ ಸ್ವಾಭಿಮಾನ ಇರುವ ಸಾಹಿತಿಗಳೆಲ್ಲರೂ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...