Homeಮುಖಪುಟಪ್ರಚಂಡ ಕುಳ್ಳನಿಗೆ ಜಯಣ್ಣ ಜೀವಬೆದರಿಕೆ ಹಾಕಿದರಾ!?

ಪ್ರಚಂಡ ಕುಳ್ಳನಿಗೆ ಜಯಣ್ಣ ಜೀವಬೆದರಿಕೆ ಹಾಕಿದರಾ!?

ವಿಷ್ಣು ಜೊತೆ ದ್ವಾರಕೀ ಹಲವಾರು ಸಿನಿಮಾ ಮಾಡಿ ದುಡ್ಡು ಮಾಡಿಕೊಂಡದ್ದಂತೂ ಸತ್ಯ. ತದನಂತರ ಅದೇ ವಿಷ್ಣು ಜೊತೆಗೂ ಹಣಕಾಸಿನ ವಿಚಾರವಾಗಿ ಸ್ನೇಹ ಕೆಡಿಸಿಕೊಂಡದ್ದೂ ಅಷ್ಟೇ ಸತ್ಯ. ಆದರೆ, ದ್ವಾರ್ಕಿ ಆರ್ಥಿಕ ಮುಗ್ಗಟ್ಟಿಗೆ ಬಿದ್ದಾಗ ಕೊನೆಗೆ ಅದೇ ವಿಷ್ಣು `ಆಪ್ತಮಿತ್ರ’ನಾಗಿ ಬಂದು ನೆರವಾಗಬೇಕಾಯ್ತು.

- Advertisement -
- Advertisement -

ಸಿನಿಮಾರಂಗದಲ್ಲಿ ನಡೆಯುತ್ತಿದ್ದ ಸ್ಟಾರ್‍ವಾರ್ ಈಗ ಹೊಸ ರೂಪ ತಳೆದು ನಿರ್ಮಾಪಕರ ವಾರ್ ಆಗಿ ಬದಲಾಗುತ್ತಿದೆ. ಸ್ಯಾಂಡಲ್‍ವುಡ್ ಹಳೆಯ ಬೇರಿನಂತಿದ್ದ ದ್ವಾರಕೀಶ್ ಮತ್ತು ನಿರ್ಮಾಪಕ ಜಯಣ್ಣನ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದ್ದು ಬೆಳಗ್ಗೆ ಒಬ್ಬರು, ಸಂಜೆ ಒಬ್ಬರು ಪ್ರೆಸ್‍ಮೀಟ್ ಮಾಡುತ್ತಾ ಆರೋಪ ಪ್ರತ್ಯಾರೋಪಗಳಲ್ಲಿ ಮುಳುಗಿಹೋಗಿದ್ದಾರೆ.

ದ್ವಾರಕೀಶ್ ನಟ, ನಿರ್ದೇಶಕರಷ್ಟೇ ಅಲ್ಲ ನಿರ್ಮಾಪಕರೂ ಹೌದು. ಅಂತೆಯೇ ಜಯಣ್ಣನೂ ಇತ್ತೀಚೆಗೆ ಹೆಸರು ಮಾಡುತ್ತಿರುವ ನಿರ್ಮಾಪಕ. ಸ್ಯಾಂಡಲ್‍ವುಡ್‍ನ ನಿರ್ಮಾಪಕರು ನೋಡೋಕೆ ತುಂಬಾ ಆತ್ಮೀಯ ಮಿತ್ರರಂತೆ ಇದ್ದರೂ ಒಳಗಿನ ಜಲಸ್‍ಗೇನೂ ಕಡಿಮೆಯಿಲ್ಲ. ಜಯಣ್ಣ ತಮ್ಮ ಮನೆಗೆ ನುಗ್ಗಿ ತನ್ನ ತಂದೆಗೆ ಜೀವಬೆದರಿಕೆ ಹಾಕಿದ್ದಾರೆ ದ್ವಾರ್ಕಿ ಎಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜಯಣ್ಣನ ಗ್ಯಾಂಗು ನಿಜಕ್ಕೂ ದ್ವಾರಕೀಶ್‍ಗೆ ಜೀವ ತೆಗೆಯುವುದಾಗಿ ಥ್ರೆಟ್ ಮಾಡಿದರಾ? ಎಂದು ಯೋಚಿಸುವುದು ಎಷ್ಟು ಮುಖ್ಯವೋ ಹಣಕಾಸು, ಸ್ನೇಹಸಂಬಂಧಗಳ ವಿಚಾರದಲ್ಲಿ ಕುಳ್ಳನ ಟ್ರ್ಯಾಕ್ ರೆಕಾರ್ಡ್ ಪರಿಶುದ್ಧವಾಗಿದೆಯಾ? ಎಂಬ ಪ್ರಶ್ನೆಯನ್ನೂ ಇಲ್ಲಿ ಕೇಳಿಕೊಳ್ಳಲೇಬೇಕಿದೆ. ಒಂದು ಕಾಲಕ್ಕೆ ಮೇಯರ್ ಮುತ್ತಣ್ಣ ಅನ್ನೋ ಆ ಕಾಲದ ಸೂಪರ್ ಹಿಟ್ ಸಿನಿಮಾ ಮಾಡಿ ರಾಜ್ ಸ್ಟಾರ್‍ವ್ಯಾಲ್ಯೂ ಸೂರೆ ಹೊಡೆದಿದ್ದ ಕುಳ್ಳ, ಆಮೇಲೆ ರಾಜ್-ವಿಷ್ಣು ನಡುವಿನ ಸ್ಟಾರ್‍ವಾರ್ ಅನ್ನೇ ಬಂಡವಾಳ ಮಾಡಿಕೊಂಡು ರಾಜ್‍ಗೆ ಪ್ರತಿಯಾಗಿ ವಿಷ್ಣುವನ್ನು ಕಟೆದು ನಿಲ್ಲಿಸುತ್ತೇನೆ ಅಂತ ಹೊರಟದ್ದು ಹಳೆಯ ಇತಿಹಾಸ. ವಿಷ್ಣು ಜೊತೆ ದ್ವಾರಕೀ ಹಲವಾರು ಸಿನಿಮಾ ಮಾಡಿ ದುಡ್ಡು ಮಾಡಿಕೊಂಡದ್ದಂತೂ ಸತ್ಯ. ತದನಂತರ ಅದೇ ವಿಷ್ಣು ಜೊತೆಗೂ ಹಣಕಾಸಿನ ವಿಚಾರವಾಗಿ ಸ್ನೇಹ ಕೆಡಿಸಿಕೊಂಡ ಪ್ರಚಂಡ ಕುಳ್ಳ, ವಿಷ್ಣುಗೆ ಪ್ರತಿಯಾಗಿ ಹೊಸ ಹೀರೋ ಹುಟ್ಟುಹಾಕುತ್ತೇನೆ ಅಂತ ಶಶಿಕುಮಾರ್‍ರನ್ನು ಹೀರೋ ಆಗಿ ಹಾಕಿಕೊಂಡು `ಹಳೇ ಕುಳ್ಳ ಹೊಸ ಕಳ್ಳ’ ಸಿನಿಮಾ ಮಾಡಿ ಕೈಸುಟ್ಟುಕೊಂಡದ್ದೂ ಉಂಟು. ಒಂದು ಕಾಲಕ್ಕೆ ದುಬಾರಿ ಸಿನಿಮಾಗಳ ಸಾಹಸಿ ನಿರ್ಮಾಪಕ ಅಂತಲೇ ಹೆಸರು ಮಾಡಿದ್ದ ದ್ವಾರ್ಕಿ ಆರ್ಥಿಕ ಮುಗ್ಗಟ್ಟಿಗೆ ಬಿದ್ದಾಗ ಕೊನೆಗೆ ಅದೇ ವಿಷ್ಣು `ಆಪ್ತಮಿತ್ರ’ನಾಗಿ ಬಂದು ನೆರವಾಗಬೇಕಾಯ್ತು. ಆದರೆ ಆ ಸಿನಿಮಾದ ಮೂಲಕ ಕಾಸು ಕಂಡ ದ್ವಾರಕೀಶ್ ಮತ್ತೆ ಹಳೆ ಚಾಳಿಗೆ ಕಟ್ಟುಬಿದ್ದು ಲೇವಾದೇವಿ ವ್ಯವಹಾರದಲ್ಲಿ ವಿಷ್ಣುವಿನಿಂದ ಪುನಾಃ ದೂರಾದರು. ವಿಷ್ಣು ನಿರ್ಗಮಿಸಿದ ನಂತರ ಅದೇ ವಿಷ್ಣು ಹೆಸರಲ್ಲಿ ಸಿನಿಮಾ ಮಾಡಲು ಮುಂದಾಗಿ ಒಂದಷ್ಟು ರಾಡಿ ಮಾಡಿಕೊಂಡದ್ದೂ ಉಂಟು. ತಮ್ಮ ಬ್ಯಾನರ್‍ನಲ್ಲಿ ಕೆಲಸ ಮಾಡಿದ ಕಲಾವಿದರು, ತಂತ್ರಜ್ಞರಿಗೆ ಬಾಕಿ ಉಳಿಸಿಕೊಂಡು ಸತಾಯಿಸಿದ ಉದಾಹರಣೆಗಳೂ ಇವೆ.

ಆದರೆ ಈಗ ದ್ವಾರಕೀಶ್ ಮತ್ತು ಜಯಣ್ಣರ ನಡುವಿನ ಈ ಬೀದಿ ಕಾಳಗಕ್ಕೆ ಕಾರಣವಾಗಿರೋದು ದ್ವಾರಕೀಶ್ ಮಗ ಯೋಗೀಶ್ ಮಾಡಿಕೊಂಡಿರುವ ಸಾಲ. ಆತ `ಅಮ್ಮಾ ಐ ಲವ್ ಯೂ’ ಸಿನಿಮಾ ಮಾಡಿದಾಗ ಅದರ ಡಿಸ್ಟ್ರಿಬ್ಯೂಷನ್‍ಗಾಗಿ ಜಯಣ್ಣನ ಬಳಿ 80 ಲಕ್ಷ ಸಾಲ ಪಡೆದಿದ್ದರು. ಅಲ್ಲದೆ ಆಯುಶ್‍ಮಾನ್ ಭವ ಸಿನಿಮಾ ಸೆಟ್ಟೇರಿದಾಗಲೂ ಜಯಣ್ಣನ ಬಳಿ 3 ಕೋಟಿ ಹಣ ಪಡೆದಿದ್ದರಂತೆ. ಹೀಗೆ ಬೇರೆಬೇರೆ ಸಮಯದಲ್ಲಿ ಒಟ್ಟು ಆರು ಕೋಟಿ ಸಾಲ ತನ್ನಿಂದ ಯೋಗೀಶ್ ಪಡೆದಿದ್ದಾರೆ ಅನ್ನೋದು ಜಯಣ್ಣನ ಅಂಬೋಣ.

ಆದರೆ ಕೊಟ್ಟ ಸಾಲ ವಾಪಸ್ ಕೇಳಿದಾಗ ತಾನು ತುಂಬಾ ಸಮಸ್ಯೆಯಲ್ಲಿದ್ದು ಜನವರಿ 30ರೊಳಗೆ ಹಣ ಕೊಡುವುದಾಗಿ ಯೋಗೀಶ್ ವಾಯಿದೆ ಪಡೆದುಕೊಂಡಿದ್ದರಂತೆ. ಈ ಮಧ್ಯೆ ಹಲವು ಬಾರಿ ಇದೇ ವಿಚಾರ ತನ್ನ ಹಾಗೂ ಯೋಗೀಶ್ ಸ್ನೇಹಿತರ ನಡುವೆ ಹಲವು ಬಾರಿ ಮೀಟಿಂಗ್ ನಡೆದು ಒಂದಷ್ಟು ಹಣವನ್ನೂ ಕೈಬಿಟ್ಟಿದ್ದೇನೆ ಎಂದು ಜಯಣ್ಣ ಹೇಳುತ್ತಿದ್ದಾರೆ.

ಜನವರಿ 30ರೊಳಗೆ ಹಣ ವಾಪಸ್ ನೀಡುವುದಾಗಿ ಹೇಳಿದ್ದ ಯೋಗೀಶ್ ಜನವರಿ 27ರಂದೇ ಜಯಣ್ಣ ಫೋನ್ ನಂಬರನ್ನು ಬ್ಲಾಕ್ ಮಾಡಿದ್ದರಂತೆ. ಫೋನ್ ಕರೆಗೆ ಯೋಗೀಶ್ ಸಿಗದಿದ್ದಾಗ ಮನೆಗೇ ಹೋಗಿ ಹಣ ಕೇಳೋ ಪ್ರಯತ್ನಕ್ಕೆ ಜಯಣ್ಣನ ಗ್ಯಾಂಗು ಮುಂದಾಗಿತ್ತು. ಅವಾಗಲೂ ದ್ವಾರಕೀಶ್ ಸಮಸ್ಯೆಯಲ್ಲಿದ್ದೇವೆ ಕಾಲಾವಕಾಶ ಕೊಡಿ ಎಂದು ಕೇಳಿದ್ದಾರೆ. ಆದರೆ, ಫೋನ್‍ಗೆ ಸಿಗದ ದ್ವಾರಕೀ ಮಗನ ಅವಾಂತರಕ್ಕೆ ಬೇಸತ್ತಿದ್ದ ಜಯಣ್ಣ ಇದಕ್ಕೆ ಒಪ್ಪಿಲ್ಲ. ಈ ಸಂದರ್ಭದಲ್ಲಿ ಫೈನಾನ್ಶಿಯರ್ ರಮೇಶ್ ಏರುಧ್ವನಿಯಲ್ಲಿ ಕೂಗಾಡಿದ್ದಾರೆ.

ಅಲ್ಲದೆ, ಐ ಲವ್ ಯೂ ಸಿನಿಮಾ ಮಾಡುವಾಗ ಯೋಗೀಶ್ ನಿರ್ಮಾಪಕ ಮನೋಹರ್ ಬಳಿ 50 ಲಕ್ಷ ಪಡೆದಿದ್ದು, ಅದನ್ನೂ ಇನ್ನೂ ತೀರಿಸಿಲ್ಲ. ಅದಷ್ಟೇ ಅಲ್ಲದೆ, ಆಯುಷ್‍ಮಾನ್ ಭವ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ರಚಿತಾರಾಮ್ ಅವರಿಗೂ ಇನ್ನೂ 75% ಸಂಭಾವನೆ ಕೊಟ್ಟೇ ಇಲ್ಲ, ಶಿವರಾಜ್‍ಕುಮಾರ್‍ಗೂ ಕೂಡ ಪೂರ್ತಿ ಸಂಭಾವನೆ ನೀಡಿಲ್ಲ, ಅದೇ ಸಿನಿಮಾದ ಸ್ಟಂಟ್ ಮಾಡಿದ್ದ ರವಿವರ್ಮ ಹಾಗೂ ಕೊರಿಯೋಗ್ರಫಿ ಮಾಡಿದ್ದ ಹರ್ಷ ಅವರಿಗೂ ಇನ್ನೂ ಪೇಮೆಂಟ್ ಮಾಡಿಲ್ಲ. ಇದಲ್ಲದೆ 11 ಕೋಟಿ ಬಜೆಟ್‍ನ ಸಿನಿಮಾಕ್ಕೆ 20 ಕೋಟಿ ಖರ್ಚು ತೋರಿಸಿದ್ದೀರಿ ಅಂತ ಅವರೆಲ್ಲ ರೇಗಾಡಿದ್ದಾರೆ.

ಈ ರೇಗಾಟ ಕೂಗಾಟದಲ್ಲಿ ನಿಜಕ್ಕೂ ದ್ವಾರ್ಕಿಗೆ ಜಯಣ್ಣನ ಗ್ಯಾಂಗಿನಿಂದ ಜೀವಬೆದರಿಕೆ ಹೊರಬಂತಾ? ನಿಜಕ್ಕೂ ದ್ವಾರ್ಕಿಯನ್ನು ಕೊಲ್ಲುವ ಇರಾದೆ ಜಯಣ್ಣನ ಗ್ಯಾಂಗಿದೆಯಾ? ಕೊಂದರೆ ಅವರ ದುಡ್ಡು ವಾಪಾಸ್ಸು ಬರುತ್ತಾ? ಈ ಪ್ರಶ್ನೆಗೆ ಉತ್ತರ ಸುಲಭಕ್ಕೆ ಗೊತ್ತಾಗುವಂತದ್ದಲ್ಲ. ಆದರೆ ದ್ವಾರಕೀಶ್ ಸದ್ಯಕ್ಕೆ ಆರ್ಥಿಕ ಮುಗ್ಗಟ್ಟಿನಲ್ಲಿರುವುದಂತೂ ಸತ್ಯ. ವರ್ತನೆಗಳು ಎಂತದ್ದೇ ಇರಲಿ, ಕನ್ನಡ ಸಿನಿಮಾರಂಗದಲ್ಲಿ ತನ್ನದೇ ಛಾಪು ಮೂಡಿಸಿದ ನಟ ಕಂ ನಿರ್ದೇಶಕ ಕಂ ನಿರ್ಮಾಪಕನಾದ ಹಿರಿವಯಸ್ಸಿನ ದ್ವಾರಕೀಶ್‍ಗೆ ಒಂದೊಮ್ಮೆ ನಿಜಕ್ಕೂ ಜೀವಬೆದರಿಕೆ ಹಾಕಿದ್ದರೆ ಅದು ಖಂಡಿತ ತಪ್ಪು. ಆದರೆ ಕುಳ್ಳನ ಹಳೇ ವರಸೆಗಳು ಒಂದು ಕ್ಷಣ ಈ ಆರೋಪವನ್ನು ಅನುಮಾನಿಸುವಂತೆ ಮಾಡುತ್ತಿರುವುದೂ ಸುಳ್ಳಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...